Homeಮುಖಪುಟಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ

ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ

ಸುಪ್ರೀಂಕೋರ್ಟ್‌ನಲ್ಲಿ EWS ವಿಚಾರಣೆ ನಡೆಯುತ್ತಿರುವ ಮಧ್ಯೆ ಸಿಜೆಐ ಮಗನನ್ನು ಸರ್ಕಾರಿ ವಕೀಲರನ್ನಾಗಿ ನೇಮಿಸಿರುವುದು ಏನನ್ನು ಸೂಚಿಸುತ್ತದೆ ಎಂದು ಪತ್ರಕರ್ತರು ಪ್ರಶ್ನಿಸಿದ್ದಾರೆ

- Advertisement -
- Advertisement -

ಮೇಲ್ಜಾತಿಗಳಿಗೆ 10% ಮೀಸಲಾತಿ (EWS) ನೀಡಿರುವ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಮಧ್ಯೆ, ಆದಿತ್ಯನಾಥ್‌‌ ಸರ್ಕಾರವು ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಯುಪಿ ಸರ್ಕಾರದ ಹಿರಿಯ ವಕೀಲರ ಸಮಿತಿಗೆ ವಕೀಲರನ್ನಾಗಿ ನೇಮಿಸಿದೆ.

ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರು ಶ್ರೀಯಶ್ ಲಲಿತ್ ಅವರ ಸೇರ್ಪಡೆಗೆ ಅನುಮೋದನೆ ನೀಡಿದ್ದಾರೆ ಎಂದು ಉತ್ತರ ಪ್ರದೇಶದ ಕಾನೂನು ವಿಭಾಗದ ವಿಶೇಷ ಕಾರ್ಯದರ್ಶಿ ನಿಕುಂಜ್ ಮಿತ್ತಲ್ ಅವರು ಬುಧವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇನ್ನು ಮುಂದೆ ಶ್ರೀಯಶ್‌ ಅವರು ಹಿರಿಯ ನ್ಯಾಯವಾದಿಯಾಗಿ ಉತ್ತರ ಪ್ರದೇಶ ಸರ್ಕಾರ ಪ್ರಕರಣಗಳನ್ನು ಸುಪ್ರೀಂಕೋರ್ಟ್‌ನಲ್ಲಿ ವಾದಿಸಲಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು

ಉತ್ತರಪ್ರದೇಶದ ಕಾನೂನು ವಿಭಾಗದ ವಿಶೇಷ ಕಾರ್ಯದರ್ಶಿ ನಿಕುಂಜ್ ಮಿತ್ತಲ್ ಅವರು ಬುಧವಾರ ಹೊರಡಿಸಿದ ಪ್ರಕಟಣೆಯಲ್ಲಿ, ಸುಪ್ರೀಂ ಕೋರ್ಟ್‌ನಲ್ಲಿ ಯುಪಿ ಸರ್ಕಾರದ ಹಿರಿಯ ವಕೀಲರ ಸಮಿತಿಗೆ ಶ್ರೀಯಶ್ ಯು ಲಲಿತ್ ಅವರನ್ನು ಸೇರ್ಪಡೆಗೊಳಿಸಲು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ‘ಜಾತಿಯತೆಯ ಕೊಲೀಜಿಯಂ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತ ಹಂಸರಾಜ್ ಮೀನಾ ಅವರು #casteist_collegium (ಜಾತಿಯತೆಯ ಕೊಲೀಜಿಯಂ) ಎಂಬ ಹ್ಯಾಶ್ ಟ್ಯಾಗ್‌ನೊಂದಿಗೆ, “ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ EWS ವಿಚಾರಣೆಯ ಮಧ್ಯೆ, ಯುಪಿ ಸರ್ಕಾರವು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಮಗನನ್ನು ಯುಪಿ ಸರ್ಕಾರದ ವಕೀಲರನ್ನಾಗಿ ನೇಮಿಸುವ ಮೂಲಕ ಏನನ್ನು ಸೂಚಿಸುತ್ತದೆ?” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

ಪ್ರೋಫೆಸರ್‌ ದಿಲೀಪ್ ಮೊಂಡಲ್ ಅವರು,“ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಇಡಬ್ಲ್ಯೂಎಸ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಯುಪಿ ಸರ್ಕಾರವು ಲಲಿತ್ ಅವರ ಮಗನನ್ನು ಹಿರಿಯ ಸರ್ಕಾರಿ ವಕೀಲರನ್ನಾಗಿ ಮಾಡಿದೆ. ಇದು ಲಂಚ ಮತ್ತು ಹಿತಾಸಕ್ತಿ ಸಂಘರ್ಷದ ಲಜ್ಜೆಗೆಟ್ಟ ವಿಷಯವಾಗಿದೆ. ಲಲಿತ್ ಇಡಬ್ಲ್ಯೂಎಸ್ ಪ್ರಕರಣದಿಂದ ಹಿಂದೆ ಸರಿಯಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನು ಕೆಲವರು ಇದು ಪರೋಕ್ಷ ಮೀಸಲಾತಿ ಎಂದು ಅಭಿಪ್ರಾಯಪಟ್ಟಿದ್ದು, ಅದನ್ನು ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...