Homeಮುಖಪುಟಯುಪಿ: ಬ್ರಾಹ್ಮಣರ ಮೇಲೆ ಪ್ರೀತಿಯಿದ್ದರೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಬಿಂಬಿಸಿ - ಬಿಜೆಪಿಗೆ ಕಾಂಗ್ರೆಸ್ ಸವಾಲು

ಯುಪಿ: ಬ್ರಾಹ್ಮಣರ ಮೇಲೆ ಪ್ರೀತಿಯಿದ್ದರೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಬಿಂಬಿಸಿ – ಬಿಜೆಪಿಗೆ ಕಾಂಗ್ರೆಸ್ ಸವಾಲು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬ್ರಾಹ್ಮಣರ ಮತಗಳ ಮೇಲೆ ಕಣ್ಣಿಟ್ಟು ಅವರನ್ನು ಓಲೈಸಲು ಪ್ರಯತ್ನಿಸುತ್ತಿರುವ ಬಿಜೆಪಿ ಮತ್ತು ಇತರ ಪಕ್ಷಗಳನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. “ಬ್ರಾಹ್ಮಣ ಸಮುದಾಯದ ಮೇಲೆ ಇಷ್ಟೊಂದು ಪ್ರೀತಿ ಇದ್ದರೆ ಅವರನ್ನೇ ಯಾಕೆ ಮುಖ್ಯಮಂತ್ರಿಯಾಗಿ ಬಿಂಬಿಸಬಾರದು” ಎಂದು ಶನಿವಾರ ಅದು ಕೇಳಿದೆ.

ಬ್ರಾಹ್ಮಣರನ್ನು ಓಲೈಸಲು ಈ ಪಕ್ಷಗಳು ಎಲ್ಲಾ ರೀತಿಯ ನಾಟಕಗಳನ್ನು ಆಡುತ್ತಿವೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್‌ನ ಮಾಧ್ಯಮ ಸಂಚಾಲಕ ಲಾಲನ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದು, “ಕಾಂಗ್ರೆಸ್ ಉತ್ತರ ಪ್ರದೇಶಕ್ಕೆ ಗರಿಷ್ಠ ಸಂಖ್ಯೆಯ ಬ್ರಾಹ್ಮಣ ಮುಖ್ಯಮಂತ್ರಿಗಳನ್ನು ನೀಡಿದೆ” ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 5 ರಿಂದ ಉತ್ತರಪ್ರದೇಶದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳಲ್ಲಿ “ಉನ್ನತ ವರ್ಗ”ಕ್ಕಾಗಿ ಸರಣಿ ಸಮಾವೇಶಗಳನ್ನು ಆಯೋಜಿಸುವುದಾಗಿ ಬಿಜೆಪಿ ಗುರುವಾರ ಘೋಷಿಸಿತ್ತು. ಈ ಹಿಂದೆ, ಬಹುಜನ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷಗಳು ಕೂಡ ಇದೇ ರೀತಿಯ ಸಮಾವೇಶಗಳನ್ನು ಘೋಷಿಸಿದ್ದವು.

ಇದನ್ನೂ ಓದಿ: ಬ್ರಾಹ್ಮಣ್ಯದ ಉಗಮ ಮತ್ತು ಹೂರಣ: ಅಂದು-ಇಂದು – ಜಿ ಎನ್ ನಾಗರಾಜ್

“ಬಿಜೆಪಿ, ಬಿಎಸ್‌ಪಿ ಮತ್ತು ಎಸ್‌ಪಿಗೆ ಬ್ರಾಹ್ಮಣರ ಮೇಲೆ ತುಂಬಾ ಪ್ರೀತಿ ಇದ್ದರೆ, ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅವರು ಬ್ರಾಹ್ಮಣ ಮುಖವನ್ನು ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾಕೆ ತೋರಿಸುವುದಿಲ್ಲ?” ಎಂದು ಲಾಲನ್‌ ಕುಮಾರ್ ಪ್ರಶ್ನಿಸಿದ್ದಾರೆ.

“ವಾಸ್ತವವೆಂದರೆ, ಕಾಂಗ್ರೆಸ್ ಉತ್ತರ ಪ್ರದೇಶಕ್ಕೆ ಆರು ಬ್ರಾಹ್ಮಣ ಮುಖ್ಯಮಂತ್ರಿಗಳನ್ನು ನೀಡಿದೆ. ಇದು ಯಾವುದೇ ರಾಜಕೀಯ ಪಕ್ಷಗಳು ನೀಡಿರುವುದಕ್ಕಿಂತ ಹೆಚ್ಚು. ಬ್ರಾಹ್ಮಣರನ್ನು ಓಲೈಸಲು ಎಲ್ಲಾ ರೀತಿಯ ನಾಟಕಗಳನ್ನು ಮಾಡುತ್ತಿರುವ ಪಕ್ಷಗಳು ಅವರು ಎಷ್ಟು ರಾಜ್ಯಕ್ಕೆ ಬ್ರಾಹ್ಮಣ ಮುಖ್ಯಮಂತ್ರಿಗಳನ್ನು ನೀಡಿದ್ದಾರೆ ಎಂದು ಹೇಳಬೇಕು”” ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬ್ರಾಹ್ಮಣರು ಗರಿಷ್ಠ ದಬ್ಬಾಳಿಕೆಯನ್ನು ಎದುರಿಸಿದ್ದಾರೆ ಎಂದು ಆರೋಪಿಸಿದ ಲಾಲನ್‌ ಕುಮಾರ್, “ಈಗ ಚುನಾವಣೆ ಹತ್ತಿರವಾಗುತ್ತಿದ್ದು, ಬಿಜೆಪಿ ಪಕ್ಷವು ಸಮುದಾಯವನ್ನು ನೆನಪಿಸಿಕೊಂಡಿದೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಎಲ್ಲರನ್ನೂ ಒಟ್ಟಾಗಿ ಮುನ್ನಡೆಸಿಕೊಂಡು ಹೋಗಲು ಪ್ರಯತ್ನಿಸುತ್ತಿದೆ. ಮುಂದಿನ ವರ್ಷದ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ಆಗ ಮಾತ್ರ ಬ್ರಾಹ್ಮಣರಿಗೆ ನ್ಯಾಯ ಸಿಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬ್ರಾಹ್ಮಣ್ಯದ ವಿವಾದ; ಜ್ಞಾನದ ಹೊತ್ತಿಗೆ ಕಾಯಕದ ಸುತ್ತಿಗೆ: ಡಾ. ಟಿ ಆರ್ ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...