Homeಮುಖಪುಟ'ಕನ್ವರ್ ಮಾರ್ಗ ಯೋಜನೆ'ಗೆ 33 ಸಾವಿರಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಯುಪಿ ಸರ್ಕಾರ: ವಿವರಣೆ...

‘ಕನ್ವರ್ ಮಾರ್ಗ ಯೋಜನೆ’ಗೆ 33 ಸಾವಿರಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಯುಪಿ ಸರ್ಕಾರ: ವಿವರಣೆ ಕೇಳಿದ ಎನ್‌ಜಿಟಿ

- Advertisement -
- Advertisement -

ಗಾಝಿಯಾಬಾದ್, ಮೀರತ್ ಮತ್ತು ಮುಝಾಫರ್‌ ನಗರ ವ್ಯಾಪ್ತಿಯ 111 ಕಿ.ಮೀ ‘ಕನ್ವರ್ ಮಾರ್ಗ’ ಯೋಜನೆಗಾಗಿ ಸಂಪೂರ್ಣವಾಗಿ ಬೆಳೆದು ನಿಂತಿರುವ 33,000ಕ್ಕೂ ಹೆಚ್ಚು ಮರಗಳನ್ನು ಕಡಿಯಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್‌ಜಿಟಿ) ಮಾಹಿತಿ ನೀಡಿದೆ.

ಎನ್‌ಜಿಟಿ ಅಧ್ಯಕ್ಷ ಪ್ರಕಾಶ್ ಶ್ರೀವಾಸ್ತವ, ಅರುಣ್ ಕುಮಾರ್ ತ್ಯಾಗಿ ಮತ್ತು ತಜ್ಞ ಸದಸ್ಯ ಎ ಸೆಂಥಿಲ್ ವೇಲ್ ಅವರ ಸಮಿತಿಯು ಮುಂದಿನ ವಿಚಾರಣೆಯ ದಿನಾಂಕ ಜುಲೈ 8ರೊಳಗೆ ಈ ಕುರಿತು ಹೆಚ್ಚಿನ ವಿವರಗಳನ್ನು ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಮೂರು ಜಿಲ್ಲೆಗಳಲ್ಲಿ ಯೋಜನೆಗಾಗಿ 1.1 ಲಕ್ಷ ಮರಗಳು ಮತ್ತು ಗಿಡಗಳನ್ನು ಕಡಿಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿರುವ ಎನ್‌ಜಿಟಿ ಉತ್ತರ ಪ್ರದೇಶದ ಸರ್ಕಾರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಸಚಿವಾಲಯ, ಲೋಕೋಪಯೋಗಿ ಇಲಾಖೆ ಮತ್ತು ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಕಡಿಯಬೇಕಾದ ಮರಗಳ ವಿವರಗಳನ್ನು ಕೇಳಿತ್ತು. ವಿವರಗಳನ್ನು ಸರ್ಕಾರವು ಒದಗಿಸಿದೆ. ಆದರೆ, ಎನ್‌ಜಿಟಿ ಇನ್ನಷ್ಟು ಮಾಹಿತಿ ನೀಡುವಂತೆ ಸೂಚಿಸಿದೆ.

ಹರಿದ್ವಾರದಲ್ಲಿ ಗಂಗಾನದಿಯಿಂದ ನೀರು ಸಂಗ್ರಹಿಸಿ ವಿವಿಧ ನಗರಗಳು ಮತ್ತು ಹಳ್ಳಿಗಳಿಗೆ ಹಿಂದಿರುಗುವ ಯುಪಿ, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮಧ್ಯ ಪ್ರದೇಶದ ಸುಮಾರು 1 ಕೋಟಿ ಕನ್ವರ್ ಭಕ್ತರ ಉಪಯೋಗಕ್ಕೆ ವಿಶೇಷ ‘ಕನ್ವರ್ ಮಾರ್ಗ’ ನಿರ್ಮಿಸಲು ಬಯಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಎನ್‌ಜಿಟಿಗೆ ತಿಳಿಸಿದೆ.

