Homeಮುಖಪುಟಯುಪಿ: ಬ್ರಾಹ್ಮಣರ ಮೇಲೆ ಪ್ರೀತಿಯಿದ್ದರೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಬಿಂಬಿಸಿ - ಬಿಜೆಪಿಗೆ ಕಾಂಗ್ರೆಸ್ ಸವಾಲು

ಯುಪಿ: ಬ್ರಾಹ್ಮಣರ ಮೇಲೆ ಪ್ರೀತಿಯಿದ್ದರೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಬಿಂಬಿಸಿ – ಬಿಜೆಪಿಗೆ ಕಾಂಗ್ರೆಸ್ ಸವಾಲು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬ್ರಾಹ್ಮಣರ ಮತಗಳ ಮೇಲೆ ಕಣ್ಣಿಟ್ಟು ಅವರನ್ನು ಓಲೈಸಲು ಪ್ರಯತ್ನಿಸುತ್ತಿರುವ ಬಿಜೆಪಿ ಮತ್ತು ಇತರ ಪಕ್ಷಗಳನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. “ಬ್ರಾಹ್ಮಣ ಸಮುದಾಯದ ಮೇಲೆ ಇಷ್ಟೊಂದು ಪ್ರೀತಿ ಇದ್ದರೆ ಅವರನ್ನೇ ಯಾಕೆ ಮುಖ್ಯಮಂತ್ರಿಯಾಗಿ ಬಿಂಬಿಸಬಾರದು” ಎಂದು ಶನಿವಾರ ಅದು ಕೇಳಿದೆ.

ಬ್ರಾಹ್ಮಣರನ್ನು ಓಲೈಸಲು ಈ ಪಕ್ಷಗಳು ಎಲ್ಲಾ ರೀತಿಯ ನಾಟಕಗಳನ್ನು ಆಡುತ್ತಿವೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್‌ನ ಮಾಧ್ಯಮ ಸಂಚಾಲಕ ಲಾಲನ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದು, “ಕಾಂಗ್ರೆಸ್ ಉತ್ತರ ಪ್ರದೇಶಕ್ಕೆ ಗರಿಷ್ಠ ಸಂಖ್ಯೆಯ ಬ್ರಾಹ್ಮಣ ಮುಖ್ಯಮಂತ್ರಿಗಳನ್ನು ನೀಡಿದೆ” ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 5 ರಿಂದ ಉತ್ತರಪ್ರದೇಶದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳಲ್ಲಿ “ಉನ್ನತ ವರ್ಗ”ಕ್ಕಾಗಿ ಸರಣಿ ಸಮಾವೇಶಗಳನ್ನು ಆಯೋಜಿಸುವುದಾಗಿ ಬಿಜೆಪಿ ಗುರುವಾರ ಘೋಷಿಸಿತ್ತು. ಈ ಹಿಂದೆ, ಬಹುಜನ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷಗಳು ಕೂಡ ಇದೇ ರೀತಿಯ ಸಮಾವೇಶಗಳನ್ನು ಘೋಷಿಸಿದ್ದವು.

ಇದನ್ನೂ ಓದಿ: ಬ್ರಾಹ್ಮಣ್ಯದ ಉಗಮ ಮತ್ತು ಹೂರಣ: ಅಂದು-ಇಂದು – ಜಿ ಎನ್ ನಾಗರಾಜ್

“ಬಿಜೆಪಿ, ಬಿಎಸ್‌ಪಿ ಮತ್ತು ಎಸ್‌ಪಿಗೆ ಬ್ರಾಹ್ಮಣರ ಮೇಲೆ ತುಂಬಾ ಪ್ರೀತಿ ಇದ್ದರೆ, ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅವರು ಬ್ರಾಹ್ಮಣ ಮುಖವನ್ನು ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾಕೆ ತೋರಿಸುವುದಿಲ್ಲ?” ಎಂದು ಲಾಲನ್‌ ಕುಮಾರ್ ಪ್ರಶ್ನಿಸಿದ್ದಾರೆ.

“ವಾಸ್ತವವೆಂದರೆ, ಕಾಂಗ್ರೆಸ್ ಉತ್ತರ ಪ್ರದೇಶಕ್ಕೆ ಆರು ಬ್ರಾಹ್ಮಣ ಮುಖ್ಯಮಂತ್ರಿಗಳನ್ನು ನೀಡಿದೆ. ಇದು ಯಾವುದೇ ರಾಜಕೀಯ ಪಕ್ಷಗಳು ನೀಡಿರುವುದಕ್ಕಿಂತ ಹೆಚ್ಚು. ಬ್ರಾಹ್ಮಣರನ್ನು ಓಲೈಸಲು ಎಲ್ಲಾ ರೀತಿಯ ನಾಟಕಗಳನ್ನು ಮಾಡುತ್ತಿರುವ ಪಕ್ಷಗಳು ಅವರು ಎಷ್ಟು ರಾಜ್ಯಕ್ಕೆ ಬ್ರಾಹ್ಮಣ ಮುಖ್ಯಮಂತ್ರಿಗಳನ್ನು ನೀಡಿದ್ದಾರೆ ಎಂದು ಹೇಳಬೇಕು”” ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬ್ರಾಹ್ಮಣರು ಗರಿಷ್ಠ ದಬ್ಬಾಳಿಕೆಯನ್ನು ಎದುರಿಸಿದ್ದಾರೆ ಎಂದು ಆರೋಪಿಸಿದ ಲಾಲನ್‌ ಕುಮಾರ್, “ಈಗ ಚುನಾವಣೆ ಹತ್ತಿರವಾಗುತ್ತಿದ್ದು, ಬಿಜೆಪಿ ಪಕ್ಷವು ಸಮುದಾಯವನ್ನು ನೆನಪಿಸಿಕೊಂಡಿದೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಎಲ್ಲರನ್ನೂ ಒಟ್ಟಾಗಿ ಮುನ್ನಡೆಸಿಕೊಂಡು ಹೋಗಲು ಪ್ರಯತ್ನಿಸುತ್ತಿದೆ. ಮುಂದಿನ ವರ್ಷದ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ಆಗ ಮಾತ್ರ ಬ್ರಾಹ್ಮಣರಿಗೆ ನ್ಯಾಯ ಸಿಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬ್ರಾಹ್ಮಣ್ಯದ ವಿವಾದ; ಜ್ಞಾನದ ಹೊತ್ತಿಗೆ ಕಾಯಕದ ಸುತ್ತಿಗೆ: ಡಾ. ಟಿ ಆರ್ ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...