HomeಮುಖಪುಟUP: ಪಾಕಿಸ್ತಾನಿ ಹಾಡು ಕೇಳಿದ ಇಬ್ಬರು ಮುಸ್ಲಿಂ ಬಾಲಕರ ಮೇಲೆ ಎಫ್‌ಐಆರ್‌

UP: ಪಾಕಿಸ್ತಾನಿ ಹಾಡು ಕೇಳಿದ ಇಬ್ಬರು ಮುಸ್ಲಿಂ ಬಾಲಕರ ಮೇಲೆ ಎಫ್‌ಐಆರ್‌

- Advertisement -
- Advertisement -

ನವದೆಹಲಿ: ಮೊಬೈಲ್ ಫೋನ್‌ನಲ್ಲಿ ಪಾಕಿಸ್ತಾನಿ ಹಾಡನ್ನು ಆಲಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಬರೇಲಿಯಲ್ಲಿ ಇಬ್ಬರು ಅಪ್ರಾಪ್ತ ಮುಸ್ಲಿಂ ಬಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 13 ರಂದು ಜಿಲ್ಲೆಯ ಭೂತಾ ಪ್ರದೇಶದ ಸಿಂಘೈ ಮುರಾವನ್ ಗ್ರಾಮದ ಇಬ್ಬರು ಬಾಲಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 16 ಮತ್ತು 17ರ ಹರೆಯದ ಸೋದರ ಸಂಬಂಧಿಗಳು ಸಿಂಘೈ ಮುರಾವನ್‌ನಲ್ಲಿ ಕಿರಾಣಿ ಅಂಗಡಿಯನ್ನು ನಡೆಸುತ್ತಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನೆರೆಯ ದೇಶವನ್ನು ಹೊಗಳಿದ ಹಾಡನ್ನು ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯ ನಿವಾಸಿ ಆಶಿಶ್ ಎಂಬವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಕಿಸ್ತಾನಿ ಹಾಡನ್ನು ಪ್ಲೇ ಮಾಡಿದ್ದನ್ನು ವಿರೋಧಿಸಿದ ಆಶಿಶ್, ಬಾಲಕರೊಂದಿಗೆ ಜಗಳವಾಡಿದ್ದಾರೆ. ಘಟನೆಯ ವೀಡಿಯೊವನ್ನು ಚಿತ್ರೀಕರಿಸಿ ಅದನ್ನು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಹಾಡು ಕೇಳುವುದನ್ನು ನಿಲ್ಲಿಸುವಂತೆ ಇಬ್ಬರಿಗೂ ಹೇಳಲಾಯಿತು. ಆದರೆ ನಿಂದನೆ ಮಾಡಿದ ಬಾಲಕರು ಭಾರತದ ಬಗ್ಗೆಯೂ ಕೆಟ್ಟದ್ದಾಗಿ ಮಾತನಾಡಿದರು ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಏಪ್ರಿಲ್ 13 ರ ಬುಧವಾರ ಸಂಜೆ 5 ಗಂಟೆಗೆ ಇಬ್ಬರನ್ನು ಕರೆದುಕೊಂಡು ಹೋಗಲಾಯಿತು. ಇಡೀ ರಾತ್ರಿ ಠಾಣೆಯಲ್ಲಿ ಇರಿಸಿಕೊಳ್ಳಲಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.

ಸ್ಥಳೀಯ ವರದಿಗಾರನಿಂದ ವಿಡಿಯೊ ಸಂಗ್ರಹಿಸಿದ ‘ದಿ ವೈರ್‌’ ವರದಿ ಮಾಡಿದ್ದು, “ಇವರಿಬ್ಬರ ಸೋದರಸಂಬಂಧಿ ಸದ್ದಾಂ ಹುಸೇನ್ ಪ್ರಕಾರ ಕಿರಿಯ ಸಹೋದರ ಕೇವಲ 40 ಸೆಕೆಂಡ್‌ ಹಾಡು ಹಾಕಿದ್ದಾನೆ. ಬೇಕಂತಲೇ ಪ್ಲೇ ಮಾಡಿಲ್ಲ. ನಂತರ ಕ್ಷಮೆಯಾಚಿಸಿದ್ದಾರೆ. ಆದರೆ ಕ್ಷಮೆಯನ್ನು ಒಪ್ಪಿಕೊಂಡಿಲ್ಲ.”

ಕಿರಿಯ ಹುಡುಗನ ಚಿಕ್ಕಮ್ಮ ಸಹನಾ ಅವರು ಕಿರಾಣಿ ಅಂಗಡಿಯಿಂದ ಕೆಲವು ನಿಮಿಷಗಳ ಕಾಲ ಹೊರಹೋಗಿದ್ದಾಗ ಘಟನೆ ನಡೆದಿದೆ. ಅರಿವಿಗೆ ಬಾರದೆ ಹಾಡು ಪ್ಲೇ ಮಾಡಿ ಬಂಧನಕ್ಕೊಳಗಾದುದನ್ನು ಕಂಡು ಸಹನಾ ಆತಂಕಿತರಾಗಿದ್ದಾರೆ. “ಈ ಬಾಲಕರು ವಿದ್ಯಾವಂತರಲ್ಲ. ಅವರ ಪರವಾಗಿ ಕ್ಷಮೆಯಾಚಿಸುತ್ತೇನೆ” ಎಂದಿದ್ದಾರೆ.

ಪಾಕಿಸ್ತಾನಿ ಬಾಲ ಕಲಾವಿದೆ ಆಯತ್ ಆರಿಫ್ ಅವರ ‘ಪಾಕಿಸ್ತಾನ್ ಜಿಂದಾಬಾದ್’ ಹಾಡನ್ನು ಈ ಹುಡುಗರು ಕೇಳುತ್ತಿದ್ದರು ಎನ್ನಲಾಗಿದೆ.

ಬರೇಲಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ), ರಾಜ್‌ಕುಮಾರ್ ಅಗರ್ವಾಲ್ ಪ್ರತಿಕ್ರಿಯೆ ನೀಡಿದ್ದು, ದೂರಿನ ಮೇರಿಗೆ ಎಫ್‌ಐಆರ್ ದಾಖಲಿಸಲಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಬರೇಲಿಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಅವರು ಟೈಮ್ಸ್‌ ಆಫ್‌ ಇಂಡಿಯಾ ಜೊತೆ ಮಾತನಾಡಿ, “ಯುವಕರನ್ನು ಇಂದು ಬೆಳಿಗ್ಗೆ ವಿಚಾರಣೆಗೆ ಕರೆಯಲಾಗುತ್ತಿದೆ ಎಂದು ನನಗೆ ತಿಳಿಸಿದ್ದರಿಂದ ರಾತ್ರಿಯಿಡೀ ಪೊಲೀಸರು ಅವರನ್ನು ಬಂಧಿಸಿದ್ದಾರೆಯೇ ಎಂದು ನನಗೆ ತಿಳಿದಿಲ್ಲ. ರೆಕಾರ್ಡ್ ಮಾಡಿದ ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸದ ಕಾರಣ ಅಂತಹ ಸಂದರ್ಭಗಳಲ್ಲಿ ನೋಟಿಸ್‌ಗಳನ್ನು ಸಲ್ಲಿಸಲು ಅವಕಾಶವಿದೆ. ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ವರದಿಯನ್ನು ನೀಡಲು ನಾನು ಹಿರಿಯ ಪೊಲೀಸರಲ್ಲಿ ಕೇಳುತ್ತೇನೆ” ಎಂದಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153B, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...