Homeಮುಖಪುಟ'ಕನ್ವರ್ ಮಾರ್ಗ ಯೋಜನೆ'ಗೆ 33 ಸಾವಿರಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಯುಪಿ ಸರ್ಕಾರ: ವಿವರಣೆ...

‘ಕನ್ವರ್ ಮಾರ್ಗ ಯೋಜನೆ’ಗೆ 33 ಸಾವಿರಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಯುಪಿ ಸರ್ಕಾರ: ವಿವರಣೆ ಕೇಳಿದ ಎನ್‌ಜಿಟಿ

- Advertisement -
- Advertisement -

ಗಾಝಿಯಾಬಾದ್, ಮೀರತ್ ಮತ್ತು ಮುಝಾಫರ್‌ ನಗರ ವ್ಯಾಪ್ತಿಯ 111 ಕಿ.ಮೀ ‘ಕನ್ವರ್ ಮಾರ್ಗ’ ಯೋಜನೆಗಾಗಿ ಸಂಪೂರ್ಣವಾಗಿ ಬೆಳೆದು ನಿಂತಿರುವ 33,000ಕ್ಕೂ ಹೆಚ್ಚು ಮರಗಳನ್ನು ಕಡಿಯಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್‌ಜಿಟಿ) ಮಾಹಿತಿ ನೀಡಿದೆ.

ಎನ್‌ಜಿಟಿ ಅಧ್ಯಕ್ಷ ಪ್ರಕಾಶ್ ಶ್ರೀವಾಸ್ತವ, ಅರುಣ್ ಕುಮಾರ್ ತ್ಯಾಗಿ ಮತ್ತು ತಜ್ಞ ಸದಸ್ಯ ಎ ಸೆಂಥಿಲ್ ವೇಲ್ ಅವರ ಸಮಿತಿಯು ಮುಂದಿನ ವಿಚಾರಣೆಯ ದಿನಾಂಕ ಜುಲೈ 8ರೊಳಗೆ ಈ ಕುರಿತು ಹೆಚ್ಚಿನ ವಿವರಗಳನ್ನು ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಮೂರು ಜಿಲ್ಲೆಗಳಲ್ಲಿ ಯೋಜನೆಗಾಗಿ 1.1 ಲಕ್ಷ ಮರಗಳು ಮತ್ತು ಗಿಡಗಳನ್ನು ಕಡಿಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿರುವ ಎನ್‌ಜಿಟಿ ಉತ್ತರ ಪ್ರದೇಶದ ಸರ್ಕಾರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಸಚಿವಾಲಯ, ಲೋಕೋಪಯೋಗಿ ಇಲಾಖೆ ಮತ್ತು ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಕಡಿಯಬೇಕಾದ ಮರಗಳ ವಿವರಗಳನ್ನು ಕೇಳಿತ್ತು. ವಿವರಗಳನ್ನು ಸರ್ಕಾರವು ಒದಗಿಸಿದೆ. ಆದರೆ, ಎನ್‌ಜಿಟಿ ಇನ್ನಷ್ಟು ಮಾಹಿತಿ ನೀಡುವಂತೆ ಸೂಚಿಸಿದೆ.

ಹರಿದ್ವಾರದಲ್ಲಿ ಗಂಗಾನದಿಯಿಂದ ನೀರು ಸಂಗ್ರಹಿಸಿ ವಿವಿಧ ನಗರಗಳು ಮತ್ತು ಹಳ್ಳಿಗಳಿಗೆ ಹಿಂದಿರುಗುವ ಯುಪಿ, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮಧ್ಯ ಪ್ರದೇಶದ ಸುಮಾರು 1 ಕೋಟಿ ಕನ್ವರ್ ಭಕ್ತರ ಉಪಯೋಗಕ್ಕೆ ವಿಶೇಷ ‘ಕನ್ವರ್ ಮಾರ್ಗ’ ನಿರ್ಮಿಸಲು ಬಯಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಎನ್‌ಜಿಟಿಗೆ ತಿಳಿಸಿದೆ.

