Homeಮುಖಪುಟ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಜಾಹಿರಾತನ್ನು ವಾಸ್ತವದ ವರದಿ/ಲೇಖನ ಎಂದು ಬಿಂಬಿಸಲು ಯತ್ನಿಸಿದ ಹಲವು ಭಾರತೀಯ ಮಾಧ್ಯಮಗಳು ಯೋಗಿ ಆದಿತ್ಯನಾಥರನ್ನು ಸಿಕ್ಕಾಪಟ್ಟೆ ಹೊಗಳಿ ಕೃತಾರ್ಥವಾಗಿವೆ!

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌‌ ಕೊರೊನಾ ಬಿಕ್ಕಟ್ಟನ್ನು ನಿರ್ವಹಿಸಿದ ರೀತಿಯನ್ನು ಟೈಮ್ ಮ್ಯಾಗಜೀನ್ ಹೊಗಳಿ ವರದಿ/ಲೇಖನ ಪ್ರಕಟಿಸಿದೆ ಎಂದು ಝೀ ನ್ಯೂಸ್, ಎಬಿಪಿ ಗಂಗಾ, ನ್ಯೂಸ್18-ಯುಪಿ ಸೇರಿದಂತೆ ಹಲವು ಚಾನೆಲ್‌ಗಳು ಸುಳ್ಳು ಸುದ್ದಿ ಪ್ರಸಾರ ಮಾಡಿವೆ.

ಟೈಮ್ ಮ್ಯಾಗಜೀನ್‌ನ ಜಾಹಿರಾತನ್ನು ತೋರಿಸಿ ಮುಖ್ಯಮಂತ್ರಿ ಆದಿತ್ಯನಾಥ್‌ನನ್ನು ಈ ಚಾನೆಲ್‌ಗಳ ಆಂಕರ್‌ಗಳು ವಿಪರೀತವಾಗಿ ಹೊಗಳಿದ್ದಾರೆ. ಟಿವಿ ಪರದೆಯ ಮೇಲೆ ಆದಿತ್ಯನಾಥ್‌‌ನನ್ನು ಶ್ಲಾಘಿಸುವ ಭರದಲ್ಲಿ ಹಲವು ಗುಣನಾಮಳನ್ನೂ ನೀಡಿದ್ದವು. ಇದೇ ಮಾದರಿಯ ವರದಿಯನ್ನು ಕೆಲವು ಮುದ್ರಣ ಮಾಧ್ಯಮಗಳು ಕೂಡಾ ಮಾಡಿವೆ.

ವಾಸ್ತವದಲ್ಲಿ ಟೈಮ್‌ನಲ್ಲಿ ಬಂದಿದ್ದು ಉತ್ತರಪ್ರದೇಶ ಸರ್ಕಾರ ನೀಡಿದ ಜಾಹೀರಾತು. ಅದನ್ನು ಲೇಖನ ರೂಪದಲ್ಲಿ ಪ್ರೆಸೆಂಟ್ ಮಾಡಲಾಗಿತ್ತು. ಇಂತಹ ಜಾಹೀರಾತುಗಳನ್ನು ಅಡ್ವಟೋರಿಯಲ್ ಎಂದೇ ಕರೆಯಲಾಗುತ್ತದೆ. ಇದರ ಮೇಲುಗಡೆ ’ಯುಪಿ ಸರ್ಕಾರ ನಿಡಿದ ಕಂಟೆಂಟ್’ ಎಂದೂ ಉಲ್ಲೇಖಿಸಲಾಗಿದೆ. ಈ ಅಡ್ವಟೋರಿಯಲ್ ಟೈಮ್‌ನ ಇಂಟರ್‌ನೆಟ್ ಆವೃತ್ತಿಯಲ್ಲಿ ಪ್ರಕಟವಾಗಿಲ್ಲ. ವಿದೇಶಿ ಮತ್ತು ಅಮೆರಿಕನ್ ಪ್ರಿಂಟ್ ಆವೃತ್ತಿಯಲ್ಲೂ ಇದನ್ನು ಪ್ರಕಟಿಸಲಾಗಿಲ್ಲ.

