Homeಮುಖಪುಟಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

- Advertisement -
- Advertisement -

ಸೆಪ್ಟೆಂಬರ್ 2ರಂದು ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ವಿನಯ್‌ಪುರದಲ್ಲಿ ದಾವೂದ್ ಅಲಿ ತ್ಯಾಗಿ ಎಂಬ 50 ವರ್ಷದ ಮುಸ್ಲಿಂ ವ್ಯಕ್ತಿಯ ಮೇಲೆ ಗುಂಪೊಂದು ದಾಳಿ ನಡೆಸಿತ್ತು. ಸುಮಾರು 20 ಮಂದಿ ತ್ಯಾಗಿಯವರ ಮೇಲೆ ತಡರಾತ್ರಿ ಕೋಲು ಮತ್ತು ಚೂಪಾದ ವಸ್ತುಗಳಿಂದ ಹಲ್ಲೆ ಮಾಡಿ ಮಾರಣಾಂತಿಕವಾಗಿ ಗಾಯಗೊಳಿಸಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೆ ತ್ಯಾಗಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

ತ್ಯಾಗಿ ಅವರ ಕುಟುಂಬವು, “ಇದು ಉದ್ದೇಶಪೂರ್ವಕ ಕೃತ್ಯ” ಎಂದಿದೆ. “ಈ ದಾಳಿಯು ಎಲ್ಲ ಪ್ರಕರಣಗಳಂತೆ ಒಂದಾದ ಪ್ರಕರಣವಲ್ಲ. ವಾಸ್ತವವಾಗಿ, ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ ಇದಾಗಿದೆ” ಎಂದು ಕುಟುಂಬ ಹೇಳಿರುವುದಾಗಿ ‘ದಿ ವೈರ್‌’ ವರದಿ ಮಾಡಿದೆ. ಆದರೆ ಪೊಲೀಸರು ಬೇರೆ ಕಾರಣವನ್ನು ಹೇಳುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತ್ಯಾಗಿ ರೈತರಾಗಿದ್ದು ತನ್ನ ಹೆಂಡತಿ ಮತ್ತು ಮಗಳೊಂದಿಗೆ ವಿನಯ್‌ಪುರದಲ್ಲಿ ವಾಸಿಸುತ್ತಿದ್ದರೆ, ಇವರ ಮೂವರು ಗಂಡು ಮಕ್ಕಳು ದೆಹಲಿಯಲ್ಲಿ ಓದುತ್ತಿದ್ದಾರೆ. ಅಂದು  ಏನಾಯಿತು ಎಂಬುದರ ಕುರಿತು ‘ದಿ ವೈರ್‌’ನೊಂದಿಗೆ ಮಾತನಾಡಿದ ತ್ಯಾಗಿ ಅವರ ಪುತ್ರ ಶಾರುಖ್, “ನನ್ನ ತಂದೆಯವರು ಮನೆಯ ವಾರಂಡದಲ್ಲಿ ನಮ್ಮ ಸಂಬಂಧಿಕರೊಂದಿಗೆ ಕುಶಲೋಪರಿಯಲ್ಲಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಏಳೆಂಟು ಬೈಕ್‌ಗಳಲ್ಲಿ 22 ಮಂದಿಯ ತಂಡ ಬಂದಿತು. ತಂದೆಯವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ಮಾಡಲಾಯಿತು” ಎಂದು ಶಾರುಖ್ ವಿವರಿಸಿದ್ದಾರೆ.

