Homeಮುಖಪುಟಉತ್ತರಪ್ರದೇಶ: ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧ

ಉತ್ತರಪ್ರದೇಶ: ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧ

- Advertisement -
- Advertisement -

ಉತ್ತರಪ್ರದೇಶ ಸರಕಾರವು ಹಲಾಲ್ ಪ್ರಮಾಣೀಕರಣದೊಂದಿಗೆ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿ ಆದೇಶವನ್ನು ಹೊರಡಿಸಿದೆ.

ಈ ಹಿಂದೆ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಸಾಧ್ಯತೆ ಬಗ್ಗೆ ವರದಿಯಾಗಿತ್ತು.

ಉತ್ತರಪ್ರದೇಶ ಸರ್ಕಾರ ಹಲಾಲ್ ಟ್ಯಾಗ್ ಹೊಂದಿರುವ ಉತ್ಪನ್ನಗಳನ್ನು ನಿಷೇಧಿಸಿದೆ. ಹಲಾಲ್ ಪ್ರಮಾಣೀಕರಣದೊಂದಿಗೆ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಆದರೆ ರಫ್ತಿಗಾಗಿ ತಯಾರಿಸಿದ ಉತ್ಪನ್ನಗಳು ಈ ನಿರ್ಬಂಧಗಳಿಗೆ ಒಳಪಟ್ಟಿರುವುದಿಲ್ಲ.

ಉತ್ತರಪ್ರದೇಶದೊಳಗೆ ಹಲಾಲ್ ಪ್ರಮಾಣೀಕೃತ ಔಷಧಗಳು, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕೃತ ಆದೇಶ ತಿಳಿಸಿದೆ.

ಆಹಾರ ಉತ್ಪನ್ನಗಳ ಹಲಾಲ್ ಪ್ರಮಾಣೀಕರಣವು ಒಂದು ಸಮಾನಾಂತರ ವ್ಯವಸ್ಥೆಯಾಗಿದ್ದು ಅದು ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಗೊಂದಲವನ್ನು ಸೃಷ್ಟಿಸುತ್ತದೆ ಮತ್ತು ಆಹಾರ ಕಾನೂನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಯ ಸೆಕ್ಷನ್ 89ರ ಅಡಿಯಲ್ಲಿ ಸಮರ್ಥನೀಯವಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆಹಾರ ಪದಾರ್ಥಗಳ ಗುಣಮಟ್ಟವನ್ನು ನಿರ್ಧರಿಸುವ ಹಕ್ಕು ಸೆಕ್ಷನ್ 29ರಲ್ಲಿ ನೀಡಲಾದ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಮಾತ್ರ ಇರುತ್ತದೆ. ಅವರು ಕಾಯಿದೆಯ ನಿಬಂಧನೆಗಳ ಪ್ರಕಾರ ಸಂಬಂಧಿತ ಮಾನದಂಡಗಳನ್ನು ಪರಿಶೀಲಿಸುತ್ತಾರೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಇದಲ್ಲದೆ ಚಿಲ್ಲರೆ ಮಾರಾಟಗಾರರಿಗೆ ನಕಲಿ ಹಲಾಲ್ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮಾರಾಟವನ್ನು ಹೆಚ್ಚಿಸಲು ಜನರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕಂಪನಿ ಮತ್ತು ಇತರ ಕೆಲವು ಸಂಸ್ಥೆಗಳ ವಿರುದ್ಧ ಲಕ್ನೋ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಜಮಿಯತ್ ಉಲ್ಲೆಮಾ ಹಿಂದ್ ಹಲಾಲ್ ಟ್ರಸ್ಟ್,  ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಸೇರಿ ಕೆಲವು ಸಂಸ್ಥೆಗಳ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿದೆ.  ಐಶ್‌ಬಾಗ್‌ನ ಮೋತಿಜೀಲ್ ಕಾಲೋನಿ ನಿವಾಸಿ ಶೈಲೇಂದ್ರ ಕುಮಾರ್ ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: UAPA ಪ್ರಕರಣ: ಪತ್ರಕರ್ತ ಫಹಾದ್ ಶಾಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...