Homeಮುಖಪುಟಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

ಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

- Advertisement -
- Advertisement -

ಮೊದಲ ಹಂತದ ಮತದಾನ ಮುಗಿದಿದ್ದು, ದಹಲಿಯಲ್ಲಿ ಗದ್ದುಗೆ ಹಿಡಿಯಲು ‘ಹೆಬ್ಬಾಗಿಲು’ ಎನಿಸಿರುವ ಉತ್ತರಪ್ರದೇಶದ ಪಶ್ಚಿಮ ಭಾಗದ ಎಂಟು ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದಿದ್ದು, ಅಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಇದು ಬಿಜೆಪಿ ಪಾಲಿಗೆ ಚಿಂತೆಯ ವಿಷಯವೇ ಆಗಿದೆ.

ಮತದಾನದ ಸಂಜೆ ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಆ ಎಂಟು ಕ್ಷೇತ್ರಗಳಲ್ಲಿ ಈ ಬಾರಿ ಶೇ. 63.9 ಮತದಾನವಾಗಿದ್ದರೆ, ಕಳೆದ ಸಲ ಶೇ. 66ರಷ್ಟು ಮತದಾನವಾಗಿತ್ತು. ಇಲ್ಲಿ ವ್ಯತ್ಯಾಸ ಕೇವಲ ಶೇ. 2.1 ಇರಬಹುದು. ಆದರೆ ಇದು ನಿರ್ಲಕ್ಷಿಸುವ ವಿಷಯವಲ್ಲ ಬಿಜೆಪಿ ಪಾಲಿಗೆ! ಚುನಾವಣಾ ತಜ್ಞರ ಪ್ರಕಾರ, ಬಿಜೆಪಿಯ ಬೆಂಬಲಿಗರು ಕಳೆದ ಸಲದಷ್ಟು ಉತ್ಸಾಹದಿಂದ ಈ ಸಲ ಮತದಾನದಲ್ಲಿ ಪಾಲ್ಗೊಳ್ಳಲಿಲ್ಲ.

ಪರಂಪರಾಗತ ಬಿಜೆಪಿ ಬೆಂಬಲಿಗರು ತುಂಬ ಪ್ರಜ್ಞಾಪೂರ್ವಕವಾಗಿ ಮತದಾನ ಮಾಡುತ್ತಾರೆ. ಆದರೆ ಈ ಎಂಟು ಕ್ಷೇತ್ರಗಳಲ್ಲಿ 2014ರ ಉತ್ಸಾಹ ಕಂಡುಬಂದಿಲ್ಲ.
2014ರಲ್ಲಿ ಈ ಪಶ್ಚಿಮ ಯುಪಿಯಲ್ಲಿ ಎಲ್ಲ ಎಂಟೂ ಸ್ಥಾನಗಳನ್ನು ದೊಡ್ಡ ಲೀಡ್‍ನಿಂದ ಗೆದ್ದಿತ್ತು. ಆಗ ಮೋದಿಯ ಸೃಷ್ಟಿತ ಹವಾ ಅದರ ನೆರವಿಗೆ ಬಂದಿತ್ತು. ಅದಲ್ಲದೇ ವಿಪಕ್ಷಗಳಲ್ಲಿ ಯಾವುದೇ ಒಗ್ಗಟ್ಟಿರಲಿಲ್ಲ.

2014ರಲ್ಲಿ ಮೊದಲ ಹಂತದಲ್ಲಿ ಈ ಎಂಟು ಕ್ಷೇತ್ರಗಳಲ್ಲಿ –ಮೀರತ್, ಬಾಗಪಟ್, ಬಿಕ್ನೋರ್, ಘಾಜಿಯಾಬಾದ್, ಕೈರಾನ, ಗೌತಮ್ ಬುದ್ಧಿ ನಗರ, ಸಹ್ರಾನಪುರ್ ಮತ್ತು ಮುಜಾಫರ್ ನಗರ- ಬಿಜೆಪಿ ಶೇ. 49ರಷ್ಟು ಮತ ಪ್ರಮಾಣವನ್ನು ಪಡೆದಿತ್ತು. ಇಲ್ಲಿ ಮತದಾನಕ್ಕೆ ಕಂಡು ಬಂದ ಜೋಶ್ ಉಳಿದ ಹಂತಗಳಲ್ಲೂ ಮುಂದುವರೆದಿತ್ತು.

