Homeಮುಖಪುಟಕಾಸ್‌ಗಂಜ್ ಲಾಕಪ್‌ ಡೆತ್: 2ನೇ ಮರಣೋತ್ತರ ಪರೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

ಕಾಸ್‌ಗಂಜ್ ಲಾಕಪ್‌ ಡೆತ್: 2ನೇ ಮರಣೋತ್ತರ ಪರೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

- Advertisement -
- Advertisement -

ಕಳೆದ ನವೆಂಬರ್ 9 ರಂದು ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ 22 ವರ್ಷದ ಅಲ್ತಾಫ್ ಅವರ ಮೃತದೇಹವನ್ನು ಹೊರತೆಗೆಯಲು ಮತ್ತು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (AIIMS) ಎರಡನೇ ಮರಣೋತ್ತರ ಪರೀಕ್ಷೆಗೆ ಕಳುಹಿಸುವಂತೆ ಅಲಹಾಬಾದ್ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

ಗುರುವಾರ ನ್ಯಾಯಮೂರ್ತಿಗಳಾದ ಅಂಜನಿ ಕುಮಾರ್ ಮಿಶ್ರಾ ಮತ್ತು ದೀಪಕ್ ವರ್ಮಾ ಅವರ ಪೀಠ ನೀಡಿದ ಆದೇಶದಲ್ಲಿ ಎರಡನೇ ಮರಣೋತ್ತರ ಪರೀಕ್ಷೆಯನ್ನು ಎಐಐಎಂಎಸ್ ನಿರ್ದೇಶಕರು ರಚಿಸಿದ ವೈದ್ಯರ ತಂಡ ನಡೆಸುತ್ತದೆ ಎಂದು ತಿಳಿಸಿದೆ.

ಯುವಕ ಅಲ್ತಾಫ್‌ನ ವಿರುದ್ಧ ಅಪ್ರಾಪ್ತ ಹಿಂದೂ ಬಾಲಕಿಯನ್ನು ಅಪಹರಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ತಾಫ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. 22 ವರ್ಷದ ಯುವಕ ಮಂಗಳವಾರ (ನ. 9) ರಂದು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಯುವಕ ಶೌಚಾಲಯದ ಎರಡು ಅಡಿ ಎತ್ತರದ ಪೈಲಿನ ನಲ್ಲಿಗೆ ತನ್ನ ಜಾಕೆಟ್‌ನ ಹುಡ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಆದರೆ, ಪೊಲೀಸರು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಕರ್ತವ್ಯ ನಿರತ ಸಿಬ್ಬಂದಿಯೇ ಆತನನ್ನು ಕೊಂದಿದ್ದಾರೆ ಎಂದು ಮೃತನ ಕುಟುಂಬ ಆರೋಪಿಸಿತ್ತು.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

“ಮೃತ ಅಲ್ತಾಫ್ ಅವರ ಮೃತದೇಹವನ್ನು ಕಾಸ್‌ಗಂಜ್ ಹಿರಿಯ ಪೊಲೀಸ್ ಅಧೀಕ್ಷಕರು ಅಥವಾ ಪೊಲೀಸ್ ಅಧೀಕ್ಷಕರ ಸಮ್ಮುಖದಲ್ಲಿ ತಕ್ಷಣವೇ ಹೊರತೆಗೆಯಬೇಕು ಎಂದು ನಾವು ಆದೇಶಿಸಿದ್ದೇವೆ. ಹೊರತೆಗೆದ ನಂತರ ಮೃತದೇಹವನ್ನು ಮೊಹರು ಮಾಡಲಾಗುವುದು. ಜೊತೆಗೆ ತಕ್ಷಣವೇ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ಗೆ ಸಾಗಿಸಲಾಗುತ್ತದೆ, ಅಲ್ಲಿ ನಿರ್ದೇಶಕರು ರಚಿಸುವ ವೈದ್ಯರ ತಂಡದ ಸಮ್ಮುಖದಲ್ಲಿ ಹೊರತೆಗೆದ ದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಬೇಕು” ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ.

ಅರ್ಜಿದಾರರ ಪರ ವಕೀಲರಾದ ಅಲಿ ಕಂಬರ್ ಜೈದಿ ಮತ್ತು ಮೊಹಮ್ಮದ್ ಡ್ಯಾನಿಶ್, ಅಲ್ತಾಫ್ ಅವರ ಮೃತದೇಹವನ್ನು ಹೊರತೆಗೆಯಬೇಕು ಮತ್ತು ಹೊಸದಾಗಿ ಮರಣೋತ್ತರ ಪರೀಕ್ಷೆಯನ್ನು ನವದೆಹಲಿಯ ಏಮ್ಸ್‌ನಲ್ಲಿ ನಡೆಸಬೇಕು ಎಂದು ಕೋರಿದ್ದರು. ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸುವ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮನೀಶ್ ಗೋಯೆಲ್ ಅವರು ಈ ಮನವಿಗೆ ವಿರೋಧಿಸಲಿಲ್ಲ.

“ಪರೀಕ್ಷೆಯ ವಿವಿಧ ಹಂತಗಳನ್ನು ಹೆಚ್ಚಿನ ರೆಸಲ್ಯೂಶನ್‌ನ ಸ್ಟಿಲ್ ಛಾಯಾಚಿತ್ರಗಳನ್ನು ಸಹ ತೆಗೆದುಕೊಂಡು ಸಂರಕ್ಷಿಸಬೇಕು. ಮರಣೋತ್ತರ ಪರೀಕ್ಷೆಯ ವರದಿ, ವಿಡಿಯೊ ದೃಶ್ಯಾವಳಿ ಮತ್ತು ಛಾಯಾಚಿತ್ರವನ್ನು ಮೂರು ಪ್ರತಿಗಳಲ್ಲಿ ಸಿದ್ಧಪಡಿಸಬೇಕು. ಆದೇಶವನ್ನು ಅಂಗೀಕರಿಸಿದ 10 ದಿನಗಳ ಅವಧಿಯಲ್ಲಿ ಇದೆಲ್ಲಾ ಪೂರ್ಣಗೊಳಿಸಬೇಕು” ಎಂದು ನ್ಯಾಯಾಲಯ ಆದೇಶಿಸಿದೆ.

ದೇಶದಲ್ಲಿ ಹೆಚ್ಚು ಚರ್ಚೆಗೆ ಕಾರಣವಾಗಿದ್ದ ಕಾಸ್‌ಗಂಜ್ ಲಾಕಪ್ ಡೆತ್ ಪ್ರಕರಣದ ಕುರಿತು, ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಂದ ವರದಿ ಕೇಳಿತ್ತು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೃತರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಹಲವು ಒತ್ತಡಗಳ ಬಳಿಕ ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...