Homeಮುಖಪುಟಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

- Advertisement -
- Advertisement -

ಸೆಪ್ಟೆಂಬರ್ 2ರಂದು ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ವಿನಯ್‌ಪುರದಲ್ಲಿ ದಾವೂದ್ ಅಲಿ ತ್ಯಾಗಿ ಎಂಬ 50 ವರ್ಷದ ಮುಸ್ಲಿಂ ವ್ಯಕ್ತಿಯ ಮೇಲೆ ಗುಂಪೊಂದು ದಾಳಿ ನಡೆಸಿತ್ತು. ಸುಮಾರು 20 ಮಂದಿ ತ್ಯಾಗಿಯವರ ಮೇಲೆ ತಡರಾತ್ರಿ ಕೋಲು ಮತ್ತು ಚೂಪಾದ ವಸ್ತುಗಳಿಂದ ಹಲ್ಲೆ ಮಾಡಿ ಮಾರಣಾಂತಿಕವಾಗಿ ಗಾಯಗೊಳಿಸಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೆ ತ್ಯಾಗಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

ತ್ಯಾಗಿ ಅವರ ಕುಟುಂಬವು, “ಇದು ಉದ್ದೇಶಪೂರ್ವಕ ಕೃತ್ಯ” ಎಂದಿದೆ. “ಈ ದಾಳಿಯು ಎಲ್ಲ ಪ್ರಕರಣಗಳಂತೆ ಒಂದಾದ ಪ್ರಕರಣವಲ್ಲ. ವಾಸ್ತವವಾಗಿ, ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ ಇದಾಗಿದೆ” ಎಂದು ಕುಟುಂಬ ಹೇಳಿರುವುದಾಗಿ ‘ದಿ ವೈರ್‌’ ವರದಿ ಮಾಡಿದೆ. ಆದರೆ ಪೊಲೀಸರು ಬೇರೆ ಕಾರಣವನ್ನು ಹೇಳುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತ್ಯಾಗಿ ರೈತರಾಗಿದ್ದು ತನ್ನ ಹೆಂಡತಿ ಮತ್ತು ಮಗಳೊಂದಿಗೆ ವಿನಯ್‌ಪುರದಲ್ಲಿ ವಾಸಿಸುತ್ತಿದ್ದರೆ, ಇವರ ಮೂವರು ಗಂಡು ಮಕ್ಕಳು ದೆಹಲಿಯಲ್ಲಿ ಓದುತ್ತಿದ್ದಾರೆ. ಅಂದು  ಏನಾಯಿತು ಎಂಬುದರ ಕುರಿತು ‘ದಿ ವೈರ್‌’ನೊಂದಿಗೆ ಮಾತನಾಡಿದ ತ್ಯಾಗಿ ಅವರ ಪುತ್ರ ಶಾರುಖ್, “ನನ್ನ ತಂದೆಯವರು ಮನೆಯ ವಾರಂಡದಲ್ಲಿ ನಮ್ಮ ಸಂಬಂಧಿಕರೊಂದಿಗೆ ಕುಶಲೋಪರಿಯಲ್ಲಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಏಳೆಂಟು ಬೈಕ್‌ಗಳಲ್ಲಿ 22 ಮಂದಿಯ ತಂಡ ಬಂದಿತು. ತಂದೆಯವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ಮಾಡಲಾಯಿತು” ಎಂದು ಶಾರುಖ್ ವಿವರಿಸಿದ್ದಾರೆ.

“ಅವರು ನನ್ನ ತಂದೆಯ ತಲೆಯ ಮೇಲೆ ದಾಳಿ ಮಾಡಿದರು. ಅವರ ಕೈಗೆ ಮೂರು ಕಡೆ ಗಾಯಗಳಾದವು. ಅವರು ನನ್ನ ಸೋದರಸಂಬಂಧಿಗಳ ಮೇಲೂ ದಾಳಿ ನಡೆಸಿದರು. ಆದರೆ ನನ್ನ ಸೋದರರು ಚಿಕ್ಕವಯಸ್ಸಿನವರಾಗಿದ್ದು, ಹೇಗೋ ಓಡಿ ತಪ್ಪಿಸಿಕೊಂಡರು. ನನ್ನ ತಂದೆ ಮೇಲೆ ದಾಳಿ ಮಾಡುವಾಗ ‘ಜೈ ಶ್ರೀರಾಮ್’ ಘೋಷಣೆಯನ್ನು ಕೂಗುತ್ತಿದ್ದರು” ಎಂದು ಶಾರುಖ್ ದೂರಿದ್ದಾರೆ.

