Homeಮುಖಪುಟನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಕಾಂಗ್ರೆಸ್ ಮುಖಂಡ ಅನಿಲ್ ಶಾಸ್ತ್ರಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರಿಗೆ ಭಾನುವಾರ ಸಂಜೆ ಪತ್ರ ಬರೆದಿದ್ದು, ಆ ಭಾಗಗಳನ್ನು ಪಠ್ಯಕ್ರಮದಲ್ಲಿ ಪುನಃ ಸೇರಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಮಾಜಿ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಬಗೆಗಿನ ಕಾಂಗ್ರೆಸ್ ಇತಿಹಾಸಕ್ಕೆ ಸಂಬಂಧಿಸಿದ ಭಾಗಗಳನ್ನು 12 ನೇ ತರಗತಿಯ ಪಠ್ಯಕ್ರಮದಿಂದ ಉತ್ತರ ಪ್ರದೇಶದ ಶಿಕ್ಷಣ ಮಂಡಳಿ ಕೈಬಿಟ್ಟಿದೆ. ಈ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ವಿರೋಧಿಸಿದ್ದು, ಪಠ್ಯಕ್ರಮ ಕೈಬಿಡುವ ಕ್ರಮದಿಂದ ಹಿಂದಕ್ಕೆ ಸರಿಯದಿದ್ದರೆ ರಾಜ್ಯಾದ್ಯಮತ ಆಂದೋಲನಕ್ಕೆ ಕರೆ ಕೊಡುವುದಾಗಿ ಎಚ್ಚರಿಕೆ ನೀಡಿದೆ.

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಕಾಂಗ್ರೆಸ್ ಮುಖಂಡ ಅನಿಲ್ ಶಾಸ್ತ್ರಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರಿಗೆ ಭಾನುವಾರ ಸಂಜೆ ಪತ್ರ ಬರೆದಿದ್ದು, ಆ ಭಾಗಗಳನ್ನು ಪಠ್ಯಕ್ರಮದಲ್ಲಿ ಪುನಃ ಸೇರಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನು “ಪಿತೂರಿ” ಎಂದು ಕರೆದ ಅನಿಲ್ ಶಾಸ್ತ್ರಿ, ’ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ದೇಶದ ರಚನೆಯಲ್ಲಿ ಕಾಂಗ್ರೆಸ್ ಕೊಡುಗೆಯನ್ನು ತೊಡೆದುಹಾಕಲು ಬಯಸುತ್ತಿವೆ’ ಎಂದು ಕಿಡಿಕಾರಿದ್ದಾರೆ.

ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಲಲ್ಲು, ಅನಿಲ್ ಶಾಸ್ತ್ರಿ ಬರೆದ ಪತ್ರವನ್ನು ಅರಿತುಕೊಂಡು ಕ್ರಮ ತೆಗೆದುಕೊಳ್ಳುವಲ್ಲಿ ಸರ್ಕಾರ ವಿಫಲವಾದರೆ, ಅವರು ಈ ವಿಷಯದ ವಿರುದ್ಧ ಆಂದೋಲನ ನಡೆಸುತ್ತೇವೆ ಎಂದಿದ್ದಾರೆ.

“ದೇಶದ ಮಕ್ಕಳು ನೆಹರೂ-ಶಾಸ್ತ್ರಿಗಳ (ಪರಂಪರೆಯ) ಬಗ್ಗೆ ತಿಳಿದುಕೊಳ್ಳದಿದ್ದರೆ, ಇತಿಹಾಸದ ಬಗ್ಗೆ ಏನು ಕಲಿಯುತ್ತಾರೆ” ಎಂದು ಅವರು ಪ್ರಶ್ನಿಸಿದ್ದಾರೆ. “ಇದೆಲ್ಲವೂ ಸರ್ಕಾರದ ಆದೇಶದ ಮೇರೆಗೆ ನಡೆಯುತ್ತಿದೆ. ಯುಪಿ ಕಾಂಗ್ರೆಸ್ ಇದನ್ನು ಬಹಿರಂಗವಾಗಿ ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಶಾಲೆ ನಡೆಯುವ ಅವಧಿ ಕಡಿತಗೊಂಡಿದ್ದರಿಂದ 9-12 ತರಗತಿಗಳಿಂದ ಪಠ್ಯಕ್ರಮದ ತರ್ಕಬದ್ಧಗೊಳಿಸುವಿಕೆಯ ಭಾಗವಾಗಿ ಕೆಲ ಪಠ್ಯಕ್ರಮಗಳನ್ನು ಕೈಬಿಡಲಾಗಿದೆ ಎಂದು ಮಂಡಳಿ ತಿಳಿಸಿದೆ.

ಕಾಂಗ್ರೆಸ್, ನೆಹರೂ ಮತ್ತು ಶಾಸ್ತ್ರಿಗೆ ಸಂಬಂಧಿಸಿದ ಭಾಗಗಳು ಯುನಿಟ್ ಬಿ ಎಂಬ ವಿಭಾಗದ ಅಡಿಯಲ್ಲಿ 12 ನೇ ತರಗತಿಯ ಪಠ್ಯಕ್ರಮದ ಒಂದು ಭಾಗವಾಗಿದ್ದವು. ಇದು ‘ಸ್ವತಂತ್ರ ಭಾರತದಲ್ಲಿ ರಾಜಕೀಯ’ ಎಂಬ ಪಠ್ಯದ ಭಾಗವಾಗಿತ್ತು.

