Homeಮುಖಪುಟಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

ಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

ಸುಪ್ರೀಂಕೋರ್ಟ್‌ನಲ್ಲಿ EWS ವಿಚಾರಣೆ ನಡೆಯುತ್ತಿರುವ ಮಧ್ಯೆ ಸಿಜೆಐ ಮಗನನ್ನು ಸರ್ಕಾರಿ ವಕೀಲರನ್ನಾಗಿ ನೇಮಿಸಿರುವುದು ಏನನ್ನು ಸೂಚಿಸುತ್ತದೆ ಎಂದು ಪ್ರಶ್ನಿಸಲಾಗಿತ್ತು

- Advertisement -
- Advertisement -

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಯು.ಯು.ಲಲಿತ್ ಅವರ ಮಗ ಶ್ರೀಯಶ್ ಲಲಿತ್‌ ಅವರನ್ನು ಉತ್ತರ ಪ್ರದೇಶ ಸರ್ಕಾರವು ರಾಜ್ಯ ಸರ್ಕಾರದ ಹಿರಿಯ ವಕೀಲರಾಗಿ ಸುಪ್ರೀಂಕೋರ್ಟ್‌ನಲ್ಲಿ ನೇಮಕ ಮಾಡಿತ್ತು. ನೇಮಕ ಮಾಡಿ ಕೆಲವೇ ದಿನಗಳ ನಂತರ ಸರ್ಕಾರವು ನೇಮಕವನ್ನು ಸೋಮವಾದ ಮುಂದೂಡಿದೆ.

ಮುಂದಿನ ಆದೇಶದವರೆಗೆ ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಶ್ರೀಯಶ್ ಲಲಿತ್ ಅವರ ನೇಮಕವನ್ನು ಮುಂದೂಡಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಸೆಪ್ಟೆಂಬರ್ 21 ರಂದು ಶ್ರೀಯಶ್ ಲಲಿತ್ ಅವರನ್ನು ಹುದ್ದೆಗೆ ನೇಮಕ ಮಾಡಲಾಗಿತ್ತು. ಅದಾಗಿ ಐದು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀಯಶ್ ಲಲಿತ್ ಅವರಲ್ಲದೆ ಇತರ ಮೂವರು ವಕೀಲರಾದ ಪ್ರೀತಿ ಗೋಯಲ್, ನಮಿತ್ ಸಕ್ಸೇನಾ ಮತ್ತು ಯಶಾರ್ಥ್ ಕಾಂತ್ ಅವರ ನೇಮಕಾತಿಯನ್ನೂ ರಾಜ್ಯ ಸರ್ಕಾರವು ಮುಂದೂಡಿದೆ.

ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ

ಶ್ರೀಯಶ್ ಲಲಿತ್ 2017 ರಲ್ಲಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಕಾನೂನು ಫ್ಯಾಕಲ್ಟಿಯಿಂದ ಪದವಿ ಪಡೆದ್ದರು. ನಂತರ ಅವರು 2018 ರಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು.

ಶ್ರೀಯಶ್‌ ತಂದೆ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಆಗಸ್ಟ್ 27 ರಂದು ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರು ಆಗಸ್ಟ್ 26 ರಂದು ನಿವೃತ್ತರಾದ ನ್ಯಾಯಮೂರ್ತಿ ಎನ್‌‌.ವಿ. ರಮಣ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು.ಲಲಿತ್‌ ಅವರ ಅವಧಿ ಕಡಿಮೆಯಾಗಿದ್ದು, ಅವರು ನವೆಂಬರ್ 8 ರಂದು ನಿವೃತ್ತರಾಗಲಿದ್ದಾರೆ.

ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದಲ್ಲಿ 400 ಕ್ಕೂ ಹೆಚ್ಚು ಎಂಪನೆಲ್ ವಕೀಲರು ಇದ್ದಾರೆ ಎಂದು ಮೇ ತಿಂಗಳಲ್ಲಿ ಹೇಳಿತ್ತು.

ಇದನ್ನೂ ಓದಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಯು.ಯು. ಲಲಿತ್ ನೇಮಕ

ಮೇಲ್ಜಾತಿಗಳಿಗೆ 10% ಮೀಸಲಾತಿ (EWS) ನೀಡಿರುವ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಮಧ್ಯೆ, ಆದಿತ್ಯನಾಥ್‌‌ ಸರ್ಕಾರವು ಯು.ಯು. ಲಲಿತ್ ಅವರ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಯುಪಿ ಸರ್ಕಾರದ ಹಿರಿಯ ವಕೀಲರ ಸಮಿತಿಗೆ ವಕೀಲರನ್ನಾಗಿ ನೇಮಿಸಿದ್ದು ವಿವಾದ ಉಂಟಾಗಿತ್ತು.

ಬಿಜೆಪಿ ಸರ್ಕಾರದ ಈ ನಡೆಯನ್ನು ಹಲವರು ಪ್ರಶ್ನಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ‘ಜಾತಿಯತೆಯ ಕೊಲೀಜಿಯಂ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಪತ್ರಕರ್ತ ಹಂಸರಾಜ್ ಮೀನಾ ಅವರು #casteist_collegium (ಜಾತಿಯತೆಯ ಕೊಲೀಜಿಯಂ) ಎಂಬ ಹ್ಯಾಶ್ ಟ್ಯಾಗ್‌ನೊಂದಿಗೆ, “ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ EWS ವಿಚಾರಣೆಯ ಮಧ್ಯೆ, ಯುಪಿ ಸರ್ಕಾರವು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಮಗನನ್ನು ಯುಪಿ ಸರ್ಕಾರದ ವಕೀಲರನ್ನಾಗಿ ನೇಮಿಸುವ ಮೂಲಕ ಏನನ್ನು ಸೂಚಿಸುತ್ತದೆ?” ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ಪ್ರೋಫೆಸರ್‌ ದಿಲೀಪ್ ಮೊಂಡಲ್ ಅವರು,“ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಇಡಬ್ಲ್ಯೂಎಸ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಯುಪಿ ಸರ್ಕಾರವು ಲಲಿತ್ ಅವರ ಮಗನನ್ನು ಹಿರಿಯ ಸರ್ಕಾರಿ ವಕೀಲರನ್ನಾಗಿ ಮಾಡಿದೆ. ಇದು ಲಂಚ ಮತ್ತು ಹಿತಾಸಕ್ತಿ ಸಂಘರ್ಷದ ಲಜ್ಜೆಗೆಟ್ಟ ವಿಷಯವಾಗಿದೆ. ಲಲಿತ್ ಇಡಬ್ಲ್ಯೂಎಸ್ ಪ್ರಕರಣದಿಂದ ಹಿಂದೆ ಸರಿಯಬೇಕು” ಎಂದು ಆಗ್ರಹಿಸಿದ್ದರು.

ಇನ್ನು ಕೆಲವರು ಇದು ಪರೋಕ್ಷ ಮೀಸಲಾತಿ ಎಂದು ಅಭಿಪ್ರಾಯಪಟ್ಟಿದ್ದು, ಅದನ್ನು ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...