Homeಮುಖಪುಟಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

ಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

- Advertisement -
- Advertisement -

ಮೊದಲ ಹಂತದ ಮತದಾನ ಮುಗಿದಿದ್ದು, ದಹಲಿಯಲ್ಲಿ ಗದ್ದುಗೆ ಹಿಡಿಯಲು ‘ಹೆಬ್ಬಾಗಿಲು’ ಎನಿಸಿರುವ ಉತ್ತರಪ್ರದೇಶದ ಪಶ್ಚಿಮ ಭಾಗದ ಎಂಟು ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದಿದ್ದು, ಅಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಇದು ಬಿಜೆಪಿ ಪಾಲಿಗೆ ಚಿಂತೆಯ ವಿಷಯವೇ ಆಗಿದೆ.

ಮತದಾನದ ಸಂಜೆ ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಆ ಎಂಟು ಕ್ಷೇತ್ರಗಳಲ್ಲಿ ಈ ಬಾರಿ ಶೇ. 63.9 ಮತದಾನವಾಗಿದ್ದರೆ, ಕಳೆದ ಸಲ ಶೇ. 66ರಷ್ಟು ಮತದಾನವಾಗಿತ್ತು. ಇಲ್ಲಿ ವ್ಯತ್ಯಾಸ ಕೇವಲ ಶೇ. 2.1 ಇರಬಹುದು. ಆದರೆ ಇದು ನಿರ್ಲಕ್ಷಿಸುವ ವಿಷಯವಲ್ಲ ಬಿಜೆಪಿ ಪಾಲಿಗೆ! ಚುನಾವಣಾ ತಜ್ಞರ ಪ್ರಕಾರ, ಬಿಜೆಪಿಯ ಬೆಂಬಲಿಗರು ಕಳೆದ ಸಲದಷ್ಟು ಉತ್ಸಾಹದಿಂದ ಈ ಸಲ ಮತದಾನದಲ್ಲಿ ಪಾಲ್ಗೊಳ್ಳಲಿಲ್ಲ.

ಪರಂಪರಾಗತ ಬಿಜೆಪಿ ಬೆಂಬಲಿಗರು ತುಂಬ ಪ್ರಜ್ಞಾಪೂರ್ವಕವಾಗಿ ಮತದಾನ ಮಾಡುತ್ತಾರೆ. ಆದರೆ ಈ ಎಂಟು ಕ್ಷೇತ್ರಗಳಲ್ಲಿ 2014ರ ಉತ್ಸಾಹ ಕಂಡುಬಂದಿಲ್ಲ.
2014ರಲ್ಲಿ ಈ ಪಶ್ಚಿಮ ಯುಪಿಯಲ್ಲಿ ಎಲ್ಲ ಎಂಟೂ ಸ್ಥಾನಗಳನ್ನು ದೊಡ್ಡ ಲೀಡ್‍ನಿಂದ ಗೆದ್ದಿತ್ತು. ಆಗ ಮೋದಿಯ ಸೃಷ್ಟಿತ ಹವಾ ಅದರ ನೆರವಿಗೆ ಬಂದಿತ್ತು. ಅದಲ್ಲದೇ ವಿಪಕ್ಷಗಳಲ್ಲಿ ಯಾವುದೇ ಒಗ್ಗಟ್ಟಿರಲಿಲ್ಲ.

2014ರಲ್ಲಿ ಮೊದಲ ಹಂತದಲ್ಲಿ ಈ ಎಂಟು ಕ್ಷೇತ್ರಗಳಲ್ಲಿ –ಮೀರತ್, ಬಾಗಪಟ್, ಬಿಕ್ನೋರ್, ಘಾಜಿಯಾಬಾದ್, ಕೈರಾನ, ಗೌತಮ್ ಬುದ್ಧಿ ನಗರ, ಸಹ್ರಾನಪುರ್ ಮತ್ತು ಮುಜಾಫರ್ ನಗರ- ಬಿಜೆಪಿ ಶೇ. 49ರಷ್ಟು ಮತ ಪ್ರಮಾಣವನ್ನು ಪಡೆದಿತ್ತು. ಇಲ್ಲಿ ಮತದಾನಕ್ಕೆ ಕಂಡು ಬಂದ ಜೋಶ್ ಉಳಿದ ಹಂತಗಳಲ್ಲೂ ಮುಂದುವರೆದಿತ್ತು.

