Homeಮುಖಪುಟನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಕಾಂಗ್ರೆಸ್ ಮುಖಂಡ ಅನಿಲ್ ಶಾಸ್ತ್ರಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರಿಗೆ ಭಾನುವಾರ ಸಂಜೆ ಪತ್ರ ಬರೆದಿದ್ದು, ಆ ಭಾಗಗಳನ್ನು ಪಠ್ಯಕ್ರಮದಲ್ಲಿ ಪುನಃ ಸೇರಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಮಾಜಿ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಬಗೆಗಿನ ಕಾಂಗ್ರೆಸ್ ಇತಿಹಾಸಕ್ಕೆ ಸಂಬಂಧಿಸಿದ ಭಾಗಗಳನ್ನು 12 ನೇ ತರಗತಿಯ ಪಠ್ಯಕ್ರಮದಿಂದ ಉತ್ತರ ಪ್ರದೇಶದ ಶಿಕ್ಷಣ ಮಂಡಳಿ ಕೈಬಿಟ್ಟಿದೆ. ಈ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ವಿರೋಧಿಸಿದ್ದು, ಪಠ್ಯಕ್ರಮ ಕೈಬಿಡುವ ಕ್ರಮದಿಂದ ಹಿಂದಕ್ಕೆ ಸರಿಯದಿದ್ದರೆ ರಾಜ್ಯಾದ್ಯಮತ ಆಂದೋಲನಕ್ಕೆ ಕರೆ ಕೊಡುವುದಾಗಿ ಎಚ್ಚರಿಕೆ ನೀಡಿದೆ.

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಕಾಂಗ್ರೆಸ್ ಮುಖಂಡ ಅನಿಲ್ ಶಾಸ್ತ್ರಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರಿಗೆ ಭಾನುವಾರ ಸಂಜೆ ಪತ್ರ ಬರೆದಿದ್ದು, ಆ ಭಾಗಗಳನ್ನು ಪಠ್ಯಕ್ರಮದಲ್ಲಿ ಪುನಃ ಸೇರಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನು “ಪಿತೂರಿ” ಎಂದು ಕರೆದ ಅನಿಲ್ ಶಾಸ್ತ್ರಿ, ’ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ದೇಶದ ರಚನೆಯಲ್ಲಿ ಕಾಂಗ್ರೆಸ್ ಕೊಡುಗೆಯನ್ನು ತೊಡೆದುಹಾಕಲು ಬಯಸುತ್ತಿವೆ’ ಎಂದು ಕಿಡಿಕಾರಿದ್ದಾರೆ.

ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಲಲ್ಲು, ಅನಿಲ್ ಶಾಸ್ತ್ರಿ ಬರೆದ ಪತ್ರವನ್ನು ಅರಿತುಕೊಂಡು ಕ್ರಮ ತೆಗೆದುಕೊಳ್ಳುವಲ್ಲಿ ಸರ್ಕಾರ ವಿಫಲವಾದರೆ, ಅವರು ಈ ವಿಷಯದ ವಿರುದ್ಧ ಆಂದೋಲನ ನಡೆಸುತ್ತೇವೆ ಎಂದಿದ್ದಾರೆ.

“ದೇಶದ ಮಕ್ಕಳು ನೆಹರೂ-ಶಾಸ್ತ್ರಿಗಳ (ಪರಂಪರೆಯ) ಬಗ್ಗೆ ತಿಳಿದುಕೊಳ್ಳದಿದ್ದರೆ, ಇತಿಹಾಸದ ಬಗ್ಗೆ ಏನು ಕಲಿಯುತ್ತಾರೆ” ಎಂದು ಅವರು ಪ್ರಶ್ನಿಸಿದ್ದಾರೆ. “ಇದೆಲ್ಲವೂ ಸರ್ಕಾರದ ಆದೇಶದ ಮೇರೆಗೆ ನಡೆಯುತ್ತಿದೆ. ಯುಪಿ ಕಾಂಗ್ರೆಸ್ ಇದನ್ನು ಬಹಿರಂಗವಾಗಿ ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಶಾಲೆ ನಡೆಯುವ ಅವಧಿ ಕಡಿತಗೊಂಡಿದ್ದರಿಂದ 9-12 ತರಗತಿಗಳಿಂದ ಪಠ್ಯಕ್ರಮದ ತರ್ಕಬದ್ಧಗೊಳಿಸುವಿಕೆಯ ಭಾಗವಾಗಿ ಕೆಲ ಪಠ್ಯಕ್ರಮಗಳನ್ನು ಕೈಬಿಡಲಾಗಿದೆ ಎಂದು ಮಂಡಳಿ ತಿಳಿಸಿದೆ.

ಕಾಂಗ್ರೆಸ್, ನೆಹರೂ ಮತ್ತು ಶಾಸ್ತ್ರಿಗೆ ಸಂಬಂಧಿಸಿದ ಭಾಗಗಳು ಯುನಿಟ್ ಬಿ ಎಂಬ ವಿಭಾಗದ ಅಡಿಯಲ್ಲಿ 12 ನೇ ತರಗತಿಯ ಪಠ್ಯಕ್ರಮದ ಒಂದು ಭಾಗವಾಗಿದ್ದವು. ಇದು ‘ಸ್ವತಂತ್ರ ಭಾರತದಲ್ಲಿ ರಾಜಕೀಯ’ ಎಂಬ ಪಠ್ಯದ ಭಾಗವಾಗಿತ್ತು.

