Homeಮುಖಪುಟಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

ಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

- Advertisement -
- Advertisement -

ಮೊದಲ ಹಂತದ ಮತದಾನ ಮುಗಿದಿದ್ದು, ದಹಲಿಯಲ್ಲಿ ಗದ್ದುಗೆ ಹಿಡಿಯಲು ‘ಹೆಬ್ಬಾಗಿಲು’ ಎನಿಸಿರುವ ಉತ್ತರಪ್ರದೇಶದ ಪಶ್ಚಿಮ ಭಾಗದ ಎಂಟು ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದಿದ್ದು, ಅಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಇದು ಬಿಜೆಪಿ ಪಾಲಿಗೆ ಚಿಂತೆಯ ವಿಷಯವೇ ಆಗಿದೆ.

ಮತದಾನದ ಸಂಜೆ ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಆ ಎಂಟು ಕ್ಷೇತ್ರಗಳಲ್ಲಿ ಈ ಬಾರಿ ಶೇ. 63.9 ಮತದಾನವಾಗಿದ್ದರೆ, ಕಳೆದ ಸಲ ಶೇ. 66ರಷ್ಟು ಮತದಾನವಾಗಿತ್ತು. ಇಲ್ಲಿ ವ್ಯತ್ಯಾಸ ಕೇವಲ ಶೇ. 2.1 ಇರಬಹುದು. ಆದರೆ ಇದು ನಿರ್ಲಕ್ಷಿಸುವ ವಿಷಯವಲ್ಲ ಬಿಜೆಪಿ ಪಾಲಿಗೆ! ಚುನಾವಣಾ ತಜ್ಞರ ಪ್ರಕಾರ, ಬಿಜೆಪಿಯ ಬೆಂಬಲಿಗರು ಕಳೆದ ಸಲದಷ್ಟು ಉತ್ಸಾಹದಿಂದ ಈ ಸಲ ಮತದಾನದಲ್ಲಿ ಪಾಲ್ಗೊಳ್ಳಲಿಲ್ಲ.

ಪರಂಪರಾಗತ ಬಿಜೆಪಿ ಬೆಂಬಲಿಗರು ತುಂಬ ಪ್ರಜ್ಞಾಪೂರ್ವಕವಾಗಿ ಮತದಾನ ಮಾಡುತ್ತಾರೆ. ಆದರೆ ಈ ಎಂಟು ಕ್ಷೇತ್ರಗಳಲ್ಲಿ 2014ರ ಉತ್ಸಾಹ ಕಂಡುಬಂದಿಲ್ಲ.
2014ರಲ್ಲಿ ಈ ಪಶ್ಚಿಮ ಯುಪಿಯಲ್ಲಿ ಎಲ್ಲ ಎಂಟೂ ಸ್ಥಾನಗಳನ್ನು ದೊಡ್ಡ ಲೀಡ್‍ನಿಂದ ಗೆದ್ದಿತ್ತು. ಆಗ ಮೋದಿಯ ಸೃಷ್ಟಿತ ಹವಾ ಅದರ ನೆರವಿಗೆ ಬಂದಿತ್ತು. ಅದಲ್ಲದೇ ವಿಪಕ್ಷಗಳಲ್ಲಿ ಯಾವುದೇ ಒಗ್ಗಟ್ಟಿರಲಿಲ್ಲ.

2014ರಲ್ಲಿ ಮೊದಲ ಹಂತದಲ್ಲಿ ಈ ಎಂಟು ಕ್ಷೇತ್ರಗಳಲ್ಲಿ –ಮೀರತ್, ಬಾಗಪಟ್, ಬಿಕ್ನೋರ್, ಘಾಜಿಯಾಬಾದ್, ಕೈರಾನ, ಗೌತಮ್ ಬುದ್ಧಿ ನಗರ, ಸಹ್ರಾನಪುರ್ ಮತ್ತು ಮುಜಾಫರ್ ನಗರ- ಬಿಜೆಪಿ ಶೇ. 49ರಷ್ಟು ಮತ ಪ್ರಮಾಣವನ್ನು ಪಡೆದಿತ್ತು. ಇಲ್ಲಿ ಮತದಾನಕ್ಕೆ ಕಂಡು ಬಂದ ಜೋಶ್ ಉಳಿದ ಹಂತಗಳಲ್ಲೂ ಮುಂದುವರೆದಿತ್ತು.

