Homeಮುಖಪುಟ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಜಾಹಿರಾತನ್ನು ವಾಸ್ತವದ ವರದಿ/ಲೇಖನ ಎಂದು ಬಿಂಬಿಸಲು ಯತ್ನಿಸಿದ ಹಲವು ಭಾರತೀಯ ಮಾಧ್ಯಮಗಳು ಯೋಗಿ ಆದಿತ್ಯನಾಥರನ್ನು ಸಿಕ್ಕಾಪಟ್ಟೆ ಹೊಗಳಿ ಕೃತಾರ್ಥವಾಗಿವೆ!

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌‌ ಕೊರೊನಾ ಬಿಕ್ಕಟ್ಟನ್ನು ನಿರ್ವಹಿಸಿದ ರೀತಿಯನ್ನು ಟೈಮ್ ಮ್ಯಾಗಜೀನ್ ಹೊಗಳಿ ವರದಿ/ಲೇಖನ ಪ್ರಕಟಿಸಿದೆ ಎಂದು ಝೀ ನ್ಯೂಸ್, ಎಬಿಪಿ ಗಂಗಾ, ನ್ಯೂಸ್18-ಯುಪಿ ಸೇರಿದಂತೆ ಹಲವು ಚಾನೆಲ್‌ಗಳು ಸುಳ್ಳು ಸುದ್ದಿ ಪ್ರಸಾರ ಮಾಡಿವೆ.

ಟೈಮ್ ಮ್ಯಾಗಜೀನ್‌ನ ಜಾಹಿರಾತನ್ನು ತೋರಿಸಿ ಮುಖ್ಯಮಂತ್ರಿ ಆದಿತ್ಯನಾಥ್‌ನನ್ನು ಈ ಚಾನೆಲ್‌ಗಳ ಆಂಕರ್‌ಗಳು ವಿಪರೀತವಾಗಿ ಹೊಗಳಿದ್ದಾರೆ. ಟಿವಿ ಪರದೆಯ ಮೇಲೆ ಆದಿತ್ಯನಾಥ್‌‌ನನ್ನು ಶ್ಲಾಘಿಸುವ ಭರದಲ್ಲಿ ಹಲವು ಗುಣನಾಮಳನ್ನೂ ನೀಡಿದ್ದವು. ಇದೇ ಮಾದರಿಯ ವರದಿಯನ್ನು ಕೆಲವು ಮುದ್ರಣ ಮಾಧ್ಯಮಗಳು ಕೂಡಾ ಮಾಡಿವೆ.

ವಾಸ್ತವದಲ್ಲಿ ಟೈಮ್‌ನಲ್ಲಿ ಬಂದಿದ್ದು ಉತ್ತರಪ್ರದೇಶ ಸರ್ಕಾರ ನೀಡಿದ ಜಾಹೀರಾತು. ಅದನ್ನು ಲೇಖನ ರೂಪದಲ್ಲಿ ಪ್ರೆಸೆಂಟ್ ಮಾಡಲಾಗಿತ್ತು. ಇಂತಹ ಜಾಹೀರಾತುಗಳನ್ನು ಅಡ್ವಟೋರಿಯಲ್ ಎಂದೇ ಕರೆಯಲಾಗುತ್ತದೆ. ಇದರ ಮೇಲುಗಡೆ ’ಯುಪಿ ಸರ್ಕಾರ ನಿಡಿದ ಕಂಟೆಂಟ್’ ಎಂದೂ ಉಲ್ಲೇಖಿಸಲಾಗಿದೆ. ಈ ಅಡ್ವಟೋರಿಯಲ್ ಟೈಮ್‌ನ ಇಂಟರ್‌ನೆಟ್ ಆವೃತ್ತಿಯಲ್ಲಿ ಪ್ರಕಟವಾಗಿಲ್ಲ. ವಿದೇಶಿ ಮತ್ತು ಅಮೆರಿಕನ್ ಪ್ರಿಂಟ್ ಆವೃತ್ತಿಯಲ್ಲೂ ಇದನ್ನು ಪ್ರಕಟಿಸಲಾಗಿಲ್ಲ.

