Homeಮುಖಪುಟ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಜಾಹಿರಾತನ್ನು ವಾಸ್ತವದ ವರದಿ/ಲೇಖನ ಎಂದು ಬಿಂಬಿಸಲು ಯತ್ನಿಸಿದ ಹಲವು ಭಾರತೀಯ ಮಾಧ್ಯಮಗಳು ಯೋಗಿ ಆದಿತ್ಯನಾಥರನ್ನು ಸಿಕ್ಕಾಪಟ್ಟೆ ಹೊಗಳಿ ಕೃತಾರ್ಥವಾಗಿವೆ!

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌‌ ಕೊರೊನಾ ಬಿಕ್ಕಟ್ಟನ್ನು ನಿರ್ವಹಿಸಿದ ರೀತಿಯನ್ನು ಟೈಮ್ ಮ್ಯಾಗಜೀನ್ ಹೊಗಳಿ ವರದಿ/ಲೇಖನ ಪ್ರಕಟಿಸಿದೆ ಎಂದು ಝೀ ನ್ಯೂಸ್, ಎಬಿಪಿ ಗಂಗಾ, ನ್ಯೂಸ್18-ಯುಪಿ ಸೇರಿದಂತೆ ಹಲವು ಚಾನೆಲ್‌ಗಳು ಸುಳ್ಳು ಸುದ್ದಿ ಪ್ರಸಾರ ಮಾಡಿವೆ.

ಟೈಮ್ ಮ್ಯಾಗಜೀನ್‌ನ ಜಾಹಿರಾತನ್ನು ತೋರಿಸಿ ಮುಖ್ಯಮಂತ್ರಿ ಆದಿತ್ಯನಾಥ್‌ನನ್ನು ಈ ಚಾನೆಲ್‌ಗಳ ಆಂಕರ್‌ಗಳು ವಿಪರೀತವಾಗಿ ಹೊಗಳಿದ್ದಾರೆ. ಟಿವಿ ಪರದೆಯ ಮೇಲೆ ಆದಿತ್ಯನಾಥ್‌‌ನನ್ನು ಶ್ಲಾಘಿಸುವ ಭರದಲ್ಲಿ ಹಲವು ಗುಣನಾಮಳನ್ನೂ ನೀಡಿದ್ದವು. ಇದೇ ಮಾದರಿಯ ವರದಿಯನ್ನು ಕೆಲವು ಮುದ್ರಣ ಮಾಧ್ಯಮಗಳು ಕೂಡಾ ಮಾಡಿವೆ.

ವಾಸ್ತವದಲ್ಲಿ ಟೈಮ್‌ನಲ್ಲಿ ಬಂದಿದ್ದು ಉತ್ತರಪ್ರದೇಶ ಸರ್ಕಾರ ನೀಡಿದ ಜಾಹೀರಾತು. ಅದನ್ನು ಲೇಖನ ರೂಪದಲ್ಲಿ ಪ್ರೆಸೆಂಟ್ ಮಾಡಲಾಗಿತ್ತು. ಇಂತಹ ಜಾಹೀರಾತುಗಳನ್ನು ಅಡ್ವಟೋರಿಯಲ್ ಎಂದೇ ಕರೆಯಲಾಗುತ್ತದೆ. ಇದರ ಮೇಲುಗಡೆ ’ಯುಪಿ ಸರ್ಕಾರ ನಿಡಿದ ಕಂಟೆಂಟ್’ ಎಂದೂ ಉಲ್ಲೇಖಿಸಲಾಗಿದೆ. ಈ ಅಡ್ವಟೋರಿಯಲ್ ಟೈಮ್‌ನ ಇಂಟರ್‌ನೆಟ್ ಆವೃತ್ತಿಯಲ್ಲಿ ಪ್ರಕಟವಾಗಿಲ್ಲ. ವಿದೇಶಿ ಮತ್ತು ಅಮೆರಿಕನ್ ಪ್ರಿಂಟ್ ಆವೃತ್ತಿಯಲ್ಲೂ ಇದನ್ನು ಪ್ರಕಟಿಸಲಾಗಿಲ್ಲ.