’’ಏಕ ಪಕ್ಷ (ಕಾಂಗ್ರೆಸ್) ಪ್ರಾಬಲ್ಯದ ಹಂತ, ಮೊದಲ ಮೂರು ಸಾರ್ವತ್ರಿಕ ಚುನಾವಣೆಗಳು, ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪ್ರಾಬಲ್ಯದ ಸ್ವರೂಪ, ಕಾಂಗ್ರೆಸ್ ಕಾರ್ಯವೈಖರಿಗೆ ಸವಾಲುಗಳು, ನೆಹರೂ ಮತ್ತು ಶಾಸ್ತ್ರಿ ನಂತರದ ಸಾಮಾನ್ಯ ಮಾದರಿಗಳು, 1967 ರ ಚುನಾವಣೆ, ಕಾಂಗ್ರೆಸ್ ವಿಭಜನೆ ಮತ್ತು ಮರು ಸಂಘಟನೆ ಮತ್ತು 1971ರ ಚುನಾವಣೆಯಲ್ಲಿ ಪಕ್ಷದ ಗೆಲುವು’’ ಮುಂತಾದವುಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಇವುಗಳನ್ನಷ್ಟೇ ಅಲ್ಲದೇ ಇನ್ನೂ ಇತರೆ ವಿಷಯಗಳನ್ನು ಕೈಬಿಡಲಾಗಿದೆ. ವಿಲಿಯಂ ಷೇಕ್ಸ್‌ಪಿಯರ್‌ನ ಭವ್ಯ ಕೃತಿ ‘ಮರ್ಚೆಂಟ್ ಆಫ್ ವೆನಿಸ್’ ಅನ್ನು 12 ನೇ ತರಗತಿಯ ಇಂಗ್ಲಿಷ್ ಪಠ್ಯಕ್ರಮದಿಂದ ಕೈಬಿಡಲಾಗಿದ್ದು, ಜನಪ್ರಿಯ ವಿಡಂಬನಕಾರ ಹರಿಶಂಕರ್ ಪಾರ್ಸಾಯಿ ಬರೆದ ‘ನಿಂಡಾ ರಾಸ್’ ಎಂಬ ವಿಡಂಬನೆಯನ್ನು 12 ನೇ ತರಗತಿ ಹಿಂದಿ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ಚುನಾವಣಾ ರಾಜಕೀಯ, ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗೆ ಸಂಬಂಧಿಸಿದ ಭಾಗಗಳನ್ನು ಸಮಾಜ ವಿಜ್ಞಾನದ 10 ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದ್ದು, ಚುನಾವಣಾ ರಾಜಕೀಯ ಮತ್ತು ಚುನಾವಣಾ ಸುಧಾರಣೆಗಳನ್ನು 11 ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ನಾಜಿಸಂನ ಉದಯ’, ಹಿಟ್ಲರ್ ಮತ್ತು ಹರಪ್ಪನ್ ನಾಗರಿಕತೆಯ ವಿಷಯಗಳನ್ನು 12 ನೇ ತರಗತಿಯ ಇತಿಹಾಸ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ಕಳೆದ ವಾರ ಮಂಡಳಿಯ ಕಾರ್ಯದರ್ಶಿ ದಿವ್ಯಾ ಕಾಂತ್ ಶುಕ್ಲಾ ಮಾಧ್ಯಮಗಳೊಂದಿಗೆ ನಡೆದ ಸಂವಹನದಲ್ಲಿ, ಈ ಎಲ್ಲ ವಿಷಯಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆಯೆ ಹೊರತು ಪಠ್ಯಪುಸ್ತಕಗಳಿಂದಲ್ಲ. “ಅವುಗಳನ್ನು ಓದಲು ಬಯಸುವವರಿಗೆ ಅವು ತುಂಬಾ ಲಭ್ಯವಿದೆ” ಎಂದು ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳಿಗೆ ಬಹಳ ಕಡಿಮೆ ತರಗತಿಗಳು ನಡೆದವು, ಅದಕ್ಕಾಗಿಯೇ ಅವರ ಪರೀಕ್ಷೆಗಳ ಪಠ್ಯಕ್ರಮವನ್ನು ಕಡಿಮೆ ಮಾಡಲಾಗಿದೆ ಎಂದು ಶುಕ್ಲಾ ಹೇಳಿದರು.

ಈ ವಿಷಯದಲ್ಲಿ ಎದ್ದಿರುವ ಆಕ್ಷೇಪಣೆಗಳ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

“ಸರ್ಕಾರದ ನಿಜವಾದ ಉದ್ದೇಶವು ಸ್ಪಷ್ಟವಾಗಿದೆ, ಇಲ್ಲದಿದ್ದರೆ ಅಂತಹ ಪ್ರಮುಖ ಅಧ್ಯಾಯಗಳನ್ನು ಹೇಗೆ ಬಿಡಬಹುದು? ಮೊದಲ ಮೂರು ಸಾರ್ವತ್ರಿಕ ಚುನಾವಣೆಗಳ ಬಗ್ಗೆ ಮಕ್ಕಳು ತಿಳಿದುಕೊಳ್ಳದಿದ್ದರೆ, ಅವರು ದೇಶದ ಚುನಾವಣಾ ಇತಿಹಾಸವನ್ನು ಹೇಗೆ ಗ್ರಹಿಸಲು ಸಾಧ್ಯವಾಗುತ್ತದೆ” ಎಂದು ಅನಿಲ್ ಶಾಸ್ತ್ರಿ ಪ್ರಶ್ನಿಸಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿಯೂ ಕೂಡ ಟಿಪ್ಪು ಸುಲ್ತಾನ್ ಬಗೆಗಿನ ಪಠ್ಯಗಳನ್ನು ಕೈಬಿಟ್ಟಿರುವುದಾಗಿ ವರದಿಯಾಗಿದೆ.


ಇದನ್ನೂ ಓದಿ: ರಾಜಸ್ಥಾನ: ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ, ಇಲ್ಲ ಪಕ್ಷದ ಸದಸ್ಯತ್ವ ರದ್ದು – ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...