Homeಮುಖಪುಟಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

ಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

- Advertisement -
- Advertisement -

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಜೇವಾರ್ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಸಮಾರಂಭದ ನಡುವೆಯೇ ಟ್ವಿಟರ್‌ನಲ್ಲಿ ಗೋ ಬ್ಯಾಕ್ ಯೋಗಿ (#GoBackYogi) ಟ್ರೆಂಡಿಂಗ್ ಆಗಿದೆ. ಗುಜ್ಜರ್‌ ಸಮುದಾಯದ ಜನರು ಜೇವರ್ ವಿಮಾನ ನಿಲ್ದಾಣವನ್ನು ಸಾಮ್ರಾಟ್ ಮಿಹಿರ್ ಭೋಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಸಲು ಒತ್ತಾಯಿಸುತ್ತಿದ್ದಾರೆ.

ಚಕ್ರವರ್ತಿ ಮಿಹಿರ್ ಭೋಜ್ ಹೆಸರಿನಲ್ಲಿ ‘ಗುಜ್ಜರ್‌’ ಅನ್ನು ತೆಗೆದು ಹಾಕಿದರ ಬಗ್ಗೆ ಗಲಾಟೆ ನಡೆದಿತ್ತು. ಅಷ್ಟೇ ಅಲ್ಲ, ಗುಜ್ಜರ್ ಸಮುದಾಯವು ಪ್ರಧಾನಿ ಮೋದಿಯವರ ಶಿಲಾನ್ಯಾಸ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿತ್ತು.

ಗುರುವಾರ ಬೆಳಗ್ಗೆ 9 ಗಂಟೆಯಿಂದ ಶುರುವಾದ #GoBackYogi ಟ್ವಿಟರ್‌ ಟ್ರೆಂಡ್ ಅಭಿಯಾನದಲ್ಲಿ ಇಲ್ಲಿಯವರೆಗೆ 32 ಸಾವಿರ ಮಂದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ ವ್ಯಂಗ್ಯ

ಗುಜ್ಜರ್‌ ಏಕ್ತಾ ಟೀಮ್ ಟ್ವೀಟ್ ಮಾಡಿ, ಬ್ರಾಹ್ಮಣ, ದಲಿತ, ಗುಜ್ಜರ್‌, ಯಾದವ್ ಒಟ್ಟಾಗಿ ಹಿಂದೂ ಎಂಬ ಹೆಸರಿನಲ್ಲಿ ಯೋಗಿ ಆದಿತ್ಯನಾಥ್‌ಗೆ ಮತ ನೀಡಿದೆವು ಆದರೆ ಕೊನೆಗೆ ಗೆದ್ದದ್ದು ಠಾಕೂರಿಸಂ. ಯೋಗಿ ನಿಮ್ಮ ಸರ್ವಾಧಿಕಾರ ಇನ್ನು ಮುಂದೆ ನಡೆಯುವುದಿಲ್ಲ ಎಂದಿದೆ.

ಢೋಂಗಿ ಬಾಬಾ ಕ್ಷಮೆ ಯಾಚಿಸಿ ಇಲ್ಲದಿದ್ದರೆ ವಾಪಸ್ ಹೋಗಿ, ಗುಜ್ಜರ್‌ ಏಕ್ತಾ ಆವಾಜ್ ತಂಡ ಇಂತಹ ಜಾತಿವಾದಿ ಬೂಟಾಟಿಕೆಗಳನ್ನು ಬಲವಾಗಿ ವಿರೋಧಿಸುತ್ತದೆ ಎಂದು ಗುಜ್ಜರ್‌ ಸಂಘಟನೆ ಟ್ವೀಟ್ ಮಾಡಿದೆ.

ಟ್ವಿಟರ್‌ ಅಭಿಯಾನ ಏಕೆ ನಡೆಯುತ್ತಿದೆ?

ಸೆಪ್ಟೆಂಬರ್ 22 ರಂದು ದಾದ್ರಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಚಕ್ರವರ್ತಿ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಅದರ ರಾಕ್‌ಬೋರ್ಡ್‌ನಲ್ಲಿ ಬರೆದಿದ್ದ ಗುಜ್ಜರ್‌ ಎಂಬ ಪದದ ಮೇಲೆ ಕಪ್ಪು ಬಣ್ಣ ಬಳಿಯಲಾಗಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಅಖಿಲ ಭಾರತೀಯ ಗುಜ್ಜರ್‌ ಪರಿಷತ್ ಸಂಘಟನೆ ಈ ಕುರಿತು ಸಿಎಂ ಯೋಗಿ ಕ್ಷಮೆ ಯಾಚಿಸಬೇಕು ಎಂದು ಸಾರ್ವಜನಿಕವಾಗಿ ಆಗ್ರಹಿಸಿತ್ತು. ಕ್ಷಮೆ ಕೇಳದಿದ್ದರೇ ನವೆಂಬರ್ 25 ರಂದು ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಮತ್ತು ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಪ್ಪು ಬಾವುಟಗಳನ್ನು ಪ್ರದರ್ಶಿಸಲಾಗುವುದು ಎಂದು ಘೋಷಿಸಿದ್ದರು.

ಪ್ರತಿಮೆಯಲ್ಲಿ ಗುಜ್ಜರ್‌ ಹೆಸರಿಗೆ ಕಪ್ಪು ಬಣ್ಣ ಬಳಿದಿರುವುದು‍

————–

ಇದನ್ನೂ ಓದಿ: ಸಿಎಂ ಯೋಗಿ, ಪಿಎಂ ಮೋದಿ ಗಹನ ಚಿಂತನೆಯ ಫೋಟೋ: ವ್ಯತ್ಯಾಸ ಗುರುತಿಸಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...