Homeಮುಖಪುಟಯುಪಿ: ಬ್ರಾಹ್ಮಣರ ಮೇಲೆ ಪ್ರೀತಿಯಿದ್ದರೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಬಿಂಬಿಸಿ - ಬಿಜೆಪಿಗೆ ಕಾಂಗ್ರೆಸ್ ಸವಾಲು

ಯುಪಿ: ಬ್ರಾಹ್ಮಣರ ಮೇಲೆ ಪ್ರೀತಿಯಿದ್ದರೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಬಿಂಬಿಸಿ – ಬಿಜೆಪಿಗೆ ಕಾಂಗ್ರೆಸ್ ಸವಾಲು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬ್ರಾಹ್ಮಣರ ಮತಗಳ ಮೇಲೆ ಕಣ್ಣಿಟ್ಟು ಅವರನ್ನು ಓಲೈಸಲು ಪ್ರಯತ್ನಿಸುತ್ತಿರುವ ಬಿಜೆಪಿ ಮತ್ತು ಇತರ ಪಕ್ಷಗಳನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. “ಬ್ರಾಹ್ಮಣ ಸಮುದಾಯದ ಮೇಲೆ ಇಷ್ಟೊಂದು ಪ್ರೀತಿ ಇದ್ದರೆ ಅವರನ್ನೇ ಯಾಕೆ ಮುಖ್ಯಮಂತ್ರಿಯಾಗಿ ಬಿಂಬಿಸಬಾರದು” ಎಂದು ಶನಿವಾರ ಅದು ಕೇಳಿದೆ.

ಬ್ರಾಹ್ಮಣರನ್ನು ಓಲೈಸಲು ಈ ಪಕ್ಷಗಳು ಎಲ್ಲಾ ರೀತಿಯ ನಾಟಕಗಳನ್ನು ಆಡುತ್ತಿವೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್‌ನ ಮಾಧ್ಯಮ ಸಂಚಾಲಕ ಲಾಲನ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದು, “ಕಾಂಗ್ರೆಸ್ ಉತ್ತರ ಪ್ರದೇಶಕ್ಕೆ ಗರಿಷ್ಠ ಸಂಖ್ಯೆಯ ಬ್ರಾಹ್ಮಣ ಮುಖ್ಯಮಂತ್ರಿಗಳನ್ನು ನೀಡಿದೆ” ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 5 ರಿಂದ ಉತ್ತರಪ್ರದೇಶದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳಲ್ಲಿ “ಉನ್ನತ ವರ್ಗ”ಕ್ಕಾಗಿ ಸರಣಿ ಸಮಾವೇಶಗಳನ್ನು ಆಯೋಜಿಸುವುದಾಗಿ ಬಿಜೆಪಿ ಗುರುವಾರ ಘೋಷಿಸಿತ್ತು. ಈ ಹಿಂದೆ, ಬಹುಜನ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷಗಳು ಕೂಡ ಇದೇ ರೀತಿಯ ಸಮಾವೇಶಗಳನ್ನು ಘೋಷಿಸಿದ್ದವು.

ಇದನ್ನೂ ಓದಿ: ಬ್ರಾಹ್ಮಣ್ಯದ ಉಗಮ ಮತ್ತು ಹೂರಣ: ಅಂದು-ಇಂದು – ಜಿ ಎನ್ ನಾಗರಾಜ್

“ಬಿಜೆಪಿ, ಬಿಎಸ್‌ಪಿ ಮತ್ತು ಎಸ್‌ಪಿಗೆ ಬ್ರಾಹ್ಮಣರ ಮೇಲೆ ತುಂಬಾ ಪ್ರೀತಿ ಇದ್ದರೆ, ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅವರು ಬ್ರಾಹ್ಮಣ ಮುಖವನ್ನು ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾಕೆ ತೋರಿಸುವುದಿಲ್ಲ?” ಎಂದು ಲಾಲನ್‌ ಕುಮಾರ್ ಪ್ರಶ್ನಿಸಿದ್ದಾರೆ.

“ವಾಸ್ತವವೆಂದರೆ, ಕಾಂಗ್ರೆಸ್ ಉತ್ತರ ಪ್ರದೇಶಕ್ಕೆ ಆರು ಬ್ರಾಹ್ಮಣ ಮುಖ್ಯಮಂತ್ರಿಗಳನ್ನು ನೀಡಿದೆ. ಇದು ಯಾವುದೇ ರಾಜಕೀಯ ಪಕ್ಷಗಳು ನೀಡಿರುವುದಕ್ಕಿಂತ ಹೆಚ್ಚು. ಬ್ರಾಹ್ಮಣರನ್ನು ಓಲೈಸಲು ಎಲ್ಲಾ ರೀತಿಯ ನಾಟಕಗಳನ್ನು ಮಾಡುತ್ತಿರುವ ಪಕ್ಷಗಳು ಅವರು ಎಷ್ಟು ರಾಜ್ಯಕ್ಕೆ ಬ್ರಾಹ್ಮಣ ಮುಖ್ಯಮಂತ್ರಿಗಳನ್ನು ನೀಡಿದ್ದಾರೆ ಎಂದು ಹೇಳಬೇಕು”” ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬ್ರಾಹ್ಮಣರು ಗರಿಷ್ಠ ದಬ್ಬಾಳಿಕೆಯನ್ನು ಎದುರಿಸಿದ್ದಾರೆ ಎಂದು ಆರೋಪಿಸಿದ ಲಾಲನ್‌ ಕುಮಾರ್, “ಈಗ ಚುನಾವಣೆ ಹತ್ತಿರವಾಗುತ್ತಿದ್ದು, ಬಿಜೆಪಿ ಪಕ್ಷವು ಸಮುದಾಯವನ್ನು ನೆನಪಿಸಿಕೊಂಡಿದೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಎಲ್ಲರನ್ನೂ ಒಟ್ಟಾಗಿ ಮುನ್ನಡೆಸಿಕೊಂಡು ಹೋಗಲು ಪ್ರಯತ್ನಿಸುತ್ತಿದೆ. ಮುಂದಿನ ವರ್ಷದ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ಆಗ ಮಾತ್ರ ಬ್ರಾಹ್ಮಣರಿಗೆ ನ್ಯಾಯ ಸಿಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬ್ರಾಹ್ಮಣ್ಯದ ವಿವಾದ; ಜ್ಞಾನದ ಹೊತ್ತಿಗೆ ಕಾಯಕದ ಸುತ್ತಿಗೆ: ಡಾ. ಟಿ ಆರ್ ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...