Homeಮುಖಪುಟಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

ಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

- Advertisement -
- Advertisement -

ಮೊದಲ ಹಂತದ ಮತದಾನ ಮುಗಿದಿದ್ದು, ದಹಲಿಯಲ್ಲಿ ಗದ್ದುಗೆ ಹಿಡಿಯಲು ‘ಹೆಬ್ಬಾಗಿಲು’ ಎನಿಸಿರುವ ಉತ್ತರಪ್ರದೇಶದ ಪಶ್ಚಿಮ ಭಾಗದ ಎಂಟು ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದಿದ್ದು, ಅಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಇದು ಬಿಜೆಪಿ ಪಾಲಿಗೆ ಚಿಂತೆಯ ವಿಷಯವೇ ಆಗಿದೆ.

ಮತದಾನದ ಸಂಜೆ ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಆ ಎಂಟು ಕ್ಷೇತ್ರಗಳಲ್ಲಿ ಈ ಬಾರಿ ಶೇ. 63.9 ಮತದಾನವಾಗಿದ್ದರೆ, ಕಳೆದ ಸಲ ಶೇ. 66ರಷ್ಟು ಮತದಾನವಾಗಿತ್ತು. ಇಲ್ಲಿ ವ್ಯತ್ಯಾಸ ಕೇವಲ ಶೇ. 2.1 ಇರಬಹುದು. ಆದರೆ ಇದು ನಿರ್ಲಕ್ಷಿಸುವ ವಿಷಯವಲ್ಲ ಬಿಜೆಪಿ ಪಾಲಿಗೆ! ಚುನಾವಣಾ ತಜ್ಞರ ಪ್ರಕಾರ, ಬಿಜೆಪಿಯ ಬೆಂಬಲಿಗರು ಕಳೆದ ಸಲದಷ್ಟು ಉತ್ಸಾಹದಿಂದ ಈ ಸಲ ಮತದಾನದಲ್ಲಿ ಪಾಲ್ಗೊಳ್ಳಲಿಲ್ಲ.

ಪರಂಪರಾಗತ ಬಿಜೆಪಿ ಬೆಂಬಲಿಗರು ತುಂಬ ಪ್ರಜ್ಞಾಪೂರ್ವಕವಾಗಿ ಮತದಾನ ಮಾಡುತ್ತಾರೆ. ಆದರೆ ಈ ಎಂಟು ಕ್ಷೇತ್ರಗಳಲ್ಲಿ 2014ರ ಉತ್ಸಾಹ ಕಂಡುಬಂದಿಲ್ಲ.
2014ರಲ್ಲಿ ಈ ಪಶ್ಚಿಮ ಯುಪಿಯಲ್ಲಿ ಎಲ್ಲ ಎಂಟೂ ಸ್ಥಾನಗಳನ್ನು ದೊಡ್ಡ ಲೀಡ್‍ನಿಂದ ಗೆದ್ದಿತ್ತು. ಆಗ ಮೋದಿಯ ಸೃಷ್ಟಿತ ಹವಾ ಅದರ ನೆರವಿಗೆ ಬಂದಿತ್ತು. ಅದಲ್ಲದೇ ವಿಪಕ್ಷಗಳಲ್ಲಿ ಯಾವುದೇ ಒಗ್ಗಟ್ಟಿರಲಿಲ್ಲ.

2014ರಲ್ಲಿ ಮೊದಲ ಹಂತದಲ್ಲಿ ಈ ಎಂಟು ಕ್ಷೇತ್ರಗಳಲ್ಲಿ –ಮೀರತ್, ಬಾಗಪಟ್, ಬಿಕ್ನೋರ್, ಘಾಜಿಯಾಬಾದ್, ಕೈರಾನ, ಗೌತಮ್ ಬುದ್ಧಿ ನಗರ, ಸಹ್ರಾನಪುರ್ ಮತ್ತು ಮುಜಾಫರ್ ನಗರ- ಬಿಜೆಪಿ ಶೇ. 49ರಷ್ಟು ಮತ ಪ್ರಮಾಣವನ್ನು ಪಡೆದಿತ್ತು. ಇಲ್ಲಿ ಮತದಾನಕ್ಕೆ ಕಂಡು ಬಂದ ಜೋಶ್ ಉಳಿದ ಹಂತಗಳಲ್ಲೂ ಮುಂದುವರೆದಿತ್ತು.