ಇದನ್ನೂ ಓದಿರಿ: ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

ದಾಳಿಯ ನಂತರ ತ್ಯಾಗಿಯವರನ್ನು ಚಿಕಿತ್ಸೆಗಾಗಿ ಮೀರತ್‌ನ ಕುಟುಂಬ ಆರೋಗ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ವೇಳೆಗೆ ಸಾವನ್ನಪ್ಪಿದ್ದಾರೆ.

ಖೇಕ್ರಾ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 3 ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌  ದಾಖಲಿಸಲಾಯಿತು. ಭಾರತೀಯ ದಂಡ ಸಂಹಿತೆ ಸೆಕ್ಷನ್ 147 (ಗಲಭೆಗೆ ಶಿಕ್ಷೆ), 148 (ಗಲಭೆ, ಮಾರಣಾಂತಿಕ ಆಯುಧದಿಂದ ಶಸ್ತ್ರಸಜ್ಜಿತ); 149 (ಕಾನೂನುಬಾಹಿರ ಸಭೆಯ ತಪ್ಪಿತಸ್ಥರು); ಮತ್ತು 302 (ಕೊಲೆ) ಅಡಿ ಪ್ರಕರಣ ದಾಖಲಿಸಿದರು. ಆದರೆ ಶಾರುಖ್‌ ವಿವರಿಸಿದಂತೆ ಪ್ರಕರಣ ದಾಖಲಾಗಿಲ್ಲ. ‘ಜೈ ಶ್ರೀರಾಮ್’ ಎಂದದ್ದು ಎಫ್‌ಐಆರ್‌ನಲ್ಲಿ ಇಲ್ಲ ಎಂದು ‘ದಿ ವೈರ್‌’ ಗಮನ ಸೆಳೆದಿದೆ.

ಇದಾದ ನಂತರ ಸೆಪ್ಟೆಂಬರ್ 5 ರಂದು, ಖೇಕ್ರಾ ಪೊಲೀಸರು ತ್ಯಾಗಿ ಅವರ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿರುವುದಾಗಿ ಹೇಳಿಕೆ ನೀಡಿದರು. ನಿಕ್ಕಿ ಅಲಿಯಾಸ್ ವಿಕ್ಕಿ, ಹರೀಶ್, ಮೋಹಿತ್ ಮತ್ತು ದಿಲೀಪ್- ಬಂಧಿತ ಆರೋಪಿಗಳು. ಇವರೆಲ್ಲರೂ ವಿನಯ್‌ಪುರದ ಸಮೀಪವಿರುವ ಭಗೋತ್‌ನ ನಿವಾಸಿಗಳಾಗಿದ್ದಾರೆ.

PC: The Wire

ಎರಡು ಮೋಟಾರು ಬೈಕ್‌ಗಳು ಮತ್ತು ಎರಡು ಸ್ಟಿಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಲ್ವರು ಆರೋಪಿಗಳನ್ನು ವಿಚಾರಣೆ ಮಾಡಿದ ನಂತರ ಪೊಲೀಸರು, “ಭಗೋತ್ ಮತ್ತು ವಿನಯ್‌ಪುರ ನಿವಾಸಿಗಳ ನಡುವೆ ಜಗಳವಾಗಿತ್ತು. ಬಂಧಿತ ನಾಲ್ವರು ವಿನಯ್‌ಪುರದಲ್ಲಿ ಯಾರ ಮೇಲಾದರೂ ದಾಳಿ ಮಾಡಲು ನಿರ್ಧರಿಸಿದ್ದರು” ಎಂದಿದ್ದಾರೆ.