ಇದನ್ನೂ ಓದಿ: ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ಬಲಪಂಥಿಯ ವೆಬ್‌ಸೈಟ್ ಒಪಿ‌ಇಂಡಿಯಾ, ’ಹಿಂದೊಮ್ಮೆ ಯೋಗಿ ಅವರನ್ನು ರಾಡಿಕಲ್ ಎಂದು ಕರೆದಿದ್ದ ಟೈಮ್ ಈಗ ಯೋಗಿಯವರನ್ನು ಹೊಗಳಿದೆ’ ಎಂಬ ಶಿರ್ಷಿಕೆ ನೀಡಿ ವರದಿ ಪ್ರಕಟಿಸಿದೆ.

‘Hang in there, better times are ahead’ – ಎಂಬ ತಲೆಬರಹದ ಈ ಅಡ್ವಟೋರಿಯಲ್ ಅನ್ನು ಡಿಸೆಂಬರ್ 15 ರಂದು ಆದಿತ್ಯನಾಥ್ ಶೇರ್ ಮಾಡಿ, ಅದನ್ನು ಲೇಖನ ಎಂಬಂತೆ ಬಿಂಬಿಸಿದ್ದರು. ಆ ಸಮಯದಲ್ಲಿ ಇದು ಗಮನ ಸೆಳೆದಿರಲಿಲ್ಲ. ನಂತರದ ಇದು ಸಾಮಾಜಿಕ ಜಾಲತಾಣಗಳ ಮೂಲಕ ಹರಡಿದೆ. ಎರಡು ವಾರಗಳ ನಂತರ ಎಚ್ಚೆತ್ತುಕೊಂಡ ಚಾನೆಲ್‌ಗಳು ಇತ್ತೀಚೆಗೆ ಯೋಗಿ ಧ್ಯಾನ ಮಾಡಿದವು.

ಒಂದೆರಡು ತಿಂಗಳ ಹಿಂದಷ್ಟೇ ಟೈಮ್‌ನಲ್ಲಿ, ಭಾರತದ ಕೊರೊನಾ ನಿರ್ವಹಣೆಯ ವಿಫಲತೆ ಕುರಿತು ಬರೆಯಲಾಗಿತ್ತು. ಅದರಲ್ಲಿ ಕೊರೊನಾ ಕುರಿತು ತಪ್ಪು ಮಾಹಿತಿ ಹರಡುವವರ ಕುರಿತ ಬಾಕ್ಸ್‌ನಲ್ಲಿ ಆದಿತ್ಯನಾಥ್‌ ಕೂಡಾ ಇದ್ದರು. ’ಯೋಗದಿಂದ ಕೊವಿಡ್ ನಿವಾರಿಸಬಹುದು’ ಎಂಬ ಅವರ ಹೇಳಿಕೆಯನ್ನು ಟೈಮ್ ಟೀಕಿಸಿತ್ತು.

ಅಡ್ವಟೋರಿಯಲ್‌ಗಳು ಪಾವತಿ ಕೊಟ್ಟು ಪ್ರಕಟಿಸುವ ಲೇಖನಗಳಾಗಿದ್ದು, ಅವು ಜಾಹೀರಾತಿನಂತಿರದೇ ಎಡಿಟೋರಿಯಲ್ ಶೈಲಿಯಲ್ಲಿ ನಿರೂಪಿತಗೊಂಡಿರುತ್ತವೆ.

ಇದನ್ನೂ ಓದಿ: ಸ್ವತಃ ಆದಿತ್ಯನಾಥ್‌‌ಗೆ ಯುಪಿ ಪೊಲೀಸರ ಮೇಲೆ ನಂಬಿಕೆಯಿಲ್ಲ: ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...