Homeಮುಖಪುಟ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಜಾಹಿರಾತನ್ನು ವಾಸ್ತವದ ವರದಿ/ಲೇಖನ ಎಂದು ಬಿಂಬಿಸಲು ಯತ್ನಿಸಿದ ಹಲವು ಭಾರತೀಯ ಮಾಧ್ಯಮಗಳು ಯೋಗಿ ಆದಿತ್ಯನಾಥರನ್ನು ಸಿಕ್ಕಾಪಟ್ಟೆ ಹೊಗಳಿ ಕೃತಾರ್ಥವಾಗಿವೆ!

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌‌ ಕೊರೊನಾ ಬಿಕ್ಕಟ್ಟನ್ನು ನಿರ್ವಹಿಸಿದ ರೀತಿಯನ್ನು ಟೈಮ್ ಮ್ಯಾಗಜೀನ್ ಹೊಗಳಿ ವರದಿ/ಲೇಖನ ಪ್ರಕಟಿಸಿದೆ ಎಂದು ಝೀ ನ್ಯೂಸ್, ಎಬಿಪಿ ಗಂಗಾ, ನ್ಯೂಸ್18-ಯುಪಿ ಸೇರಿದಂತೆ ಹಲವು ಚಾನೆಲ್‌ಗಳು ಸುಳ್ಳು ಸುದ್ದಿ ಪ್ರಸಾರ ಮಾಡಿವೆ.

ಟೈಮ್ ಮ್ಯಾಗಜೀನ್‌ನ ಜಾಹಿರಾತನ್ನು ತೋರಿಸಿ ಮುಖ್ಯಮಂತ್ರಿ ಆದಿತ್ಯನಾಥ್‌ನನ್ನು ಈ ಚಾನೆಲ್‌ಗಳ ಆಂಕರ್‌ಗಳು ವಿಪರೀತವಾಗಿ ಹೊಗಳಿದ್ದಾರೆ. ಟಿವಿ ಪರದೆಯ ಮೇಲೆ ಆದಿತ್ಯನಾಥ್‌‌ನನ್ನು ಶ್ಲಾಘಿಸುವ ಭರದಲ್ಲಿ ಹಲವು ಗುಣನಾಮಳನ್ನೂ ನೀಡಿದ್ದವು. ಇದೇ ಮಾದರಿಯ ವರದಿಯನ್ನು ಕೆಲವು ಮುದ್ರಣ ಮಾಧ್ಯಮಗಳು ಕೂಡಾ ಮಾಡಿವೆ.

ವಾಸ್ತವದಲ್ಲಿ ಟೈಮ್‌ನಲ್ಲಿ ಬಂದಿದ್ದು ಉತ್ತರಪ್ರದೇಶ ಸರ್ಕಾರ ನೀಡಿದ ಜಾಹೀರಾತು. ಅದನ್ನು ಲೇಖನ ರೂಪದಲ್ಲಿ ಪ್ರೆಸೆಂಟ್ ಮಾಡಲಾಗಿತ್ತು. ಇಂತಹ ಜಾಹೀರಾತುಗಳನ್ನು ಅಡ್ವಟೋರಿಯಲ್ ಎಂದೇ ಕರೆಯಲಾಗುತ್ತದೆ. ಇದರ ಮೇಲುಗಡೆ ’ಯುಪಿ ಸರ್ಕಾರ ನಿಡಿದ ಕಂಟೆಂಟ್’ ಎಂದೂ ಉಲ್ಲೇಖಿಸಲಾಗಿದೆ. ಈ ಅಡ್ವಟೋರಿಯಲ್ ಟೈಮ್‌ನ ಇಂಟರ್‌ನೆಟ್ ಆವೃತ್ತಿಯಲ್ಲಿ ಪ್ರಕಟವಾಗಿಲ್ಲ. ವಿದೇಶಿ ಮತ್ತು ಅಮೆರಿಕನ್ ಪ್ರಿಂಟ್ ಆವೃತ್ತಿಯಲ್ಲೂ ಇದನ್ನು ಪ್ರಕಟಿಸಲಾಗಿಲ್ಲ.

