Homeಮುಖಪುಟಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

ಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

- Advertisement -
- Advertisement -

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಜೇವಾರ್ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಸಮಾರಂಭದ ನಡುವೆಯೇ ಟ್ವಿಟರ್‌ನಲ್ಲಿ ಗೋ ಬ್ಯಾಕ್ ಯೋಗಿ (#GoBackYogi) ಟ್ರೆಂಡಿಂಗ್ ಆಗಿದೆ. ಗುಜ್ಜರ್‌ ಸಮುದಾಯದ ಜನರು ಜೇವರ್ ವಿಮಾನ ನಿಲ್ದಾಣವನ್ನು ಸಾಮ್ರಾಟ್ ಮಿಹಿರ್ ಭೋಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಸಲು ಒತ್ತಾಯಿಸುತ್ತಿದ್ದಾರೆ.

ಚಕ್ರವರ್ತಿ ಮಿಹಿರ್ ಭೋಜ್ ಹೆಸರಿನಲ್ಲಿ ‘ಗುಜ್ಜರ್‌’ ಅನ್ನು ತೆಗೆದು ಹಾಕಿದರ ಬಗ್ಗೆ ಗಲಾಟೆ ನಡೆದಿತ್ತು. ಅಷ್ಟೇ ಅಲ್ಲ, ಗುಜ್ಜರ್ ಸಮುದಾಯವು ಪ್ರಧಾನಿ ಮೋದಿಯವರ ಶಿಲಾನ್ಯಾಸ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿತ್ತು.

ಗುರುವಾರ ಬೆಳಗ್ಗೆ 9 ಗಂಟೆಯಿಂದ ಶುರುವಾದ #GoBackYogi ಟ್ವಿಟರ್‌ ಟ್ರೆಂಡ್ ಅಭಿಯಾನದಲ್ಲಿ ಇಲ್ಲಿಯವರೆಗೆ 32 ಸಾವಿರ ಮಂದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ ವ್ಯಂಗ್ಯ

ಗುಜ್ಜರ್‌ ಏಕ್ತಾ ಟೀಮ್ ಟ್ವೀಟ್ ಮಾಡಿ, ಬ್ರಾಹ್ಮಣ, ದಲಿತ, ಗುಜ್ಜರ್‌, ಯಾದವ್ ಒಟ್ಟಾಗಿ ಹಿಂದೂ ಎಂಬ ಹೆಸರಿನಲ್ಲಿ ಯೋಗಿ ಆದಿತ್ಯನಾಥ್‌ಗೆ ಮತ ನೀಡಿದೆವು ಆದರೆ ಕೊನೆಗೆ ಗೆದ್ದದ್ದು ಠಾಕೂರಿಸಂ. ಯೋಗಿ ನಿಮ್ಮ ಸರ್ವಾಧಿಕಾರ ಇನ್ನು ಮುಂದೆ ನಡೆಯುವುದಿಲ್ಲ ಎಂದಿದೆ.

ಢೋಂಗಿ ಬಾಬಾ ಕ್ಷಮೆ ಯಾಚಿಸಿ ಇಲ್ಲದಿದ್ದರೆ ವಾಪಸ್ ಹೋಗಿ, ಗುಜ್ಜರ್‌ ಏಕ್ತಾ ಆವಾಜ್ ತಂಡ ಇಂತಹ ಜಾತಿವಾದಿ ಬೂಟಾಟಿಕೆಗಳನ್ನು ಬಲವಾಗಿ ವಿರೋಧಿಸುತ್ತದೆ ಎಂದು ಗುಜ್ಜರ್‌ ಸಂಘಟನೆ ಟ್ವೀಟ್ ಮಾಡಿದೆ.

ಟ್ವಿಟರ್‌ ಅಭಿಯಾನ ಏಕೆ ನಡೆಯುತ್ತಿದೆ?

ಸೆಪ್ಟೆಂಬರ್ 22 ರಂದು ದಾದ್ರಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಚಕ್ರವರ್ತಿ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಅದರ ರಾಕ್‌ಬೋರ್ಡ್‌ನಲ್ಲಿ ಬರೆದಿದ್ದ ಗುಜ್ಜರ್‌ ಎಂಬ ಪದದ ಮೇಲೆ ಕಪ್ಪು ಬಣ್ಣ ಬಳಿಯಲಾಗಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಅಖಿಲ ಭಾರತೀಯ ಗುಜ್ಜರ್‌ ಪರಿಷತ್ ಸಂಘಟನೆ ಈ ಕುರಿತು ಸಿಎಂ ಯೋಗಿ ಕ್ಷಮೆ ಯಾಚಿಸಬೇಕು ಎಂದು ಸಾರ್ವಜನಿಕವಾಗಿ ಆಗ್ರಹಿಸಿತ್ತು. ಕ್ಷಮೆ ಕೇಳದಿದ್ದರೇ ನವೆಂಬರ್ 25 ರಂದು ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಮತ್ತು ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಪ್ಪು ಬಾವುಟಗಳನ್ನು ಪ್ರದರ್ಶಿಸಲಾಗುವುದು ಎಂದು ಘೋಷಿಸಿದ್ದರು.

ಪ್ರತಿಮೆಯಲ್ಲಿ ಗುಜ್ಜರ್‌ ಹೆಸರಿಗೆ ಕಪ್ಪು ಬಣ್ಣ ಬಳಿದಿರುವುದು‍

————–

ಇದನ್ನೂ ಓದಿ: ಸಿಎಂ ಯೋಗಿ, ಪಿಎಂ ಮೋದಿ ಗಹನ ಚಿಂತನೆಯ ಫೋಟೋ: ವ್ಯತ್ಯಾಸ ಗುರುತಿಸಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...