Homeಮುಖಪುಟಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

ಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

ಸುಪ್ರೀಂಕೋರ್ಟ್‌ನಲ್ಲಿ EWS ವಿಚಾರಣೆ ನಡೆಯುತ್ತಿರುವ ಮಧ್ಯೆ ಸಿಜೆಐ ಮಗನನ್ನು ಸರ್ಕಾರಿ ವಕೀಲರನ್ನಾಗಿ ನೇಮಿಸಿರುವುದು ಏನನ್ನು ಸೂಚಿಸುತ್ತದೆ ಎಂದು ಪ್ರಶ್ನಿಸಲಾಗಿತ್ತು

- Advertisement -
- Advertisement -

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಯು.ಯು.ಲಲಿತ್ ಅವರ ಮಗ ಶ್ರೀಯಶ್ ಲಲಿತ್‌ ಅವರನ್ನು ಉತ್ತರ ಪ್ರದೇಶ ಸರ್ಕಾರವು ರಾಜ್ಯ ಸರ್ಕಾರದ ಹಿರಿಯ ವಕೀಲರಾಗಿ ಸುಪ್ರೀಂಕೋರ್ಟ್‌ನಲ್ಲಿ ನೇಮಕ ಮಾಡಿತ್ತು. ನೇಮಕ ಮಾಡಿ ಕೆಲವೇ ದಿನಗಳ ನಂತರ ಸರ್ಕಾರವು ನೇಮಕವನ್ನು ಸೋಮವಾದ ಮುಂದೂಡಿದೆ.

ಮುಂದಿನ ಆದೇಶದವರೆಗೆ ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಶ್ರೀಯಶ್ ಲಲಿತ್ ಅವರ ನೇಮಕವನ್ನು ಮುಂದೂಡಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಸೆಪ್ಟೆಂಬರ್ 21 ರಂದು ಶ್ರೀಯಶ್ ಲಲಿತ್ ಅವರನ್ನು ಹುದ್ದೆಗೆ ನೇಮಕ ಮಾಡಲಾಗಿತ್ತು. ಅದಾಗಿ ಐದು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀಯಶ್ ಲಲಿತ್ ಅವರಲ್ಲದೆ ಇತರ ಮೂವರು ವಕೀಲರಾದ ಪ್ರೀತಿ ಗೋಯಲ್, ನಮಿತ್ ಸಕ್ಸೇನಾ ಮತ್ತು ಯಶಾರ್ಥ್ ಕಾಂತ್ ಅವರ ನೇಮಕಾತಿಯನ್ನೂ ರಾಜ್ಯ ಸರ್ಕಾರವು ಮುಂದೂಡಿದೆ.

ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ

ಶ್ರೀಯಶ್ ಲಲಿತ್ 2017 ರಲ್ಲಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಕಾನೂನು ಫ್ಯಾಕಲ್ಟಿಯಿಂದ ಪದವಿ ಪಡೆದ್ದರು. ನಂತರ ಅವರು 2018 ರಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು.

ಶ್ರೀಯಶ್‌ ತಂದೆ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಆಗಸ್ಟ್ 27 ರಂದು ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರು ಆಗಸ್ಟ್ 26 ರಂದು ನಿವೃತ್ತರಾದ ನ್ಯಾಯಮೂರ್ತಿ ಎನ್‌‌.ವಿ. ರಮಣ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು.ಲಲಿತ್‌ ಅವರ ಅವಧಿ ಕಡಿಮೆಯಾಗಿದ್ದು, ಅವರು ನವೆಂಬರ್ 8 ರಂದು ನಿವೃತ್ತರಾಗಲಿದ್ದಾರೆ.

ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದಲ್ಲಿ 400 ಕ್ಕೂ ಹೆಚ್ಚು ಎಂಪನೆಲ್ ವಕೀಲರು ಇದ್ದಾರೆ ಎಂದು ಮೇ ತಿಂಗಳಲ್ಲಿ ಹೇಳಿತ್ತು.

ಇದನ್ನೂ ಓದಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಯು.ಯು. ಲಲಿತ್ ನೇಮಕ

ಮೇಲ್ಜಾತಿಗಳಿಗೆ 10% ಮೀಸಲಾತಿ (EWS) ನೀಡಿರುವ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಮಧ್ಯೆ, ಆದಿತ್ಯನಾಥ್‌‌ ಸರ್ಕಾರವು ಯು.ಯು. ಲಲಿತ್ ಅವರ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಯುಪಿ ಸರ್ಕಾರದ ಹಿರಿಯ ವಕೀಲರ ಸಮಿತಿಗೆ ವಕೀಲರನ್ನಾಗಿ ನೇಮಿಸಿದ್ದು ವಿವಾದ ಉಂಟಾಗಿತ್ತು.

ಬಿಜೆಪಿ ಸರ್ಕಾರದ ಈ ನಡೆಯನ್ನು ಹಲವರು ಪ್ರಶ್ನಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ‘ಜಾತಿಯತೆಯ ಕೊಲೀಜಿಯಂ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಪತ್ರಕರ್ತ ಹಂಸರಾಜ್ ಮೀನಾ ಅವರು #casteist_collegium (ಜಾತಿಯತೆಯ ಕೊಲೀಜಿಯಂ) ಎಂಬ ಹ್ಯಾಶ್ ಟ್ಯಾಗ್‌ನೊಂದಿಗೆ, “ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ EWS ವಿಚಾರಣೆಯ ಮಧ್ಯೆ, ಯುಪಿ ಸರ್ಕಾರವು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಮಗನನ್ನು ಯುಪಿ ಸರ್ಕಾರದ ವಕೀಲರನ್ನಾಗಿ ನೇಮಿಸುವ ಮೂಲಕ ಏನನ್ನು ಸೂಚಿಸುತ್ತದೆ?” ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ಪ್ರೋಫೆಸರ್‌ ದಿಲೀಪ್ ಮೊಂಡಲ್ ಅವರು,“ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಇಡಬ್ಲ್ಯೂಎಸ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಯುಪಿ ಸರ್ಕಾರವು ಲಲಿತ್ ಅವರ ಮಗನನ್ನು ಹಿರಿಯ ಸರ್ಕಾರಿ ವಕೀಲರನ್ನಾಗಿ ಮಾಡಿದೆ. ಇದು ಲಂಚ ಮತ್ತು ಹಿತಾಸಕ್ತಿ ಸಂಘರ್ಷದ ಲಜ್ಜೆಗೆಟ್ಟ ವಿಷಯವಾಗಿದೆ. ಲಲಿತ್ ಇಡಬ್ಲ್ಯೂಎಸ್ ಪ್ರಕರಣದಿಂದ ಹಿಂದೆ ಸರಿಯಬೇಕು” ಎಂದು ಆಗ್ರಹಿಸಿದ್ದರು.

ಇನ್ನು ಕೆಲವರು ಇದು ಪರೋಕ್ಷ ಮೀಸಲಾತಿ ಎಂದು ಅಭಿಪ್ರಾಯಪಟ್ಟಿದ್ದು, ಅದನ್ನು ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....