ಈಗ ಕುಸ್ತಿ ಅಖಾಡವೇ ಬೇರೆ!
2014ರ ಪರಿಸ್ಥಿತಿ ಈಗಿಲ್ಲ. ಮಾಯಾವತಿಯ ಬಿಎಸ್‍ಪಿ, ಅಖಲೇಶ ಯಾದವರ ಸಮಾಜವಾದಿ ಪಾರ್ಟಿ ಮತ್ತು ಅಜಿತ್‍ಸಿಂಗ್‍ರ ರಾಷ್ಟ್ರೀಯ ಲೋಕದಳ ಘಟಬಂಧನ ರಚಿಸಿಕೊಂಡಿವೆ. ಪಶ್ಚಿಮ ಉತ್ತರಪ್ರದೇಶದಲ್ಲಿ ಪ್ರಬಲ ಜಾಟರು ಎಂದಿಗೂ ಆರ್‍ಎಲ್‍ಡಿ ಪರವೇ ಇದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ದ್ವೇಷಪೂರಿತ ಆಡಳಿತದಿಂದ ತತ್ತರಿಸಿರುವ ದಲಿತರು ಮತ್ತೆ ಬಿಎಸ್ಪಿ ಕಡೆ ಮುಖ ಮಾಡಿದ್ದಾರೆ. ಎಂದಿನಂತೆ ಈ ಸಲ ಮುಸ್ಲಿಮರು ಎಸ್ಪಿಯ ಪರವಿದ್ದಾರೆ. ಹೀಗಾಗಿ ಈ ಭಾಗದಲ್ಲಿ ನಿರ್ಣಾಯಕ ಎನಿಸಿರುವ ದಲಿತರು ಮತ್ತು ಮುಸ್ಲಿಮರು ಈಗ ಒಂದಾಗಿದ್ದು, ಬಿಜೆಪಿಗೆ ತಲೆನೋವು ತಂದಿದ್ದಾರೆ. ಜಾಟರು, ದಲಿತರು ಮತ್ತು ಮುಸ್ಲಿಮರ ಈ ಘಟಬಂಧನ ಈ ಎಂಟು ಕ್ಷೇತ್ರಗಳಲ್ಲಿ ಫಲಿತಾಂಶ ನಿರ್ಧರಿಸಲಿದೆ.

ಆದರೆ, ಇಲ್ಲಿರುವ ಒಂದು ಸಣ್ಣ ತೊಡಕೆಂದರೆ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿರುವುದು ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಕ್ಕೆ ನೆರವಾಗಬಹುದು ಎನ್ನಲಾಗುತ್ತಿದೆ. ಕಾಂಗ್ರೆಸ್‍ನ ಸಹ್ರಾನಪುರ್ ಅಭ್ಯರ್ಥಿ ಇಮ್ರಾನ್ ಮಸೂದ್ ಮತ್ತು ಬಜ್ನೋರ್‍ನ ಅಭ್ಯರ್ಥಿ ನಾಸಿರುದ್ದೀನ್ ಸಿದ್ದಿಕಿ ಮುಸ್ಲಿಮರ ಮತಗಳನ್ನು ವಿಭಜಿಸುವ ಮೂಲಕ ಬಿಜೆಪಿಗೆ ನೆರವಾಗುವ ಸಾಧ್ಯತೆ ಇವೆ ಎನ್ನಲಾಗಿದೆ.

