Homeಮುಖಪುಟ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಜಾಹಿರಾತನ್ನು ವಾಸ್ತವದ ವರದಿ/ಲೇಖನ ಎಂದು ಬಿಂಬಿಸಲು ಯತ್ನಿಸಿದ ಹಲವು ಭಾರತೀಯ ಮಾಧ್ಯಮಗಳು ಯೋಗಿ ಆದಿತ್ಯನಾಥರನ್ನು ಸಿಕ್ಕಾಪಟ್ಟೆ ಹೊಗಳಿ ಕೃತಾರ್ಥವಾಗಿವೆ!

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌‌ ಕೊರೊನಾ ಬಿಕ್ಕಟ್ಟನ್ನು ನಿರ್ವಹಿಸಿದ ರೀತಿಯನ್ನು ಟೈಮ್ ಮ್ಯಾಗಜೀನ್ ಹೊಗಳಿ ವರದಿ/ಲೇಖನ ಪ್ರಕಟಿಸಿದೆ ಎಂದು ಝೀ ನ್ಯೂಸ್, ಎಬಿಪಿ ಗಂಗಾ, ನ್ಯೂಸ್18-ಯುಪಿ ಸೇರಿದಂತೆ ಹಲವು ಚಾನೆಲ್‌ಗಳು ಸುಳ್ಳು ಸುದ್ದಿ ಪ್ರಸಾರ ಮಾಡಿವೆ.

ಟೈಮ್ ಮ್ಯಾಗಜೀನ್‌ನ ಜಾಹಿರಾತನ್ನು ತೋರಿಸಿ ಮುಖ್ಯಮಂತ್ರಿ ಆದಿತ್ಯನಾಥ್‌ನನ್ನು ಈ ಚಾನೆಲ್‌ಗಳ ಆಂಕರ್‌ಗಳು ವಿಪರೀತವಾಗಿ ಹೊಗಳಿದ್ದಾರೆ. ಟಿವಿ ಪರದೆಯ ಮೇಲೆ ಆದಿತ್ಯನಾಥ್‌‌ನನ್ನು ಶ್ಲಾಘಿಸುವ ಭರದಲ್ಲಿ ಹಲವು ಗುಣನಾಮಳನ್ನೂ ನೀಡಿದ್ದವು. ಇದೇ ಮಾದರಿಯ ವರದಿಯನ್ನು ಕೆಲವು ಮುದ್ರಣ ಮಾಧ್ಯಮಗಳು ಕೂಡಾ ಮಾಡಿವೆ.

ವಾಸ್ತವದಲ್ಲಿ ಟೈಮ್‌ನಲ್ಲಿ ಬಂದಿದ್ದು ಉತ್ತರಪ್ರದೇಶ ಸರ್ಕಾರ ನೀಡಿದ ಜಾಹೀರಾತು. ಅದನ್ನು ಲೇಖನ ರೂಪದಲ್ಲಿ ಪ್ರೆಸೆಂಟ್ ಮಾಡಲಾಗಿತ್ತು. ಇಂತಹ ಜಾಹೀರಾತುಗಳನ್ನು ಅಡ್ವಟೋರಿಯಲ್ ಎಂದೇ ಕರೆಯಲಾಗುತ್ತದೆ. ಇದರ ಮೇಲುಗಡೆ ’ಯುಪಿ ಸರ್ಕಾರ ನಿಡಿದ ಕಂಟೆಂಟ್’ ಎಂದೂ ಉಲ್ಲೇಖಿಸಲಾಗಿದೆ. ಈ ಅಡ್ವಟೋರಿಯಲ್ ಟೈಮ್‌ನ ಇಂಟರ್‌ನೆಟ್ ಆವೃತ್ತಿಯಲ್ಲಿ ಪ್ರಕಟವಾಗಿಲ್ಲ. ವಿದೇಶಿ ಮತ್ತು ಅಮೆರಿಕನ್ ಪ್ರಿಂಟ್ ಆವೃತ್ತಿಯಲ್ಲೂ ಇದನ್ನು ಪ್ರಕಟಿಸಲಾಗಿಲ್ಲ.