‘ಹಳ್ಳ ಹಿಡಿಯುತ್ತಿರುವ ಪ್ರಕರಣ’

ತ್ಯಾಗಿ ಅವರ ಹತ್ಯೆಯಾಗಿ ಒಂದು ತಿಂಗಳು ಕಳೆದರೂ ತನಿಖೆಯು ಕೋಲ್ಡ್ ಸ್ಟೋರೇಜ್‌ನಲ್ಲಿದೆ. ಹೆಚ್ಚಿನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಂತ್ರಸ್ತ ಕುಟುಂಬವು ದುರ್ಬಲವಾಗಿದ್ದು, ಭಯ ಮತ್ತು ಅಭದ್ರತೆಯಿಂದ ಬದುಕುತ್ತಿದೆ.

ಇದಲ್ಲದೆ ತ್ಯಾಗಿ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂಬ ಭರವಸೆ ಸಿಕ್ಕಿತ್ತು. ಅದು ಕೂಡ ಈಡೇರಿಲ್ಲ.

ಕುಟುಂಬ ಸದಸ್ಯರನ್ನು ಹೆದರಿಸುವ ಪ್ರಯತ್ನ ಇತ್ತೀಚೆಗೆ ನಡೆದಿದೆ. ಕುಟುಂಬದ ಭಯವನ್ನು ಹೆಚ್ಚಿಸಲಾಗಿದೆ ಎಂದು ಶಾರುಖ್ ಹೇಳಿಕೊಂಡಿದ್ದಾರೆ.

“ಮೂರು ದಿನಗಳ ಹಿಂದೆ, ನನ್ನ ಅಣ್ಣ ಮತ್ತು ನನ್ನ ಚಿಕ್ಕಪ್ಪ ಹೊಲಕ್ಕೆ ಹೋಗಿದ್ದರು – ಅಪರಾಧಿಗಳ ಹೊಲಗಳು ನಮ್ಮ ಪಕ್ಕದಲ್ಲಿವೆ. ಆ ದಿನ ನನ್ನ ಸಹೋದರನನ್ನು ಅವರು ಸುತ್ತುವರಿದಿದ್ದರು” ಎಂದು ಶಾರುಖ್ ದೂರಿದ್ದಾರೆ.

“ನಾವು ಬೆದರಿಕೆಯನ್ನು ಅನುಭವಿಸಿದ್ದೇವೆ; ಮತ್ತೊಮ್ಮೆ, ಏನಾದರೂ ಸಂಭವಿಸಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕುಟುಂಬಕ್ಕೆ ಎದುರಾಗಿರುವ ಬೆದರಿಕೆಯ ಕುರಿತು ‘ದಿ ವೈರ್‌’ನೊಂದಿಗೆ ಮಾತನಾಡಿದ ಬಾಗ್‌ಪತ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ), ನೀರಜ್ ಕುಮಾರ್ ಜಾದೌನ್, “ದಾಳಿಯ ಬಗ್ಗೆ ಕುಟುಂಬಕ್ಕೆ ಆತಂಕವಿತ್ತು. ಅದನ್ನು ಸರಿಪಡಿಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಪಂಜಾಬ್‌: ಪಾರ್ಕ್‌ನಲ್ಲಿ ಕುಳಿತ್ತಿದ್ದ ವಿದ್ಯಾರ್ಥಿನಿಯರಿಗೆ ಥಳಿಸಿದ ಮಹಿಳಾ ಪೊಲೀಸರು; ನೆಟ್ಟಿಗರ ಖಂಡನೆ

ಇದರ ನಡುವೆ ಶಾರುಖ್, “ನಾಲ್ಕು ಜನರನ್ನು ಬಂಧಿಸಲಾಗಿದೆ. ಆದರೆ ಒಂದು ತಿಂಗಳು ಕಳೆದಿದೆ ಮತ್ತು ಪ್ರಕರಣವು ಹಳ್ಳಹಿಡಿಯುತ್ತಿದೆ” ಎಂದು ಆರೋಪಿಸಿದ್ದಾರೆ.

