Homeಮುಖಪುಟಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

ಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

- Advertisement -
- Advertisement -

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಜೇವಾರ್ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಸಮಾರಂಭದ ನಡುವೆಯೇ ಟ್ವಿಟರ್‌ನಲ್ಲಿ ಗೋ ಬ್ಯಾಕ್ ಯೋಗಿ (#GoBackYogi) ಟ್ರೆಂಡಿಂಗ್ ಆಗಿದೆ. ಗುಜ್ಜರ್‌ ಸಮುದಾಯದ ಜನರು ಜೇವರ್ ವಿಮಾನ ನಿಲ್ದಾಣವನ್ನು ಸಾಮ್ರಾಟ್ ಮಿಹಿರ್ ಭೋಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಸಲು ಒತ್ತಾಯಿಸುತ್ತಿದ್ದಾರೆ.

ಚಕ್ರವರ್ತಿ ಮಿಹಿರ್ ಭೋಜ್ ಹೆಸರಿನಲ್ಲಿ ‘ಗುಜ್ಜರ್‌’ ಅನ್ನು ತೆಗೆದು ಹಾಕಿದರ ಬಗ್ಗೆ ಗಲಾಟೆ ನಡೆದಿತ್ತು. ಅಷ್ಟೇ ಅಲ್ಲ, ಗುಜ್ಜರ್ ಸಮುದಾಯವು ಪ್ರಧಾನಿ ಮೋದಿಯವರ ಶಿಲಾನ್ಯಾಸ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿತ್ತು.

ಗುರುವಾರ ಬೆಳಗ್ಗೆ 9 ಗಂಟೆಯಿಂದ ಶುರುವಾದ #GoBackYogi ಟ್ವಿಟರ್‌ ಟ್ರೆಂಡ್ ಅಭಿಯಾನದಲ್ಲಿ ಇಲ್ಲಿಯವರೆಗೆ 32 ಸಾವಿರ ಮಂದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ ವ್ಯಂಗ್ಯ

ಗುಜ್ಜರ್‌ ಏಕ್ತಾ ಟೀಮ್ ಟ್ವೀಟ್ ಮಾಡಿ, ಬ್ರಾಹ್ಮಣ, ದಲಿತ, ಗುಜ್ಜರ್‌, ಯಾದವ್ ಒಟ್ಟಾಗಿ ಹಿಂದೂ ಎಂಬ ಹೆಸರಿನಲ್ಲಿ ಯೋಗಿ ಆದಿತ್ಯನಾಥ್‌ಗೆ ಮತ ನೀಡಿದೆವು ಆದರೆ ಕೊನೆಗೆ ಗೆದ್ದದ್ದು ಠಾಕೂರಿಸಂ. ಯೋಗಿ ನಿಮ್ಮ ಸರ್ವಾಧಿಕಾರ ಇನ್ನು ಮುಂದೆ ನಡೆಯುವುದಿಲ್ಲ ಎಂದಿದೆ.

ಢೋಂಗಿ ಬಾಬಾ ಕ್ಷಮೆ ಯಾಚಿಸಿ ಇಲ್ಲದಿದ್ದರೆ ವಾಪಸ್ ಹೋಗಿ, ಗುಜ್ಜರ್‌ ಏಕ್ತಾ ಆವಾಜ್ ತಂಡ ಇಂತಹ ಜಾತಿವಾದಿ ಬೂಟಾಟಿಕೆಗಳನ್ನು ಬಲವಾಗಿ ವಿರೋಧಿಸುತ್ತದೆ ಎಂದು ಗುಜ್ಜರ್‌ ಸಂಘಟನೆ ಟ್ವೀಟ್ ಮಾಡಿದೆ.

ಟ್ವಿಟರ್‌ ಅಭಿಯಾನ ಏಕೆ ನಡೆಯುತ್ತಿದೆ?

ಸೆಪ್ಟೆಂಬರ್ 22 ರಂದು ದಾದ್ರಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಚಕ್ರವರ್ತಿ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಅದರ ರಾಕ್‌ಬೋರ್ಡ್‌ನಲ್ಲಿ ಬರೆದಿದ್ದ ಗುಜ್ಜರ್‌ ಎಂಬ ಪದದ ಮೇಲೆ ಕಪ್ಪು ಬಣ್ಣ ಬಳಿಯಲಾಗಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಅಖಿಲ ಭಾರತೀಯ ಗುಜ್ಜರ್‌ ಪರಿಷತ್ ಸಂಘಟನೆ ಈ ಕುರಿತು ಸಿಎಂ ಯೋಗಿ ಕ್ಷಮೆ ಯಾಚಿಸಬೇಕು ಎಂದು ಸಾರ್ವಜನಿಕವಾಗಿ ಆಗ್ರಹಿಸಿತ್ತು. ಕ್ಷಮೆ ಕೇಳದಿದ್ದರೇ ನವೆಂಬರ್ 25 ರಂದು ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಮತ್ತು ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಪ್ಪು ಬಾವುಟಗಳನ್ನು ಪ್ರದರ್ಶಿಸಲಾಗುವುದು ಎಂದು ಘೋಷಿಸಿದ್ದರು.

ಪ್ರತಿಮೆಯಲ್ಲಿ ಗುಜ್ಜರ್‌ ಹೆಸರಿಗೆ ಕಪ್ಪು ಬಣ್ಣ ಬಳಿದಿರುವುದು‍

————–

ಇದನ್ನೂ ಓದಿ: ಸಿಎಂ ಯೋಗಿ, ಪಿಎಂ ಮೋದಿ ಗಹನ ಚಿಂತನೆಯ ಫೋಟೋ: ವ್ಯತ್ಯಾಸ ಗುರುತಿಸಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...