Homeಮುಖಪುಟ'ಕನ್ವರ್ ಮಾರ್ಗ ಯೋಜನೆ'ಗೆ 33 ಸಾವಿರಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಯುಪಿ ಸರ್ಕಾರ: ವಿವರಣೆ...

‘ಕನ್ವರ್ ಮಾರ್ಗ ಯೋಜನೆ’ಗೆ 33 ಸಾವಿರಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಯುಪಿ ಸರ್ಕಾರ: ವಿವರಣೆ ಕೇಳಿದ ಎನ್‌ಜಿಟಿ

- Advertisement -
- Advertisement -

ಗಾಝಿಯಾಬಾದ್, ಮೀರತ್ ಮತ್ತು ಮುಝಾಫರ್‌ ನಗರ ವ್ಯಾಪ್ತಿಯ 111 ಕಿ.ಮೀ ‘ಕನ್ವರ್ ಮಾರ್ಗ’ ಯೋಜನೆಗಾಗಿ ಸಂಪೂರ್ಣವಾಗಿ ಬೆಳೆದು ನಿಂತಿರುವ 33,000ಕ್ಕೂ ಹೆಚ್ಚು ಮರಗಳನ್ನು ಕಡಿಯಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್‌ಜಿಟಿ) ಮಾಹಿತಿ ನೀಡಿದೆ.

ಎನ್‌ಜಿಟಿ ಅಧ್ಯಕ್ಷ ಪ್ರಕಾಶ್ ಶ್ರೀವಾಸ್ತವ, ಅರುಣ್ ಕುಮಾರ್ ತ್ಯಾಗಿ ಮತ್ತು ತಜ್ಞ ಸದಸ್ಯ ಎ ಸೆಂಥಿಲ್ ವೇಲ್ ಅವರ ಸಮಿತಿಯು ಮುಂದಿನ ವಿಚಾರಣೆಯ ದಿನಾಂಕ ಜುಲೈ 8ರೊಳಗೆ ಈ ಕುರಿತು ಹೆಚ್ಚಿನ ವಿವರಗಳನ್ನು ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಮೂರು ಜಿಲ್ಲೆಗಳಲ್ಲಿ ಯೋಜನೆಗಾಗಿ 1.1 ಲಕ್ಷ ಮರಗಳು ಮತ್ತು ಗಿಡಗಳನ್ನು ಕಡಿಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿರುವ ಎನ್‌ಜಿಟಿ ಉತ್ತರ ಪ್ರದೇಶದ ಸರ್ಕಾರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಸಚಿವಾಲಯ, ಲೋಕೋಪಯೋಗಿ ಇಲಾಖೆ ಮತ್ತು ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಕಡಿಯಬೇಕಾದ ಮರಗಳ ವಿವರಗಳನ್ನು ಕೇಳಿತ್ತು. ವಿವರಗಳನ್ನು ಸರ್ಕಾರವು ಒದಗಿಸಿದೆ. ಆದರೆ, ಎನ್‌ಜಿಟಿ ಇನ್ನಷ್ಟು ಮಾಹಿತಿ ನೀಡುವಂತೆ ಸೂಚಿಸಿದೆ.

ಹರಿದ್ವಾರದಲ್ಲಿ ಗಂಗಾನದಿಯಿಂದ ನೀರು ಸಂಗ್ರಹಿಸಿ ವಿವಿಧ ನಗರಗಳು ಮತ್ತು ಹಳ್ಳಿಗಳಿಗೆ ಹಿಂದಿರುಗುವ ಯುಪಿ, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮಧ್ಯ ಪ್ರದೇಶದ ಸುಮಾರು 1 ಕೋಟಿ ಕನ್ವರ್ ಭಕ್ತರ ಉಪಯೋಗಕ್ಕೆ ವಿಶೇಷ ‘ಕನ್ವರ್ ಮಾರ್ಗ’ ನಿರ್ಮಿಸಲು ಬಯಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಎನ್‌ಜಿಟಿಗೆ ತಿಳಿಸಿದೆ.

