Homeಮುಖಪುಟಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

- Advertisement -
- Advertisement -

ಸೆಪ್ಟೆಂಬರ್ 2ರಂದು ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ವಿನಯ್‌ಪುರದಲ್ಲಿ ದಾವೂದ್ ಅಲಿ ತ್ಯಾಗಿ ಎಂಬ 50 ವರ್ಷದ ಮುಸ್ಲಿಂ ವ್ಯಕ್ತಿಯ ಮೇಲೆ ಗುಂಪೊಂದು ದಾಳಿ ನಡೆಸಿತ್ತು. ಸುಮಾರು 20 ಮಂದಿ ತ್ಯಾಗಿಯವರ ಮೇಲೆ ತಡರಾತ್ರಿ ಕೋಲು ಮತ್ತು ಚೂಪಾದ ವಸ್ತುಗಳಿಂದ ಹಲ್ಲೆ ಮಾಡಿ ಮಾರಣಾಂತಿಕವಾಗಿ ಗಾಯಗೊಳಿಸಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೆ ತ್ಯಾಗಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

ತ್ಯಾಗಿ ಅವರ ಕುಟುಂಬವು, “ಇದು ಉದ್ದೇಶಪೂರ್ವಕ ಕೃತ್ಯ” ಎಂದಿದೆ. “ಈ ದಾಳಿಯು ಎಲ್ಲ ಪ್ರಕರಣಗಳಂತೆ ಒಂದಾದ ಪ್ರಕರಣವಲ್ಲ. ವಾಸ್ತವವಾಗಿ, ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ ಇದಾಗಿದೆ” ಎಂದು ಕುಟುಂಬ ಹೇಳಿರುವುದಾಗಿ ‘ದಿ ವೈರ್‌’ ವರದಿ ಮಾಡಿದೆ. ಆದರೆ ಪೊಲೀಸರು ಬೇರೆ ಕಾರಣವನ್ನು ಹೇಳುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತ್ಯಾಗಿ ರೈತರಾಗಿದ್ದು ತನ್ನ ಹೆಂಡತಿ ಮತ್ತು ಮಗಳೊಂದಿಗೆ ವಿನಯ್‌ಪುರದಲ್ಲಿ ವಾಸಿಸುತ್ತಿದ್ದರೆ, ಇವರ ಮೂವರು ಗಂಡು ಮಕ್ಕಳು ದೆಹಲಿಯಲ್ಲಿ ಓದುತ್ತಿದ್ದಾರೆ. ಅಂದು  ಏನಾಯಿತು ಎಂಬುದರ ಕುರಿತು ‘ದಿ ವೈರ್‌’ನೊಂದಿಗೆ ಮಾತನಾಡಿದ ತ್ಯಾಗಿ ಅವರ ಪುತ್ರ ಶಾರುಖ್, “ನನ್ನ ತಂದೆಯವರು ಮನೆಯ ವಾರಂಡದಲ್ಲಿ ನಮ್ಮ ಸಂಬಂಧಿಕರೊಂದಿಗೆ ಕುಶಲೋಪರಿಯಲ್ಲಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಏಳೆಂಟು ಬೈಕ್‌ಗಳಲ್ಲಿ 22 ಮಂದಿಯ ತಂಡ ಬಂದಿತು. ತಂದೆಯವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ಮಾಡಲಾಯಿತು” ಎಂದು ಶಾರುಖ್ ವಿವರಿಸಿದ್ದಾರೆ.