ಈಗ ಕುಸ್ತಿ ಅಖಾಡವೇ ಬೇರೆ!
2014ರ ಪರಿಸ್ಥಿತಿ ಈಗಿಲ್ಲ. ಮಾಯಾವತಿಯ ಬಿಎಸ್‍ಪಿ, ಅಖಲೇಶ ಯಾದವರ ಸಮಾಜವಾದಿ ಪಾರ್ಟಿ ಮತ್ತು ಅಜಿತ್‍ಸಿಂಗ್‍ರ ರಾಷ್ಟ್ರೀಯ ಲೋಕದಳ ಘಟಬಂಧನ ರಚಿಸಿಕೊಂಡಿವೆ. ಪಶ್ಚಿಮ ಉತ್ತರಪ್ರದೇಶದಲ್ಲಿ ಪ್ರಬಲ ಜಾಟರು ಎಂದಿಗೂ ಆರ್‍ಎಲ್‍ಡಿ ಪರವೇ ಇದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ದ್ವೇಷಪೂರಿತ ಆಡಳಿತದಿಂದ ತತ್ತರಿಸಿರುವ ದಲಿತರು ಮತ್ತೆ ಬಿಎಸ್ಪಿ ಕಡೆ ಮುಖ ಮಾಡಿದ್ದಾರೆ. ಎಂದಿನಂತೆ ಈ ಸಲ ಮುಸ್ಲಿಮರು ಎಸ್ಪಿಯ ಪರವಿದ್ದಾರೆ. ಹೀಗಾಗಿ ಈ ಭಾಗದಲ್ಲಿ ನಿರ್ಣಾಯಕ ಎನಿಸಿರುವ ದಲಿತರು ಮತ್ತು ಮುಸ್ಲಿಮರು ಈಗ ಒಂದಾಗಿದ್ದು, ಬಿಜೆಪಿಗೆ ತಲೆನೋವು ತಂದಿದ್ದಾರೆ. ಜಾಟರು, ದಲಿತರು ಮತ್ತು ಮುಸ್ಲಿಮರ ಈ ಘಟಬಂಧನ ಈ ಎಂಟು ಕ್ಷೇತ್ರಗಳಲ್ಲಿ ಫಲಿತಾಂಶ ನಿರ್ಧರಿಸಲಿದೆ.

ಆದರೆ, ಇಲ್ಲಿರುವ ಒಂದು ಸಣ್ಣ ತೊಡಕೆಂದರೆ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿರುವುದು ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಕ್ಕೆ ನೆರವಾಗಬಹುದು ಎನ್ನಲಾಗುತ್ತಿದೆ. ಕಾಂಗ್ರೆಸ್‍ನ ಸಹ್ರಾನಪುರ್ ಅಭ್ಯರ್ಥಿ ಇಮ್ರಾನ್ ಮಸೂದ್ ಮತ್ತು ಬಜ್ನೋರ್‍ನ ಅಭ್ಯರ್ಥಿ ನಾಸಿರುದ್ದೀನ್ ಸಿದ್ದಿಕಿ ಮುಸ್ಲಿಮರ ಮತಗಳನ್ನು ವಿಭಜಿಸುವ ಮೂಲಕ ಬಿಜೆಪಿಗೆ ನೆರವಾಗುವ ಸಾಧ್ಯತೆ ಇವೆ ಎನ್ನಲಾಗಿದೆ.

