Homeಮುಖಪುಟ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಜಾಹಿರಾತನ್ನು ವಾಸ್ತವದ ವರದಿ/ಲೇಖನ ಎಂದು ಬಿಂಬಿಸಲು ಯತ್ನಿಸಿದ ಹಲವು ಭಾರತೀಯ ಮಾಧ್ಯಮಗಳು ಯೋಗಿ ಆದಿತ್ಯನಾಥರನ್ನು ಸಿಕ್ಕಾಪಟ್ಟೆ ಹೊಗಳಿ ಕೃತಾರ್ಥವಾಗಿವೆ!

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌‌ ಕೊರೊನಾ ಬಿಕ್ಕಟ್ಟನ್ನು ನಿರ್ವಹಿಸಿದ ರೀತಿಯನ್ನು ಟೈಮ್ ಮ್ಯಾಗಜೀನ್ ಹೊಗಳಿ ವರದಿ/ಲೇಖನ ಪ್ರಕಟಿಸಿದೆ ಎಂದು ಝೀ ನ್ಯೂಸ್, ಎಬಿಪಿ ಗಂಗಾ, ನ್ಯೂಸ್18-ಯುಪಿ ಸೇರಿದಂತೆ ಹಲವು ಚಾನೆಲ್‌ಗಳು ಸುಳ್ಳು ಸುದ್ದಿ ಪ್ರಸಾರ ಮಾಡಿವೆ.

ಟೈಮ್ ಮ್ಯಾಗಜೀನ್‌ನ ಜಾಹಿರಾತನ್ನು ತೋರಿಸಿ ಮುಖ್ಯಮಂತ್ರಿ ಆದಿತ್ಯನಾಥ್‌ನನ್ನು ಈ ಚಾನೆಲ್‌ಗಳ ಆಂಕರ್‌ಗಳು ವಿಪರೀತವಾಗಿ ಹೊಗಳಿದ್ದಾರೆ. ಟಿವಿ ಪರದೆಯ ಮೇಲೆ ಆದಿತ್ಯನಾಥ್‌‌ನನ್ನು ಶ್ಲಾಘಿಸುವ ಭರದಲ್ಲಿ ಹಲವು ಗುಣನಾಮಳನ್ನೂ ನೀಡಿದ್ದವು. ಇದೇ ಮಾದರಿಯ ವರದಿಯನ್ನು ಕೆಲವು ಮುದ್ರಣ ಮಾಧ್ಯಮಗಳು ಕೂಡಾ ಮಾಡಿವೆ.

ವಾಸ್ತವದಲ್ಲಿ ಟೈಮ್‌ನಲ್ಲಿ ಬಂದಿದ್ದು ಉತ್ತರಪ್ರದೇಶ ಸರ್ಕಾರ ನೀಡಿದ ಜಾಹೀರಾತು. ಅದನ್ನು ಲೇಖನ ರೂಪದಲ್ಲಿ ಪ್ರೆಸೆಂಟ್ ಮಾಡಲಾಗಿತ್ತು. ಇಂತಹ ಜಾಹೀರಾತುಗಳನ್ನು ಅಡ್ವಟೋರಿಯಲ್ ಎಂದೇ ಕರೆಯಲಾಗುತ್ತದೆ. ಇದರ ಮೇಲುಗಡೆ ’ಯುಪಿ ಸರ್ಕಾರ ನಿಡಿದ ಕಂಟೆಂಟ್’ ಎಂದೂ ಉಲ್ಲೇಖಿಸಲಾಗಿದೆ. ಈ ಅಡ್ವಟೋರಿಯಲ್ ಟೈಮ್‌ನ ಇಂಟರ್‌ನೆಟ್ ಆವೃತ್ತಿಯಲ್ಲಿ ಪ್ರಕಟವಾಗಿಲ್ಲ. ವಿದೇಶಿ ಮತ್ತು ಅಮೆರಿಕನ್ ಪ್ರಿಂಟ್ ಆವೃತ್ತಿಯಲ್ಲೂ ಇದನ್ನು ಪ್ರಕಟಿಸಲಾಗಿಲ್ಲ.

