Homeಮುಖಪುಟಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

ಗುಜ್ಜರ್‌ ಸಮುದಾಯಕ್ಕೆ ಅವಮಾನ ಆರೋಪ: ಗೋ ಬ್ಯಾಕ್ ಯೋಗಿ ಟ್ವಿಟರ್‌ ಟ್ರೆಂಡ್

- Advertisement -
- Advertisement -

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಜೇವಾರ್ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಸಮಾರಂಭದ ನಡುವೆಯೇ ಟ್ವಿಟರ್‌ನಲ್ಲಿ ಗೋ ಬ್ಯಾಕ್ ಯೋಗಿ (#GoBackYogi) ಟ್ರೆಂಡಿಂಗ್ ಆಗಿದೆ. ಗುಜ್ಜರ್‌ ಸಮುದಾಯದ ಜನರು ಜೇವರ್ ವಿಮಾನ ನಿಲ್ದಾಣವನ್ನು ಸಾಮ್ರಾಟ್ ಮಿಹಿರ್ ಭೋಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಸಲು ಒತ್ತಾಯಿಸುತ್ತಿದ್ದಾರೆ.

ಚಕ್ರವರ್ತಿ ಮಿಹಿರ್ ಭೋಜ್ ಹೆಸರಿನಲ್ಲಿ ‘ಗುಜ್ಜರ್‌’ ಅನ್ನು ತೆಗೆದು ಹಾಕಿದರ ಬಗ್ಗೆ ಗಲಾಟೆ ನಡೆದಿತ್ತು. ಅಷ್ಟೇ ಅಲ್ಲ, ಗುಜ್ಜರ್ ಸಮುದಾಯವು ಪ್ರಧಾನಿ ಮೋದಿಯವರ ಶಿಲಾನ್ಯಾಸ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿತ್ತು.

ಗುರುವಾರ ಬೆಳಗ್ಗೆ 9 ಗಂಟೆಯಿಂದ ಶುರುವಾದ #GoBackYogi ಟ್ವಿಟರ್‌ ಟ್ರೆಂಡ್ ಅಭಿಯಾನದಲ್ಲಿ ಇಲ್ಲಿಯವರೆಗೆ 32 ಸಾವಿರ ಮಂದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ ವ್ಯಂಗ್ಯ

ಗುಜ್ಜರ್‌ ಏಕ್ತಾ ಟೀಮ್ ಟ್ವೀಟ್ ಮಾಡಿ, ಬ್ರಾಹ್ಮಣ, ದಲಿತ, ಗುಜ್ಜರ್‌, ಯಾದವ್ ಒಟ್ಟಾಗಿ ಹಿಂದೂ ಎಂಬ ಹೆಸರಿನಲ್ಲಿ ಯೋಗಿ ಆದಿತ್ಯನಾಥ್‌ಗೆ ಮತ ನೀಡಿದೆವು ಆದರೆ ಕೊನೆಗೆ ಗೆದ್ದದ್ದು ಠಾಕೂರಿಸಂ. ಯೋಗಿ ನಿಮ್ಮ ಸರ್ವಾಧಿಕಾರ ಇನ್ನು ಮುಂದೆ ನಡೆಯುವುದಿಲ್ಲ ಎಂದಿದೆ.

ಢೋಂಗಿ ಬಾಬಾ ಕ್ಷಮೆ ಯಾಚಿಸಿ ಇಲ್ಲದಿದ್ದರೆ ವಾಪಸ್ ಹೋಗಿ, ಗುಜ್ಜರ್‌ ಏಕ್ತಾ ಆವಾಜ್ ತಂಡ ಇಂತಹ ಜಾತಿವಾದಿ ಬೂಟಾಟಿಕೆಗಳನ್ನು ಬಲವಾಗಿ ವಿರೋಧಿಸುತ್ತದೆ ಎಂದು ಗುಜ್ಜರ್‌ ಸಂಘಟನೆ ಟ್ವೀಟ್ ಮಾಡಿದೆ.

ಟ್ವಿಟರ್‌ ಅಭಿಯಾನ ಏಕೆ ನಡೆಯುತ್ತಿದೆ?

ಸೆಪ್ಟೆಂಬರ್ 22 ರಂದು ದಾದ್ರಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಚಕ್ರವರ್ತಿ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಅದರ ರಾಕ್‌ಬೋರ್ಡ್‌ನಲ್ಲಿ ಬರೆದಿದ್ದ ಗುಜ್ಜರ್‌ ಎಂಬ ಪದದ ಮೇಲೆ ಕಪ್ಪು ಬಣ್ಣ ಬಳಿಯಲಾಗಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಅಖಿಲ ಭಾರತೀಯ ಗುಜ್ಜರ್‌ ಪರಿಷತ್ ಸಂಘಟನೆ ಈ ಕುರಿತು ಸಿಎಂ ಯೋಗಿ ಕ್ಷಮೆ ಯಾಚಿಸಬೇಕು ಎಂದು ಸಾರ್ವಜನಿಕವಾಗಿ ಆಗ್ರಹಿಸಿತ್ತು. ಕ್ಷಮೆ ಕೇಳದಿದ್ದರೇ ನವೆಂಬರ್ 25 ರಂದು ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಮತ್ತು ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಪ್ಪು ಬಾವುಟಗಳನ್ನು ಪ್ರದರ್ಶಿಸಲಾಗುವುದು ಎಂದು ಘೋಷಿಸಿದ್ದರು.

ಪ್ರತಿಮೆಯಲ್ಲಿ ಗುಜ್ಜರ್‌ ಹೆಸರಿಗೆ ಕಪ್ಪು ಬಣ್ಣ ಬಳಿದಿರುವುದು‍

————–

ಇದನ್ನೂ ಓದಿ: ಸಿಎಂ ಯೋಗಿ, ಪಿಎಂ ಮೋದಿ ಗಹನ ಚಿಂತನೆಯ ಫೋಟೋ: ವ್ಯತ್ಯಾಸ ಗುರುತಿಸಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...