ಈಗ ಕುಸ್ತಿ ಅಖಾಡವೇ ಬೇರೆ!
2014ರ ಪರಿಸ್ಥಿತಿ ಈಗಿಲ್ಲ. ಮಾಯಾವತಿಯ ಬಿಎಸ್‍ಪಿ, ಅಖಲೇಶ ಯಾದವರ ಸಮಾಜವಾದಿ ಪಾರ್ಟಿ ಮತ್ತು ಅಜಿತ್‍ಸಿಂಗ್‍ರ ರಾಷ್ಟ್ರೀಯ ಲೋಕದಳ ಘಟಬಂಧನ ರಚಿಸಿಕೊಂಡಿವೆ. ಪಶ್ಚಿಮ ಉತ್ತರಪ್ರದೇಶದಲ್ಲಿ ಪ್ರಬಲ ಜಾಟರು ಎಂದಿಗೂ ಆರ್‍ಎಲ್‍ಡಿ ಪರವೇ ಇದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ದ್ವೇಷಪೂರಿತ ಆಡಳಿತದಿಂದ ತತ್ತರಿಸಿರುವ ದಲಿತರು ಮತ್ತೆ ಬಿಎಸ್ಪಿ ಕಡೆ ಮುಖ ಮಾಡಿದ್ದಾರೆ. ಎಂದಿನಂತೆ ಈ ಸಲ ಮುಸ್ಲಿಮರು ಎಸ್ಪಿಯ ಪರವಿದ್ದಾರೆ. ಹೀಗಾಗಿ ಈ ಭಾಗದಲ್ಲಿ ನಿರ್ಣಾಯಕ ಎನಿಸಿರುವ ದಲಿತರು ಮತ್ತು ಮುಸ್ಲಿಮರು ಈಗ ಒಂದಾಗಿದ್ದು, ಬಿಜೆಪಿಗೆ ತಲೆನೋವು ತಂದಿದ್ದಾರೆ. ಜಾಟರು, ದಲಿತರು ಮತ್ತು ಮುಸ್ಲಿಮರ ಈ ಘಟಬಂಧನ ಈ ಎಂಟು ಕ್ಷೇತ್ರಗಳಲ್ಲಿ ಫಲಿತಾಂಶ ನಿರ್ಧರಿಸಲಿದೆ.

ಆದರೆ, ಇಲ್ಲಿರುವ ಒಂದು ಸಣ್ಣ ತೊಡಕೆಂದರೆ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿರುವುದು ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಕ್ಕೆ ನೆರವಾಗಬಹುದು ಎನ್ನಲಾಗುತ್ತಿದೆ. ಕಾಂಗ್ರೆಸ್‍ನ ಸಹ್ರಾನಪುರ್ ಅಭ್ಯರ್ಥಿ ಇಮ್ರಾನ್ ಮಸೂದ್ ಮತ್ತು ಬಜ್ನೋರ್‍ನ ಅಭ್ಯರ್ಥಿ ನಾಸಿರುದ್ದೀನ್ ಸಿದ್ದಿಕಿ ಮುಸ್ಲಿಮರ ಮತಗಳನ್ನು ವಿಭಜಿಸುವ ಮೂಲಕ ಬಿಜೆಪಿಗೆ ನೆರವಾಗುವ ಸಾಧ್ಯತೆ ಇವೆ ಎನ್ನಲಾಗಿದೆ.

