Homeಮುಖಪುಟ'ಕನ್ವರ್ ಮಾರ್ಗ ಯೋಜನೆ'ಗೆ 33 ಸಾವಿರಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಯುಪಿ ಸರ್ಕಾರ: ವಿವರಣೆ...

‘ಕನ್ವರ್ ಮಾರ್ಗ ಯೋಜನೆ’ಗೆ 33 ಸಾವಿರಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಯುಪಿ ಸರ್ಕಾರ: ವಿವರಣೆ ಕೇಳಿದ ಎನ್‌ಜಿಟಿ

- Advertisement -
- Advertisement -

ಗಾಝಿಯಾಬಾದ್, ಮೀರತ್ ಮತ್ತು ಮುಝಾಫರ್‌ ನಗರ ವ್ಯಾಪ್ತಿಯ 111 ಕಿ.ಮೀ ‘ಕನ್ವರ್ ಮಾರ್ಗ’ ಯೋಜನೆಗಾಗಿ ಸಂಪೂರ್ಣವಾಗಿ ಬೆಳೆದು ನಿಂತಿರುವ 33,000ಕ್ಕೂ ಹೆಚ್ಚು ಮರಗಳನ್ನು ಕಡಿಯಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್‌ಜಿಟಿ) ಮಾಹಿತಿ ನೀಡಿದೆ.

ಎನ್‌ಜಿಟಿ ಅಧ್ಯಕ್ಷ ಪ್ರಕಾಶ್ ಶ್ರೀವಾಸ್ತವ, ಅರುಣ್ ಕುಮಾರ್ ತ್ಯಾಗಿ ಮತ್ತು ತಜ್ಞ ಸದಸ್ಯ ಎ ಸೆಂಥಿಲ್ ವೇಲ್ ಅವರ ಸಮಿತಿಯು ಮುಂದಿನ ವಿಚಾರಣೆಯ ದಿನಾಂಕ ಜುಲೈ 8ರೊಳಗೆ ಈ ಕುರಿತು ಹೆಚ್ಚಿನ ವಿವರಗಳನ್ನು ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಮೂರು ಜಿಲ್ಲೆಗಳಲ್ಲಿ ಯೋಜನೆಗಾಗಿ 1.1 ಲಕ್ಷ ಮರಗಳು ಮತ್ತು ಗಿಡಗಳನ್ನು ಕಡಿಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿರುವ ಎನ್‌ಜಿಟಿ ಉತ್ತರ ಪ್ರದೇಶದ ಸರ್ಕಾರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಸಚಿವಾಲಯ, ಲೋಕೋಪಯೋಗಿ ಇಲಾಖೆ ಮತ್ತು ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಕಡಿಯಬೇಕಾದ ಮರಗಳ ವಿವರಗಳನ್ನು ಕೇಳಿತ್ತು. ವಿವರಗಳನ್ನು ಸರ್ಕಾರವು ಒದಗಿಸಿದೆ. ಆದರೆ, ಎನ್‌ಜಿಟಿ ಇನ್ನಷ್ಟು ಮಾಹಿತಿ ನೀಡುವಂತೆ ಸೂಚಿಸಿದೆ.

ಹರಿದ್ವಾರದಲ್ಲಿ ಗಂಗಾನದಿಯಿಂದ ನೀರು ಸಂಗ್ರಹಿಸಿ ವಿವಿಧ ನಗರಗಳು ಮತ್ತು ಹಳ್ಳಿಗಳಿಗೆ ಹಿಂದಿರುಗುವ ಯುಪಿ, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮಧ್ಯ ಪ್ರದೇಶದ ಸುಮಾರು 1 ಕೋಟಿ ಕನ್ವರ್ ಭಕ್ತರ ಉಪಯೋಗಕ್ಕೆ ವಿಶೇಷ ‘ಕನ್ವರ್ ಮಾರ್ಗ’ ನಿರ್ಮಿಸಲು ಬಯಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಎನ್‌ಜಿಟಿಗೆ ತಿಳಿಸಿದೆ.