“ಅವರು ನನ್ನ ತಂದೆಯ ತಲೆಯ ಮೇಲೆ ದಾಳಿ ಮಾಡಿದರು. ಅವರ ಕೈಗೆ ಮೂರು ಕಡೆ ಗಾಯಗಳಾದವು. ಅವರು ನನ್ನ ಸೋದರಸಂಬಂಧಿಗಳ ಮೇಲೂ ದಾಳಿ ನಡೆಸಿದರು. ಆದರೆ ನನ್ನ ಸೋದರರು ಚಿಕ್ಕವಯಸ್ಸಿನವರಾಗಿದ್ದು, ಹೇಗೋ ಓಡಿ ತಪ್ಪಿಸಿಕೊಂಡರು. ನನ್ನ ತಂದೆ ಮೇಲೆ ದಾಳಿ ಮಾಡುವಾಗ ‘ಜೈ ಶ್ರೀರಾಮ್’ ಘೋಷಣೆಯನ್ನು ಕೂಗುತ್ತಿದ್ದರು” ಎಂದು ಶಾರುಖ್ ದೂರಿದ್ದಾರೆ.

ಇದನ್ನೂ ಓದಿರಿ: ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

ದಾಳಿಯ ನಂತರ ತ್ಯಾಗಿಯವರನ್ನು ಚಿಕಿತ್ಸೆಗಾಗಿ ಮೀರತ್‌ನ ಕುಟುಂಬ ಆರೋಗ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ವೇಳೆಗೆ ಸಾವನ್ನಪ್ಪಿದ್ದಾರೆ.

ಖೇಕ್ರಾ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 3 ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌  ದಾಖಲಿಸಲಾಯಿತು. ಭಾರತೀಯ ದಂಡ ಸಂಹಿತೆ ಸೆಕ್ಷನ್ 147 (ಗಲಭೆಗೆ ಶಿಕ್ಷೆ), 148 (ಗಲಭೆ, ಮಾರಣಾಂತಿಕ ಆಯುಧದಿಂದ ಶಸ್ತ್ರಸಜ್ಜಿತ); 149 (ಕಾನೂನುಬಾಹಿರ ಸಭೆಯ ತಪ್ಪಿತಸ್ಥರು); ಮತ್ತು 302 (ಕೊಲೆ) ಅಡಿ ಪ್ರಕರಣ ದಾಖಲಿಸಿದರು. ಆದರೆ ಶಾರುಖ್‌ ವಿವರಿಸಿದಂತೆ ಪ್ರಕರಣ ದಾಖಲಾಗಿಲ್ಲ. ‘ಜೈ ಶ್ರೀರಾಮ್’ ಎಂದದ್ದು ಎಫ್‌ಐಆರ್‌ನಲ್ಲಿ ಇಲ್ಲ ಎಂದು ‘ದಿ ವೈರ್‌’ ಗಮನ ಸೆಳೆದಿದೆ.

ಇದಾದ ನಂತರ ಸೆಪ್ಟೆಂಬರ್ 5 ರಂದು, ಖೇಕ್ರಾ ಪೊಲೀಸರು ತ್ಯಾಗಿ ಅವರ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿರುವುದಾಗಿ ಹೇಳಿಕೆ ನೀಡಿದರು. ನಿಕ್ಕಿ ಅಲಿಯಾಸ್ ವಿಕ್ಕಿ, ಹರೀಶ್, ಮೋಹಿತ್ ಮತ್ತು ದಿಲೀಪ್- ಬಂಧಿತ ಆರೋಪಿಗಳು. ಇವರೆಲ್ಲರೂ ವಿನಯ್‌ಪುರದ ಸಮೀಪವಿರುವ ಭಗೋತ್‌ನ ನಿವಾಸಿಗಳಾಗಿದ್ದಾರೆ.

PC: The Wire

ಎರಡು ಮೋಟಾರು ಬೈಕ್‌ಗಳು ಮತ್ತು ಎರಡು ಸ್ಟಿಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಲ್ವರು ಆರೋಪಿಗಳನ್ನು ವಿಚಾರಣೆ ಮಾಡಿದ ನಂತರ ಪೊಲೀಸರು, “ಭಗೋತ್ ಮತ್ತು ವಿನಯ್‌ಪುರ ನಿವಾಸಿಗಳ ನಡುವೆ ಜಗಳವಾಗಿತ್ತು. ಬಂಧಿತ ನಾಲ್ವರು ವಿನಯ್‌ಪುರದಲ್ಲಿ ಯಾರ ಮೇಲಾದರೂ ದಾಳಿ ಮಾಡಲು ನಿರ್ಧರಿಸಿದ್ದರು” ಎಂದಿದ್ದಾರೆ.

