Homeಮುಖಪುಟನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಕಾಂಗ್ರೆಸ್ ಮುಖಂಡ ಅನಿಲ್ ಶಾಸ್ತ್ರಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರಿಗೆ ಭಾನುವಾರ ಸಂಜೆ ಪತ್ರ ಬರೆದಿದ್ದು, ಆ ಭಾಗಗಳನ್ನು ಪಠ್ಯಕ್ರಮದಲ್ಲಿ ಪುನಃ ಸೇರಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಮಾಜಿ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಬಗೆಗಿನ ಕಾಂಗ್ರೆಸ್ ಇತಿಹಾಸಕ್ಕೆ ಸಂಬಂಧಿಸಿದ ಭಾಗಗಳನ್ನು 12 ನೇ ತರಗತಿಯ ಪಠ್ಯಕ್ರಮದಿಂದ ಉತ್ತರ ಪ್ರದೇಶದ ಶಿಕ್ಷಣ ಮಂಡಳಿ ಕೈಬಿಟ್ಟಿದೆ. ಈ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ವಿರೋಧಿಸಿದ್ದು, ಪಠ್ಯಕ್ರಮ ಕೈಬಿಡುವ ಕ್ರಮದಿಂದ ಹಿಂದಕ್ಕೆ ಸರಿಯದಿದ್ದರೆ ರಾಜ್ಯಾದ್ಯಮತ ಆಂದೋಲನಕ್ಕೆ ಕರೆ ಕೊಡುವುದಾಗಿ ಎಚ್ಚರಿಕೆ ನೀಡಿದೆ.

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಕಾಂಗ್ರೆಸ್ ಮುಖಂಡ ಅನಿಲ್ ಶಾಸ್ತ್ರಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರಿಗೆ ಭಾನುವಾರ ಸಂಜೆ ಪತ್ರ ಬರೆದಿದ್ದು, ಆ ಭಾಗಗಳನ್ನು ಪಠ್ಯಕ್ರಮದಲ್ಲಿ ಪುನಃ ಸೇರಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನು “ಪಿತೂರಿ” ಎಂದು ಕರೆದ ಅನಿಲ್ ಶಾಸ್ತ್ರಿ, ’ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ದೇಶದ ರಚನೆಯಲ್ಲಿ ಕಾಂಗ್ರೆಸ್ ಕೊಡುಗೆಯನ್ನು ತೊಡೆದುಹಾಕಲು ಬಯಸುತ್ತಿವೆ’ ಎಂದು ಕಿಡಿಕಾರಿದ್ದಾರೆ.

ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಲಲ್ಲು, ಅನಿಲ್ ಶಾಸ್ತ್ರಿ ಬರೆದ ಪತ್ರವನ್ನು ಅರಿತುಕೊಂಡು ಕ್ರಮ ತೆಗೆದುಕೊಳ್ಳುವಲ್ಲಿ ಸರ್ಕಾರ ವಿಫಲವಾದರೆ, ಅವರು ಈ ವಿಷಯದ ವಿರುದ್ಧ ಆಂದೋಲನ ನಡೆಸುತ್ತೇವೆ ಎಂದಿದ್ದಾರೆ.

“ದೇಶದ ಮಕ್ಕಳು ನೆಹರೂ-ಶಾಸ್ತ್ರಿಗಳ (ಪರಂಪರೆಯ) ಬಗ್ಗೆ ತಿಳಿದುಕೊಳ್ಳದಿದ್ದರೆ, ಇತಿಹಾಸದ ಬಗ್ಗೆ ಏನು ಕಲಿಯುತ್ತಾರೆ” ಎಂದು ಅವರು ಪ್ರಶ್ನಿಸಿದ್ದಾರೆ. “ಇದೆಲ್ಲವೂ ಸರ್ಕಾರದ ಆದೇಶದ ಮೇರೆಗೆ ನಡೆಯುತ್ತಿದೆ. ಯುಪಿ ಕಾಂಗ್ರೆಸ್ ಇದನ್ನು ಬಹಿರಂಗವಾಗಿ ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಶಾಲೆ ನಡೆಯುವ ಅವಧಿ ಕಡಿತಗೊಂಡಿದ್ದರಿಂದ 9-12 ತರಗತಿಗಳಿಂದ ಪಠ್ಯಕ್ರಮದ ತರ್ಕಬದ್ಧಗೊಳಿಸುವಿಕೆಯ ಭಾಗವಾಗಿ ಕೆಲ ಪಠ್ಯಕ್ರಮಗಳನ್ನು ಕೈಬಿಡಲಾಗಿದೆ ಎಂದು ಮಂಡಳಿ ತಿಳಿಸಿದೆ.

ಕಾಂಗ್ರೆಸ್, ನೆಹರೂ ಮತ್ತು ಶಾಸ್ತ್ರಿಗೆ ಸಂಬಂಧಿಸಿದ ಭಾಗಗಳು ಯುನಿಟ್ ಬಿ ಎಂಬ ವಿಭಾಗದ ಅಡಿಯಲ್ಲಿ 12 ನೇ ತರಗತಿಯ ಪಠ್ಯಕ್ರಮದ ಒಂದು ಭಾಗವಾಗಿದ್ದವು. ಇದು ‘ಸ್ವತಂತ್ರ ಭಾರತದಲ್ಲಿ ರಾಜಕೀಯ’ ಎಂಬ ಪಠ್ಯದ ಭಾಗವಾಗಿತ್ತು.