“ಜನರು (ಸಾಕ್ಷಿಗಳು) ಮುಂದಿಟ್ಟಿರುವ (ಅಪರಾಧಿಗಳ) ಹೆಸರುಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರೊಂದಿಗೆ ಸಂಪರ್ಕ ಹೊಂದಿವೆ. ಒಂದಲ್ಲ ಎರಡೆರಡು ಬಾರಿ ಪೊಲೀಸರು ಅವರ ಮನೆಗೆ ಭೇಟಿ ನೀಡಿದರೂ ಹೆಚ್ಚಿನ ಬೆಳವಣಿಗೆಗಳು ಆಗಿಲ್ಲ” ಎಂದು ವಿಷಾದಿಸಿದ್ದಾರೆ.

‘ಯೋಜಿತ ದಾಳಿಗೆ ನಡೆದಿತ್ತು ಸಭೆ’

ತ್ಯಾಗಿ ಹತ್ಯೆಗೂ ಮುನ್ನ ಬಾಘೋಟ್‌ನಲ್ಲಿ ಸಭೆ ನಡೆದಿದ್ದು, ಮುಸ್ಲಿಮರನ್ನು ಹೆದರಿಸುವ ಯೋಜನೆ ರೂಪಿಸಲಾಗಿತ್ತು ಎಂದು ತ್ಯಾಗಿ ಅವರ ಕುಟುಂಬದ ಸದಸ್ಯರು ಹಾಗೂ ಹೋರಾಟಗಾರರು ಹೇಳಿದ್ದಾರೆ.

ಹೋರಾಟಗಾರ ದೇವೇಂದ್ರ ಧಾಮಾ ‘ದಿ ವೈರ್‌’ಗೆ ಪ್ರತಿಕ್ರಿಯಿಸಿ, “ಕೆಲವು ಗಂಡಸರು ಅಗ್ಗದ ಜನಪ್ರಿಯತೆಯನ್ನು ಬಯಸಿದ್ದರು. ಇದಕ್ಕಾಗಿಯೇ ದಾಳಿ ನಡೆಸಲಾಗಿದೆ. ಘಟನೆಯ ಮೊದಲು ಬಾಘೋಟ್‌ನಲ್ಲಿ ಸಭೆ ನಡೆದಿತ್ತು. ಮತ್ತೊಂದು ಸಭೆ ನಡೆದಿದ್ದು 60-65 ಜನರು ಅದರಲ್ಲಿದ್ದರು. ಈ ಪ್ರದೇಶದ ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುವುದು ಅವರ ಉದ್ದೇಶವಾಗಿತ್ತು. ಕೊಲ್ಲುವುದು ಅಥವಾ ಲೂಟಿ ಮಾಡುವುದು ಅವರ ಗುರಿಯಾಗಿರಲಿಲ್ಲ. ಆದರೆ ಭಯವನ್ನು ಹರಡುವುದು ಮುಖ್ಯವಾಗಿತ್ತು” ಎಂದು ವಿವರಿಸಿದ್ದಾರೆ.

“ಅವರು ಗ್ರಾಮವನ್ನು ಪ್ರವೇಶಿಸಿ, ತ್ಯಾಗಿ ಮೇಲೆ ಹಲ್ಲೆ ನಡೆಸಿದರು. ನಂತರ ಚದುರಿಹೋದರು. ಇದಕ್ಕೂ ಮುನ್ನ ಗ್ರಾಮದ ಮಸೀದಿಯಲ್ಲಿ ನಮಾಜ್ ಓದುವ ಪ್ರಯತ್ನ ನಡೆಸಲಾಗಿತ್ತು” ಎಂದು ಧಾಮಾ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿನ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ಆಧಾರಿಸಿ ಬಿಬಿಸಿ ಗ್ರೌಂಡ್ ರಿಪೋರ್ಟ್ ಮಾಡಿದೆ. ದಾಳಿಯಲ್ಲಿ ಭಾಗವಹಿಸಲು ಸಭೆ ನಡೆದಿತ್ತು. ದಾಳಿಯನ್ನು ಪ್ರಚೋದಿಸುವ ಗುರಿಯನ್ನು ಹೊಂದಿರುವ ಪೋಸ್ಟ್‌ಗಳನ್ನು ಬಂಧಿತ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ದಿಲೀಪ್‌ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ‘ಜಾಗತಿಕ ಹಸಿವು ಸೂಚ್ಯಂಕ-2022’: 107 ನೇ ಸ್ಥಾನಕ್ಕೆ ಕುಸಿದ ಭಾರತ

