Homeಮುಖಪುಟಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

ಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

ಸುಪ್ರೀಂಕೋರ್ಟ್‌ನಲ್ಲಿ EWS ವಿಚಾರಣೆ ನಡೆಯುತ್ತಿರುವ ಮಧ್ಯೆ ಸಿಜೆಐ ಮಗನನ್ನು ಸರ್ಕಾರಿ ವಕೀಲರನ್ನಾಗಿ ನೇಮಿಸಿರುವುದು ಏನನ್ನು ಸೂಚಿಸುತ್ತದೆ ಎಂದು ಪ್ರಶ್ನಿಸಲಾಗಿತ್ತು

- Advertisement -
- Advertisement -

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಯು.ಯು.ಲಲಿತ್ ಅವರ ಮಗ ಶ್ರೀಯಶ್ ಲಲಿತ್‌ ಅವರನ್ನು ಉತ್ತರ ಪ್ರದೇಶ ಸರ್ಕಾರವು ರಾಜ್ಯ ಸರ್ಕಾರದ ಹಿರಿಯ ವಕೀಲರಾಗಿ ಸುಪ್ರೀಂಕೋರ್ಟ್‌ನಲ್ಲಿ ನೇಮಕ ಮಾಡಿತ್ತು. ನೇಮಕ ಮಾಡಿ ಕೆಲವೇ ದಿನಗಳ ನಂತರ ಸರ್ಕಾರವು ನೇಮಕವನ್ನು ಸೋಮವಾದ ಮುಂದೂಡಿದೆ.

ಮುಂದಿನ ಆದೇಶದವರೆಗೆ ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಶ್ರೀಯಶ್ ಲಲಿತ್ ಅವರ ನೇಮಕವನ್ನು ಮುಂದೂಡಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಸೆಪ್ಟೆಂಬರ್ 21 ರಂದು ಶ್ರೀಯಶ್ ಲಲಿತ್ ಅವರನ್ನು ಹುದ್ದೆಗೆ ನೇಮಕ ಮಾಡಲಾಗಿತ್ತು. ಅದಾಗಿ ಐದು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀಯಶ್ ಲಲಿತ್ ಅವರಲ್ಲದೆ ಇತರ ಮೂವರು ವಕೀಲರಾದ ಪ್ರೀತಿ ಗೋಯಲ್, ನಮಿತ್ ಸಕ್ಸೇನಾ ಮತ್ತು ಯಶಾರ್ಥ್ ಕಾಂತ್ ಅವರ ನೇಮಕಾತಿಯನ್ನೂ ರಾಜ್ಯ ಸರ್ಕಾರವು ಮುಂದೂಡಿದೆ.

ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ

ಶ್ರೀಯಶ್ ಲಲಿತ್ 2017 ರಲ್ಲಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಕಾನೂನು ಫ್ಯಾಕಲ್ಟಿಯಿಂದ ಪದವಿ ಪಡೆದ್ದರು. ನಂತರ ಅವರು 2018 ರಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು.

ಶ್ರೀಯಶ್‌ ತಂದೆ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಆಗಸ್ಟ್ 27 ರಂದು ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರು ಆಗಸ್ಟ್ 26 ರಂದು ನಿವೃತ್ತರಾದ ನ್ಯಾಯಮೂರ್ತಿ ಎನ್‌‌.ವಿ. ರಮಣ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು.ಲಲಿತ್‌ ಅವರ ಅವಧಿ ಕಡಿಮೆಯಾಗಿದ್ದು, ಅವರು ನವೆಂಬರ್ 8 ರಂದು ನಿವೃತ್ತರಾಗಲಿದ್ದಾರೆ.

ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದಲ್ಲಿ 400 ಕ್ಕೂ ಹೆಚ್ಚು ಎಂಪನೆಲ್ ವಕೀಲರು ಇದ್ದಾರೆ ಎಂದು ಮೇ ತಿಂಗಳಲ್ಲಿ ಹೇಳಿತ್ತು.

ಇದನ್ನೂ ಓದಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಯು.ಯು. ಲಲಿತ್ ನೇಮಕ

ಮೇಲ್ಜಾತಿಗಳಿಗೆ 10% ಮೀಸಲಾತಿ (EWS) ನೀಡಿರುವ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಮಧ್ಯೆ, ಆದಿತ್ಯನಾಥ್‌‌ ಸರ್ಕಾರವು ಯು.ಯು. ಲಲಿತ್ ಅವರ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಯುಪಿ ಸರ್ಕಾರದ ಹಿರಿಯ ವಕೀಲರ ಸಮಿತಿಗೆ ವಕೀಲರನ್ನಾಗಿ ನೇಮಿಸಿದ್ದು ವಿವಾದ ಉಂಟಾಗಿತ್ತು.

ಬಿಜೆಪಿ ಸರ್ಕಾರದ ಈ ನಡೆಯನ್ನು ಹಲವರು ಪ್ರಶ್ನಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ‘ಜಾತಿಯತೆಯ ಕೊಲೀಜಿಯಂ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಪತ್ರಕರ್ತ ಹಂಸರಾಜ್ ಮೀನಾ ಅವರು #casteist_collegium (ಜಾತಿಯತೆಯ ಕೊಲೀಜಿಯಂ) ಎಂಬ ಹ್ಯಾಶ್ ಟ್ಯಾಗ್‌ನೊಂದಿಗೆ, “ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ EWS ವಿಚಾರಣೆಯ ಮಧ್ಯೆ, ಯುಪಿ ಸರ್ಕಾರವು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಮಗನನ್ನು ಯುಪಿ ಸರ್ಕಾರದ ವಕೀಲರನ್ನಾಗಿ ನೇಮಿಸುವ ಮೂಲಕ ಏನನ್ನು ಸೂಚಿಸುತ್ತದೆ?” ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೇಗೆ ನೇಮಕ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ಪ್ರೋಫೆಸರ್‌ ದಿಲೀಪ್ ಮೊಂಡಲ್ ಅವರು,“ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಇಡಬ್ಲ್ಯೂಎಸ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಯುಪಿ ಸರ್ಕಾರವು ಲಲಿತ್ ಅವರ ಮಗನನ್ನು ಹಿರಿಯ ಸರ್ಕಾರಿ ವಕೀಲರನ್ನಾಗಿ ಮಾಡಿದೆ. ಇದು ಲಂಚ ಮತ್ತು ಹಿತಾಸಕ್ತಿ ಸಂಘರ್ಷದ ಲಜ್ಜೆಗೆಟ್ಟ ವಿಷಯವಾಗಿದೆ. ಲಲಿತ್ ಇಡಬ್ಲ್ಯೂಎಸ್ ಪ್ರಕರಣದಿಂದ ಹಿಂದೆ ಸರಿಯಬೇಕು” ಎಂದು ಆಗ್ರಹಿಸಿದ್ದರು.

ಇನ್ನು ಕೆಲವರು ಇದು ಪರೋಕ್ಷ ಮೀಸಲಾತಿ ಎಂದು ಅಭಿಪ್ರಾಯಪಟ್ಟಿದ್ದು, ಅದನ್ನು ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....