“ಅವರು ನನ್ನ ತಂದೆಯ ತಲೆಯ ಮೇಲೆ ದಾಳಿ ಮಾಡಿದರು. ಅವರ ಕೈಗೆ ಮೂರು ಕಡೆ ಗಾಯಗಳಾದವು. ಅವರು ನನ್ನ ಸೋದರಸಂಬಂಧಿಗಳ ಮೇಲೂ ದಾಳಿ ನಡೆಸಿದರು. ಆದರೆ ನನ್ನ ಸೋದರರು ಚಿಕ್ಕವಯಸ್ಸಿನವರಾಗಿದ್ದು, ಹೇಗೋ ಓಡಿ ತಪ್ಪಿಸಿಕೊಂಡರು. ನನ್ನ ತಂದೆ ಮೇಲೆ ದಾಳಿ ಮಾಡುವಾಗ ‘ಜೈ ಶ್ರೀರಾಮ್’ ಘೋಷಣೆಯನ್ನು ಕೂಗುತ್ತಿದ್ದರು” ಎಂದು ಶಾರುಖ್ ದೂರಿದ್ದಾರೆ.

ಇದನ್ನೂ ಓದಿರಿ: ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

ದಾಳಿಯ ನಂತರ ತ್ಯಾಗಿಯವರನ್ನು ಚಿಕಿತ್ಸೆಗಾಗಿ ಮೀರತ್‌ನ ಕುಟುಂಬ ಆರೋಗ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ವೇಳೆಗೆ ಸಾವನ್ನಪ್ಪಿದ್ದಾರೆ.

ಖೇಕ್ರಾ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 3 ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌  ದಾಖಲಿಸಲಾಯಿತು. ಭಾರತೀಯ ದಂಡ ಸಂಹಿತೆ ಸೆಕ್ಷನ್ 147 (ಗಲಭೆಗೆ ಶಿಕ್ಷೆ), 148 (ಗಲಭೆ, ಮಾರಣಾಂತಿಕ ಆಯುಧದಿಂದ ಶಸ್ತ್ರಸಜ್ಜಿತ); 149 (ಕಾನೂನುಬಾಹಿರ ಸಭೆಯ ತಪ್ಪಿತಸ್ಥರು); ಮತ್ತು 302 (ಕೊಲೆ) ಅಡಿ ಪ್ರಕರಣ ದಾಖಲಿಸಿದರು. ಆದರೆ ಶಾರುಖ್‌ ವಿವರಿಸಿದಂತೆ ಪ್ರಕರಣ ದಾಖಲಾಗಿಲ್ಲ. ‘ಜೈ ಶ್ರೀರಾಮ್’ ಎಂದದ್ದು ಎಫ್‌ಐಆರ್‌ನಲ್ಲಿ ಇಲ್ಲ ಎಂದು ‘ದಿ ವೈರ್‌’ ಗಮನ ಸೆಳೆದಿದೆ.

ಇದಾದ ನಂತರ ಸೆಪ್ಟೆಂಬರ್ 5 ರಂದು, ಖೇಕ್ರಾ ಪೊಲೀಸರು ತ್ಯಾಗಿ ಅವರ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿರುವುದಾಗಿ ಹೇಳಿಕೆ ನೀಡಿದರು. ನಿಕ್ಕಿ ಅಲಿಯಾಸ್ ವಿಕ್ಕಿ, ಹರೀಶ್, ಮೋಹಿತ್ ಮತ್ತು ದಿಲೀಪ್- ಬಂಧಿತ ಆರೋಪಿಗಳು. ಇವರೆಲ್ಲರೂ ವಿನಯ್‌ಪುರದ ಸಮೀಪವಿರುವ ಭಗೋತ್‌ನ ನಿವಾಸಿಗಳಾಗಿದ್ದಾರೆ.

PC: The Wire

ಎರಡು ಮೋಟಾರು ಬೈಕ್‌ಗಳು ಮತ್ತು ಎರಡು ಸ್ಟಿಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಲ್ವರು ಆರೋಪಿಗಳನ್ನು ವಿಚಾರಣೆ ಮಾಡಿದ ನಂತರ ಪೊಲೀಸರು, “ಭಗೋತ್ ಮತ್ತು ವಿನಯ್‌ಪುರ ನಿವಾಸಿಗಳ ನಡುವೆ ಜಗಳವಾಗಿತ್ತು. ಬಂಧಿತ ನಾಲ್ವರು ವಿನಯ್‌ಪುರದಲ್ಲಿ ಯಾರ ಮೇಲಾದರೂ ದಾಳಿ ಮಾಡಲು ನಿರ್ಧರಿಸಿದ್ದರು” ಎಂದಿದ್ದಾರೆ.