“ಈ ಮಾರ್ಗವನ್ನು ಸಾಮಾನ್ಯ ಜನರು ಮತ್ತು ಭಕ್ತರಿಗಾಗಿ ‘ತುಂಬಾ ಜನನಿಬಿಡ’ ವಿಭಾಗದಲ್ಲಿ ಸೇರಿಸಲಾಗಿದೆ. ಮುಝಾಫರ್‌ನಗರ, ಮೀರತ್ ಮತ್ತು ಗಾಝಿಯಾಬಾದ್ ಈ ಮೂರು ಜಿಲ್ಲೆಗಳ ಒಟ್ಟು 54 ಹಳ್ಳಿಗಳು ಈ ಮಾರ್ಗದಲ್ಲಿ ಬರುತ್ತವೆ. ಶ್ರಾವಣ ಮಾಸದಲ್ಲಿ ಸಂಚಾರಕ್ಕೆ ಸಾಕಷ್ಟು ಅಡ್ಡಿಯಾಗುತ್ತಿದೆ” ಎಂದು ಎನ್‌ಜಿಟಿಗೆ ಹೇಳಿದೆ.

ಯೋಜನೆಗೆ ಸಂಬಂಧಿಸಿದಂತೆ ಎನ್‌ಜಿಟಿ ನೀಡಿದ್ದ ಈ ಹಿಂದಿನ ಆದೇಶದಲ್ಲಿ “ಪರಿಸರ ಮಾನದಂಡಗಳ ಅನುಸರಣೆಗೆ ಸಂಬಂಧಿಸಿದ ಗಣನೀಯ ಸಮಸ್ಯೆಗಳನ್ನು” ಎತ್ತಿತ್ತು.

“ಕನ್ವರ್ ಮಾರ್ಗ ಯೋಜನೆಗೆ ಕಡಿಯುವ ಮರಗಳಿಗೆ ಪರ್ಯಾಯವಾಗಿ ರಾಜ್ಯ ಸರ್ಕಾರವು ಲಲಿತ್‌ಪುರ ಜಿಲ್ಲೆಯಲ್ಲಿ 222 ಹೆಕ್ಟೇರ್‌ಗಳನ್ನು ಅರಣ್ಯೀಕರಣಕ್ಕಾಗಿ ಗುರುತಿಸಿದೆ. ನಾವು ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರಕ್ಕೆ (CAMPA)1.5 ಕೋಟಿ ರೂ. ನೀಡಿದ್ದೇವೆ. ನಾವು ಅನುಸರಿಸಿದ ನಿಯಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುತ್ತೇವೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಗಂಗಾ ಮೇಲ್ದಂಡೆ ಕಾಲುವೆಯ ಉದ್ದಕ್ಕೂ ಪಶ್ಚಿಮ ಯುಪಿ ಮತ್ತು ಉತ್ತರಾಖಂಡ ಜಿಲ್ಲೆಗಳ ಮೂಲಕ ಸಾಮಾನ್ಯ ರಸ್ತೆಗೆ ಪರ್ಯಾಯವಾಗಿ ಕನ್ವರ್ ಮಾರ್ಗವನ್ನು 2018ರಲ್ಲಿ ಪ್ರಸ್ತಾಪಿಸಲಾಗಿದೆ. 2020ರಲ್ಲಿ, ಸರ್ಕಾರದ ವೆಚ್ಚ ಮತ್ತು ಹಣಕಾಸು ಸಮಿತಿಯು ಯೋಜನೆಗೆ ತನ್ನ ಅನುಮೋದನೆಯನ್ನು ನೀಡಿದೆ.

ಈ ರಸ್ತೆ ಯೋಜನೆಯು 10 ಪ್ರಮುಖ ಸೇತುವೆಗಳು, 27 ಚಿಕ್ಕ ಸೇತುವೆಗಳು ಮತ್ತು ಒಂದು ರೈಲ್ವೆ ಮೇಲ್ಸೇತುವೆಯನ್ನು ಒಳಗೊಂಡಿವೆ. ಗಂಗಾ ಕಾಲುವೆಯ ಮೇಲಿನ ಸೇತುವೆಗಳು ಬಹುತೇಕ 1850ರ ಸುಮಾರಿಗೆ ನಿರ್ಮಿಸಿದ್ದಾಗಿವೆ.

ಇದನ್ನೂ ಓದಿ : ಕೃಷ್ಣ ಜನ್ಮಸ್ಥಾನ-ಶಾಹಿ ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...