ಇದನ್ನೂ ಓದಿ: ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ಬಲಪಂಥಿಯ ವೆಬ್‌ಸೈಟ್ ಒಪಿ‌ಇಂಡಿಯಾ, ’ಹಿಂದೊಮ್ಮೆ ಯೋಗಿ ಅವರನ್ನು ರಾಡಿಕಲ್ ಎಂದು ಕರೆದಿದ್ದ ಟೈಮ್ ಈಗ ಯೋಗಿಯವರನ್ನು ಹೊಗಳಿದೆ’ ಎಂಬ ಶಿರ್ಷಿಕೆ ನೀಡಿ ವರದಿ ಪ್ರಕಟಿಸಿದೆ.

‘Hang in there, better times are ahead’ – ಎಂಬ ತಲೆಬರಹದ ಈ ಅಡ್ವಟೋರಿಯಲ್ ಅನ್ನು ಡಿಸೆಂಬರ್ 15 ರಂದು ಆದಿತ್ಯನಾಥ್ ಶೇರ್ ಮಾಡಿ, ಅದನ್ನು ಲೇಖನ ಎಂಬಂತೆ ಬಿಂಬಿಸಿದ್ದರು. ಆ ಸಮಯದಲ್ಲಿ ಇದು ಗಮನ ಸೆಳೆದಿರಲಿಲ್ಲ. ನಂತರದ ಇದು ಸಾಮಾಜಿಕ ಜಾಲತಾಣಗಳ ಮೂಲಕ ಹರಡಿದೆ. ಎರಡು ವಾರಗಳ ನಂತರ ಎಚ್ಚೆತ್ತುಕೊಂಡ ಚಾನೆಲ್‌ಗಳು ಇತ್ತೀಚೆಗೆ ಯೋಗಿ ಧ್ಯಾನ ಮಾಡಿದವು.

ಒಂದೆರಡು ತಿಂಗಳ ಹಿಂದಷ್ಟೇ ಟೈಮ್‌ನಲ್ಲಿ, ಭಾರತದ ಕೊರೊನಾ ನಿರ್ವಹಣೆಯ ವಿಫಲತೆ ಕುರಿತು ಬರೆಯಲಾಗಿತ್ತು. ಅದರಲ್ಲಿ ಕೊರೊನಾ ಕುರಿತು ತಪ್ಪು ಮಾಹಿತಿ ಹರಡುವವರ ಕುರಿತ ಬಾಕ್ಸ್‌ನಲ್ಲಿ ಆದಿತ್ಯನಾಥ್‌ ಕೂಡಾ ಇದ್ದರು. ’ಯೋಗದಿಂದ ಕೊವಿಡ್ ನಿವಾರಿಸಬಹುದು’ ಎಂಬ ಅವರ ಹೇಳಿಕೆಯನ್ನು ಟೈಮ್ ಟೀಕಿಸಿತ್ತು.

ಅಡ್ವಟೋರಿಯಲ್‌ಗಳು ಪಾವತಿ ಕೊಟ್ಟು ಪ್ರಕಟಿಸುವ ಲೇಖನಗಳಾಗಿದ್ದು, ಅವು ಜಾಹೀರಾತಿನಂತಿರದೇ ಎಡಿಟೋರಿಯಲ್ ಶೈಲಿಯಲ್ಲಿ ನಿರೂಪಿತಗೊಂಡಿರುತ್ತವೆ.

ಇದನ್ನೂ ಓದಿ: ಸ್ವತಃ ಆದಿತ್ಯನಾಥ್‌‌ಗೆ ಯುಪಿ ಪೊಲೀಸರ ಮೇಲೆ ನಂಬಿಕೆಯಿಲ್ಲ: ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...