Homeಮುಖಪುಟಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

ಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

- Advertisement -
- Advertisement -

ಮೊದಲ ಹಂತದ ಮತದಾನ ಮುಗಿದಿದ್ದು, ದಹಲಿಯಲ್ಲಿ ಗದ್ದುಗೆ ಹಿಡಿಯಲು ‘ಹೆಬ್ಬಾಗಿಲು’ ಎನಿಸಿರುವ ಉತ್ತರಪ್ರದೇಶದ ಪಶ್ಚಿಮ ಭಾಗದ ಎಂಟು ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದಿದ್ದು, ಅಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಇದು ಬಿಜೆಪಿ ಪಾಲಿಗೆ ಚಿಂತೆಯ ವಿಷಯವೇ ಆಗಿದೆ.

ಮತದಾನದ ಸಂಜೆ ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಆ ಎಂಟು ಕ್ಷೇತ್ರಗಳಲ್ಲಿ ಈ ಬಾರಿ ಶೇ. 63.9 ಮತದಾನವಾಗಿದ್ದರೆ, ಕಳೆದ ಸಲ ಶೇ. 66ರಷ್ಟು ಮತದಾನವಾಗಿತ್ತು. ಇಲ್ಲಿ ವ್ಯತ್ಯಾಸ ಕೇವಲ ಶೇ. 2.1 ಇರಬಹುದು. ಆದರೆ ಇದು ನಿರ್ಲಕ್ಷಿಸುವ ವಿಷಯವಲ್ಲ ಬಿಜೆಪಿ ಪಾಲಿಗೆ! ಚುನಾವಣಾ ತಜ್ಞರ ಪ್ರಕಾರ, ಬಿಜೆಪಿಯ ಬೆಂಬಲಿಗರು ಕಳೆದ ಸಲದಷ್ಟು ಉತ್ಸಾಹದಿಂದ ಈ ಸಲ ಮತದಾನದಲ್ಲಿ ಪಾಲ್ಗೊಳ್ಳಲಿಲ್ಲ.

ಪರಂಪರಾಗತ ಬಿಜೆಪಿ ಬೆಂಬಲಿಗರು ತುಂಬ ಪ್ರಜ್ಞಾಪೂರ್ವಕವಾಗಿ ಮತದಾನ ಮಾಡುತ್ತಾರೆ. ಆದರೆ ಈ ಎಂಟು ಕ್ಷೇತ್ರಗಳಲ್ಲಿ 2014ರ ಉತ್ಸಾಹ ಕಂಡುಬಂದಿಲ್ಲ.
2014ರಲ್ಲಿ ಈ ಪಶ್ಚಿಮ ಯುಪಿಯಲ್ಲಿ ಎಲ್ಲ ಎಂಟೂ ಸ್ಥಾನಗಳನ್ನು ದೊಡ್ಡ ಲೀಡ್‍ನಿಂದ ಗೆದ್ದಿತ್ತು. ಆಗ ಮೋದಿಯ ಸೃಷ್ಟಿತ ಹವಾ ಅದರ ನೆರವಿಗೆ ಬಂದಿತ್ತು. ಅದಲ್ಲದೇ ವಿಪಕ್ಷಗಳಲ್ಲಿ ಯಾವುದೇ ಒಗ್ಗಟ್ಟಿರಲಿಲ್ಲ.

2014ರಲ್ಲಿ ಮೊದಲ ಹಂತದಲ್ಲಿ ಈ ಎಂಟು ಕ್ಷೇತ್ರಗಳಲ್ಲಿ –ಮೀರತ್, ಬಾಗಪಟ್, ಬಿಕ್ನೋರ್, ಘಾಜಿಯಾಬಾದ್, ಕೈರಾನ, ಗೌತಮ್ ಬುದ್ಧಿ ನಗರ, ಸಹ್ರಾನಪುರ್ ಮತ್ತು ಮುಜಾಫರ್ ನಗರ- ಬಿಜೆಪಿ ಶೇ. 49ರಷ್ಟು ಮತ ಪ್ರಮಾಣವನ್ನು ಪಡೆದಿತ್ತು. ಇಲ್ಲಿ ಮತದಾನಕ್ಕೆ ಕಂಡು ಬಂದ ಜೋಶ್ ಉಳಿದ ಹಂತಗಳಲ್ಲೂ ಮುಂದುವರೆದಿತ್ತು.

