Homeಮುಖಪುಟಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

ಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

- Advertisement -
- Advertisement -

ಜೀನ್ಸ್ ಧರಿಸಿದ ಕಾರಣಕ್ಕೆ ಮನೆಯ ಮಗಳನ್ನೇ ಅಜ್ಜ ಮತ್ತು ಬಾಲಕಿಯ ಚಿಕ್ಕಪ್ಪಂದಿರು ಕೊಲೆ ಮಾಡಿ ಮೃತದೇಹವನ್ನು ಸೇತುವೆಯಿಂದ ನದಿಗೆ ಎಸೆಯಲು ಪ್ರಯತ್ನಿಸಿರುವ ಘಟನೆ ಉತ್ತರಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ನಡೆದಿದೆ.

17 ವರ್ಷದ ಬಾಲಕಿಯ ಮೃತದೇಹ ಕಶ್ಯಾ-ಪಾಟ್ನಾ ಹೆದ್ದಾರಿಯಲ್ಲಿರುವ ಪತನ್ವಾ ಸೇತುವೆಯ ಕಂಬಿಗಳಲ್ಲಿ ನೇತಾಡುತ್ತಿರುವುದನ್ನು ಕಂಡು ದಾರಿಹೋಕರು ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಗಳಲ್ಲಿ ಬಾಲಕಿಯ ಅಜ್ಜನನ್ನು ಬಂಧಿಸಲಾಗಿದ್ದು, ಚಿಕ್ಕಪ್ಪಂದಿರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸಂಜೆ ಅಥವಾ ಮಂಗಳವಾರ ರಾತ್ರಿ ನಡುವೆ ಬಾಲಕಿಯ ಕೊಲೆ ಮಾಡಲಾಗಿದ್ದು, ಬಳಿಕ ಶವವನ್ನು ನದಿಗೆ ಎಸೆಯಲಾಗಿದೆ. ಆದರೆ ಮೃತದೇಹ ನದಿಗೆ ಬೀಳದೆ ಸೇತುವೆಯ ಕಂಬಿಗಳಲ್ಲಿ ಸಿಲುಕಿಕೊಂಡಿದ್ದು, ದಾರಿಹೋಕರ ಗಮನ ಸೆಳೆದಿದೆ.ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.

ಮೃತ ಬಾಲಕಿ ಮತ್ತು ಆಕೆಯ ತಾಯಿ ಇತ್ತೀಚೆಗೆ ಡಿಯೋರಿಯಾದಲ್ಲಿರುವ ತಮ್ಮ ಮಾವನ ಮನೆಯಲ್ಲಿ ವಾಸಿಸಲು ಬಂದಿದ್ದರು ಎಂದು ವರದಿಗಳು ತಿಳಿಸಿವೆ. ಬಾಲಕಿಯ ತಂದೆ ಪಂಜಾಬ್‌ನ ಲೂಧಿಯಾನದಲ್ಲಿ ವಲಸೆ ಕೆಲಸಗಾರರಾಗಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

” ನನ್ನ ಮಗಳು ಅಂದು ಉಪವಾಸ  ಮಾಡುತ್ತಿದ್ದಳು. ಸಂಜೆ ಸ್ನಾನದ ನಂತರ ಜೀನ್ಸ್ ಮತ್ತು ಟಾಪ್ ಧರಿಸಿ, ಪೂಜೆ ಮಾಡಲು ಹೋಗುತ್ತಿದ್ದಾಗ, ಉಡುಗೆ ಬದಲಿಸಲು ಅಜ್ಜ ತಿಳಿಸಿದರು. ಆಕೆ ನಿರಾಕರಿಸಿದಾಗ ಕೋಲುಗಳಿಂದ ಆಕೆಯ ಮೇಲೆ ಹಲ್ಲೆ ಮಾಡಿದರು. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಅವಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದು ಹೇಳಿದ್ದರು, ಆದರೆ, ಆಕೆಯನ್ನು ಸೇತುವೆಯಿಂದ ಎಸೆದಿದ್ದಾರೆ “ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

“ಈ ಜನರಿಗೆ ಯಾವಾಗಲೂ ಆ ಹುಡುಗಿಯ ಮತ್ತು ಆಕೆಯ ಕುಟುಂಬದ ಜೀವನಶೈಲಿಯೊಂದಿಗೆ ಸಮಸ್ಯೆ ಇತ್ತು. ಆ ಕುಟುಂಬದವರು ಏನು ತಿನ್ನುತ್ತಾರೆ, ಏನು ಧರಿಸಿದ್ದಾರೆ ಎಂಬ ಬಗ್ಗೆ ಇವರಲ್ಲಿ ಅಸೂಯೆ ತುಂಬಿಕೊಂಡಿತ್ತು. ಅವತ್ತು ಮೃತ ಬಾಲಕಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದರು. ಆಕೆಯ ಪರಿಸ್ಥಿತಿ ಗಂಭೀರವಾದಾಗ, ಆಸ್ಪತ್ರೆಗೆ ಕರೆದೊಯ್ಯುವುದಾಗಿ ಬಾಲಕಿಯ ತಾಯಿಗೆ ತಿಳಿಸಿದ್ದರು. ಆದರೆ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಸೇತುವೆಯಿಂದ ಎಸೆದಿದ್ದಾರೆ” ಎಂದು ಬಾಲಕಿಯ ಚಿಕ್ಕಮ್ಮ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಬಾಲಕಿ ಜಿನ್ಸ್ ವಿಷಯಕ್ಕೆ ತನ್ನ ಅಜ್ಜನೊಂದಿಗೆ ವಾಗ್ವಾದ ನಡೆಸಿ ಅವರನ್ನು ನಿಂದಿಸಿದ್ದಾರೆ. ಆಗ ಹುಡುಗಿಯ ಇಬ್ಬರು- ಮೂವರು ಚಿಕ್ಕಪ್ಪಂದಿರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಆಕೆ ಪ್ರಜ್ಞೆ ತಪ್ಪಿದ್ದಾರೆ. ನಂತರ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು, ಆದರೆ ದಾರಿಯಲ್ಲಿಯೇ ಆಕೆ ಮೃತಪಟ್ಟ ಕಾರಣ ನದಿಗೆ ಎಸೆಯಲು ನೋಡಿದ್ದಾರೆ. ಆದರೆ ಮೃತದೇಹ ನದಿ ಸೇತುವೆಯ ಮೇಲೆ ಸಿಲುಕಿಕೊಂಡಿದೆ ಎಂದು ಡಿಯೋರಿಯಾ ಪೊಲೀಸ್ ಮುಖ್ಯಸ್ಥ ಶ್ರೀಪತಿ ಮಿಶ್ರಾ ಹೇಳಿದ್ದಾರೆ.


ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶದ ಹೆಣ್ಣು ಮಕ್ಕಳಿಗೆ, ಅವರಿಗೆ ಇಷ್ಟವಾದ ಬಟ್ಟೆಗಳನ್ನು ತೊಡುವ ಸ್ವಾತಂತ್ರ್ಯ ಸಹ ಇಲ್ಲದಿರುವುದು ದುರಂತ.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...