ಇದನ್ನೂ ಓದಿ: ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ಬಲಪಂಥಿಯ ವೆಬ್‌ಸೈಟ್ ಒಪಿ‌ಇಂಡಿಯಾ, ’ಹಿಂದೊಮ್ಮೆ ಯೋಗಿ ಅವರನ್ನು ರಾಡಿಕಲ್ ಎಂದು ಕರೆದಿದ್ದ ಟೈಮ್ ಈಗ ಯೋಗಿಯವರನ್ನು ಹೊಗಳಿದೆ’ ಎಂಬ ಶಿರ್ಷಿಕೆ ನೀಡಿ ವರದಿ ಪ್ರಕಟಿಸಿದೆ.

‘Hang in there, better times are ahead’ – ಎಂಬ ತಲೆಬರಹದ ಈ ಅಡ್ವಟೋರಿಯಲ್ ಅನ್ನು ಡಿಸೆಂಬರ್ 15 ರಂದು ಆದಿತ್ಯನಾಥ್ ಶೇರ್ ಮಾಡಿ, ಅದನ್ನು ಲೇಖನ ಎಂಬಂತೆ ಬಿಂಬಿಸಿದ್ದರು. ಆ ಸಮಯದಲ್ಲಿ ಇದು ಗಮನ ಸೆಳೆದಿರಲಿಲ್ಲ. ನಂತರದ ಇದು ಸಾಮಾಜಿಕ ಜಾಲತಾಣಗಳ ಮೂಲಕ ಹರಡಿದೆ. ಎರಡು ವಾರಗಳ ನಂತರ ಎಚ್ಚೆತ್ತುಕೊಂಡ ಚಾನೆಲ್‌ಗಳು ಇತ್ತೀಚೆಗೆ ಯೋಗಿ ಧ್ಯಾನ ಮಾಡಿದವು.

ಒಂದೆರಡು ತಿಂಗಳ ಹಿಂದಷ್ಟೇ ಟೈಮ್‌ನಲ್ಲಿ, ಭಾರತದ ಕೊರೊನಾ ನಿರ್ವಹಣೆಯ ವಿಫಲತೆ ಕುರಿತು ಬರೆಯಲಾಗಿತ್ತು. ಅದರಲ್ಲಿ ಕೊರೊನಾ ಕುರಿತು ತಪ್ಪು ಮಾಹಿತಿ ಹರಡುವವರ ಕುರಿತ ಬಾಕ್ಸ್‌ನಲ್ಲಿ ಆದಿತ್ಯನಾಥ್‌ ಕೂಡಾ ಇದ್ದರು. ’ಯೋಗದಿಂದ ಕೊವಿಡ್ ನಿವಾರಿಸಬಹುದು’ ಎಂಬ ಅವರ ಹೇಳಿಕೆಯನ್ನು ಟೈಮ್ ಟೀಕಿಸಿತ್ತು.

ಅಡ್ವಟೋರಿಯಲ್‌ಗಳು ಪಾವತಿ ಕೊಟ್ಟು ಪ್ರಕಟಿಸುವ ಲೇಖನಗಳಾಗಿದ್ದು, ಅವು ಜಾಹೀರಾತಿನಂತಿರದೇ ಎಡಿಟೋರಿಯಲ್ ಶೈಲಿಯಲ್ಲಿ ನಿರೂಪಿತಗೊಂಡಿರುತ್ತವೆ.

ಇದನ್ನೂ ಓದಿ: ಸ್ವತಃ ಆದಿತ್ಯನಾಥ್‌‌ಗೆ ಯುಪಿ ಪೊಲೀಸರ ಮೇಲೆ ನಂಬಿಕೆಯಿಲ್ಲ: ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...