ಜಾಟರ ‘ಪವರ್‍ಪ್ಲೇ’!
ಈ ಸಲದ ಚುನಾವಣೆಯಲ್ಲಿ ಜಾಟರ ಶಕ್ತಿ ಒಂಥರಾ ‘ಎಕ್ಸ್’ ಫ್ಯಾಕ್ಟರ್ ತರಹ ಕೆಲಸ ಮಾಡಲಿದೆ. ಮೊದಲಿಂದಲೂ ಜಾಟರು ಆರ್‍ಎಲ್‍ಡಿ (ಈಗ ಘಟಬಂಧನದ ಭಾಗ) ಪಕ್ಷಕ್ಕೆ ನಿಷ್ಟೇ ವ್ಯಕ್ತಪಡಿಸುತ್ತ ಬಂದಿದ್ದರು. ಆದರೆ, 2013ರಲ್ಲಿ ನಡೆದ ಮುಜಾಫರ್‍ನಗರ ಕೋಮು ಗಲಭೆಯಯ ನಂತರ ಬಿಜೆಪಿ ಅವರನ್ನು ಹಿಂದೂತ್ವದ ಬ್ಯಾನರಿನಡಿ ಸೆಳೆದುಕೊಂಡು 2014ರ ಚುನಾವಣೆಯಲ್ಲಿ ಲಾಭ ಮಾಡಿಕೊಂಡಿತ್ತು. ಅಲ್ಲಿ ಮೊದಲಿಂದ ಇದ್ದ ಜಾಟರು-ಮುಸ್ಲಿಮರ ನಡುವಿನ ಸೌಹಾರ್ದ ಬದುಕನ್ನು ಜಾತಿ-ಧರ್ಮಗಳ ಹೆಸರಲ್ಲಿ ಬಿಜೆಪಿ ಒಡೆದಿತ್ತು. ಆದರೆ ಈಗ ಜಾಟರು ಮತ್ತು ,ಮುಸ್ಲಿಮರು ಎಚ್ಚೆತ್ತುಕೊಂಡಿದ್ದಾರೆ. ಗೋ ಮಾರಾಟ ನಿಷೇಧದ ಪರಿಣಾಮವಾಗಿ ಹೆಚ್ಚಿರುವ ಬಿಡಾಡಿ ದನಗಳು ಒಕ್ಕಲು ಮಕ್ಕಳು ಜಾಟರ ಬೆಳೆಗಳನ್ನು ನಾಶ ಮಾಡುತ್ತಿವೆ. ಕಬ್ಬಿಗೆ ನ್ಯಾಯಯುತ ಬೆಲೆ ಕೊಡುವಲ್ಲಿ ಉತ್ತರಪ್ರದೇಶ ಸರ್ಕಾರ ವಿಫಲವಾಗಿದೆ. ಹಾಗೆಯೇ ಅವರ ನಿಷ್ಟೇಯ ಪಕ್ಷ ಆರ್‍ಎಲ್‍ಡಿ ಈಗ ಘಟಬಂಧನದ ಮೂಲಕ ಜಾಟರನ್ನು ಮತ್ತೆ ತನ್ನಲ್ಲಿ ಉಳಿಸಿಕೊಂಡಿದೆ.

ಹೀಗಾಗಿ ಉತ್ತರ ಪ್ರದೇಶದಲ್ಲಿ ಈ ಸಲ ಮೋದಿ ಹೆಅಸರು, ರಾಷ್ಟ್ರೀಯ ಸುರಕ್ಷತೆ ಜಪ ಬಿಟ್ಟರೆ ಬಿಜೆಪಿಗೆ ಇಶ್ಯೂಗಳೇ ಇಲ್ಲ. 2014ರ ಮೋದಿ ಹವಾ ಠುಸ್ ಆಗಿದೆ. ಪುಲ್ವಾಮಾ ಘಟನೆ ಮತ್ತು ಬಾರಾಕೋಟ್ ವಾಯುದಾಳಿಯ ಮೇಲೆಯೇ ನಿಜೆಪಿ ಕ್ಯಾಂಪೇನ್ ಮಾಡುತ್ತಿದೆ.
ಮೊದಲ ಹಂತದಲ್ಲಿ ಇಷ್ಟೆಲ್ಲ ‘ದೇಶಭಕ್ತಿಯ’ ಪ್ರಚಾರದ ನಂತರವೂ ಎಂಟು ಕ್ಷೇತ್ರಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಬಿಜೆಪಿ ಪಾಲಿಗೆ ಇದು ‘ಅವಲಕ್ಷಣ’ವೇ ಅಲ್ಲವೇ? ಅಂದರೆ ರಾಜಕೀಯ ಅವಲಕ್ಷಣ!

ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...