Homeಮುಖಪುಟಕಾಸ್‌ಗಂಜ್ ಲಾಕಪ್‌ ಡೆತ್: 2ನೇ ಮರಣೋತ್ತರ ಪರೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

ಕಾಸ್‌ಗಂಜ್ ಲಾಕಪ್‌ ಡೆತ್: 2ನೇ ಮರಣೋತ್ತರ ಪರೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

- Advertisement -
- Advertisement -

ಕಳೆದ ನವೆಂಬರ್ 9 ರಂದು ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ 22 ವರ್ಷದ ಅಲ್ತಾಫ್ ಅವರ ಮೃತದೇಹವನ್ನು ಹೊರತೆಗೆಯಲು ಮತ್ತು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (AIIMS) ಎರಡನೇ ಮರಣೋತ್ತರ ಪರೀಕ್ಷೆಗೆ ಕಳುಹಿಸುವಂತೆ ಅಲಹಾಬಾದ್ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

ಗುರುವಾರ ನ್ಯಾಯಮೂರ್ತಿಗಳಾದ ಅಂಜನಿ ಕುಮಾರ್ ಮಿಶ್ರಾ ಮತ್ತು ದೀಪಕ್ ವರ್ಮಾ ಅವರ ಪೀಠ ನೀಡಿದ ಆದೇಶದಲ್ಲಿ ಎರಡನೇ ಮರಣೋತ್ತರ ಪರೀಕ್ಷೆಯನ್ನು ಎಐಐಎಂಎಸ್ ನಿರ್ದೇಶಕರು ರಚಿಸಿದ ವೈದ್ಯರ ತಂಡ ನಡೆಸುತ್ತದೆ ಎಂದು ತಿಳಿಸಿದೆ.

ಯುವಕ ಅಲ್ತಾಫ್‌ನ ವಿರುದ್ಧ ಅಪ್ರಾಪ್ತ ಹಿಂದೂ ಬಾಲಕಿಯನ್ನು ಅಪಹರಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ತಾಫ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. 22 ವರ್ಷದ ಯುವಕ ಮಂಗಳವಾರ (ನ. 9) ರಂದು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಯುವಕ ಶೌಚಾಲಯದ ಎರಡು ಅಡಿ ಎತ್ತರದ ಪೈಲಿನ ನಲ್ಲಿಗೆ ತನ್ನ ಜಾಕೆಟ್‌ನ ಹುಡ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಆದರೆ, ಪೊಲೀಸರು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಕರ್ತವ್ಯ ನಿರತ ಸಿಬ್ಬಂದಿಯೇ ಆತನನ್ನು ಕೊಂದಿದ್ದಾರೆ ಎಂದು ಮೃತನ ಕುಟುಂಬ ಆರೋಪಿಸಿತ್ತು.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

“ಮೃತ ಅಲ್ತಾಫ್ ಅವರ ಮೃತದೇಹವನ್ನು ಕಾಸ್‌ಗಂಜ್ ಹಿರಿಯ ಪೊಲೀಸ್ ಅಧೀಕ್ಷಕರು ಅಥವಾ ಪೊಲೀಸ್ ಅಧೀಕ್ಷಕರ ಸಮ್ಮುಖದಲ್ಲಿ ತಕ್ಷಣವೇ ಹೊರತೆಗೆಯಬೇಕು ಎಂದು ನಾವು ಆದೇಶಿಸಿದ್ದೇವೆ. ಹೊರತೆಗೆದ ನಂತರ ಮೃತದೇಹವನ್ನು ಮೊಹರು ಮಾಡಲಾಗುವುದು. ಜೊತೆಗೆ ತಕ್ಷಣವೇ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ಗೆ ಸಾಗಿಸಲಾಗುತ್ತದೆ, ಅಲ್ಲಿ ನಿರ್ದೇಶಕರು ರಚಿಸುವ ವೈದ್ಯರ ತಂಡದ ಸಮ್ಮುಖದಲ್ಲಿ ಹೊರತೆಗೆದ ದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಬೇಕು” ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ.

ಅರ್ಜಿದಾರರ ಪರ ವಕೀಲರಾದ ಅಲಿ ಕಂಬರ್ ಜೈದಿ ಮತ್ತು ಮೊಹಮ್ಮದ್ ಡ್ಯಾನಿಶ್, ಅಲ್ತಾಫ್ ಅವರ ಮೃತದೇಹವನ್ನು ಹೊರತೆಗೆಯಬೇಕು ಮತ್ತು ಹೊಸದಾಗಿ ಮರಣೋತ್ತರ ಪರೀಕ್ಷೆಯನ್ನು ನವದೆಹಲಿಯ ಏಮ್ಸ್‌ನಲ್ಲಿ ನಡೆಸಬೇಕು ಎಂದು ಕೋರಿದ್ದರು. ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸುವ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮನೀಶ್ ಗೋಯೆಲ್ ಅವರು ಈ ಮನವಿಗೆ ವಿರೋಧಿಸಲಿಲ್ಲ.

“ಪರೀಕ್ಷೆಯ ವಿವಿಧ ಹಂತಗಳನ್ನು ಹೆಚ್ಚಿನ ರೆಸಲ್ಯೂಶನ್‌ನ ಸ್ಟಿಲ್ ಛಾಯಾಚಿತ್ರಗಳನ್ನು ಸಹ ತೆಗೆದುಕೊಂಡು ಸಂರಕ್ಷಿಸಬೇಕು. ಮರಣೋತ್ತರ ಪರೀಕ್ಷೆಯ ವರದಿ, ವಿಡಿಯೊ ದೃಶ್ಯಾವಳಿ ಮತ್ತು ಛಾಯಾಚಿತ್ರವನ್ನು ಮೂರು ಪ್ರತಿಗಳಲ್ಲಿ ಸಿದ್ಧಪಡಿಸಬೇಕು. ಆದೇಶವನ್ನು ಅಂಗೀಕರಿಸಿದ 10 ದಿನಗಳ ಅವಧಿಯಲ್ಲಿ ಇದೆಲ್ಲಾ ಪೂರ್ಣಗೊಳಿಸಬೇಕು” ಎಂದು ನ್ಯಾಯಾಲಯ ಆದೇಶಿಸಿದೆ.

ದೇಶದಲ್ಲಿ ಹೆಚ್ಚು ಚರ್ಚೆಗೆ ಕಾರಣವಾಗಿದ್ದ ಕಾಸ್‌ಗಂಜ್ ಲಾಕಪ್ ಡೆತ್ ಪ್ರಕರಣದ ಕುರಿತು, ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಂದ ವರದಿ ಕೇಳಿತ್ತು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೃತರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಹಲವು ಒತ್ತಡಗಳ ಬಳಿಕ ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...