’’ಏಕ ಪಕ್ಷ (ಕಾಂಗ್ರೆಸ್) ಪ್ರಾಬಲ್ಯದ ಹಂತ, ಮೊದಲ ಮೂರು ಸಾರ್ವತ್ರಿಕ ಚುನಾವಣೆಗಳು, ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪ್ರಾಬಲ್ಯದ ಸ್ವರೂಪ, ಕಾಂಗ್ರೆಸ್ ಕಾರ್ಯವೈಖರಿಗೆ ಸವಾಲುಗಳು, ನೆಹರೂ ಮತ್ತು ಶಾಸ್ತ್ರಿ ನಂತರದ ಸಾಮಾನ್ಯ ಮಾದರಿಗಳು, 1967 ರ ಚುನಾವಣೆ, ಕಾಂಗ್ರೆಸ್ ವಿಭಜನೆ ಮತ್ತು ಮರು ಸಂಘಟನೆ ಮತ್ತು 1971ರ ಚುನಾವಣೆಯಲ್ಲಿ ಪಕ್ಷದ ಗೆಲುವು’’ ಮುಂತಾದವುಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಇವುಗಳನ್ನಷ್ಟೇ ಅಲ್ಲದೇ ಇನ್ನೂ ಇತರೆ ವಿಷಯಗಳನ್ನು ಕೈಬಿಡಲಾಗಿದೆ. ವಿಲಿಯಂ ಷೇಕ್ಸ್‌ಪಿಯರ್‌ನ ಭವ್ಯ ಕೃತಿ ‘ಮರ್ಚೆಂಟ್ ಆಫ್ ವೆನಿಸ್’ ಅನ್ನು 12 ನೇ ತರಗತಿಯ ಇಂಗ್ಲಿಷ್ ಪಠ್ಯಕ್ರಮದಿಂದ ಕೈಬಿಡಲಾಗಿದ್ದು, ಜನಪ್ರಿಯ ವಿಡಂಬನಕಾರ ಹರಿಶಂಕರ್ ಪಾರ್ಸಾಯಿ ಬರೆದ ‘ನಿಂಡಾ ರಾಸ್’ ಎಂಬ ವಿಡಂಬನೆಯನ್ನು 12 ನೇ ತರಗತಿ ಹಿಂದಿ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ಚುನಾವಣಾ ರಾಜಕೀಯ, ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗೆ ಸಂಬಂಧಿಸಿದ ಭಾಗಗಳನ್ನು ಸಮಾಜ ವಿಜ್ಞಾನದ 10 ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದ್ದು, ಚುನಾವಣಾ ರಾಜಕೀಯ ಮತ್ತು ಚುನಾವಣಾ ಸುಧಾರಣೆಗಳನ್ನು 11 ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ನಾಜಿಸಂನ ಉದಯ’, ಹಿಟ್ಲರ್ ಮತ್ತು ಹರಪ್ಪನ್ ನಾಗರಿಕತೆಯ ವಿಷಯಗಳನ್ನು 12 ನೇ ತರಗತಿಯ ಇತಿಹಾಸ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ಕಳೆದ ವಾರ ಮಂಡಳಿಯ ಕಾರ್ಯದರ್ಶಿ ದಿವ್ಯಾ ಕಾಂತ್ ಶುಕ್ಲಾ ಮಾಧ್ಯಮಗಳೊಂದಿಗೆ ನಡೆದ ಸಂವಹನದಲ್ಲಿ, ಈ ಎಲ್ಲ ವಿಷಯಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆಯೆ ಹೊರತು ಪಠ್ಯಪುಸ್ತಕಗಳಿಂದಲ್ಲ. “ಅವುಗಳನ್ನು ಓದಲು ಬಯಸುವವರಿಗೆ ಅವು ತುಂಬಾ ಲಭ್ಯವಿದೆ” ಎಂದು ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳಿಗೆ ಬಹಳ ಕಡಿಮೆ ತರಗತಿಗಳು ನಡೆದವು, ಅದಕ್ಕಾಗಿಯೇ ಅವರ ಪರೀಕ್ಷೆಗಳ ಪಠ್ಯಕ್ರಮವನ್ನು ಕಡಿಮೆ ಮಾಡಲಾಗಿದೆ ಎಂದು ಶುಕ್ಲಾ ಹೇಳಿದರು.

ಈ ವಿಷಯದಲ್ಲಿ ಎದ್ದಿರುವ ಆಕ್ಷೇಪಣೆಗಳ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

“ಸರ್ಕಾರದ ನಿಜವಾದ ಉದ್ದೇಶವು ಸ್ಪಷ್ಟವಾಗಿದೆ, ಇಲ್ಲದಿದ್ದರೆ ಅಂತಹ ಪ್ರಮುಖ ಅಧ್ಯಾಯಗಳನ್ನು ಹೇಗೆ ಬಿಡಬಹುದು? ಮೊದಲ ಮೂರು ಸಾರ್ವತ್ರಿಕ ಚುನಾವಣೆಗಳ ಬಗ್ಗೆ ಮಕ್ಕಳು ತಿಳಿದುಕೊಳ್ಳದಿದ್ದರೆ, ಅವರು ದೇಶದ ಚುನಾವಣಾ ಇತಿಹಾಸವನ್ನು ಹೇಗೆ ಗ್ರಹಿಸಲು ಸಾಧ್ಯವಾಗುತ್ತದೆ” ಎಂದು ಅನಿಲ್ ಶಾಸ್ತ್ರಿ ಪ್ರಶ್ನಿಸಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿಯೂ ಕೂಡ ಟಿಪ್ಪು ಸುಲ್ತಾನ್ ಬಗೆಗಿನ ಪಠ್ಯಗಳನ್ನು ಕೈಬಿಟ್ಟಿರುವುದಾಗಿ ವರದಿಯಾಗಿದೆ.


ಇದನ್ನೂ ಓದಿ: ರಾಜಸ್ಥಾನ: ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ, ಇಲ್ಲ ಪಕ್ಷದ ಸದಸ್ಯತ್ವ ರದ್ದು – ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...