Homeಮುಖಪುಟರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಶುಕ್ರವಾರ ಉತ್ತರಪ್ರದೇಶದ ಶಾಮ್ಲಿಯಲ್ಲಿ ನಿಗದಿಯಾಗಿದ್ದ ರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಲಾಗಿದೆ

- Advertisement -
- Advertisement -

ಶಾಮ್ಲಿ ಜಿಲ್ಲಾಡಳಿತವು ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಇಂದಿನಿಂದ ಏಪ್ರಿಲ್ 3 ರವರೆಗೆ ದೊಡ್ಡ ಸಮಾವೇಶಗಳನ್ನು ನಿಷೇಧಿಸಿದೆ. ಆದಾಗ್ಯೂ, ಭಾರತೀಯ ಕಿಸಾನ್ ಯೂನಿಯನ್, ರಾಷ್ಟ್ರೀಯ ಲೋಕ ದಳ, (ಆರ್‌ಎಲ್‌ಡಿ) ಮತ್ತು ಇತರ ಸಂಘಟನೆಗಳು ನಾಳೆಯೆ ಸಮಾವೇಶ ನಡೆಸುವುದಾಗಿ ಹೇಳಿವೆ.

ಕೃಷಿ ಕಾನೂನುಗಳ ರದ್ಧತಿಗೆ ವಿರೋಧಿಸಿ, ನವೆಂಬರ್‌ನಿಂದ ದೆಹಲಿ ಗಡಿಯ ಸಮೀಪ ನಡೆಯುತ್ತಿರುವ ರೈತ ಪ್ರತಿಭಟನೆಗಳನ್ನು ಬೆಂಬಲಿಸಲು ಫೆಬ್ರವರಿ 5 ಮತ್ತು ಫೆಬ್ರವರಿ 15 ರ ನಡುವೆ ಉತ್ತರಪ್ರದೇಶದಾದ್ಯಂತ ಸರಣಿ ಸಭೆಗಳನ್ನು ಬಿಕೆಯು ಜೊತೆ ಸೇರಿ ಆರ್‌ಎಲ್‌ಡಿ ಆಯೋಜಿಸಿದೆ. ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ಲಕ್ಷಾಂತರ ರೈತರು ರಾಷ್ಟ್ರ ರಾಜಧಾನಿಯ ಹೊರವಲಯದಲ್ಲಿ ಮೊಕ್ಕಾಂ ಹೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ಪಾಪ್ ತಾರೆ ರಿಹಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್, ಅಮೆರಿಕ ಮತ್ತು ಬ್ರಿಟನ್ನಿನ ಕೆಲವು ಜನಪ್ರತಿನಿಧಿಗಳು ಸೇರಿದಂತೆ ಅಂತರರಾಷ್ಟ್ರೀಯ ಗಣ್ಯರು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಆಂದೋಲನಕ್ಕೆ ಅಪಾರ ಪ್ರಮಾಣದ ಬೆಂಬಲ ವ್ಯಕ್ತವಾಗುತ್ತಿದೆ.

ಫೆಬ್ರವರಿ 4 ಮತ್ತು ಏಪ್ರಿಲ್ 3 ರ ನಡುವೆ ಶಾಮ್ಲಿಯಲ್ಲಿ ದೊಡ್ಡ ಸಮಾವೇಶಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಹೇಳಿಕೆಯಲ್ಲಿ ತಿಳಿಸಿದೆ. ಈ ಅವಧಿಯಲ್ಲಿ ಮಹಾಶಿವರಾತ್ರಿ, ಹೋಳಿ ಹಬ್ಬ ಬರುತ್ತವೆ ಮತ್ತು ಅನೇಕ ಸಂಸ್ಥೆಗಳು ಪರೀಕ್ಷೆಗಳನ್ನು ನಡೆಸುವ ಸಾಧ್ಯತೆ ಇರುವ ಕಾರಣ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಹರಿಯಾಣದಲ್ಲೂ ಈಗ ಸರಣಿ ಮಹಾಪಂಚಾಯತ್‌ಗಳನ್ನು ಆಯೋಜಿಸಲಾಗಿದೆ. ಸಮಾವೇಶಕ್ಕೆ ಅಪಾರ ಜನ ಸೇರುತ್ತಿದ್ದು, ಇದು ಯುಪಿ ಮತ್ತು ಹರಿಯಾಣ ಸರ್ಕಾರಗಳಿಗೆ ಹಿನ್ನಡೆ ಎಂದೇ ಭಾವಿಸಲಾಗಿದೆ. ಕಳೆದ ವಾರ, ಉತ್ತರಪ್ರದೇಶದ ಬಾಗಪತ್‌ನ ಬರಾತ್‌ನಲ್ಲಿ ಮಹಾಪಂಚಾಯತ್‌ಗೆ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಅವರು ಯುಪಿಯ ಮುಜಾಫರ್‌ನಗರದಲ್ಲಿ ಕಳೆದ ವಾರ ಬೃಹತ್ ಸಮಾವೇಶ ನಡೆಸಿದ್ದರು.

ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...