ಇದನ್ನೂ ಓದಿ: ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ಬಲಪಂಥಿಯ ವೆಬ್‌ಸೈಟ್ ಒಪಿ‌ಇಂಡಿಯಾ, ’ಹಿಂದೊಮ್ಮೆ ಯೋಗಿ ಅವರನ್ನು ರಾಡಿಕಲ್ ಎಂದು ಕರೆದಿದ್ದ ಟೈಮ್ ಈಗ ಯೋಗಿಯವರನ್ನು ಹೊಗಳಿದೆ’ ಎಂಬ ಶಿರ್ಷಿಕೆ ನೀಡಿ ವರದಿ ಪ್ರಕಟಿಸಿದೆ.

‘Hang in there, better times are ahead’ – ಎಂಬ ತಲೆಬರಹದ ಈ ಅಡ್ವಟೋರಿಯಲ್ ಅನ್ನು ಡಿಸೆಂಬರ್ 15 ರಂದು ಆದಿತ್ಯನಾಥ್ ಶೇರ್ ಮಾಡಿ, ಅದನ್ನು ಲೇಖನ ಎಂಬಂತೆ ಬಿಂಬಿಸಿದ್ದರು. ಆ ಸಮಯದಲ್ಲಿ ಇದು ಗಮನ ಸೆಳೆದಿರಲಿಲ್ಲ. ನಂತರದ ಇದು ಸಾಮಾಜಿಕ ಜಾಲತಾಣಗಳ ಮೂಲಕ ಹರಡಿದೆ. ಎರಡು ವಾರಗಳ ನಂತರ ಎಚ್ಚೆತ್ತುಕೊಂಡ ಚಾನೆಲ್‌ಗಳು ಇತ್ತೀಚೆಗೆ ಯೋಗಿ ಧ್ಯಾನ ಮಾಡಿದವು.

ಒಂದೆರಡು ತಿಂಗಳ ಹಿಂದಷ್ಟೇ ಟೈಮ್‌ನಲ್ಲಿ, ಭಾರತದ ಕೊರೊನಾ ನಿರ್ವಹಣೆಯ ವಿಫಲತೆ ಕುರಿತು ಬರೆಯಲಾಗಿತ್ತು. ಅದರಲ್ಲಿ ಕೊರೊನಾ ಕುರಿತು ತಪ್ಪು ಮಾಹಿತಿ ಹರಡುವವರ ಕುರಿತ ಬಾಕ್ಸ್‌ನಲ್ಲಿ ಆದಿತ್ಯನಾಥ್‌ ಕೂಡಾ ಇದ್ದರು. ’ಯೋಗದಿಂದ ಕೊವಿಡ್ ನಿವಾರಿಸಬಹುದು’ ಎಂಬ ಅವರ ಹೇಳಿಕೆಯನ್ನು ಟೈಮ್ ಟೀಕಿಸಿತ್ತು.

ಅಡ್ವಟೋರಿಯಲ್‌ಗಳು ಪಾವತಿ ಕೊಟ್ಟು ಪ್ರಕಟಿಸುವ ಲೇಖನಗಳಾಗಿದ್ದು, ಅವು ಜಾಹೀರಾತಿನಂತಿರದೇ ಎಡಿಟೋರಿಯಲ್ ಶೈಲಿಯಲ್ಲಿ ನಿರೂಪಿತಗೊಂಡಿರುತ್ತವೆ.

ಇದನ್ನೂ ಓದಿ: ಸ್ವತಃ ಆದಿತ್ಯನಾಥ್‌‌ಗೆ ಯುಪಿ ಪೊಲೀಸರ ಮೇಲೆ ನಂಬಿಕೆಯಿಲ್ಲ: ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...