’’ಏಕ ಪಕ್ಷ (ಕಾಂಗ್ರೆಸ್) ಪ್ರಾಬಲ್ಯದ ಹಂತ, ಮೊದಲ ಮೂರು ಸಾರ್ವತ್ರಿಕ ಚುನಾವಣೆಗಳು, ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪ್ರಾಬಲ್ಯದ ಸ್ವರೂಪ, ಕಾಂಗ್ರೆಸ್ ಕಾರ್ಯವೈಖರಿಗೆ ಸವಾಲುಗಳು, ನೆಹರೂ ಮತ್ತು ಶಾಸ್ತ್ರಿ ನಂತರದ ಸಾಮಾನ್ಯ ಮಾದರಿಗಳು, 1967 ರ ಚುನಾವಣೆ, ಕಾಂಗ್ರೆಸ್ ವಿಭಜನೆ ಮತ್ತು ಮರು ಸಂಘಟನೆ ಮತ್ತು 1971ರ ಚುನಾವಣೆಯಲ್ಲಿ ಪಕ್ಷದ ಗೆಲುವು’’ ಮುಂತಾದವುಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಇವುಗಳನ್ನಷ್ಟೇ ಅಲ್ಲದೇ ಇನ್ನೂ ಇತರೆ ವಿಷಯಗಳನ್ನು ಕೈಬಿಡಲಾಗಿದೆ. ವಿಲಿಯಂ ಷೇಕ್ಸ್‌ಪಿಯರ್‌ನ ಭವ್ಯ ಕೃತಿ ‘ಮರ್ಚೆಂಟ್ ಆಫ್ ವೆನಿಸ್’ ಅನ್ನು 12 ನೇ ತರಗತಿಯ ಇಂಗ್ಲಿಷ್ ಪಠ್ಯಕ್ರಮದಿಂದ ಕೈಬಿಡಲಾಗಿದ್ದು, ಜನಪ್ರಿಯ ವಿಡಂಬನಕಾರ ಹರಿಶಂಕರ್ ಪಾರ್ಸಾಯಿ ಬರೆದ ‘ನಿಂಡಾ ರಾಸ್’ ಎಂಬ ವಿಡಂಬನೆಯನ್ನು 12 ನೇ ತರಗತಿ ಹಿಂದಿ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ಚುನಾವಣಾ ರಾಜಕೀಯ, ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗೆ ಸಂಬಂಧಿಸಿದ ಭಾಗಗಳನ್ನು ಸಮಾಜ ವಿಜ್ಞಾನದ 10 ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದ್ದು, ಚುನಾವಣಾ ರಾಜಕೀಯ ಮತ್ತು ಚುನಾವಣಾ ಸುಧಾರಣೆಗಳನ್ನು 11 ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ನಾಜಿಸಂನ ಉದಯ’, ಹಿಟ್ಲರ್ ಮತ್ತು ಹರಪ್ಪನ್ ನಾಗರಿಕತೆಯ ವಿಷಯಗಳನ್ನು 12 ನೇ ತರಗತಿಯ ಇತಿಹಾಸ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ಕಳೆದ ವಾರ ಮಂಡಳಿಯ ಕಾರ್ಯದರ್ಶಿ ದಿವ್ಯಾ ಕಾಂತ್ ಶುಕ್ಲಾ ಮಾಧ್ಯಮಗಳೊಂದಿಗೆ ನಡೆದ ಸಂವಹನದಲ್ಲಿ, ಈ ಎಲ್ಲ ವಿಷಯಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆಯೆ ಹೊರತು ಪಠ್ಯಪುಸ್ತಕಗಳಿಂದಲ್ಲ. “ಅವುಗಳನ್ನು ಓದಲು ಬಯಸುವವರಿಗೆ ಅವು ತುಂಬಾ ಲಭ್ಯವಿದೆ” ಎಂದು ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳಿಗೆ ಬಹಳ ಕಡಿಮೆ ತರಗತಿಗಳು ನಡೆದವು, ಅದಕ್ಕಾಗಿಯೇ ಅವರ ಪರೀಕ್ಷೆಗಳ ಪಠ್ಯಕ್ರಮವನ್ನು ಕಡಿಮೆ ಮಾಡಲಾಗಿದೆ ಎಂದು ಶುಕ್ಲಾ ಹೇಳಿದರು.

ಈ ವಿಷಯದಲ್ಲಿ ಎದ್ದಿರುವ ಆಕ್ಷೇಪಣೆಗಳ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

“ಸರ್ಕಾರದ ನಿಜವಾದ ಉದ್ದೇಶವು ಸ್ಪಷ್ಟವಾಗಿದೆ, ಇಲ್ಲದಿದ್ದರೆ ಅಂತಹ ಪ್ರಮುಖ ಅಧ್ಯಾಯಗಳನ್ನು ಹೇಗೆ ಬಿಡಬಹುದು? ಮೊದಲ ಮೂರು ಸಾರ್ವತ್ರಿಕ ಚುನಾವಣೆಗಳ ಬಗ್ಗೆ ಮಕ್ಕಳು ತಿಳಿದುಕೊಳ್ಳದಿದ್ದರೆ, ಅವರು ದೇಶದ ಚುನಾವಣಾ ಇತಿಹಾಸವನ್ನು ಹೇಗೆ ಗ್ರಹಿಸಲು ಸಾಧ್ಯವಾಗುತ್ತದೆ” ಎಂದು ಅನಿಲ್ ಶಾಸ್ತ್ರಿ ಪ್ರಶ್ನಿಸಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿಯೂ ಕೂಡ ಟಿಪ್ಪು ಸುಲ್ತಾನ್ ಬಗೆಗಿನ ಪಠ್ಯಗಳನ್ನು ಕೈಬಿಟ್ಟಿರುವುದಾಗಿ ವರದಿಯಾಗಿದೆ.


ಇದನ್ನೂ ಓದಿ: ರಾಜಸ್ಥಾನ: ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ, ಇಲ್ಲ ಪಕ್ಷದ ಸದಸ್ಯತ್ವ ರದ್ದು – ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....