‘ಹಳ್ಳ ಹಿಡಿಯುತ್ತಿರುವ ಪ್ರಕರಣ’

ತ್ಯಾಗಿ ಅವರ ಹತ್ಯೆಯಾಗಿ ಒಂದು ತಿಂಗಳು ಕಳೆದರೂ ತನಿಖೆಯು ಕೋಲ್ಡ್ ಸ್ಟೋರೇಜ್‌ನಲ್ಲಿದೆ. ಹೆಚ್ಚಿನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಂತ್ರಸ್ತ ಕುಟುಂಬವು ದುರ್ಬಲವಾಗಿದ್ದು, ಭಯ ಮತ್ತು ಅಭದ್ರತೆಯಿಂದ ಬದುಕುತ್ತಿದೆ.

ಇದಲ್ಲದೆ ತ್ಯಾಗಿ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂಬ ಭರವಸೆ ಸಿಕ್ಕಿತ್ತು. ಅದು ಕೂಡ ಈಡೇರಿಲ್ಲ.

ಕುಟುಂಬ ಸದಸ್ಯರನ್ನು ಹೆದರಿಸುವ ಪ್ರಯತ್ನ ಇತ್ತೀಚೆಗೆ ನಡೆದಿದೆ. ಕುಟುಂಬದ ಭಯವನ್ನು ಹೆಚ್ಚಿಸಲಾಗಿದೆ ಎಂದು ಶಾರುಖ್ ಹೇಳಿಕೊಂಡಿದ್ದಾರೆ.

“ಮೂರು ದಿನಗಳ ಹಿಂದೆ, ನನ್ನ ಅಣ್ಣ ಮತ್ತು ನನ್ನ ಚಿಕ್ಕಪ್ಪ ಹೊಲಕ್ಕೆ ಹೋಗಿದ್ದರು – ಅಪರಾಧಿಗಳ ಹೊಲಗಳು ನಮ್ಮ ಪಕ್ಕದಲ್ಲಿವೆ. ಆ ದಿನ ನನ್ನ ಸಹೋದರನನ್ನು ಅವರು ಸುತ್ತುವರಿದಿದ್ದರು” ಎಂದು ಶಾರುಖ್ ದೂರಿದ್ದಾರೆ.

“ನಾವು ಬೆದರಿಕೆಯನ್ನು ಅನುಭವಿಸಿದ್ದೇವೆ; ಮತ್ತೊಮ್ಮೆ, ಏನಾದರೂ ಸಂಭವಿಸಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕುಟುಂಬಕ್ಕೆ ಎದುರಾಗಿರುವ ಬೆದರಿಕೆಯ ಕುರಿತು ‘ದಿ ವೈರ್‌’ನೊಂದಿಗೆ ಮಾತನಾಡಿದ ಬಾಗ್‌ಪತ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ), ನೀರಜ್ ಕುಮಾರ್ ಜಾದೌನ್, “ದಾಳಿಯ ಬಗ್ಗೆ ಕುಟುಂಬಕ್ಕೆ ಆತಂಕವಿತ್ತು. ಅದನ್ನು ಸರಿಪಡಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಪಂಜಾಬ್‌: ಪಾರ್ಕ್‌ನಲ್ಲಿ ಕುಳಿತ್ತಿದ್ದ ವಿದ್ಯಾರ್ಥಿನಿಯರಿಗೆ ಥಳಿಸಿದ ಮಹಿಳಾ ಪೊಲೀಸರು; ನೆಟ್ಟಿಗರ ಖಂಡನೆ

ಇದರ ನಡುವೆ ಶಾರುಖ್, “ನಾಲ್ಕು ಜನರನ್ನು ಬಂಧಿಸಲಾಗಿದೆ. ಆದರೆ ಒಂದು ತಿಂಗಳು ಕಳೆದಿದೆ ಮತ್ತು ಪ್ರಕರಣವು ಹಳ್ಳಹಿಡಿಯುತ್ತಿದೆ” ಎಂದು ಆರೋಪಿಸಿದ್ದಾರೆ.