ಈಗ ಕುಸ್ತಿ ಅಖಾಡವೇ ಬೇರೆ!
2014ರ ಪರಿಸ್ಥಿತಿ ಈಗಿಲ್ಲ. ಮಾಯಾವತಿಯ ಬಿಎಸ್‍ಪಿ, ಅಖಲೇಶ ಯಾದವರ ಸಮಾಜವಾದಿ ಪಾರ್ಟಿ ಮತ್ತು ಅಜಿತ್‍ಸಿಂಗ್‍ರ ರಾಷ್ಟ್ರೀಯ ಲೋಕದಳ ಘಟಬಂಧನ ರಚಿಸಿಕೊಂಡಿವೆ. ಪಶ್ಚಿಮ ಉತ್ತರಪ್ರದೇಶದಲ್ಲಿ ಪ್ರಬಲ ಜಾಟರು ಎಂದಿಗೂ ಆರ್‍ಎಲ್‍ಡಿ ಪರವೇ ಇದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ದ್ವೇಷಪೂರಿತ ಆಡಳಿತದಿಂದ ತತ್ತರಿಸಿರುವ ದಲಿತರು ಮತ್ತೆ ಬಿಎಸ್ಪಿ ಕಡೆ ಮುಖ ಮಾಡಿದ್ದಾರೆ. ಎಂದಿನಂತೆ ಈ ಸಲ ಮುಸ್ಲಿಮರು ಎಸ್ಪಿಯ ಪರವಿದ್ದಾರೆ. ಹೀಗಾಗಿ ಈ ಭಾಗದಲ್ಲಿ ನಿರ್ಣಾಯಕ ಎನಿಸಿರುವ ದಲಿತರು ಮತ್ತು ಮುಸ್ಲಿಮರು ಈಗ ಒಂದಾಗಿದ್ದು, ಬಿಜೆಪಿಗೆ ತಲೆನೋವು ತಂದಿದ್ದಾರೆ. ಜಾಟರು, ದಲಿತರು ಮತ್ತು ಮುಸ್ಲಿಮರ ಈ ಘಟಬಂಧನ ಈ ಎಂಟು ಕ್ಷೇತ್ರಗಳಲ್ಲಿ ಫಲಿತಾಂಶ ನಿರ್ಧರಿಸಲಿದೆ.

ಆದರೆ, ಇಲ್ಲಿರುವ ಒಂದು ಸಣ್ಣ ತೊಡಕೆಂದರೆ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿರುವುದು ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಕ್ಕೆ ನೆರವಾಗಬಹುದು ಎನ್ನಲಾಗುತ್ತಿದೆ. ಕಾಂಗ್ರೆಸ್‍ನ ಸಹ್ರಾನಪುರ್ ಅಭ್ಯರ್ಥಿ ಇಮ್ರಾನ್ ಮಸೂದ್ ಮತ್ತು ಬಜ್ನೋರ್‍ನ ಅಭ್ಯರ್ಥಿ ನಾಸಿರುದ್ದೀನ್ ಸಿದ್ದಿಕಿ ಮುಸ್ಲಿಮರ ಮತಗಳನ್ನು ವಿಭಜಿಸುವ ಮೂಲಕ ಬಿಜೆಪಿಗೆ ನೆರವಾಗುವ ಸಾಧ್ಯತೆ ಇವೆ ಎನ್ನಲಾಗಿದೆ.

