Homeಮುಖಪುಟನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಕಾಂಗ್ರೆಸ್ ಮುಖಂಡ ಅನಿಲ್ ಶಾಸ್ತ್ರಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರಿಗೆ ಭಾನುವಾರ ಸಂಜೆ ಪತ್ರ ಬರೆದಿದ್ದು, ಆ ಭಾಗಗಳನ್ನು ಪಠ್ಯಕ್ರಮದಲ್ಲಿ ಪುನಃ ಸೇರಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಮಾಜಿ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಬಗೆಗಿನ ಕಾಂಗ್ರೆಸ್ ಇತಿಹಾಸಕ್ಕೆ ಸಂಬಂಧಿಸಿದ ಭಾಗಗಳನ್ನು 12 ನೇ ತರಗತಿಯ ಪಠ್ಯಕ್ರಮದಿಂದ ಉತ್ತರ ಪ್ರದೇಶದ ಶಿಕ್ಷಣ ಮಂಡಳಿ ಕೈಬಿಟ್ಟಿದೆ. ಈ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ವಿರೋಧಿಸಿದ್ದು, ಪಠ್ಯಕ್ರಮ ಕೈಬಿಡುವ ಕ್ರಮದಿಂದ ಹಿಂದಕ್ಕೆ ಸರಿಯದಿದ್ದರೆ ರಾಜ್ಯಾದ್ಯಮತ ಆಂದೋಲನಕ್ಕೆ ಕರೆ ಕೊಡುವುದಾಗಿ ಎಚ್ಚರಿಕೆ ನೀಡಿದೆ.

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಕಾಂಗ್ರೆಸ್ ಮುಖಂಡ ಅನಿಲ್ ಶಾಸ್ತ್ರಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರಿಗೆ ಭಾನುವಾರ ಸಂಜೆ ಪತ್ರ ಬರೆದಿದ್ದು, ಆ ಭಾಗಗಳನ್ನು ಪಠ್ಯಕ್ರಮದಲ್ಲಿ ಪುನಃ ಸೇರಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನು “ಪಿತೂರಿ” ಎಂದು ಕರೆದ ಅನಿಲ್ ಶಾಸ್ತ್ರಿ, ’ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ದೇಶದ ರಚನೆಯಲ್ಲಿ ಕಾಂಗ್ರೆಸ್ ಕೊಡುಗೆಯನ್ನು ತೊಡೆದುಹಾಕಲು ಬಯಸುತ್ತಿವೆ’ ಎಂದು ಕಿಡಿಕಾರಿದ್ದಾರೆ.

ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಲಲ್ಲು, ಅನಿಲ್ ಶಾಸ್ತ್ರಿ ಬರೆದ ಪತ್ರವನ್ನು ಅರಿತುಕೊಂಡು ಕ್ರಮ ತೆಗೆದುಕೊಳ್ಳುವಲ್ಲಿ ಸರ್ಕಾರ ವಿಫಲವಾದರೆ, ಅವರು ಈ ವಿಷಯದ ವಿರುದ್ಧ ಆಂದೋಲನ ನಡೆಸುತ್ತೇವೆ ಎಂದಿದ್ದಾರೆ.

“ದೇಶದ ಮಕ್ಕಳು ನೆಹರೂ-ಶಾಸ್ತ್ರಿಗಳ (ಪರಂಪರೆಯ) ಬಗ್ಗೆ ತಿಳಿದುಕೊಳ್ಳದಿದ್ದರೆ, ಇತಿಹಾಸದ ಬಗ್ಗೆ ಏನು ಕಲಿಯುತ್ತಾರೆ” ಎಂದು ಅವರು ಪ್ರಶ್ನಿಸಿದ್ದಾರೆ. “ಇದೆಲ್ಲವೂ ಸರ್ಕಾರದ ಆದೇಶದ ಮೇರೆಗೆ ನಡೆಯುತ್ತಿದೆ. ಯುಪಿ ಕಾಂಗ್ರೆಸ್ ಇದನ್ನು ಬಹಿರಂಗವಾಗಿ ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಶಾಲೆ ನಡೆಯುವ ಅವಧಿ ಕಡಿತಗೊಂಡಿದ್ದರಿಂದ 9-12 ತರಗತಿಗಳಿಂದ ಪಠ್ಯಕ್ರಮದ ತರ್ಕಬದ್ಧಗೊಳಿಸುವಿಕೆಯ ಭಾಗವಾಗಿ ಕೆಲ ಪಠ್ಯಕ್ರಮಗಳನ್ನು ಕೈಬಿಡಲಾಗಿದೆ ಎಂದು ಮಂಡಳಿ ತಿಳಿಸಿದೆ.

ಕಾಂಗ್ರೆಸ್, ನೆಹರೂ ಮತ್ತು ಶಾಸ್ತ್ರಿಗೆ ಸಂಬಂಧಿಸಿದ ಭಾಗಗಳು ಯುನಿಟ್ ಬಿ ಎಂಬ ವಿಭಾಗದ ಅಡಿಯಲ್ಲಿ 12 ನೇ ತರಗತಿಯ ಪಠ್ಯಕ್ರಮದ ಒಂದು ಭಾಗವಾಗಿದ್ದವು. ಇದು ‘ಸ್ವತಂತ್ರ ಭಾರತದಲ್ಲಿ ರಾಜಕೀಯ’ ಎಂಬ ಪಠ್ಯದ ಭಾಗವಾಗಿತ್ತು.