ಈಗ ಕುಸ್ತಿ ಅಖಾಡವೇ ಬೇರೆ!
2014ರ ಪರಿಸ್ಥಿತಿ ಈಗಿಲ್ಲ. ಮಾಯಾವತಿಯ ಬಿಎಸ್‍ಪಿ, ಅಖಲೇಶ ಯಾದವರ ಸಮಾಜವಾದಿ ಪಾರ್ಟಿ ಮತ್ತು ಅಜಿತ್‍ಸಿಂಗ್‍ರ ರಾಷ್ಟ್ರೀಯ ಲೋಕದಳ ಘಟಬಂಧನ ರಚಿಸಿಕೊಂಡಿವೆ. ಪಶ್ಚಿಮ ಉತ್ತರಪ್ರದೇಶದಲ್ಲಿ ಪ್ರಬಲ ಜಾಟರು ಎಂದಿಗೂ ಆರ್‍ಎಲ್‍ಡಿ ಪರವೇ ಇದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ದ್ವೇಷಪೂರಿತ ಆಡಳಿತದಿಂದ ತತ್ತರಿಸಿರುವ ದಲಿತರು ಮತ್ತೆ ಬಿಎಸ್ಪಿ ಕಡೆ ಮುಖ ಮಾಡಿದ್ದಾರೆ. ಎಂದಿನಂತೆ ಈ ಸಲ ಮುಸ್ಲಿಮರು ಎಸ್ಪಿಯ ಪರವಿದ್ದಾರೆ. ಹೀಗಾಗಿ ಈ ಭಾಗದಲ್ಲಿ ನಿರ್ಣಾಯಕ ಎನಿಸಿರುವ ದಲಿತರು ಮತ್ತು ಮುಸ್ಲಿಮರು ಈಗ ಒಂದಾಗಿದ್ದು, ಬಿಜೆಪಿಗೆ ತಲೆನೋವು ತಂದಿದ್ದಾರೆ. ಜಾಟರು, ದಲಿತರು ಮತ್ತು ಮುಸ್ಲಿಮರ ಈ ಘಟಬಂಧನ ಈ ಎಂಟು ಕ್ಷೇತ್ರಗಳಲ್ಲಿ ಫಲಿತಾಂಶ ನಿರ್ಧರಿಸಲಿದೆ.

ಆದರೆ, ಇಲ್ಲಿರುವ ಒಂದು ಸಣ್ಣ ತೊಡಕೆಂದರೆ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿರುವುದು ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಕ್ಕೆ ನೆರವಾಗಬಹುದು ಎನ್ನಲಾಗುತ್ತಿದೆ. ಕಾಂಗ್ರೆಸ್‍ನ ಸಹ್ರಾನಪುರ್ ಅಭ್ಯರ್ಥಿ ಇಮ್ರಾನ್ ಮಸೂದ್ ಮತ್ತು ಬಜ್ನೋರ್‍ನ ಅಭ್ಯರ್ಥಿ ನಾಸಿರುದ್ದೀನ್ ಸಿದ್ದಿಕಿ ಮುಸ್ಲಿಮರ ಮತಗಳನ್ನು ವಿಭಜಿಸುವ ಮೂಲಕ ಬಿಜೆಪಿಗೆ ನೆರವಾಗುವ ಸಾಧ್ಯತೆ ಇವೆ ಎನ್ನಲಾಗಿದೆ.

