Homeಮುಖಪುಟಕಾಸ್‌ಗಂಜ್ ಲಾಕಪ್‌ ಡೆತ್: ನ್ಯಾಯಕ್ಕಾಗಿ ಮೃತ ಯುವಕ ಅಲ್ತಾಫ್‌ ಕುಟುಂಬದ ಹೋರಾಟ

ಕಾಸ್‌ಗಂಜ್ ಲಾಕಪ್‌ ಡೆತ್: ನ್ಯಾಯಕ್ಕಾಗಿ ಮೃತ ಯುವಕ ಅಲ್ತಾಫ್‌ ಕುಟುಂಬದ ಹೋರಾಟ

- Advertisement -
- Advertisement -

ಕಳೆದ ನವೆಂಬರ್ 9 ರಂದು ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ 22 ವರ್ಷದ ಅಲ್ತಾಫ್ ಅವರ ಕುಟುಂಬ ನ್ಯಾಯಕ್ಕಾಗಿ ಹೋರಾಡುತ್ತಿದ್ದು, ವಯಸ್ಸಿಗೆ ಬಂದ ಮಗನ ಕೊಲೆ ಅರಗಿಸಿಕೊಳ್ಳಲಾಗದು, ಅದರಲ್ಲೂ ನ್ಯಾಯಕ್ಕಾಗಿ ಅಲೆಯುವುದು ಇನ್ನು ಕಷ್ಟ ಎಂದಿದೆ.

ಮೂರು ಕೋಣೆಗಳಿರುವ ಮನೆಯಲ್ಲಿ, 22 ವರ್ಷದ ಮೃತ ಅಲ್ತಾಫ್ ಮಲಗುತ್ತಿದ್ದ ಸ್ಥಳ ತೋರಿಸಿ ಕುಟುಂಬದವರು ಕಣ್ಣೀರು ಹಾಕಿದ್ದಾರೆ. ನೆರೆಹೊರೆಯಲ್ಲಿರುವ ಮಕ್ಕಳು ಅಲ್ತಾಫ್‌ನೊಂದಿಗೆ ಸಮಯ ಕಳೆಯಲು ಇಷ್ಟಪಡುತ್ತಿದ್ದರು, ಆಗಾಗ್ಗೆ ಕೊಠಡಿಯ ತುಂಬಾ ಕಿಕ್ಕಿರಿದು ಆಟಗಳನ್ನು ಆಡುತ್ತಿದ್ದರು ಎಂದಿದ್ದಾರೆ ಮೃತನ ತಾಯಿ ಚಾಂದ್ ಮಿಯಾ.

ಯುವಕ ಅಲ್ತಾಫ್‌ನ ವಿರುದ್ಧ ಅಪ್ರಾಪ್ತ ಹಿಂದೂ ಬಾಲಕಿಯನ್ನು ಅಪಹರಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ತಾಫ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. 22 ವರ್ಷದ ಯುವಕ ಮಂಗಳವಾರ (ನ. 9) ರಂದು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಯುವಕ ಶೌಚಾಲಯದ ಎರಡು ಅಡಿ ಎತ್ತರದ ಪೈಲಿನ ನಲ್ಲಿಗೆ ತನ್ನ ಜಾಕೆಟ್‌ನ ಹುಡ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ ಎಂದು ಕೊತ್ವಾಲಿ ಪೊಲೀಸರು ಹೇಳಿದ್ದರು. ಆದರೆ, ಪೊಲೀಸರು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಕರ್ತವ್ಯ ನಿರತ ಸಿಬ್ಬಂದಿಯೇ ಆತನನ್ನು ಕೊಂದಿದ್ದಾರೆ ಎಂದು ಮೃತನ ಕುಟುಂಬ ಆರೋಪಿಸಿತ್ತು.

ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತರ ಕುಟುಂಬ ಆರೋಪಿಸಿ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಅಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ ಪರಣೋತ್ತರ ಪರೀಕ್ಷಾ ವರದಿಯ ಮೇಲೆ ತಮಗೆ ವಿಶ್ವಾಸವಿಲ್ಲ ಎಂದು ಹೇಳಿದ್ದರು. ಮೂರು ದಿನಗಳ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅಲ್ತಾಫ್ ಶವವನ್ನು ಹೊರತೆಗೆಯಬೇಕು ಮತ್ತು ಎರಡನೇ ಮರಣೋತ್ತರ ಪರೀಕ್ಷೆಗಾಗಿ ನವದೆಹಲಿಯ ಏಮ್ಸ್‌ಗೆ ಕಳುಹಿಸಬೇಕು ಎಂದು ಪೊಲೀಸರಿಗೆ ನಿರ್ದೇಶನ ನೀಡಿದೆ. ಅರ್ಜಿ ಸಲ್ಲಿಸಿ ನಾಲ್ಕು ವಾರಗಳ ನಂತರ ಈ ವಿಷಯವನ್ನು ಪಟ್ಟಿ ಮಾಡಿದ ನ್ಯಾಯಾಲಯವು ಅರ್ಜಿದಾರರು ದಾಖಲೆಯಲ್ಲಿ ತಂದಿರುವ ಛಾಯಾಚಿತ್ರಗಳ ಆಧಾರದ ಮೇಲೆ ಈ ಆದೇಶವನ್ನು ನೀಡಿದೆ.

ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: 2ನೇ ಮರಣೋತ್ತರ ಪರೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

ನ್ಯಾಯಾಲಯದ ಆದೇಶವು ಕುಟುಂಕ್ಕೆ ನ್ಯಾಯ ದೊರೆಯುವ ಭರವಸೆಯನ್ನು ಹೆಚ್ಚಿಸಿದೆ ಎಂದಿರುವ ಮೃತನ ತಾಯಿ ಚಾಂದ್ ಮಿಯಾ, “ಯಾರೇ ಆದರೂ ಅವರ ಚಿಕ್ಕ ವಯಸ್ಸಿನ ಮಗನನ್ನು ಕರೆದುಕೊಳ್ಳುವುದು ಸುಲಭವಲ್ಲ. ಅಲ್ತಾಫ್‌ ನನ್ನ ಮೂವರು ಮಕ್ಕಳಲ್ಲಿ ಮೊದಲ ಮಗ, ಆತನನ್ನು ಕಳೆದುಕೊಂಡಾಗ ನನ್ನ ರಕ್ತದೊತ್ತಡ ಹೆಚ್ಚಾಗಿತ್ತು. ನಾನು ಆಸ್ಪತ್ರೆಗೆ ಸೇರಬೇಕಾಯಿತು. ಮಗನ ಸಾವನನ್ನು ಅರಗಿಸಿಕೊಳ್ಳುವುದು ಬಹಳ ಕಷ್ಟ. ಇನ್ನು, ನ್ಯಾಯಕ್ಕಾಗಿ ಹೋರಾಟ ಮಾಡುವುದು ಮತ್ತಷ್ಟು ಕಷ್ಟಕರವಾಗಿದೆ. ಆದರೆ, ನ್ಯಾಯಾಲಯವು ಬಡವರಾದ ನಮ್ಮ ಅಳಲನ್ನು ಕೇಳಿದೆ. ನಮಗೆ ಭರವಸೆ ಮೂಡಿದೆ” ಎಂದಿದ್ದಾರೆ.

’ಅಲ್ತಾಫ್ ದೈನಂದಿನ ಕೂಲಿ ಕೆಲಸ ಮಾಡುವ ಮೂಲಕ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದರು. ಅವರು ಸುಮಾರು 60 ಕೆಜಿ ತೂಕವಿದ್ದರು ಮತ್ತು ಎತ್ತರವಾಗಿದ್ದರು. ಅವರು ಆ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಮೊದಲ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸೇರಿಸದ ಹಲವು ವಿಷಯಗಳಿವೆ. ಎರಡನೆ ಮರಣೋತ್ತರ ಪರೀಕ್ಷೆಯಲ್ಲಿ ಬೇರೇನಾದರೂ ಮಾಹಿತಿ ಬಹಿರಂಗವಾದರೆ, ಅವರ ಸಾವಿನ ಬಗ್ಗೆ ಸತ್ಯವನ್ನು ಮುಚ್ಚಿಡಲಾಗಿದೆ ಎಂಬುದು ಸಾಬೀತಾಗುತ್ತದೆ” ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಶವವನ್ನು ಹೊರತೆಗೆದು ಏಮ್ಸ್‌ಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯಾಲಯದ ಪ್ರಕಾರ 10 ದಿನಗಳೊಳಗೆ ಮೃತದೇಹವನ್ನು ಏಮ್ಸ್‌ಗೆ ಹಸ್ತಾಂತರಿಸಬೇಕು.

”ನ್ಯಾಯಾಲಯದ ಆದೇಶದಂತೆ ಭೂಶೋಧನೆ ನಡೆಸಲಾಗುವುದು. ಮೃತದೇಹವನ್ನು ಅಗೆದು ಏಮ್ಸ್‌ಗೆ ಕಳುಹಿಸಲಾಗುವುದು. ಘಟನೆಯ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ. ಎರಡನೇ ಮರಣೋತ್ತರ ಪರೀಕ್ಷೆಯಲ್ಲಿ ಯಾವುದೇ ಹೊಸ ಮಾಹಿತಿಯನ್ನು ಬಹಿರಂಗಪಡಿಸಿದರೆ, ಅದನ್ನು ತನಿಖೆಯಲ್ಲಿ ಸೇರಿಸಲಾಗುವುದು” ಎಂದು ಕಾಸ್ಗಂಜ್ ಎಸ್‌ಪಿ ಬೋತ್ರೆ ರೋಹನ್ ಪ್ರಮೋದ್ ಹೇಳಿದ್ದಾರೆ.

ಪ್ರಸ್ತುತ ನ್ಯಾಯಾಂಗ ವಿಚಾರಣೆ ನಡೆಯುತ್ತಿದ್ದು, 36 ಸಾಕ್ಷಿಗಳ ಪೈಕಿ 7 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಲ್ತಾಫ್‌ ಸಾವಿಗೆ ಸಂಬಂಧಿಸಿದಂತೆ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.


ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...