“ಈ ಮಾರ್ಗವನ್ನು ಸಾಮಾನ್ಯ ಜನರು ಮತ್ತು ಭಕ್ತರಿಗಾಗಿ ‘ತುಂಬಾ ಜನನಿಬಿಡ’ ವಿಭಾಗದಲ್ಲಿ ಸೇರಿಸಲಾಗಿದೆ. ಮುಝಾಫರ್‌ನಗರ, ಮೀರತ್ ಮತ್ತು ಗಾಝಿಯಾಬಾದ್ ಈ ಮೂರು ಜಿಲ್ಲೆಗಳ ಒಟ್ಟು 54 ಹಳ್ಳಿಗಳು ಈ ಮಾರ್ಗದಲ್ಲಿ ಬರುತ್ತವೆ. ಶ್ರಾವಣ ಮಾಸದಲ್ಲಿ ಸಂಚಾರಕ್ಕೆ ಸಾಕಷ್ಟು ಅಡ್ಡಿಯಾಗುತ್ತಿದೆ” ಎಂದು ಎನ್‌ಜಿಟಿಗೆ ಹೇಳಿದೆ.

ಯೋಜನೆಗೆ ಸಂಬಂಧಿಸಿದಂತೆ ಎನ್‌ಜಿಟಿ ನೀಡಿದ್ದ ಈ ಹಿಂದಿನ ಆದೇಶದಲ್ಲಿ “ಪರಿಸರ ಮಾನದಂಡಗಳ ಅನುಸರಣೆಗೆ ಸಂಬಂಧಿಸಿದ ಗಣನೀಯ ಸಮಸ್ಯೆಗಳನ್ನು” ಎತ್ತಿತ್ತು.

“ಕನ್ವರ್ ಮಾರ್ಗ ಯೋಜನೆಗೆ ಕಡಿಯುವ ಮರಗಳಿಗೆ ಪರ್ಯಾಯವಾಗಿ ರಾಜ್ಯ ಸರ್ಕಾರವು ಲಲಿತ್‌ಪುರ ಜಿಲ್ಲೆಯಲ್ಲಿ 222 ಹೆಕ್ಟೇರ್‌ಗಳನ್ನು ಅರಣ್ಯೀಕರಣಕ್ಕಾಗಿ ಗುರುತಿಸಿದೆ. ನಾವು ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರಕ್ಕೆ (CAMPA)1.5 ಕೋಟಿ ರೂ. ನೀಡಿದ್ದೇವೆ. ನಾವು ಅನುಸರಿಸಿದ ನಿಯಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುತ್ತೇವೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಗಂಗಾ ಮೇಲ್ದಂಡೆ ಕಾಲುವೆಯ ಉದ್ದಕ್ಕೂ ಪಶ್ಚಿಮ ಯುಪಿ ಮತ್ತು ಉತ್ತರಾಖಂಡ ಜಿಲ್ಲೆಗಳ ಮೂಲಕ ಸಾಮಾನ್ಯ ರಸ್ತೆಗೆ ಪರ್ಯಾಯವಾಗಿ ಕನ್ವರ್ ಮಾರ್ಗವನ್ನು 2018ರಲ್ಲಿ ಪ್ರಸ್ತಾಪಿಸಲಾಗಿದೆ. 2020ರಲ್ಲಿ, ಸರ್ಕಾರದ ವೆಚ್ಚ ಮತ್ತು ಹಣಕಾಸು ಸಮಿತಿಯು ಯೋಜನೆಗೆ ತನ್ನ ಅನುಮೋದನೆಯನ್ನು ನೀಡಿದೆ.

ಈ ರಸ್ತೆ ಯೋಜನೆಯು 10 ಪ್ರಮುಖ ಸೇತುವೆಗಳು, 27 ಚಿಕ್ಕ ಸೇತುವೆಗಳು ಮತ್ತು ಒಂದು ರೈಲ್ವೆ ಮೇಲ್ಸೇತುವೆಯನ್ನು ಒಳಗೊಂಡಿವೆ. ಗಂಗಾ ಕಾಲುವೆಯ ಮೇಲಿನ ಸೇತುವೆಗಳು ಬಹುತೇಕ 1850ರ ಸುಮಾರಿಗೆ ನಿರ್ಮಿಸಿದ್ದಾಗಿವೆ.

ಇದನ್ನೂ ಓದಿ : ಕೃಷ್ಣ ಜನ್ಮಸ್ಥಾನ-ಶಾಹಿ ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...