ಜಾಟರ ‘ಪವರ್‍ಪ್ಲೇ’!
ಈ ಸಲದ ಚುನಾವಣೆಯಲ್ಲಿ ಜಾಟರ ಶಕ್ತಿ ಒಂಥರಾ ‘ಎಕ್ಸ್’ ಫ್ಯಾಕ್ಟರ್ ತರಹ ಕೆಲಸ ಮಾಡಲಿದೆ. ಮೊದಲಿಂದಲೂ ಜಾಟರು ಆರ್‍ಎಲ್‍ಡಿ (ಈಗ ಘಟಬಂಧನದ ಭಾಗ) ಪಕ್ಷಕ್ಕೆ ನಿಷ್ಟೇ ವ್ಯಕ್ತಪಡಿಸುತ್ತ ಬಂದಿದ್ದರು. ಆದರೆ, 2013ರಲ್ಲಿ ನಡೆದ ಮುಜಾಫರ್‍ನಗರ ಕೋಮು ಗಲಭೆಯಯ ನಂತರ ಬಿಜೆಪಿ ಅವರನ್ನು ಹಿಂದೂತ್ವದ ಬ್ಯಾನರಿನಡಿ ಸೆಳೆದುಕೊಂಡು 2014ರ ಚುನಾವಣೆಯಲ್ಲಿ ಲಾಭ ಮಾಡಿಕೊಂಡಿತ್ತು. ಅಲ್ಲಿ ಮೊದಲಿಂದ ಇದ್ದ ಜಾಟರು-ಮುಸ್ಲಿಮರ ನಡುವಿನ ಸೌಹಾರ್ದ ಬದುಕನ್ನು ಜಾತಿ-ಧರ್ಮಗಳ ಹೆಸರಲ್ಲಿ ಬಿಜೆಪಿ ಒಡೆದಿತ್ತು. ಆದರೆ ಈಗ ಜಾಟರು ಮತ್ತು ,ಮುಸ್ಲಿಮರು ಎಚ್ಚೆತ್ತುಕೊಂಡಿದ್ದಾರೆ. ಗೋ ಮಾರಾಟ ನಿಷೇಧದ ಪರಿಣಾಮವಾಗಿ ಹೆಚ್ಚಿರುವ ಬಿಡಾಡಿ ದನಗಳು ಒಕ್ಕಲು ಮಕ್ಕಳು ಜಾಟರ ಬೆಳೆಗಳನ್ನು ನಾಶ ಮಾಡುತ್ತಿವೆ. ಕಬ್ಬಿಗೆ ನ್ಯಾಯಯುತ ಬೆಲೆ ಕೊಡುವಲ್ಲಿ ಉತ್ತರಪ್ರದೇಶ ಸರ್ಕಾರ ವಿಫಲವಾಗಿದೆ. ಹಾಗೆಯೇ ಅವರ ನಿಷ್ಟೇಯ ಪಕ್ಷ ಆರ್‍ಎಲ್‍ಡಿ ಈಗ ಘಟಬಂಧನದ ಮೂಲಕ ಜಾಟರನ್ನು ಮತ್ತೆ ತನ್ನಲ್ಲಿ ಉಳಿಸಿಕೊಂಡಿದೆ.

ಹೀಗಾಗಿ ಉತ್ತರ ಪ್ರದೇಶದಲ್ಲಿ ಈ ಸಲ ಮೋದಿ ಹೆಅಸರು, ರಾಷ್ಟ್ರೀಯ ಸುರಕ್ಷತೆ ಜಪ ಬಿಟ್ಟರೆ ಬಿಜೆಪಿಗೆ ಇಶ್ಯೂಗಳೇ ಇಲ್ಲ. 2014ರ ಮೋದಿ ಹವಾ ಠುಸ್ ಆಗಿದೆ. ಪುಲ್ವಾಮಾ ಘಟನೆ ಮತ್ತು ಬಾರಾಕೋಟ್ ವಾಯುದಾಳಿಯ ಮೇಲೆಯೇ ನಿಜೆಪಿ ಕ್ಯಾಂಪೇನ್ ಮಾಡುತ್ತಿದೆ.
ಮೊದಲ ಹಂತದಲ್ಲಿ ಇಷ್ಟೆಲ್ಲ ‘ದೇಶಭಕ್ತಿಯ’ ಪ್ರಚಾರದ ನಂತರವೂ ಎಂಟು ಕ್ಷೇತ್ರಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಬಿಜೆಪಿ ಪಾಲಿಗೆ ಇದು ‘ಅವಲಕ್ಷಣ’ವೇ ಅಲ್ಲವೇ? ಅಂದರೆ ರಾಜಕೀಯ ಅವಲಕ್ಷಣ!

ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...