Homeಮುಖಪುಟ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಜಾಹಿರಾತನ್ನು ವಾಸ್ತವದ ವರದಿ/ಲೇಖನ ಎಂದು ಬಿಂಬಿಸಲು ಯತ್ನಿಸಿದ ಹಲವು ಭಾರತೀಯ ಮಾಧ್ಯಮಗಳು ಯೋಗಿ ಆದಿತ್ಯನಾಥರನ್ನು ಸಿಕ್ಕಾಪಟ್ಟೆ ಹೊಗಳಿ ಕೃತಾರ್ಥವಾಗಿವೆ!

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌‌ ಕೊರೊನಾ ಬಿಕ್ಕಟ್ಟನ್ನು ನಿರ್ವಹಿಸಿದ ರೀತಿಯನ್ನು ಟೈಮ್ ಮ್ಯಾಗಜೀನ್ ಹೊಗಳಿ ವರದಿ/ಲೇಖನ ಪ್ರಕಟಿಸಿದೆ ಎಂದು ಝೀ ನ್ಯೂಸ್, ಎಬಿಪಿ ಗಂಗಾ, ನ್ಯೂಸ್18-ಯುಪಿ ಸೇರಿದಂತೆ ಹಲವು ಚಾನೆಲ್‌ಗಳು ಸುಳ್ಳು ಸುದ್ದಿ ಪ್ರಸಾರ ಮಾಡಿವೆ.

ಟೈಮ್ ಮ್ಯಾಗಜೀನ್‌ನ ಜಾಹಿರಾತನ್ನು ತೋರಿಸಿ ಮುಖ್ಯಮಂತ್ರಿ ಆದಿತ್ಯನಾಥ್‌ನನ್ನು ಈ ಚಾನೆಲ್‌ಗಳ ಆಂಕರ್‌ಗಳು ವಿಪರೀತವಾಗಿ ಹೊಗಳಿದ್ದಾರೆ. ಟಿವಿ ಪರದೆಯ ಮೇಲೆ ಆದಿತ್ಯನಾಥ್‌‌ನನ್ನು ಶ್ಲಾಘಿಸುವ ಭರದಲ್ಲಿ ಹಲವು ಗುಣನಾಮಳನ್ನೂ ನೀಡಿದ್ದವು. ಇದೇ ಮಾದರಿಯ ವರದಿಯನ್ನು ಕೆಲವು ಮುದ್ರಣ ಮಾಧ್ಯಮಗಳು ಕೂಡಾ ಮಾಡಿವೆ.

ವಾಸ್ತವದಲ್ಲಿ ಟೈಮ್‌ನಲ್ಲಿ ಬಂದಿದ್ದು ಉತ್ತರಪ್ರದೇಶ ಸರ್ಕಾರ ನೀಡಿದ ಜಾಹೀರಾತು. ಅದನ್ನು ಲೇಖನ ರೂಪದಲ್ಲಿ ಪ್ರೆಸೆಂಟ್ ಮಾಡಲಾಗಿತ್ತು. ಇಂತಹ ಜಾಹೀರಾತುಗಳನ್ನು ಅಡ್ವಟೋರಿಯಲ್ ಎಂದೇ ಕರೆಯಲಾಗುತ್ತದೆ. ಇದರ ಮೇಲುಗಡೆ ’ಯುಪಿ ಸರ್ಕಾರ ನಿಡಿದ ಕಂಟೆಂಟ್’ ಎಂದೂ ಉಲ್ಲೇಖಿಸಲಾಗಿದೆ. ಈ ಅಡ್ವಟೋರಿಯಲ್ ಟೈಮ್‌ನ ಇಂಟರ್‌ನೆಟ್ ಆವೃತ್ತಿಯಲ್ಲಿ ಪ್ರಕಟವಾಗಿಲ್ಲ. ವಿದೇಶಿ ಮತ್ತು ಅಮೆರಿಕನ್ ಪ್ರಿಂಟ್ ಆವೃತ್ತಿಯಲ್ಲೂ ಇದನ್ನು ಪ್ರಕಟಿಸಲಾಗಿಲ್ಲ.

