Homeಮುಖಪುಟ2020 ರಲ್ಲಿ ಅತಿ ಹೆಚ್ಚು ಅಪಹರಣ ಮತ್ತು ಕೊಲೆ ನಡೆದ ರಾಜ್ಯ ಯುಪಿ - NCRB

2020 ರಲ್ಲಿ ಅತಿ ಹೆಚ್ಚು ಅಪಹರಣ ಮತ್ತು ಕೊಲೆ ನಡೆದ ರಾಜ್ಯ ಯುಪಿ – NCRB

- Advertisement -
- Advertisement -

ಬುಧವಾರ ಬಿಡುಗಡೆಯಾದ 2020 ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB)ದ ದತ್ತಾಂಶಗಳ ಪ್ರಕಾರ, ಕಳೆದ ವರ್ಷ ವರದಿಯಾದ ಕೊಲೆ, ಅಪಹರಣಗಳ ಪ್ರಕರಣಗಳಲ್ಲಿ ಉತ್ತರ ಪ್ರದೇಶವು ದೇಶದ ಎಲ್ಲಾ ರಾಜ್ಯಗಳಿಗಿಂತ ಅಗ್ರಸ್ಥಾನದಲ್ಲಿದೆ ಎಂದು ತಿಳಿದು ಬಂದಿದೆ. 2020 ರಲ್ಲಿ ಉತ್ತರ ಪ್ರದೇಶದಲ್ಲಿ ಗರಿಷ್ಠ 3,779 ಕೊಲೆ ಪ್ರಕರಣಗಳು, 12,913 ಅಪಹರಣ ಪ್ರಕರಣಗಳು ದಾಖಲಾಗಿವೆ ಎಂದು NCRB ದಾಖಲೆ ಹೇಳಿದೆ.

ಬಿಹಾರದಲ್ಲಿ 3,150 ಕೊಲೆ ಪ್ರಕರಣಗಳನ್ನು ವರದಿಯಾಗಿದ್ದು ಅದು ಎರಡನೆ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 2,163 ಕೊಲೆ ಪ್ರಕರಣಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು, ಮಧ್ಯಪ್ರದೇಶದಲ್ಲಿ 2,101 ಮತ್ತು ಪಶ್ಚಿಮ ಬಂಗಾಳ 1,948 ಕ್ರಮವಾಗಿ ನಾಲ್ಕನೇ ಮತ್ತು ಐದನೆ ಸ್ಥಾನದಲ್ಲಿದೆ.

ಇದನ್ನೂ ಓದಿ: IISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ 9,309 ಪ್ರಕರಣಗಳೊಂದಿಗೆ ಪಶ್ಚಿಮ ಬಂಗಾಳ ಎರಡನೇ ಸ್ಥಾನದಲ್ಲಿದೆ ಎಂದು NCRB ಅಂಕಿಅಂಶಗಳು ಹೇಳಿವೆ. ಮಹಾರಾಷ್ಟ್ರದಲ್ಲಿ 8,103, ಬಿಹಾರದಲ್ಲಿ 7,889 ಮತ್ತು ಮಧ್ಯಪ್ರದೇಶದಲ್ಲಿ 7,320 ಪ್ರಕರಣಗಳೊಂದಿಗೆ ಮೂರನೇ, ನಾಲ್ಕನೇ ಮತ್ತು ಐದನೇ ಸ್ಥಾನದಲ್ಲಿದೆ.

ದೇಶದಲ್ಲಿ 2020 ರಲ್ಲಿ ದೈನಂದಿನವಾಗಿ ಸರಾಸರಿ 80 ಕೊಲೆಗಳನ್ನು ವರದಿಯಾಗಿದ್ದು, ಒಂದು ವರ್ಷದಲ್ಲಿ ಒಟ್ಟು 29,193 ಕೊಲೆಗಳು ಸಂಭವಿಸಿವೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ 1% ಹೆಚ್ಚಾಗಿದೆ. 2019 ರಲ್ಲಿ ಒಟ್ಟು 28,915 ಕೊಲೆಗಳು ದೇಶದಲ್ಲಿ ವರದಿಯಾಗದ್ದವು.

ಇದನ್ನೂ ಓದಿ: ಹತ್ರಾಸ್ ಪ್ರಕರಣ ತನಿಖೆ: CBI ತಂಡದಲ್ಲಿ SC/ST/OBC ಸಮುದಾಯದವರಿಲ್ಲ- ಚಂದ್ರಶೇಖರ್ ಆಜಾದ್

SC/ST ಗಳ ವಿರುದ್ಧದ ಅಪರಾಧಗಳು 9% ಹೆಚ್ಚಳ

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬುಧವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಪರಿಶಿಷ್ಟ ಜಾತಿಗಳ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿರುದ್ಧದ ಅಪರಾಧಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ 2020 ರಲ್ಲಿ ಕ್ರಮವಾಗಿ 9.4% ಮತ್ತು 9.3% ರಷ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ. ಆದರೆ ವರದಿಯು ಮಹಿಳೆಯರ ವಿರುದ್ಧದ ಅಪರಾಧಗಳು 8.3% ರಷ್ಟು ಇಳಿಮುಖವಾಗಿದೆ ತಿಳಿಸಿದೆ.

ಕಳೆದ ವರ್ಷ ಒಟ್ಟು 50,291 ಅಪರಾಧಗಳು ಎಸ್ಸಿಗಳ ವಿರುದ್ಧ ನಡೆದಿದೆ ಎಂದು ದಾಖಲಾಗಿದೆ. 2019 ರಲ್ಲಿ ಈ ಸಂಖ್ಯೆ 45,961 ಆಗಿತ್ತು. ಈ ಮಧ್ಯೆ, 2020 ರಲ್ಲಿ ST ಗಳ ವಿರುದ್ಧ 8,272 ಅಪರಾಧಗಳು ನಡೆದಿದ್ದು, 2019 ರಲ್ಲಿ ಈ ಸಂಖ್ಯೆ 7,570 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: SC/ST ಗಳ ವಿರುದ್ಧದ ಅಪರಾಧಗಳು 2020 ರಲ್ಲಿ 9% ಹೆಚ್ಚಳ – NCRB ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...