‘ಹಳ್ಳ ಹಿಡಿಯುತ್ತಿರುವ ಪ್ರಕರಣ’

ತ್ಯಾಗಿ ಅವರ ಹತ್ಯೆಯಾಗಿ ಒಂದು ತಿಂಗಳು ಕಳೆದರೂ ತನಿಖೆಯು ಕೋಲ್ಡ್ ಸ್ಟೋರೇಜ್‌ನಲ್ಲಿದೆ. ಹೆಚ್ಚಿನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಂತ್ರಸ್ತ ಕುಟುಂಬವು ದುರ್ಬಲವಾಗಿದ್ದು, ಭಯ ಮತ್ತು ಅಭದ್ರತೆಯಿಂದ ಬದುಕುತ್ತಿದೆ.

ಇದಲ್ಲದೆ ತ್ಯಾಗಿ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂಬ ಭರವಸೆ ಸಿಕ್ಕಿತ್ತು. ಅದು ಕೂಡ ಈಡೇರಿಲ್ಲ.

ಕುಟುಂಬ ಸದಸ್ಯರನ್ನು ಹೆದರಿಸುವ ಪ್ರಯತ್ನ ಇತ್ತೀಚೆಗೆ ನಡೆದಿದೆ. ಕುಟುಂಬದ ಭಯವನ್ನು ಹೆಚ್ಚಿಸಲಾಗಿದೆ ಎಂದು ಶಾರುಖ್ ಹೇಳಿಕೊಂಡಿದ್ದಾರೆ.

“ಮೂರು ದಿನಗಳ ಹಿಂದೆ, ನನ್ನ ಅಣ್ಣ ಮತ್ತು ನನ್ನ ಚಿಕ್ಕಪ್ಪ ಹೊಲಕ್ಕೆ ಹೋಗಿದ್ದರು – ಅಪರಾಧಿಗಳ ಹೊಲಗಳು ನಮ್ಮ ಪಕ್ಕದಲ್ಲಿವೆ. ಆ ದಿನ ನನ್ನ ಸಹೋದರನನ್ನು ಅವರು ಸುತ್ತುವರಿದಿದ್ದರು” ಎಂದು ಶಾರುಖ್ ದೂರಿದ್ದಾರೆ.

“ನಾವು ಬೆದರಿಕೆಯನ್ನು ಅನುಭವಿಸಿದ್ದೇವೆ; ಮತ್ತೊಮ್ಮೆ, ಏನಾದರೂ ಸಂಭವಿಸಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕುಟುಂಬಕ್ಕೆ ಎದುರಾಗಿರುವ ಬೆದರಿಕೆಯ ಕುರಿತು ‘ದಿ ವೈರ್‌’ನೊಂದಿಗೆ ಮಾತನಾಡಿದ ಬಾಗ್‌ಪತ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ), ನೀರಜ್ ಕುಮಾರ್ ಜಾದೌನ್, “ದಾಳಿಯ ಬಗ್ಗೆ ಕುಟುಂಬಕ್ಕೆ ಆತಂಕವಿತ್ತು. ಅದನ್ನು ಸರಿಪಡಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಪಂಜಾಬ್‌: ಪಾರ್ಕ್‌ನಲ್ಲಿ ಕುಳಿತ್ತಿದ್ದ ವಿದ್ಯಾರ್ಥಿನಿಯರಿಗೆ ಥಳಿಸಿದ ಮಹಿಳಾ ಪೊಲೀಸರು; ನೆಟ್ಟಿಗರ ಖಂಡನೆ

ಇದರ ನಡುವೆ ಶಾರುಖ್, “ನಾಲ್ಕು ಜನರನ್ನು ಬಂಧಿಸಲಾಗಿದೆ. ಆದರೆ ಒಂದು ತಿಂಗಳು ಕಳೆದಿದೆ ಮತ್ತು ಪ್ರಕರಣವು ಹಳ್ಳಹಿಡಿಯುತ್ತಿದೆ” ಎಂದು ಆರೋಪಿಸಿದ್ದಾರೆ.