ಇದನ್ನೂ ಓದಿ: ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ಬಲಪಂಥಿಯ ವೆಬ್‌ಸೈಟ್ ಒಪಿ‌ಇಂಡಿಯಾ, ’ಹಿಂದೊಮ್ಮೆ ಯೋಗಿ ಅವರನ್ನು ರಾಡಿಕಲ್ ಎಂದು ಕರೆದಿದ್ದ ಟೈಮ್ ಈಗ ಯೋಗಿಯವರನ್ನು ಹೊಗಳಿದೆ’ ಎಂಬ ಶಿರ್ಷಿಕೆ ನೀಡಿ ವರದಿ ಪ್ರಕಟಿಸಿದೆ.

‘Hang in there, better times are ahead’ – ಎಂಬ ತಲೆಬರಹದ ಈ ಅಡ್ವಟೋರಿಯಲ್ ಅನ್ನು ಡಿಸೆಂಬರ್ 15 ರಂದು ಆದಿತ್ಯನಾಥ್ ಶೇರ್ ಮಾಡಿ, ಅದನ್ನು ಲೇಖನ ಎಂಬಂತೆ ಬಿಂಬಿಸಿದ್ದರು. ಆ ಸಮಯದಲ್ಲಿ ಇದು ಗಮನ ಸೆಳೆದಿರಲಿಲ್ಲ. ನಂತರದ ಇದು ಸಾಮಾಜಿಕ ಜಾಲತಾಣಗಳ ಮೂಲಕ ಹರಡಿದೆ. ಎರಡು ವಾರಗಳ ನಂತರ ಎಚ್ಚೆತ್ತುಕೊಂಡ ಚಾನೆಲ್‌ಗಳು ಇತ್ತೀಚೆಗೆ ಯೋಗಿ ಧ್ಯಾನ ಮಾಡಿದವು.

ಒಂದೆರಡು ತಿಂಗಳ ಹಿಂದಷ್ಟೇ ಟೈಮ್‌ನಲ್ಲಿ, ಭಾರತದ ಕೊರೊನಾ ನಿರ್ವಹಣೆಯ ವಿಫಲತೆ ಕುರಿತು ಬರೆಯಲಾಗಿತ್ತು. ಅದರಲ್ಲಿ ಕೊರೊನಾ ಕುರಿತು ತಪ್ಪು ಮಾಹಿತಿ ಹರಡುವವರ ಕುರಿತ ಬಾಕ್ಸ್‌ನಲ್ಲಿ ಆದಿತ್ಯನಾಥ್‌ ಕೂಡಾ ಇದ್ದರು. ’ಯೋಗದಿಂದ ಕೊವಿಡ್ ನಿವಾರಿಸಬಹುದು’ ಎಂಬ ಅವರ ಹೇಳಿಕೆಯನ್ನು ಟೈಮ್ ಟೀಕಿಸಿತ್ತು.

ಅಡ್ವಟೋರಿಯಲ್‌ಗಳು ಪಾವತಿ ಕೊಟ್ಟು ಪ್ರಕಟಿಸುವ ಲೇಖನಗಳಾಗಿದ್ದು, ಅವು ಜಾಹೀರಾತಿನಂತಿರದೇ ಎಡಿಟೋರಿಯಲ್ ಶೈಲಿಯಲ್ಲಿ ನಿರೂಪಿತಗೊಂಡಿರುತ್ತವೆ.

ಇದನ್ನೂ ಓದಿ: ಸ್ವತಃ ಆದಿತ್ಯನಾಥ್‌‌ಗೆ ಯುಪಿ ಪೊಲೀಸರ ಮೇಲೆ ನಂಬಿಕೆಯಿಲ್ಲ: ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...