ಇದನ್ನೂ ಓದಿ: ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ಬಲಪಂಥಿಯ ವೆಬ್‌ಸೈಟ್ ಒಪಿ‌ಇಂಡಿಯಾ, ’ಹಿಂದೊಮ್ಮೆ ಯೋಗಿ ಅವರನ್ನು ರಾಡಿಕಲ್ ಎಂದು ಕರೆದಿದ್ದ ಟೈಮ್ ಈಗ ಯೋಗಿಯವರನ್ನು ಹೊಗಳಿದೆ’ ಎಂಬ ಶಿರ್ಷಿಕೆ ನೀಡಿ ವರದಿ ಪ್ರಕಟಿಸಿದೆ.

‘Hang in there, better times are ahead’ – ಎಂಬ ತಲೆಬರಹದ ಈ ಅಡ್ವಟೋರಿಯಲ್ ಅನ್ನು ಡಿಸೆಂಬರ್ 15 ರಂದು ಆದಿತ್ಯನಾಥ್ ಶೇರ್ ಮಾಡಿ, ಅದನ್ನು ಲೇಖನ ಎಂಬಂತೆ ಬಿಂಬಿಸಿದ್ದರು. ಆ ಸಮಯದಲ್ಲಿ ಇದು ಗಮನ ಸೆಳೆದಿರಲಿಲ್ಲ. ನಂತರದ ಇದು ಸಾಮಾಜಿಕ ಜಾಲತಾಣಗಳ ಮೂಲಕ ಹರಡಿದೆ. ಎರಡು ವಾರಗಳ ನಂತರ ಎಚ್ಚೆತ್ತುಕೊಂಡ ಚಾನೆಲ್‌ಗಳು ಇತ್ತೀಚೆಗೆ ಯೋಗಿ ಧ್ಯಾನ ಮಾಡಿದವು.

ಒಂದೆರಡು ತಿಂಗಳ ಹಿಂದಷ್ಟೇ ಟೈಮ್‌ನಲ್ಲಿ, ಭಾರತದ ಕೊರೊನಾ ನಿರ್ವಹಣೆಯ ವಿಫಲತೆ ಕುರಿತು ಬರೆಯಲಾಗಿತ್ತು. ಅದರಲ್ಲಿ ಕೊರೊನಾ ಕುರಿತು ತಪ್ಪು ಮಾಹಿತಿ ಹರಡುವವರ ಕುರಿತ ಬಾಕ್ಸ್‌ನಲ್ಲಿ ಆದಿತ್ಯನಾಥ್‌ ಕೂಡಾ ಇದ್ದರು. ’ಯೋಗದಿಂದ ಕೊವಿಡ್ ನಿವಾರಿಸಬಹುದು’ ಎಂಬ ಅವರ ಹೇಳಿಕೆಯನ್ನು ಟೈಮ್ ಟೀಕಿಸಿತ್ತು.

ಅಡ್ವಟೋರಿಯಲ್‌ಗಳು ಪಾವತಿ ಕೊಟ್ಟು ಪ್ರಕಟಿಸುವ ಲೇಖನಗಳಾಗಿದ್ದು, ಅವು ಜಾಹೀರಾತಿನಂತಿರದೇ ಎಡಿಟೋರಿಯಲ್ ಶೈಲಿಯಲ್ಲಿ ನಿರೂಪಿತಗೊಂಡಿರುತ್ತವೆ.

ಇದನ್ನೂ ಓದಿ: ಸ್ವತಃ ಆದಿತ್ಯನಾಥ್‌‌ಗೆ ಯುಪಿ ಪೊಲೀಸರ ಮೇಲೆ ನಂಬಿಕೆಯಿಲ್ಲ: ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...