“ಈ ಮಾರ್ಗವನ್ನು ಸಾಮಾನ್ಯ ಜನರು ಮತ್ತು ಭಕ್ತರಿಗಾಗಿ ‘ತುಂಬಾ ಜನನಿಬಿಡ’ ವಿಭಾಗದಲ್ಲಿ ಸೇರಿಸಲಾಗಿದೆ. ಮುಝಾಫರ್‌ನಗರ, ಮೀರತ್ ಮತ್ತು ಗಾಝಿಯಾಬಾದ್ ಈ ಮೂರು ಜಿಲ್ಲೆಗಳ ಒಟ್ಟು 54 ಹಳ್ಳಿಗಳು ಈ ಮಾರ್ಗದಲ್ಲಿ ಬರುತ್ತವೆ. ಶ್ರಾವಣ ಮಾಸದಲ್ಲಿ ಸಂಚಾರಕ್ಕೆ ಸಾಕಷ್ಟು ಅಡ್ಡಿಯಾಗುತ್ತಿದೆ” ಎಂದು ಎನ್‌ಜಿಟಿಗೆ ಹೇಳಿದೆ.

ಯೋಜನೆಗೆ ಸಂಬಂಧಿಸಿದಂತೆ ಎನ್‌ಜಿಟಿ ನೀಡಿದ್ದ ಈ ಹಿಂದಿನ ಆದೇಶದಲ್ಲಿ “ಪರಿಸರ ಮಾನದಂಡಗಳ ಅನುಸರಣೆಗೆ ಸಂಬಂಧಿಸಿದ ಗಣನೀಯ ಸಮಸ್ಯೆಗಳನ್ನು” ಎತ್ತಿತ್ತು.

“ಕನ್ವರ್ ಮಾರ್ಗ ಯೋಜನೆಗೆ ಕಡಿಯುವ ಮರಗಳಿಗೆ ಪರ್ಯಾಯವಾಗಿ ರಾಜ್ಯ ಸರ್ಕಾರವು ಲಲಿತ್‌ಪುರ ಜಿಲ್ಲೆಯಲ್ಲಿ 222 ಹೆಕ್ಟೇರ್‌ಗಳನ್ನು ಅರಣ್ಯೀಕರಣಕ್ಕಾಗಿ ಗುರುತಿಸಿದೆ. ನಾವು ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರಕ್ಕೆ (CAMPA)1.5 ಕೋಟಿ ರೂ. ನೀಡಿದ್ದೇವೆ. ನಾವು ಅನುಸರಿಸಿದ ನಿಯಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುತ್ತೇವೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಗಂಗಾ ಮೇಲ್ದಂಡೆ ಕಾಲುವೆಯ ಉದ್ದಕ್ಕೂ ಪಶ್ಚಿಮ ಯುಪಿ ಮತ್ತು ಉತ್ತರಾಖಂಡ ಜಿಲ್ಲೆಗಳ ಮೂಲಕ ಸಾಮಾನ್ಯ ರಸ್ತೆಗೆ ಪರ್ಯಾಯವಾಗಿ ಕನ್ವರ್ ಮಾರ್ಗವನ್ನು 2018ರಲ್ಲಿ ಪ್ರಸ್ತಾಪಿಸಲಾಗಿದೆ. 2020ರಲ್ಲಿ, ಸರ್ಕಾರದ ವೆಚ್ಚ ಮತ್ತು ಹಣಕಾಸು ಸಮಿತಿಯು ಯೋಜನೆಗೆ ತನ್ನ ಅನುಮೋದನೆಯನ್ನು ನೀಡಿದೆ.

ಈ ರಸ್ತೆ ಯೋಜನೆಯು 10 ಪ್ರಮುಖ ಸೇತುವೆಗಳು, 27 ಚಿಕ್ಕ ಸೇತುವೆಗಳು ಮತ್ತು ಒಂದು ರೈಲ್ವೆ ಮೇಲ್ಸೇತುವೆಯನ್ನು ಒಳಗೊಂಡಿವೆ. ಗಂಗಾ ಕಾಲುವೆಯ ಮೇಲಿನ ಸೇತುವೆಗಳು ಬಹುತೇಕ 1850ರ ಸುಮಾರಿಗೆ ನಿರ್ಮಿಸಿದ್ದಾಗಿವೆ.

ಇದನ್ನೂ ಓದಿ : ಕೃಷ್ಣ ಜನ್ಮಸ್ಥಾನ-ಶಾಹಿ ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...