ಜಾಟರ ‘ಪವರ್‍ಪ್ಲೇ’!
ಈ ಸಲದ ಚುನಾವಣೆಯಲ್ಲಿ ಜಾಟರ ಶಕ್ತಿ ಒಂಥರಾ ‘ಎಕ್ಸ್’ ಫ್ಯಾಕ್ಟರ್ ತರಹ ಕೆಲಸ ಮಾಡಲಿದೆ. ಮೊದಲಿಂದಲೂ ಜಾಟರು ಆರ್‍ಎಲ್‍ಡಿ (ಈಗ ಘಟಬಂಧನದ ಭಾಗ) ಪಕ್ಷಕ್ಕೆ ನಿಷ್ಟೇ ವ್ಯಕ್ತಪಡಿಸುತ್ತ ಬಂದಿದ್ದರು. ಆದರೆ, 2013ರಲ್ಲಿ ನಡೆದ ಮುಜಾಫರ್‍ನಗರ ಕೋಮು ಗಲಭೆಯಯ ನಂತರ ಬಿಜೆಪಿ ಅವರನ್ನು ಹಿಂದೂತ್ವದ ಬ್ಯಾನರಿನಡಿ ಸೆಳೆದುಕೊಂಡು 2014ರ ಚುನಾವಣೆಯಲ್ಲಿ ಲಾಭ ಮಾಡಿಕೊಂಡಿತ್ತು. ಅಲ್ಲಿ ಮೊದಲಿಂದ ಇದ್ದ ಜಾಟರು-ಮುಸ್ಲಿಮರ ನಡುವಿನ ಸೌಹಾರ್ದ ಬದುಕನ್ನು ಜಾತಿ-ಧರ್ಮಗಳ ಹೆಸರಲ್ಲಿ ಬಿಜೆಪಿ ಒಡೆದಿತ್ತು. ಆದರೆ ಈಗ ಜಾಟರು ಮತ್ತು ,ಮುಸ್ಲಿಮರು ಎಚ್ಚೆತ್ತುಕೊಂಡಿದ್ದಾರೆ. ಗೋ ಮಾರಾಟ ನಿಷೇಧದ ಪರಿಣಾಮವಾಗಿ ಹೆಚ್ಚಿರುವ ಬಿಡಾಡಿ ದನಗಳು ಒಕ್ಕಲು ಮಕ್ಕಳು ಜಾಟರ ಬೆಳೆಗಳನ್ನು ನಾಶ ಮಾಡುತ್ತಿವೆ. ಕಬ್ಬಿಗೆ ನ್ಯಾಯಯುತ ಬೆಲೆ ಕೊಡುವಲ್ಲಿ ಉತ್ತರಪ್ರದೇಶ ಸರ್ಕಾರ ವಿಫಲವಾಗಿದೆ. ಹಾಗೆಯೇ ಅವರ ನಿಷ್ಟೇಯ ಪಕ್ಷ ಆರ್‍ಎಲ್‍ಡಿ ಈಗ ಘಟಬಂಧನದ ಮೂಲಕ ಜಾಟರನ್ನು ಮತ್ತೆ ತನ್ನಲ್ಲಿ ಉಳಿಸಿಕೊಂಡಿದೆ.

ಹೀಗಾಗಿ ಉತ್ತರ ಪ್ರದೇಶದಲ್ಲಿ ಈ ಸಲ ಮೋದಿ ಹೆಅಸರು, ರಾಷ್ಟ್ರೀಯ ಸುರಕ್ಷತೆ ಜಪ ಬಿಟ್ಟರೆ ಬಿಜೆಪಿಗೆ ಇಶ್ಯೂಗಳೇ ಇಲ್ಲ. 2014ರ ಮೋದಿ ಹವಾ ಠುಸ್ ಆಗಿದೆ. ಪುಲ್ವಾಮಾ ಘಟನೆ ಮತ್ತು ಬಾರಾಕೋಟ್ ವಾಯುದಾಳಿಯ ಮೇಲೆಯೇ ನಿಜೆಪಿ ಕ್ಯಾಂಪೇನ್ ಮಾಡುತ್ತಿದೆ.
ಮೊದಲ ಹಂತದಲ್ಲಿ ಇಷ್ಟೆಲ್ಲ ‘ದೇಶಭಕ್ತಿಯ’ ಪ್ರಚಾರದ ನಂತರವೂ ಎಂಟು ಕ್ಷೇತ್ರಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಬಿಜೆಪಿ ಪಾಲಿಗೆ ಇದು ‘ಅವಲಕ್ಷಣ’ವೇ ಅಲ್ಲವೇ? ಅಂದರೆ ರಾಜಕೀಯ ಅವಲಕ್ಷಣ!

ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...