Homeಮುಖಪುಟಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

ಉತ್ತರ ಪ್ರದೇಶ: ಜೀನ್ಸ್ ಧರಿಸಿದ್ದಕ್ಕೆ ಬಾಲಕಿಯನ್ನು ಕೊಂದ ಅಜ್ಜ ಮತ್ತು ಚಿಕ್ಕಪ್ಪಂದಿರು

- Advertisement -
- Advertisement -

ಜೀನ್ಸ್ ಧರಿಸಿದ ಕಾರಣಕ್ಕೆ ಮನೆಯ ಮಗಳನ್ನೇ ಅಜ್ಜ ಮತ್ತು ಬಾಲಕಿಯ ಚಿಕ್ಕಪ್ಪಂದಿರು ಕೊಲೆ ಮಾಡಿ ಮೃತದೇಹವನ್ನು ಸೇತುವೆಯಿಂದ ನದಿಗೆ ಎಸೆಯಲು ಪ್ರಯತ್ನಿಸಿರುವ ಘಟನೆ ಉತ್ತರಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ನಡೆದಿದೆ.

17 ವರ್ಷದ ಬಾಲಕಿಯ ಮೃತದೇಹ ಕಶ್ಯಾ-ಪಾಟ್ನಾ ಹೆದ್ದಾರಿಯಲ್ಲಿರುವ ಪತನ್ವಾ ಸೇತುವೆಯ ಕಂಬಿಗಳಲ್ಲಿ ನೇತಾಡುತ್ತಿರುವುದನ್ನು ಕಂಡು ದಾರಿಹೋಕರು ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಗಳಲ್ಲಿ ಬಾಲಕಿಯ ಅಜ್ಜನನ್ನು ಬಂಧಿಸಲಾಗಿದ್ದು, ಚಿಕ್ಕಪ್ಪಂದಿರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸಂಜೆ ಅಥವಾ ಮಂಗಳವಾರ ರಾತ್ರಿ ನಡುವೆ ಬಾಲಕಿಯ ಕೊಲೆ ಮಾಡಲಾಗಿದ್ದು, ಬಳಿಕ ಶವವನ್ನು ನದಿಗೆ ಎಸೆಯಲಾಗಿದೆ. ಆದರೆ ಮೃತದೇಹ ನದಿಗೆ ಬೀಳದೆ ಸೇತುವೆಯ ಕಂಬಿಗಳಲ್ಲಿ ಸಿಲುಕಿಕೊಂಡಿದ್ದು, ದಾರಿಹೋಕರ ಗಮನ ಸೆಳೆದಿದೆ.ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.

ಮೃತ ಬಾಲಕಿ ಮತ್ತು ಆಕೆಯ ತಾಯಿ ಇತ್ತೀಚೆಗೆ ಡಿಯೋರಿಯಾದಲ್ಲಿರುವ ತಮ್ಮ ಮಾವನ ಮನೆಯಲ್ಲಿ ವಾಸಿಸಲು ಬಂದಿದ್ದರು ಎಂದು ವರದಿಗಳು ತಿಳಿಸಿವೆ. ಬಾಲಕಿಯ ತಂದೆ ಪಂಜಾಬ್‌ನ ಲೂಧಿಯಾನದಲ್ಲಿ ವಲಸೆ ಕೆಲಸಗಾರರಾಗಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

” ನನ್ನ ಮಗಳು ಅಂದು ಉಪವಾಸ  ಮಾಡುತ್ತಿದ್ದಳು. ಸಂಜೆ ಸ್ನಾನದ ನಂತರ ಜೀನ್ಸ್ ಮತ್ತು ಟಾಪ್ ಧರಿಸಿ, ಪೂಜೆ ಮಾಡಲು ಹೋಗುತ್ತಿದ್ದಾಗ, ಉಡುಗೆ ಬದಲಿಸಲು ಅಜ್ಜ ತಿಳಿಸಿದರು. ಆಕೆ ನಿರಾಕರಿಸಿದಾಗ ಕೋಲುಗಳಿಂದ ಆಕೆಯ ಮೇಲೆ ಹಲ್ಲೆ ಮಾಡಿದರು. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಅವಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದು ಹೇಳಿದ್ದರು, ಆದರೆ, ಆಕೆಯನ್ನು ಸೇತುವೆಯಿಂದ ಎಸೆದಿದ್ದಾರೆ “ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

“ಈ ಜನರಿಗೆ ಯಾವಾಗಲೂ ಆ ಹುಡುಗಿಯ ಮತ್ತು ಆಕೆಯ ಕುಟುಂಬದ ಜೀವನಶೈಲಿಯೊಂದಿಗೆ ಸಮಸ್ಯೆ ಇತ್ತು. ಆ ಕುಟುಂಬದವರು ಏನು ತಿನ್ನುತ್ತಾರೆ, ಏನು ಧರಿಸಿದ್ದಾರೆ ಎಂಬ ಬಗ್ಗೆ ಇವರಲ್ಲಿ ಅಸೂಯೆ ತುಂಬಿಕೊಂಡಿತ್ತು. ಅವತ್ತು ಮೃತ ಬಾಲಕಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದರು. ಆಕೆಯ ಪರಿಸ್ಥಿತಿ ಗಂಭೀರವಾದಾಗ, ಆಸ್ಪತ್ರೆಗೆ ಕರೆದೊಯ್ಯುವುದಾಗಿ ಬಾಲಕಿಯ ತಾಯಿಗೆ ತಿಳಿಸಿದ್ದರು. ಆದರೆ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಸೇತುವೆಯಿಂದ ಎಸೆದಿದ್ದಾರೆ” ಎಂದು ಬಾಲಕಿಯ ಚಿಕ್ಕಮ್ಮ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಬಾಲಕಿ ಜಿನ್ಸ್ ವಿಷಯಕ್ಕೆ ತನ್ನ ಅಜ್ಜನೊಂದಿಗೆ ವಾಗ್ವಾದ ನಡೆಸಿ ಅವರನ್ನು ನಿಂದಿಸಿದ್ದಾರೆ. ಆಗ ಹುಡುಗಿಯ ಇಬ್ಬರು- ಮೂವರು ಚಿಕ್ಕಪ್ಪಂದಿರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಆಕೆ ಪ್ರಜ್ಞೆ ತಪ್ಪಿದ್ದಾರೆ. ನಂತರ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು, ಆದರೆ ದಾರಿಯಲ್ಲಿಯೇ ಆಕೆ ಮೃತಪಟ್ಟ ಕಾರಣ ನದಿಗೆ ಎಸೆಯಲು ನೋಡಿದ್ದಾರೆ. ಆದರೆ ಮೃತದೇಹ ನದಿ ಸೇತುವೆಯ ಮೇಲೆ ಸಿಲುಕಿಕೊಂಡಿದೆ ಎಂದು ಡಿಯೋರಿಯಾ ಪೊಲೀಸ್ ಮುಖ್ಯಸ್ಥ ಶ್ರೀಪತಿ ಮಿಶ್ರಾ ಹೇಳಿದ್ದಾರೆ.


ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶದ ಹೆಣ್ಣು ಮಕ್ಕಳಿಗೆ, ಅವರಿಗೆ ಇಷ್ಟವಾದ ಬಟ್ಟೆಗಳನ್ನು ತೊಡುವ ಸ್ವಾತಂತ್ರ್ಯ ಸಹ ಇಲ್ಲದಿರುವುದು ದುರಂತ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...