“ಜನರು (ಸಾಕ್ಷಿಗಳು) ಮುಂದಿಟ್ಟಿರುವ (ಅಪರಾಧಿಗಳ) ಹೆಸರುಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರೊಂದಿಗೆ ಸಂಪರ್ಕ ಹೊಂದಿವೆ. ಒಂದಲ್ಲ ಎರಡೆರಡು ಬಾರಿ ಪೊಲೀಸರು ಅವರ ಮನೆಗೆ ಭೇಟಿ ನೀಡಿದರೂ ಹೆಚ್ಚಿನ ಬೆಳವಣಿಗೆಗಳು ಆಗಿಲ್ಲ” ಎಂದು ವಿಷಾದಿಸಿದ್ದಾರೆ.

‘ಯೋಜಿತ ದಾಳಿಗೆ ನಡೆದಿತ್ತು ಸಭೆ’

ತ್ಯಾಗಿ ಹತ್ಯೆಗೂ ಮುನ್ನ ಬಾಘೋಟ್‌ನಲ್ಲಿ ಸಭೆ ನಡೆದಿದ್ದು, ಮುಸ್ಲಿಮರನ್ನು ಹೆದರಿಸುವ ಯೋಜನೆ ರೂಪಿಸಲಾಗಿತ್ತು ಎಂದು ತ್ಯಾಗಿ ಅವರ ಕುಟುಂಬದ ಸದಸ್ಯರು ಹಾಗೂ ಹೋರಾಟಗಾರರು ಹೇಳಿದ್ದಾರೆ.

ಹೋರಾಟಗಾರ ದೇವೇಂದ್ರ ಧಾಮಾ ‘ದಿ ವೈರ್‌’ಗೆ ಪ್ರತಿಕ್ರಿಯಿಸಿ, “ಕೆಲವು ಗಂಡಸರು ಅಗ್ಗದ ಜನಪ್ರಿಯತೆಯನ್ನು ಬಯಸಿದ್ದರು. ಇದಕ್ಕಾಗಿಯೇ ದಾಳಿ ನಡೆಸಲಾಗಿದೆ. ಘಟನೆಯ ಮೊದಲು ಬಾಘೋಟ್‌ನಲ್ಲಿ ಸಭೆ ನಡೆದಿತ್ತು. ಮತ್ತೊಂದು ಸಭೆ ನಡೆದಿದ್ದು 60-65 ಜನರು ಅದರಲ್ಲಿದ್ದರು. ಈ ಪ್ರದೇಶದ ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುವುದು ಅವರ ಉದ್ದೇಶವಾಗಿತ್ತು. ಕೊಲ್ಲುವುದು ಅಥವಾ ಲೂಟಿ ಮಾಡುವುದು ಅವರ ಗುರಿಯಾಗಿರಲಿಲ್ಲ. ಆದರೆ ಭಯವನ್ನು ಹರಡುವುದು ಮುಖ್ಯವಾಗಿತ್ತು” ಎಂದು ವಿವರಿಸಿದ್ದಾರೆ.

“ಅವರು ಗ್ರಾಮವನ್ನು ಪ್ರವೇಶಿಸಿ, ತ್ಯಾಗಿ ಮೇಲೆ ಹಲ್ಲೆ ನಡೆಸಿದರು. ನಂತರ ಚದುರಿಹೋದರು. ಇದಕ್ಕೂ ಮುನ್ನ ಗ್ರಾಮದ ಮಸೀದಿಯಲ್ಲಿ ನಮಾಜ್ ಓದುವ ಪ್ರಯತ್ನ ನಡೆಸಲಾಗಿತ್ತು” ಎಂದು ಧಾಮಾ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿನ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ಆಧಾರಿಸಿ ಬಿಬಿಸಿ ಗ್ರೌಂಡ್ ರಿಪೋರ್ಟ್ ಮಾಡಿದೆ. ದಾಳಿಯಲ್ಲಿ ಭಾಗವಹಿಸಲು ಸಭೆ ನಡೆದಿತ್ತು. ದಾಳಿಯನ್ನು ಪ್ರಚೋದಿಸುವ ಗುರಿಯನ್ನು ಹೊಂದಿರುವ ಪೋಸ್ಟ್‌ಗಳನ್ನು ಬಂಧಿತ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ದಿಲೀಪ್‌ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

