Homeಮುಖಪುಟಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

ಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲಾ ನ್ಯಾಯಾಲಯವು 14ನೇ ಶತಮಾನದ ಐತಿಹಾಸಿಕ ಅಟಾಲಾ ಮಸೀದಿಯ ಸಮೀಕ್ಷೆಗೆ ಆದೇಶಿಸಲು ಸೋಮವಾರ (ಡಿ.16) ನಿರಾಕರಿಸಿದೆ.

ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ನೀಡದಂತೆ ಸೂಚಿಸಿದೆ. ಈ ಹಿನ್ನೆಲೆ, ಜೌನ್‌ಪುರ ಜಿಲ್ಲಾ ನ್ಯಾಯಾಲಯ ಮಸೀದಿಯ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ ಎಂದು ವರದಿಯಾಗಿದೆ.

‘ಸ್ವರಾಜ್ ವಾಹಿನಿ ಅಸೋಸಿಯೇಷನ್‌’ ಎಂಬ ಹಿಂದುತ್ವ ಸಂಘಟನೆ ಮತ್ತು ಸಂತೋಷ್ ಕುಮಾರ್ ಮಿಶ್ರಾ ಎಂಬವರು ಪುರಾತನ ಮಸೀದಿಯನ್ನು ‘ಅಟಾಲಾ ದೇವಿ ಮಂದಿರ’ ಎಂದು ಘೋಷಿಸಲು ಕೋರಿದ್ದರು. ಸನಾತನದ ಧರ್ಮದ ಅನುಯಾಯಿಗಳು ಅಲ್ಲಿ ಪೂಜೆ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿದ್ದರು.

ಮಸೀದಿಯನ್ನು ಮಂದಿರ ಎಂದು ಘೋಷಿಸುವಂತೆ ಕೋರಿ ಈ ಹಿಂದೆ ಹಿಂದುತ್ವ ಸಂಘಟನೆಗಳು ಸಲ್ಲಿಸಿರುವ ಬಹುತೇಕ ಅರ್ಜಿಗಳನ್ನು ವಿಚಾರಣೆ ನಡೆಸಿರುವ ದೇಶದ ವಿವಿಧ ನ್ಯಾಯಾಲಯಗಳು, ಮಸೀದಿಗಳ ಸಮೀಕ್ಷೆಗೆ ಆದೇಶಿಸಿವೆ. ಡಿಸೆಂಬರ್ 12ರ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ.

ಜೌನ್‌ಪುರ ಜಿಲ್ಲಾ ನ್ಯಾಯಾಲಯದ ಸಿವಿಲ್ ಜಡ್ಜ್ (ಜೆಡಿ) ಸುಧಾ ಶರ್ಮಾ ಅವರು ಪ್ರಕರಣ ಮುಂದಿನ ವಿಚಾರಣೆಯನ್ನು 2025ರ ಮಾರ್ಚ್ 2ಕ್ಕೆ ಮುಂದೂಡಿದ್ದಾರೆ. ಇದನ್ನೂ 12 ದಿನಗಳ ಮುಂಚೆ ಆರಾಧನಾ ಸ್ಥಳಗಳ ಕಾಯ್ದೆ-1991ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಬಾಬರಿ ಮಸೀದಿಯ ಜಾಗವನ್ನು ರಾಮಮಂದಿರಕ್ಕೆ ಬಿಟ್ಟುಕೊಟ್ಟು ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕ ದೇಶದಲ್ಲಿ ಮಸೀದಿಯಡಿ ಮಂದಿರ ಹುಡುಕುವ ಪರಿಪಾಠ ಹೆಚ್ಚಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಮಥುರಾದ ಶಾಹಿ ಈದ್ಗಾ-ಕೃಷ್ಣ ಜನ್ಮಭೂಮಿ, ವಾರಣಾಸಿಯ ಜ್ಞಾನವಾಪಿ, ಸಂಭಾಲ್‌ನ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಶರೀಫ್ ಸೇರಿದಂತೆ ವಿವಿಧ ಮಸೀದಿ ದರ್ಗಾಗಳನ್ನು ದೇವಸ್ಥಾನವೆಂದು ಘೋಷಿಸಲು ಕೋರಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ನ್ಯಾಯಾಲಯಗಳು ಸಮೀಕ್ಷೆಗೆ ಆದೇಶಿಸಿದೆ.

1991ರ ಆರಾಧನಾ ಸ್ಥಳಗಳ ಕಾಯ್ದೆ ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಆರಾಧನಾ ಸ್ಥಳಗಳು ಹೇಗಿತ್ತೋ, ಅದೇ ಸ್ವರೂಪದಲ್ಲಿ ಮುಂದುವರೆಸಲು ಹೇಳುತ್ತದೆ. ಆದರೆ, ನ್ಯಾಯಾಲಯದ ಸಮೀಕ್ಷೆ ಆದೇಶಗಳು ಈ ಕಾನೂನಿಗೆ ವಿರುದ್ದವಾಗಿದೆ. ಈ ಕಳವಳಕಾರಿ ಬೆಳವಣಿಗೆಯ ವಿರುದ್ದ ಹಲವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಗಳ ಸಮೀಕ್ಷೆಗೆ ಆದೇಶಿಸುವುದಕ್ಕೆ ಮಧ್ಯಂತರ ತಡೆ ನೀಡಿದೆ. ಆರಾಧನಾ ಸ್ಥಳಗಳ ಕಾಯ್ದೆಯನ್ನು ಪಾಲಿಸುವಂತೆ ಕೆಳ ನ್ಯಾಯಾಲಯಗಳಿಗೆ ಸೂಚಿಸಿದೆ. ಡಿಸೆಂಬರ್ 12ರಂದು ನೀಡಿರುವ ಈ ಆದೇಶ ಅತ್ಯಂತ ಮಹತ್ವದ್ದಾಗಿದೆ.

ಮತ್ತೊಂದೆಡೆ ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿಯೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿವೆ. ಅದು ಫೆಬ್ರವರಿಯಲ್ಲಿ ವಿಚಾರಣೆಗೆ ಬರಲಿದೆ.

ಇದನ್ನೂ ಓದಿ : ಪರ್ಭಾನಿ ಹಿಂಸಾಚಾರ: ಪೊಲೀಸ್ ಚಿತ್ರಹಿಂಸೆಯೇ ಕಾನೂನು ವಿದ್ಯಾರ್ಥಿಯ ಸಾವಿಗೆ ಕಾರಣ; ದೃಢಪಡಿಸಿದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...