’’ಏಕ ಪಕ್ಷ (ಕಾಂಗ್ರೆಸ್) ಪ್ರಾಬಲ್ಯದ ಹಂತ, ಮೊದಲ ಮೂರು ಸಾರ್ವತ್ರಿಕ ಚುನಾವಣೆಗಳು, ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪ್ರಾಬಲ್ಯದ ಸ್ವರೂಪ, ಕಾಂಗ್ರೆಸ್ ಕಾರ್ಯವೈಖರಿಗೆ ಸವಾಲುಗಳು, ನೆಹರೂ ಮತ್ತು ಶಾಸ್ತ್ರಿ ನಂತರದ ಸಾಮಾನ್ಯ ಮಾದರಿಗಳು, 1967 ರ ಚುನಾವಣೆ, ಕಾಂಗ್ರೆಸ್ ವಿಭಜನೆ ಮತ್ತು ಮರು ಸಂಘಟನೆ ಮತ್ತು 1971ರ ಚುನಾವಣೆಯಲ್ಲಿ ಪಕ್ಷದ ಗೆಲುವು’’ ಮುಂತಾದವುಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಇವುಗಳನ್ನಷ್ಟೇ ಅಲ್ಲದೇ ಇನ್ನೂ ಇತರೆ ವಿಷಯಗಳನ್ನು ಕೈಬಿಡಲಾಗಿದೆ. ವಿಲಿಯಂ ಷೇಕ್ಸ್‌ಪಿಯರ್‌ನ ಭವ್ಯ ಕೃತಿ ‘ಮರ್ಚೆಂಟ್ ಆಫ್ ವೆನಿಸ್’ ಅನ್ನು 12 ನೇ ತರಗತಿಯ ಇಂಗ್ಲಿಷ್ ಪಠ್ಯಕ್ರಮದಿಂದ ಕೈಬಿಡಲಾಗಿದ್ದು, ಜನಪ್ರಿಯ ವಿಡಂಬನಕಾರ ಹರಿಶಂಕರ್ ಪಾರ್ಸಾಯಿ ಬರೆದ ‘ನಿಂಡಾ ರಾಸ್’ ಎಂಬ ವಿಡಂಬನೆಯನ್ನು 12 ನೇ ತರಗತಿ ಹಿಂದಿ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ಚುನಾವಣಾ ರಾಜಕೀಯ, ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗೆ ಸಂಬಂಧಿಸಿದ ಭಾಗಗಳನ್ನು ಸಮಾಜ ವಿಜ್ಞಾನದ 10 ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದ್ದು, ಚುನಾವಣಾ ರಾಜಕೀಯ ಮತ್ತು ಚುನಾವಣಾ ಸುಧಾರಣೆಗಳನ್ನು 11 ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ನಾಜಿಸಂನ ಉದಯ’, ಹಿಟ್ಲರ್ ಮತ್ತು ಹರಪ್ಪನ್ ನಾಗರಿಕತೆಯ ವಿಷಯಗಳನ್ನು 12 ನೇ ತರಗತಿಯ ಇತಿಹಾಸ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ಕಳೆದ ವಾರ ಮಂಡಳಿಯ ಕಾರ್ಯದರ್ಶಿ ದಿವ್ಯಾ ಕಾಂತ್ ಶುಕ್ಲಾ ಮಾಧ್ಯಮಗಳೊಂದಿಗೆ ನಡೆದ ಸಂವಹನದಲ್ಲಿ, ಈ ಎಲ್ಲ ವಿಷಯಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆಯೆ ಹೊರತು ಪಠ್ಯಪುಸ್ತಕಗಳಿಂದಲ್ಲ. “ಅವುಗಳನ್ನು ಓದಲು ಬಯಸುವವರಿಗೆ ಅವು ತುಂಬಾ ಲಭ್ಯವಿದೆ” ಎಂದು ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳಿಗೆ ಬಹಳ ಕಡಿಮೆ ತರಗತಿಗಳು ನಡೆದವು, ಅದಕ್ಕಾಗಿಯೇ ಅವರ ಪರೀಕ್ಷೆಗಳ ಪಠ್ಯಕ್ರಮವನ್ನು ಕಡಿಮೆ ಮಾಡಲಾಗಿದೆ ಎಂದು ಶುಕ್ಲಾ ಹೇಳಿದರು.

ಈ ವಿಷಯದಲ್ಲಿ ಎದ್ದಿರುವ ಆಕ್ಷೇಪಣೆಗಳ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

“ಸರ್ಕಾರದ ನಿಜವಾದ ಉದ್ದೇಶವು ಸ್ಪಷ್ಟವಾಗಿದೆ, ಇಲ್ಲದಿದ್ದರೆ ಅಂತಹ ಪ್ರಮುಖ ಅಧ್ಯಾಯಗಳನ್ನು ಹೇಗೆ ಬಿಡಬಹುದು? ಮೊದಲ ಮೂರು ಸಾರ್ವತ್ರಿಕ ಚುನಾವಣೆಗಳ ಬಗ್ಗೆ ಮಕ್ಕಳು ತಿಳಿದುಕೊಳ್ಳದಿದ್ದರೆ, ಅವರು ದೇಶದ ಚುನಾವಣಾ ಇತಿಹಾಸವನ್ನು ಹೇಗೆ ಗ್ರಹಿಸಲು ಸಾಧ್ಯವಾಗುತ್ತದೆ” ಎಂದು ಅನಿಲ್ ಶಾಸ್ತ್ರಿ ಪ್ರಶ್ನಿಸಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿಯೂ ಕೂಡ ಟಿಪ್ಪು ಸುಲ್ತಾನ್ ಬಗೆಗಿನ ಪಠ್ಯಗಳನ್ನು ಕೈಬಿಟ್ಟಿರುವುದಾಗಿ ವರದಿಯಾಗಿದೆ.


ಇದನ್ನೂ ಓದಿ: ರಾಜಸ್ಥಾನ: ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ, ಇಲ್ಲ ಪಕ್ಷದ ಸದಸ್ಯತ್ವ ರದ್ದು – ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...