ದಿ ವೈರ್‌ನೊಂದಿಗೆ ಮಾತನಾಡುತ್ತಾ ರಾಜಕೀಯ ಸಂಬಂಧ ಸಭೆ ನಡೆದಿದೆ ಎಂಬ ಪ್ರತಿಪಾದನೆಗಳನ್ನು ಪೊಲೀಸರು ನಿರಾಕರಿಸಿದ್ದಾರೆ. ನಾಲ್ವರನ್ನು ಬಂಧಿಸಲಾಗಿದೆ ಎಂದು ಖೇಕ್ರಾ ಪೊಲೀಸ್ ಠಾಣೆಯ ವೃತ್ತಾಧಿಕಾರಿ ವಿಜಯ್ ಚೌಧರಿ ತಿಳಿಸಿದ್ದಾರೆ. ಉಳಿದ ವ್ಯಕ್ತಿಗಳಿಗಾಗಿ ನಾವು ಗಮನ ಹರಿಸಿದ್ದೇವೆ. “ಸಭೆ ನಡೆಸಿ ಪಿತೂರಿ ನಡೆದಿದೆ. ಆದರೆ, ಅದು ರಾಜಕೀಯವಾಗಿರಲಿಲ್ಲ. ಇದು ಹಳೆಯ ವಿಚಾರಕ್ಕೆ ಸಂಬಂಧಿಸಿದ ಪೋಸ್ಟ್ ಆಗಿದೆ” ಎಂದಿದ್ದಾರೆ.

ಶಾರುಖ್ ಮತ್ತು ಅವರ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡಿದ್ದರೂ, ಅವರು ಭಯದಿಂದ ಬದುಕುತ್ತಿದ್ದಾರೆ. ವಿನಯ್‌ಪುರದಲ್ಲಿ ಗುರ್ಜರ್‌ಗಳು ಮತ್ತು ಮುಸ್ಲಿಮರು ವಾಸವಿದ್ದಾರೆ. ಶಾರುಖ್ ಪ್ರಕಾರ, ಸುತ್ತಮುತ್ತಲಿನ ಹಳ್ಳಿಗಳು ಗುರ್ಜರ್ ಪ್ರಾಬಲ್ಯ ಹೊಂದಿವೆ.

“ಈ ಪ್ರದೇಶದಲ್ಲಿನ ಉದ್ವಿಗ್ನತೆಯಿಂದಾಗಿ ನಾವು ಗ್ರಾಮದಿಂದ ಹೊರಹೋಗಲು ಬಯಸುತ್ತಿದ್ದೇವೆ. ನಾವು ಆಡಳಿತದ ಮೇಲೆ ಕುರುಡು ನಂಬಿಕೆ ಇಟ್ಟಿದ್ದೆವು. ಸರ್ಕಾರಿ ನೌಕರಿಯೊಂದಿಗೆ ನಮಗೆ ಬೆಂಬಲ ನೀಡುವ ಭರವಸೆ ಇನ್ನೂ ಈಡೇರಿಲ್ಲ. ನಾವೆಲ್ಲರೂ ಇನ್ನೂ ಓದುತ್ತಿರುವುದರಿಂದ ನನ್ನ ತಂದೆಯ ಅಲ್ಪ ಆದಾಯವನ್ನೇ ಅವಲಂಬಿಸಿದ್ದೆವು” ಎಂದಿದ್ದಾರೆ ಶಾರುಖ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...