ದಿ ವೈರ್‌ನೊಂದಿಗೆ ಮಾತನಾಡುತ್ತಾ ರಾಜಕೀಯ ಸಂಬಂಧ ಸಭೆ ನಡೆದಿದೆ ಎಂಬ ಪ್ರತಿಪಾದನೆಗಳನ್ನು ಪೊಲೀಸರು ನಿರಾಕರಿಸಿದ್ದಾರೆ. ನಾಲ್ವರನ್ನು ಬಂಧಿಸಲಾಗಿದೆ ಎಂದು ಖೇಕ್ರಾ ಪೊಲೀಸ್ ಠಾಣೆಯ ವೃತ್ತಾಧಿಕಾರಿ ವಿಜಯ್ ಚೌಧರಿ ತಿಳಿಸಿದ್ದಾರೆ. ಉಳಿದ ವ್ಯಕ್ತಿಗಳಿಗಾಗಿ ನಾವು ಗಮನ ಹರಿಸಿದ್ದೇವೆ. “ಸಭೆ ನಡೆಸಿ ಪಿತೂರಿ ನಡೆದಿದೆ. ಆದರೆ, ಅದು ರಾಜಕೀಯವಾಗಿರಲಿಲ್ಲ. ಇದು ಹಳೆಯ ವಿಚಾರಕ್ಕೆ ಸಂಬಂಧಿಸಿದ ಪೋಸ್ಟ್ ಆಗಿದೆ” ಎಂದಿದ್ದಾರೆ.

ಶಾರುಖ್ ಮತ್ತು ಅವರ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡಿದ್ದರೂ, ಅವರು ಭಯದಿಂದ ಬದುಕುತ್ತಿದ್ದಾರೆ. ವಿನಯ್‌ಪುರದಲ್ಲಿ ಗುರ್ಜರ್‌ಗಳು ಮತ್ತು ಮುಸ್ಲಿಮರು ವಾಸವಿದ್ದಾರೆ. ಶಾರುಖ್ ಪ್ರಕಾರ, ಸುತ್ತಮುತ್ತಲಿನ ಹಳ್ಳಿಗಳು ಗುರ್ಜರ್ ಪ್ರಾಬಲ್ಯ ಹೊಂದಿವೆ.

“ಈ ಪ್ರದೇಶದಲ್ಲಿನ ಉದ್ವಿಗ್ನತೆಯಿಂದಾಗಿ ನಾವು ಗ್ರಾಮದಿಂದ ಹೊರಹೋಗಲು ಬಯಸುತ್ತಿದ್ದೇವೆ. ನಾವು ಆಡಳಿತದ ಮೇಲೆ ಕುರುಡು ನಂಬಿಕೆ ಇಟ್ಟಿದ್ದೆವು. ಸರ್ಕಾರಿ ನೌಕರಿಯೊಂದಿಗೆ ನಮಗೆ ಬೆಂಬಲ ನೀಡುವ ಭರವಸೆ ಇನ್ನೂ ಈಡೇರಿಲ್ಲ. ನಾವೆಲ್ಲರೂ ಇನ್ನೂ ಓದುತ್ತಿರುವುದರಿಂದ ನನ್ನ ತಂದೆಯ ಅಲ್ಪ ಆದಾಯವನ್ನೇ ಅವಲಂಬಿಸಿದ್ದೆವು” ಎಂದಿದ್ದಾರೆ ಶಾರುಖ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...