“ಈ ಮಾರ್ಗವನ್ನು ಸಾಮಾನ್ಯ ಜನರು ಮತ್ತು ಭಕ್ತರಿಗಾಗಿ ‘ತುಂಬಾ ಜನನಿಬಿಡ’ ವಿಭಾಗದಲ್ಲಿ ಸೇರಿಸಲಾಗಿದೆ. ಮುಝಾಫರ್‌ನಗರ, ಮೀರತ್ ಮತ್ತು ಗಾಝಿಯಾಬಾದ್ ಈ ಮೂರು ಜಿಲ್ಲೆಗಳ ಒಟ್ಟು 54 ಹಳ್ಳಿಗಳು ಈ ಮಾರ್ಗದಲ್ಲಿ ಬರುತ್ತವೆ. ಶ್ರಾವಣ ಮಾಸದಲ್ಲಿ ಸಂಚಾರಕ್ಕೆ ಸಾಕಷ್ಟು ಅಡ್ಡಿಯಾಗುತ್ತಿದೆ” ಎಂದು ಎನ್‌ಜಿಟಿಗೆ ಹೇಳಿದೆ.

ಯೋಜನೆಗೆ ಸಂಬಂಧಿಸಿದಂತೆ ಎನ್‌ಜಿಟಿ ನೀಡಿದ್ದ ಈ ಹಿಂದಿನ ಆದೇಶದಲ್ಲಿ “ಪರಿಸರ ಮಾನದಂಡಗಳ ಅನುಸರಣೆಗೆ ಸಂಬಂಧಿಸಿದ ಗಣನೀಯ ಸಮಸ್ಯೆಗಳನ್ನು” ಎತ್ತಿತ್ತು.

“ಕನ್ವರ್ ಮಾರ್ಗ ಯೋಜನೆಗೆ ಕಡಿಯುವ ಮರಗಳಿಗೆ ಪರ್ಯಾಯವಾಗಿ ರಾಜ್ಯ ಸರ್ಕಾರವು ಲಲಿತ್‌ಪುರ ಜಿಲ್ಲೆಯಲ್ಲಿ 222 ಹೆಕ್ಟೇರ್‌ಗಳನ್ನು ಅರಣ್ಯೀಕರಣಕ್ಕಾಗಿ ಗುರುತಿಸಿದೆ. ನಾವು ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರಕ್ಕೆ (CAMPA)1.5 ಕೋಟಿ ರೂ. ನೀಡಿದ್ದೇವೆ. ನಾವು ಅನುಸರಿಸಿದ ನಿಯಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುತ್ತೇವೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಗಂಗಾ ಮೇಲ್ದಂಡೆ ಕಾಲುವೆಯ ಉದ್ದಕ್ಕೂ ಪಶ್ಚಿಮ ಯುಪಿ ಮತ್ತು ಉತ್ತರಾಖಂಡ ಜಿಲ್ಲೆಗಳ ಮೂಲಕ ಸಾಮಾನ್ಯ ರಸ್ತೆಗೆ ಪರ್ಯಾಯವಾಗಿ ಕನ್ವರ್ ಮಾರ್ಗವನ್ನು 2018ರಲ್ಲಿ ಪ್ರಸ್ತಾಪಿಸಲಾಗಿದೆ. 2020ರಲ್ಲಿ, ಸರ್ಕಾರದ ವೆಚ್ಚ ಮತ್ತು ಹಣಕಾಸು ಸಮಿತಿಯು ಯೋಜನೆಗೆ ತನ್ನ ಅನುಮೋದನೆಯನ್ನು ನೀಡಿದೆ.

ಈ ರಸ್ತೆ ಯೋಜನೆಯು 10 ಪ್ರಮುಖ ಸೇತುವೆಗಳು, 27 ಚಿಕ್ಕ ಸೇತುವೆಗಳು ಮತ್ತು ಒಂದು ರೈಲ್ವೆ ಮೇಲ್ಸೇತುವೆಯನ್ನು ಒಳಗೊಂಡಿವೆ. ಗಂಗಾ ಕಾಲುವೆಯ ಮೇಲಿನ ಸೇತುವೆಗಳು ಬಹುತೇಕ 1850ರ ಸುಮಾರಿಗೆ ನಿರ್ಮಿಸಿದ್ದಾಗಿವೆ.

ಇದನ್ನೂ ಓದಿ : ಕೃಷ್ಣ ಜನ್ಮಸ್ಥಾನ-ಶಾಹಿ ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...