ಜಾಟರ ‘ಪವರ್‍ಪ್ಲೇ’!
ಈ ಸಲದ ಚುನಾವಣೆಯಲ್ಲಿ ಜಾಟರ ಶಕ್ತಿ ಒಂಥರಾ ‘ಎಕ್ಸ್’ ಫ್ಯಾಕ್ಟರ್ ತರಹ ಕೆಲಸ ಮಾಡಲಿದೆ. ಮೊದಲಿಂದಲೂ ಜಾಟರು ಆರ್‍ಎಲ್‍ಡಿ (ಈಗ ಘಟಬಂಧನದ ಭಾಗ) ಪಕ್ಷಕ್ಕೆ ನಿಷ್ಟೇ ವ್ಯಕ್ತಪಡಿಸುತ್ತ ಬಂದಿದ್ದರು. ಆದರೆ, 2013ರಲ್ಲಿ ನಡೆದ ಮುಜಾಫರ್‍ನಗರ ಕೋಮು ಗಲಭೆಯಯ ನಂತರ ಬಿಜೆಪಿ ಅವರನ್ನು ಹಿಂದೂತ್ವದ ಬ್ಯಾನರಿನಡಿ ಸೆಳೆದುಕೊಂಡು 2014ರ ಚುನಾವಣೆಯಲ್ಲಿ ಲಾಭ ಮಾಡಿಕೊಂಡಿತ್ತು. ಅಲ್ಲಿ ಮೊದಲಿಂದ ಇದ್ದ ಜಾಟರು-ಮುಸ್ಲಿಮರ ನಡುವಿನ ಸೌಹಾರ್ದ ಬದುಕನ್ನು ಜಾತಿ-ಧರ್ಮಗಳ ಹೆಸರಲ್ಲಿ ಬಿಜೆಪಿ ಒಡೆದಿತ್ತು. ಆದರೆ ಈಗ ಜಾಟರು ಮತ್ತು ,ಮುಸ್ಲಿಮರು ಎಚ್ಚೆತ್ತುಕೊಂಡಿದ್ದಾರೆ. ಗೋ ಮಾರಾಟ ನಿಷೇಧದ ಪರಿಣಾಮವಾಗಿ ಹೆಚ್ಚಿರುವ ಬಿಡಾಡಿ ದನಗಳು ಒಕ್ಕಲು ಮಕ್ಕಳು ಜಾಟರ ಬೆಳೆಗಳನ್ನು ನಾಶ ಮಾಡುತ್ತಿವೆ. ಕಬ್ಬಿಗೆ ನ್ಯಾಯಯುತ ಬೆಲೆ ಕೊಡುವಲ್ಲಿ ಉತ್ತರಪ್ರದೇಶ ಸರ್ಕಾರ ವಿಫಲವಾಗಿದೆ. ಹಾಗೆಯೇ ಅವರ ನಿಷ್ಟೇಯ ಪಕ್ಷ ಆರ್‍ಎಲ್‍ಡಿ ಈಗ ಘಟಬಂಧನದ ಮೂಲಕ ಜಾಟರನ್ನು ಮತ್ತೆ ತನ್ನಲ್ಲಿ ಉಳಿಸಿಕೊಂಡಿದೆ.

ಹೀಗಾಗಿ ಉತ್ತರ ಪ್ರದೇಶದಲ್ಲಿ ಈ ಸಲ ಮೋದಿ ಹೆಅಸರು, ರಾಷ್ಟ್ರೀಯ ಸುರಕ್ಷತೆ ಜಪ ಬಿಟ್ಟರೆ ಬಿಜೆಪಿಗೆ ಇಶ್ಯೂಗಳೇ ಇಲ್ಲ. 2014ರ ಮೋದಿ ಹವಾ ಠುಸ್ ಆಗಿದೆ. ಪುಲ್ವಾಮಾ ಘಟನೆ ಮತ್ತು ಬಾರಾಕೋಟ್ ವಾಯುದಾಳಿಯ ಮೇಲೆಯೇ ನಿಜೆಪಿ ಕ್ಯಾಂಪೇನ್ ಮಾಡುತ್ತಿದೆ.
ಮೊದಲ ಹಂತದಲ್ಲಿ ಇಷ್ಟೆಲ್ಲ ‘ದೇಶಭಕ್ತಿಯ’ ಪ್ರಚಾರದ ನಂತರವೂ ಎಂಟು ಕ್ಷೇತ್ರಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಬಿಜೆಪಿ ಪಾಲಿಗೆ ಇದು ‘ಅವಲಕ್ಷಣ’ವೇ ಅಲ್ಲವೇ? ಅಂದರೆ ರಾಜಕೀಯ ಅವಲಕ್ಷಣ!

ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...