Homeಮುಖಪುಟಉತ್ತರಪ್ರದೇಶ: ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧ

ಉತ್ತರಪ್ರದೇಶ: ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧ

- Advertisement -
- Advertisement -

ಉತ್ತರಪ್ರದೇಶ ಸರಕಾರವು ಹಲಾಲ್ ಪ್ರಮಾಣೀಕರಣದೊಂದಿಗೆ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿ ಆದೇಶವನ್ನು ಹೊರಡಿಸಿದೆ.

ಈ ಹಿಂದೆ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಸಾಧ್ಯತೆ ಬಗ್ಗೆ ವರದಿಯಾಗಿತ್ತು.

ಉತ್ತರಪ್ರದೇಶ ಸರ್ಕಾರ ಹಲಾಲ್ ಟ್ಯಾಗ್ ಹೊಂದಿರುವ ಉತ್ಪನ್ನಗಳನ್ನು ನಿಷೇಧಿಸಿದೆ. ಹಲಾಲ್ ಪ್ರಮಾಣೀಕರಣದೊಂದಿಗೆ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಆದರೆ ರಫ್ತಿಗಾಗಿ ತಯಾರಿಸಿದ ಉತ್ಪನ್ನಗಳು ಈ ನಿರ್ಬಂಧಗಳಿಗೆ ಒಳಪಟ್ಟಿರುವುದಿಲ್ಲ.

ಉತ್ತರಪ್ರದೇಶದೊಳಗೆ ಹಲಾಲ್ ಪ್ರಮಾಣೀಕೃತ ಔಷಧಗಳು, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕೃತ ಆದೇಶ ತಿಳಿಸಿದೆ.

ಆಹಾರ ಉತ್ಪನ್ನಗಳ ಹಲಾಲ್ ಪ್ರಮಾಣೀಕರಣವು ಒಂದು ಸಮಾನಾಂತರ ವ್ಯವಸ್ಥೆಯಾಗಿದ್ದು ಅದು ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಗೊಂದಲವನ್ನು ಸೃಷ್ಟಿಸುತ್ತದೆ ಮತ್ತು ಆಹಾರ ಕಾನೂನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಯ ಸೆಕ್ಷನ್ 89ರ ಅಡಿಯಲ್ಲಿ ಸಮರ್ಥನೀಯವಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆಹಾರ ಪದಾರ್ಥಗಳ ಗುಣಮಟ್ಟವನ್ನು ನಿರ್ಧರಿಸುವ ಹಕ್ಕು ಸೆಕ್ಷನ್ 29ರಲ್ಲಿ ನೀಡಲಾದ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಮಾತ್ರ ಇರುತ್ತದೆ. ಅವರು ಕಾಯಿದೆಯ ನಿಬಂಧನೆಗಳ ಪ್ರಕಾರ ಸಂಬಂಧಿತ ಮಾನದಂಡಗಳನ್ನು ಪರಿಶೀಲಿಸುತ್ತಾರೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಇದಲ್ಲದೆ ಚಿಲ್ಲರೆ ಮಾರಾಟಗಾರರಿಗೆ ನಕಲಿ ಹಲಾಲ್ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮಾರಾಟವನ್ನು ಹೆಚ್ಚಿಸಲು ಜನರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕಂಪನಿ ಮತ್ತು ಇತರ ಕೆಲವು ಸಂಸ್ಥೆಗಳ ವಿರುದ್ಧ ಲಕ್ನೋ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಜಮಿಯತ್ ಉಲ್ಲೆಮಾ ಹಿಂದ್ ಹಲಾಲ್ ಟ್ರಸ್ಟ್,  ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಸೇರಿ ಕೆಲವು ಸಂಸ್ಥೆಗಳ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿದೆ.  ಐಶ್‌ಬಾಗ್‌ನ ಮೋತಿಜೀಲ್ ಕಾಲೋನಿ ನಿವಾಸಿ ಶೈಲೇಂದ್ರ ಕುಮಾರ್ ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: UAPA ಪ್ರಕರಣ: ಪತ್ರಕರ್ತ ಫಹಾದ್ ಶಾಗೆ ಜಾಮೀನು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...