“ಜನರು (ಸಾಕ್ಷಿಗಳು) ಮುಂದಿಟ್ಟಿರುವ (ಅಪರಾಧಿಗಳ) ಹೆಸರುಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರೊಂದಿಗೆ ಸಂಪರ್ಕ ಹೊಂದಿವೆ. ಒಂದಲ್ಲ ಎರಡೆರಡು ಬಾರಿ ಪೊಲೀಸರು ಅವರ ಮನೆಗೆ ಭೇಟಿ ನೀಡಿದರೂ ಹೆಚ್ಚಿನ ಬೆಳವಣಿಗೆಗಳು ಆಗಿಲ್ಲ” ಎಂದು ವಿಷಾದಿಸಿದ್ದಾರೆ.

‘ಯೋಜಿತ ದಾಳಿಗೆ ನಡೆದಿತ್ತು ಸಭೆ’

ತ್ಯಾಗಿ ಹತ್ಯೆಗೂ ಮುನ್ನ ಬಾಘೋಟ್‌ನಲ್ಲಿ ಸಭೆ ನಡೆದಿದ್ದು, ಮುಸ್ಲಿಮರನ್ನು ಹೆದರಿಸುವ ಯೋಜನೆ ರೂಪಿಸಲಾಗಿತ್ತು ಎಂದು ತ್ಯಾಗಿ ಅವರ ಕುಟುಂಬದ ಸದಸ್ಯರು ಹಾಗೂ ಹೋರಾಟಗಾರರು ಹೇಳಿದ್ದಾರೆ.

ಹೋರಾಟಗಾರ ದೇವೇಂದ್ರ ಧಾಮಾ ‘ದಿ ವೈರ್‌’ಗೆ ಪ್ರತಿಕ್ರಿಯಿಸಿ, “ಕೆಲವು ಗಂಡಸರು ಅಗ್ಗದ ಜನಪ್ರಿಯತೆಯನ್ನು ಬಯಸಿದ್ದರು. ಇದಕ್ಕಾಗಿಯೇ ದಾಳಿ ನಡೆಸಲಾಗಿದೆ. ಘಟನೆಯ ಮೊದಲು ಬಾಘೋಟ್‌ನಲ್ಲಿ ಸಭೆ ನಡೆದಿತ್ತು. ಮತ್ತೊಂದು ಸಭೆ ನಡೆದಿದ್ದು 60-65 ಜನರು ಅದರಲ್ಲಿದ್ದರು. ಈ ಪ್ರದೇಶದ ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುವುದು ಅವರ ಉದ್ದೇಶವಾಗಿತ್ತು. ಕೊಲ್ಲುವುದು ಅಥವಾ ಲೂಟಿ ಮಾಡುವುದು ಅವರ ಗುರಿಯಾಗಿರಲಿಲ್ಲ. ಆದರೆ ಭಯವನ್ನು ಹರಡುವುದು ಮುಖ್ಯವಾಗಿತ್ತು” ಎಂದು ವಿವರಿಸಿದ್ದಾರೆ.

“ಅವರು ಗ್ರಾಮವನ್ನು ಪ್ರವೇಶಿಸಿ, ತ್ಯಾಗಿ ಮೇಲೆ ಹಲ್ಲೆ ನಡೆಸಿದರು. ನಂತರ ಚದುರಿಹೋದರು. ಇದಕ್ಕೂ ಮುನ್ನ ಗ್ರಾಮದ ಮಸೀದಿಯಲ್ಲಿ ನಮಾಜ್ ಓದುವ ಪ್ರಯತ್ನ ನಡೆಸಲಾಗಿತ್ತು” ಎಂದು ಧಾಮಾ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿನ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ಆಧಾರಿಸಿ ಬಿಬಿಸಿ ಗ್ರೌಂಡ್ ರಿಪೋರ್ಟ್ ಮಾಡಿದೆ. ದಾಳಿಯಲ್ಲಿ ಭಾಗವಹಿಸಲು ಸಭೆ ನಡೆದಿತ್ತು. ದಾಳಿಯನ್ನು ಪ್ರಚೋದಿಸುವ ಗುರಿಯನ್ನು ಹೊಂದಿರುವ ಪೋಸ್ಟ್‌ಗಳನ್ನು ಬಂಧಿತ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ದಿಲೀಪ್‌ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

