Homeಮುಖಪುಟಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

ಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

- Advertisement -
- Advertisement -

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಜೇವಾರ್ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಸಮಾರಂಭದ ನಡುವೆಯೇ ಟ್ವಿಟರ್‌ನಲ್ಲಿ ಗೋ ಬ್ಯಾಕ್ ಯೋಗಿ (#GoBackYogi) ಟ್ರೆಂಡಿಂಗ್ ಆಗಿದೆ. ಗುಜ್ಜರ್‌ ಸಮುದಾಯದ ಜನರು ಜೇವರ್ ವಿಮಾನ ನಿಲ್ದಾಣವನ್ನು ಸಾಮ್ರಾಟ್ ಮಿಹಿರ್ ಭೋಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಸಲು ಒತ್ತಾಯಿಸುತ್ತಿದ್ದಾರೆ.

ಚಕ್ರವರ್ತಿ ಮಿಹಿರ್ ಭೋಜ್ ಹೆಸರಿನಲ್ಲಿ ‘ಗುಜ್ಜರ್‌’ ಅನ್ನು ತೆಗೆದು ಹಾಕಿದರ ಬಗ್ಗೆ ಗಲಾಟೆ ನಡೆದಿತ್ತು. ಅಷ್ಟೇ ಅಲ್ಲ, ಗುಜ್ಜರ್ ಸಮುದಾಯವು ಪ್ರಧಾನಿ ಮೋದಿಯವರ ಶಿಲಾನ್ಯಾಸ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿತ್ತು.

ಗುರುವಾರ ಬೆಳಗ್ಗೆ 9 ಗಂಟೆಯಿಂದ ಶುರುವಾದ #GoBackYogi ಟ್ವಿಟರ್‌ ಟ್ರೆಂಡ್ ಅಭಿಯಾನದಲ್ಲಿ ಇಲ್ಲಿಯವರೆಗೆ 32 ಸಾವಿರ ಮಂದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ ವ್ಯಂಗ್ಯ

ಗುಜ್ಜರ್‌ ಏಕ್ತಾ ಟೀಮ್ ಟ್ವೀಟ್ ಮಾಡಿ, ಬ್ರಾಹ್ಮಣ, ದಲಿತ, ಗುಜ್ಜರ್‌, ಯಾದವ್ ಒಟ್ಟಾಗಿ ಹಿಂದೂ ಎಂಬ ಹೆಸರಿನಲ್ಲಿ ಯೋಗಿ ಆದಿತ್ಯನಾಥ್‌ಗೆ ಮತ ನೀಡಿದೆವು ಆದರೆ ಕೊನೆಗೆ ಗೆದ್ದದ್ದು ಠಾಕೂರಿಸಂ. ಯೋಗಿ ನಿಮ್ಮ ಸರ್ವಾಧಿಕಾರ ಇನ್ನು ಮುಂದೆ ನಡೆಯುವುದಿಲ್ಲ ಎಂದಿದೆ.

ಢೋಂಗಿ ಬಾಬಾ ಕ್ಷಮೆ ಯಾಚಿಸಿ ಇಲ್ಲದಿದ್ದರೆ ವಾಪಸ್ ಹೋಗಿ, ಗುಜ್ಜರ್‌ ಏಕ್ತಾ ಆವಾಜ್ ತಂಡ ಇಂತಹ ಜಾತಿವಾದಿ ಬೂಟಾಟಿಕೆಗಳನ್ನು ಬಲವಾಗಿ ವಿರೋಧಿಸುತ್ತದೆ ಎಂದು ಗುಜ್ಜರ್‌ ಸಂಘಟನೆ ಟ್ವೀಟ್ ಮಾಡಿದೆ.

ಟ್ವಿಟರ್‌ ಅಭಿಯಾನ ಏಕೆ ನಡೆಯುತ್ತಿದೆ?

ಸೆಪ್ಟೆಂಬರ್ 22 ರಂದು ದಾದ್ರಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಚಕ್ರವರ್ತಿ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಅದರ ರಾಕ್‌ಬೋರ್ಡ್‌ನಲ್ಲಿ ಬರೆದಿದ್ದ ಗುಜ್ಜರ್‌ ಎಂಬ ಪದದ ಮೇಲೆ ಕಪ್ಪು ಬಣ್ಣ ಬಳಿಯಲಾಗಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಅಖಿಲ ಭಾರತೀಯ ಗುಜ್ಜರ್‌ ಪರಿಷತ್ ಸಂಘಟನೆ ಈ ಕುರಿತು ಸಿಎಂ ಯೋಗಿ ಕ್ಷಮೆ ಯಾಚಿಸಬೇಕು ಎಂದು ಸಾರ್ವಜನಿಕವಾಗಿ ಆಗ್ರಹಿಸಿತ್ತು. ಕ್ಷಮೆ ಕೇಳದಿದ್ದರೇ ನವೆಂಬರ್ 25 ರಂದು ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಮತ್ತು ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಪ್ಪು ಬಾವುಟಗಳನ್ನು ಪ್ರದರ್ಶಿಸಲಾಗುವುದು ಎಂದು ಘೋಷಿಸಿದ್ದರು.

ಪ್ರತಿಮೆಯಲ್ಲಿ ಗುಜ್ಜರ್‌ ಹೆಸರಿಗೆ ಕಪ್ಪು ಬಣ್ಣ ಬಳಿದಿರುವುದು‍

————–

ಇದನ್ನೂ ಓದಿ: ಸಿಎಂ ಯೋಗಿ, ಪಿಎಂ ಮೋದಿ ಗಹನ ಚಿಂತನೆಯ ಫೋಟೋ: ವ್ಯತ್ಯಾಸ ಗುರುತಿಸಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...