ಜಾಟರ ‘ಪವರ್‍ಪ್ಲೇ’!
ಈ ಸಲದ ಚುನಾವಣೆಯಲ್ಲಿ ಜಾಟರ ಶಕ್ತಿ ಒಂಥರಾ ‘ಎಕ್ಸ್’ ಫ್ಯಾಕ್ಟರ್ ತರಹ ಕೆಲಸ ಮಾಡಲಿದೆ. ಮೊದಲಿಂದಲೂ ಜಾಟರು ಆರ್‍ಎಲ್‍ಡಿ (ಈಗ ಘಟಬಂಧನದ ಭಾಗ) ಪಕ್ಷಕ್ಕೆ ನಿಷ್ಟೇ ವ್ಯಕ್ತಪಡಿಸುತ್ತ ಬಂದಿದ್ದರು. ಆದರೆ, 2013ರಲ್ಲಿ ನಡೆದ ಮುಜಾಫರ್‍ನಗರ ಕೋಮು ಗಲಭೆಯಯ ನಂತರ ಬಿಜೆಪಿ ಅವರನ್ನು ಹಿಂದೂತ್ವದ ಬ್ಯಾನರಿನಡಿ ಸೆಳೆದುಕೊಂಡು 2014ರ ಚುನಾವಣೆಯಲ್ಲಿ ಲಾಭ ಮಾಡಿಕೊಂಡಿತ್ತು. ಅಲ್ಲಿ ಮೊದಲಿಂದ ಇದ್ದ ಜಾಟರು-ಮುಸ್ಲಿಮರ ನಡುವಿನ ಸೌಹಾರ್ದ ಬದುಕನ್ನು ಜಾತಿ-ಧರ್ಮಗಳ ಹೆಸರಲ್ಲಿ ಬಿಜೆಪಿ ಒಡೆದಿತ್ತು. ಆದರೆ ಈಗ ಜಾಟರು ಮತ್ತು ,ಮುಸ್ಲಿಮರು ಎಚ್ಚೆತ್ತುಕೊಂಡಿದ್ದಾರೆ. ಗೋ ಮಾರಾಟ ನಿಷೇಧದ ಪರಿಣಾಮವಾಗಿ ಹೆಚ್ಚಿರುವ ಬಿಡಾಡಿ ದನಗಳು ಒಕ್ಕಲು ಮಕ್ಕಳು ಜಾಟರ ಬೆಳೆಗಳನ್ನು ನಾಶ ಮಾಡುತ್ತಿವೆ. ಕಬ್ಬಿಗೆ ನ್ಯಾಯಯುತ ಬೆಲೆ ಕೊಡುವಲ್ಲಿ ಉತ್ತರಪ್ರದೇಶ ಸರ್ಕಾರ ವಿಫಲವಾಗಿದೆ. ಹಾಗೆಯೇ ಅವರ ನಿಷ್ಟೇಯ ಪಕ್ಷ ಆರ್‍ಎಲ್‍ಡಿ ಈಗ ಘಟಬಂಧನದ ಮೂಲಕ ಜಾಟರನ್ನು ಮತ್ತೆ ತನ್ನಲ್ಲಿ ಉಳಿಸಿಕೊಂಡಿದೆ.

ಹೀಗಾಗಿ ಉತ್ತರ ಪ್ರದೇಶದಲ್ಲಿ ಈ ಸಲ ಮೋದಿ ಹೆಅಸರು, ರಾಷ್ಟ್ರೀಯ ಸುರಕ್ಷತೆ ಜಪ ಬಿಟ್ಟರೆ ಬಿಜೆಪಿಗೆ ಇಶ್ಯೂಗಳೇ ಇಲ್ಲ. 2014ರ ಮೋದಿ ಹವಾ ಠುಸ್ ಆಗಿದೆ. ಪುಲ್ವಾಮಾ ಘಟನೆ ಮತ್ತು ಬಾರಾಕೋಟ್ ವಾಯುದಾಳಿಯ ಮೇಲೆಯೇ ನಿಜೆಪಿ ಕ್ಯಾಂಪೇನ್ ಮಾಡುತ್ತಿದೆ.
ಮೊದಲ ಹಂತದಲ್ಲಿ ಇಷ್ಟೆಲ್ಲ ‘ದೇಶಭಕ್ತಿಯ’ ಪ್ರಚಾರದ ನಂತರವೂ ಎಂಟು ಕ್ಷೇತ್ರಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಬಿಜೆಪಿ ಪಾಲಿಗೆ ಇದು ‘ಅವಲಕ್ಷಣ’ವೇ ಅಲ್ಲವೇ? ಅಂದರೆ ರಾಜಕೀಯ ಅವಲಕ್ಷಣ!

ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...