ಇದನ್ನೂ ಓದಿ: ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ಬಲಪಂಥಿಯ ವೆಬ್‌ಸೈಟ್ ಒಪಿ‌ಇಂಡಿಯಾ, ’ಹಿಂದೊಮ್ಮೆ ಯೋಗಿ ಅವರನ್ನು ರಾಡಿಕಲ್ ಎಂದು ಕರೆದಿದ್ದ ಟೈಮ್ ಈಗ ಯೋಗಿಯವರನ್ನು ಹೊಗಳಿದೆ’ ಎಂಬ ಶಿರ್ಷಿಕೆ ನೀಡಿ ವರದಿ ಪ್ರಕಟಿಸಿದೆ.

‘Hang in there, better times are ahead’ – ಎಂಬ ತಲೆಬರಹದ ಈ ಅಡ್ವಟೋರಿಯಲ್ ಅನ್ನು ಡಿಸೆಂಬರ್ 15 ರಂದು ಆದಿತ್ಯನಾಥ್ ಶೇರ್ ಮಾಡಿ, ಅದನ್ನು ಲೇಖನ ಎಂಬಂತೆ ಬಿಂಬಿಸಿದ್ದರು. ಆ ಸಮಯದಲ್ಲಿ ಇದು ಗಮನ ಸೆಳೆದಿರಲಿಲ್ಲ. ನಂತರದ ಇದು ಸಾಮಾಜಿಕ ಜಾಲತಾಣಗಳ ಮೂಲಕ ಹರಡಿದೆ. ಎರಡು ವಾರಗಳ ನಂತರ ಎಚ್ಚೆತ್ತುಕೊಂಡ ಚಾನೆಲ್‌ಗಳು ಇತ್ತೀಚೆಗೆ ಯೋಗಿ ಧ್ಯಾನ ಮಾಡಿದವು.

ಒಂದೆರಡು ತಿಂಗಳ ಹಿಂದಷ್ಟೇ ಟೈಮ್‌ನಲ್ಲಿ, ಭಾರತದ ಕೊರೊನಾ ನಿರ್ವಹಣೆಯ ವಿಫಲತೆ ಕುರಿತು ಬರೆಯಲಾಗಿತ್ತು. ಅದರಲ್ಲಿ ಕೊರೊನಾ ಕುರಿತು ತಪ್ಪು ಮಾಹಿತಿ ಹರಡುವವರ ಕುರಿತ ಬಾಕ್ಸ್‌ನಲ್ಲಿ ಆದಿತ್ಯನಾಥ್‌ ಕೂಡಾ ಇದ್ದರು. ’ಯೋಗದಿಂದ ಕೊವಿಡ್ ನಿವಾರಿಸಬಹುದು’ ಎಂಬ ಅವರ ಹೇಳಿಕೆಯನ್ನು ಟೈಮ್ ಟೀಕಿಸಿತ್ತು.

ಅಡ್ವಟೋರಿಯಲ್‌ಗಳು ಪಾವತಿ ಕೊಟ್ಟು ಪ್ರಕಟಿಸುವ ಲೇಖನಗಳಾಗಿದ್ದು, ಅವು ಜಾಹೀರಾತಿನಂತಿರದೇ ಎಡಿಟೋರಿಯಲ್ ಶೈಲಿಯಲ್ಲಿ ನಿರೂಪಿತಗೊಂಡಿರುತ್ತವೆ.

ಇದನ್ನೂ ಓದಿ: ಸ್ವತಃ ಆದಿತ್ಯನಾಥ್‌‌ಗೆ ಯುಪಿ ಪೊಲೀಸರ ಮೇಲೆ ನಂಬಿಕೆಯಿಲ್ಲ: ಬಿಜೆಪಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...