ದಿ ವೈರ್‌ನೊಂದಿಗೆ ಮಾತನಾಡುತ್ತಾ ರಾಜಕೀಯ ಸಂಬಂಧ ಸಭೆ ನಡೆದಿದೆ ಎಂಬ ಪ್ರತಿಪಾದನೆಗಳನ್ನು ಪೊಲೀಸರು ನಿರಾಕರಿಸಿದ್ದಾರೆ. ನಾಲ್ವರನ್ನು ಬಂಧಿಸಲಾಗಿದೆ ಎಂದು ಖೇಕ್ರಾ ಪೊಲೀಸ್ ಠಾಣೆಯ ವೃತ್ತಾಧಿಕಾರಿ ವಿಜಯ್ ಚೌಧರಿ ತಿಳಿಸಿದ್ದಾರೆ. ಉಳಿದ ವ್ಯಕ್ತಿಗಳಿಗಾಗಿ ನಾವು ಗಮನ ಹರಿಸಿದ್ದೇವೆ. “ಸಭೆ ನಡೆಸಿ ಪಿತೂರಿ ನಡೆದಿದೆ. ಆದರೆ, ಅದು ರಾಜಕೀಯವಾಗಿರಲಿಲ್ಲ. ಇದು ಹಳೆಯ ವಿಚಾರಕ್ಕೆ ಸಂಬಂಧಿಸಿದ ಪೋಸ್ಟ್ ಆಗಿದೆ” ಎಂದಿದ್ದಾರೆ.

ಶಾರುಖ್ ಮತ್ತು ಅವರ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡಿದ್ದರೂ, ಅವರು ಭಯದಿಂದ ಬದುಕುತ್ತಿದ್ದಾರೆ. ವಿನಯ್‌ಪುರದಲ್ಲಿ ಗುರ್ಜರ್‌ಗಳು ಮತ್ತು ಮುಸ್ಲಿಮರು ವಾಸವಿದ್ದಾರೆ. ಶಾರುಖ್ ಪ್ರಕಾರ, ಸುತ್ತಮುತ್ತಲಿನ ಹಳ್ಳಿಗಳು ಗುರ್ಜರ್ ಪ್ರಾಬಲ್ಯ ಹೊಂದಿವೆ.

“ಈ ಪ್ರದೇಶದಲ್ಲಿನ ಉದ್ವಿಗ್ನತೆಯಿಂದಾಗಿ ನಾವು ಗ್ರಾಮದಿಂದ ಹೊರಹೋಗಲು ಬಯಸುತ್ತಿದ್ದೇವೆ. ನಾವು ಆಡಳಿತದ ಮೇಲೆ ಕುರುಡು ನಂಬಿಕೆ ಇಟ್ಟಿದ್ದೆವು. ಸರ್ಕಾರಿ ನೌಕರಿಯೊಂದಿಗೆ ನಮಗೆ ಬೆಂಬಲ ನೀಡುವ ಭರವಸೆ ಇನ್ನೂ ಈಡೇರಿಲ್ಲ. ನಾವೆಲ್ಲರೂ ಇನ್ನೂ ಓದುತ್ತಿರುವುದರಿಂದ ನನ್ನ ತಂದೆಯ ಅಲ್ಪ ಆದಾಯವನ್ನೇ ಅವಲಂಬಿಸಿದ್ದೆವು” ಎಂದಿದ್ದಾರೆ ಶಾರುಖ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...