Homeಮುಖಪುಟಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

ಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

- Advertisement -
- Advertisement -

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಜೇವಾರ್ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಸಮಾರಂಭದ ನಡುವೆಯೇ ಟ್ವಿಟರ್‌ನಲ್ಲಿ ಗೋ ಬ್ಯಾಕ್ ಯೋಗಿ (#GoBackYogi) ಟ್ರೆಂಡಿಂಗ್ ಆಗಿದೆ. ಗುಜ್ಜರ್‌ ಸಮುದಾಯದ ಜನರು ಜೇವರ್ ವಿಮಾನ ನಿಲ್ದಾಣವನ್ನು ಸಾಮ್ರಾಟ್ ಮಿಹಿರ್ ಭೋಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಸಲು ಒತ್ತಾಯಿಸುತ್ತಿದ್ದಾರೆ.

ಚಕ್ರವರ್ತಿ ಮಿಹಿರ್ ಭೋಜ್ ಹೆಸರಿನಲ್ಲಿ ‘ಗುಜ್ಜರ್‌’ ಅನ್ನು ತೆಗೆದು ಹಾಕಿದರ ಬಗ್ಗೆ ಗಲಾಟೆ ನಡೆದಿತ್ತು. ಅಷ್ಟೇ ಅಲ್ಲ, ಗುಜ್ಜರ್ ಸಮುದಾಯವು ಪ್ರಧಾನಿ ಮೋದಿಯವರ ಶಿಲಾನ್ಯಾಸ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿತ್ತು.

ಗುರುವಾರ ಬೆಳಗ್ಗೆ 9 ಗಂಟೆಯಿಂದ ಶುರುವಾದ #GoBackYogi ಟ್ವಿಟರ್‌ ಟ್ರೆಂಡ್ ಅಭಿಯಾನದಲ್ಲಿ ಇಲ್ಲಿಯವರೆಗೆ 32 ಸಾವಿರ ಮಂದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ ವ್ಯಂಗ್ಯ

ಗುಜ್ಜರ್‌ ಏಕ್ತಾ ಟೀಮ್ ಟ್ವೀಟ್ ಮಾಡಿ, ಬ್ರಾಹ್ಮಣ, ದಲಿತ, ಗುಜ್ಜರ್‌, ಯಾದವ್ ಒಟ್ಟಾಗಿ ಹಿಂದೂ ಎಂಬ ಹೆಸರಿನಲ್ಲಿ ಯೋಗಿ ಆದಿತ್ಯನಾಥ್‌ಗೆ ಮತ ನೀಡಿದೆವು ಆದರೆ ಕೊನೆಗೆ ಗೆದ್ದದ್ದು ಠಾಕೂರಿಸಂ. ಯೋಗಿ ನಿಮ್ಮ ಸರ್ವಾಧಿಕಾರ ಇನ್ನು ಮುಂದೆ ನಡೆಯುವುದಿಲ್ಲ ಎಂದಿದೆ.

ಢೋಂಗಿ ಬಾಬಾ ಕ್ಷಮೆ ಯಾಚಿಸಿ ಇಲ್ಲದಿದ್ದರೆ ವಾಪಸ್ ಹೋಗಿ, ಗುಜ್ಜರ್‌ ಏಕ್ತಾ ಆವಾಜ್ ತಂಡ ಇಂತಹ ಜಾತಿವಾದಿ ಬೂಟಾಟಿಕೆಗಳನ್ನು ಬಲವಾಗಿ ವಿರೋಧಿಸುತ್ತದೆ ಎಂದು ಗುಜ್ಜರ್‌ ಸಂಘಟನೆ ಟ್ವೀಟ್ ಮಾಡಿದೆ.

ಟ್ವಿಟರ್‌ ಅಭಿಯಾನ ಏಕೆ ನಡೆಯುತ್ತಿದೆ?

ಸೆಪ್ಟೆಂಬರ್ 22 ರಂದು ದಾದ್ರಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಚಕ್ರವರ್ತಿ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಅದರ ರಾಕ್‌ಬೋರ್ಡ್‌ನಲ್ಲಿ ಬರೆದಿದ್ದ ಗುಜ್ಜರ್‌ ಎಂಬ ಪದದ ಮೇಲೆ ಕಪ್ಪು ಬಣ್ಣ ಬಳಿಯಲಾಗಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಅಖಿಲ ಭಾರತೀಯ ಗುಜ್ಜರ್‌ ಪರಿಷತ್ ಸಂಘಟನೆ ಈ ಕುರಿತು ಸಿಎಂ ಯೋಗಿ ಕ್ಷಮೆ ಯಾಚಿಸಬೇಕು ಎಂದು ಸಾರ್ವಜನಿಕವಾಗಿ ಆಗ್ರಹಿಸಿತ್ತು. ಕ್ಷಮೆ ಕೇಳದಿದ್ದರೇ ನವೆಂಬರ್ 25 ರಂದು ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಮತ್ತು ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಪ್ಪು ಬಾವುಟಗಳನ್ನು ಪ್ರದರ್ಶಿಸಲಾಗುವುದು ಎಂದು ಘೋಷಿಸಿದ್ದರು.

ಪ್ರತಿಮೆಯಲ್ಲಿ ಗುಜ್ಜರ್‌ ಹೆಸರಿಗೆ ಕಪ್ಪು ಬಣ್ಣ ಬಳಿದಿರುವುದು‍

————–

ಇದನ್ನೂ ಓದಿ: ಸಿಎಂ ಯೋಗಿ, ಪಿಎಂ ಮೋದಿ ಗಹನ ಚಿಂತನೆಯ ಫೋಟೋ: ವ್ಯತ್ಯಾಸ ಗುರುತಿಸಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...