Homeಮುಖಪುಟಕಾಸ್‌ಗಂಜ್ ಲಾಕಪ್‌ ಡೆತ್: ನ್ಯಾಯಕ್ಕಾಗಿ ಮೃತ ಯುವಕ ಅಲ್ತಾಫ್‌ ಕುಟುಂಬದ ಹೋರಾಟ

ಕಾಸ್‌ಗಂಜ್ ಲಾಕಪ್‌ ಡೆತ್: ನ್ಯಾಯಕ್ಕಾಗಿ ಮೃತ ಯುವಕ ಅಲ್ತಾಫ್‌ ಕುಟುಂಬದ ಹೋರಾಟ

- Advertisement -
- Advertisement -

ಕಳೆದ ನವೆಂಬರ್ 9 ರಂದು ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ 22 ವರ್ಷದ ಅಲ್ತಾಫ್ ಅವರ ಕುಟುಂಬ ನ್ಯಾಯಕ್ಕಾಗಿ ಹೋರಾಡುತ್ತಿದ್ದು, ವಯಸ್ಸಿಗೆ ಬಂದ ಮಗನ ಕೊಲೆ ಅರಗಿಸಿಕೊಳ್ಳಲಾಗದು, ಅದರಲ್ಲೂ ನ್ಯಾಯಕ್ಕಾಗಿ ಅಲೆಯುವುದು ಇನ್ನು ಕಷ್ಟ ಎಂದಿದೆ.

ಮೂರು ಕೋಣೆಗಳಿರುವ ಮನೆಯಲ್ಲಿ, 22 ವರ್ಷದ ಮೃತ ಅಲ್ತಾಫ್ ಮಲಗುತ್ತಿದ್ದ ಸ್ಥಳ ತೋರಿಸಿ ಕುಟುಂಬದವರು ಕಣ್ಣೀರು ಹಾಕಿದ್ದಾರೆ. ನೆರೆಹೊರೆಯಲ್ಲಿರುವ ಮಕ್ಕಳು ಅಲ್ತಾಫ್‌ನೊಂದಿಗೆ ಸಮಯ ಕಳೆಯಲು ಇಷ್ಟಪಡುತ್ತಿದ್ದರು, ಆಗಾಗ್ಗೆ ಕೊಠಡಿಯ ತುಂಬಾ ಕಿಕ್ಕಿರಿದು ಆಟಗಳನ್ನು ಆಡುತ್ತಿದ್ದರು ಎಂದಿದ್ದಾರೆ ಮೃತನ ತಾಯಿ ಚಾಂದ್ ಮಿಯಾ.

ಯುವಕ ಅಲ್ತಾಫ್‌ನ ವಿರುದ್ಧ ಅಪ್ರಾಪ್ತ ಹಿಂದೂ ಬಾಲಕಿಯನ್ನು ಅಪಹರಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ತಾಫ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. 22 ವರ್ಷದ ಯುವಕ ಮಂಗಳವಾರ (ನ. 9) ರಂದು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಯುವಕ ಶೌಚಾಲಯದ ಎರಡು ಅಡಿ ಎತ್ತರದ ಪೈಲಿನ ನಲ್ಲಿಗೆ ತನ್ನ ಜಾಕೆಟ್‌ನ ಹುಡ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ ಎಂದು ಕೊತ್ವಾಲಿ ಪೊಲೀಸರು ಹೇಳಿದ್ದರು. ಆದರೆ, ಪೊಲೀಸರು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಕರ್ತವ್ಯ ನಿರತ ಸಿಬ್ಬಂದಿಯೇ ಆತನನ್ನು ಕೊಂದಿದ್ದಾರೆ ಎಂದು ಮೃತನ ಕುಟುಂಬ ಆರೋಪಿಸಿತ್ತು.

ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತರ ಕುಟುಂಬ ಆರೋಪಿಸಿ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಅಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ ಪರಣೋತ್ತರ ಪರೀಕ್ಷಾ ವರದಿಯ ಮೇಲೆ ತಮಗೆ ವಿಶ್ವಾಸವಿಲ್ಲ ಎಂದು ಹೇಳಿದ್ದರು. ಮೂರು ದಿನಗಳ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅಲ್ತಾಫ್ ಶವವನ್ನು ಹೊರತೆಗೆಯಬೇಕು ಮತ್ತು ಎರಡನೇ ಮರಣೋತ್ತರ ಪರೀಕ್ಷೆಗಾಗಿ ನವದೆಹಲಿಯ ಏಮ್ಸ್‌ಗೆ ಕಳುಹಿಸಬೇಕು ಎಂದು ಪೊಲೀಸರಿಗೆ ನಿರ್ದೇಶನ ನೀಡಿದೆ. ಅರ್ಜಿ ಸಲ್ಲಿಸಿ ನಾಲ್ಕು ವಾರಗಳ ನಂತರ ಈ ವಿಷಯವನ್ನು ಪಟ್ಟಿ ಮಾಡಿದ ನ್ಯಾಯಾಲಯವು ಅರ್ಜಿದಾರರು ದಾಖಲೆಯಲ್ಲಿ ತಂದಿರುವ ಛಾಯಾಚಿತ್ರಗಳ ಆಧಾರದ ಮೇಲೆ ಈ ಆದೇಶವನ್ನು ನೀಡಿದೆ.

ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: 2ನೇ ಮರಣೋತ್ತರ ಪರೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

ನ್ಯಾಯಾಲಯದ ಆದೇಶವು ಕುಟುಂಕ್ಕೆ ನ್ಯಾಯ ದೊರೆಯುವ ಭರವಸೆಯನ್ನು ಹೆಚ್ಚಿಸಿದೆ ಎಂದಿರುವ ಮೃತನ ತಾಯಿ ಚಾಂದ್ ಮಿಯಾ, “ಯಾರೇ ಆದರೂ ಅವರ ಚಿಕ್ಕ ವಯಸ್ಸಿನ ಮಗನನ್ನು ಕರೆದುಕೊಳ್ಳುವುದು ಸುಲಭವಲ್ಲ. ಅಲ್ತಾಫ್‌ ನನ್ನ ಮೂವರು ಮಕ್ಕಳಲ್ಲಿ ಮೊದಲ ಮಗ, ಆತನನ್ನು ಕಳೆದುಕೊಂಡಾಗ ನನ್ನ ರಕ್ತದೊತ್ತಡ ಹೆಚ್ಚಾಗಿತ್ತು. ನಾನು ಆಸ್ಪತ್ರೆಗೆ ಸೇರಬೇಕಾಯಿತು. ಮಗನ ಸಾವನನ್ನು ಅರಗಿಸಿಕೊಳ್ಳುವುದು ಬಹಳ ಕಷ್ಟ. ಇನ್ನು, ನ್ಯಾಯಕ್ಕಾಗಿ ಹೋರಾಟ ಮಾಡುವುದು ಮತ್ತಷ್ಟು ಕಷ್ಟಕರವಾಗಿದೆ. ಆದರೆ, ನ್ಯಾಯಾಲಯವು ಬಡವರಾದ ನಮ್ಮ ಅಳಲನ್ನು ಕೇಳಿದೆ. ನಮಗೆ ಭರವಸೆ ಮೂಡಿದೆ” ಎಂದಿದ್ದಾರೆ.

’ಅಲ್ತಾಫ್ ದೈನಂದಿನ ಕೂಲಿ ಕೆಲಸ ಮಾಡುವ ಮೂಲಕ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದರು. ಅವರು ಸುಮಾರು 60 ಕೆಜಿ ತೂಕವಿದ್ದರು ಮತ್ತು ಎತ್ತರವಾಗಿದ್ದರು. ಅವರು ಆ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಮೊದಲ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸೇರಿಸದ ಹಲವು ವಿಷಯಗಳಿವೆ. ಎರಡನೆ ಮರಣೋತ್ತರ ಪರೀಕ್ಷೆಯಲ್ಲಿ ಬೇರೇನಾದರೂ ಮಾಹಿತಿ ಬಹಿರಂಗವಾದರೆ, ಅವರ ಸಾವಿನ ಬಗ್ಗೆ ಸತ್ಯವನ್ನು ಮುಚ್ಚಿಡಲಾಗಿದೆ ಎಂಬುದು ಸಾಬೀತಾಗುತ್ತದೆ” ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಶವವನ್ನು ಹೊರತೆಗೆದು ಏಮ್ಸ್‌ಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯಾಲಯದ ಪ್ರಕಾರ 10 ದಿನಗಳೊಳಗೆ ಮೃತದೇಹವನ್ನು ಏಮ್ಸ್‌ಗೆ ಹಸ್ತಾಂತರಿಸಬೇಕು.

”ನ್ಯಾಯಾಲಯದ ಆದೇಶದಂತೆ ಭೂಶೋಧನೆ ನಡೆಸಲಾಗುವುದು. ಮೃತದೇಹವನ್ನು ಅಗೆದು ಏಮ್ಸ್‌ಗೆ ಕಳುಹಿಸಲಾಗುವುದು. ಘಟನೆಯ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ. ಎರಡನೇ ಮರಣೋತ್ತರ ಪರೀಕ್ಷೆಯಲ್ಲಿ ಯಾವುದೇ ಹೊಸ ಮಾಹಿತಿಯನ್ನು ಬಹಿರಂಗಪಡಿಸಿದರೆ, ಅದನ್ನು ತನಿಖೆಯಲ್ಲಿ ಸೇರಿಸಲಾಗುವುದು” ಎಂದು ಕಾಸ್ಗಂಜ್ ಎಸ್‌ಪಿ ಬೋತ್ರೆ ರೋಹನ್ ಪ್ರಮೋದ್ ಹೇಳಿದ್ದಾರೆ.

ಪ್ರಸ್ತುತ ನ್ಯಾಯಾಂಗ ವಿಚಾರಣೆ ನಡೆಯುತ್ತಿದ್ದು, 36 ಸಾಕ್ಷಿಗಳ ಪೈಕಿ 7 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಲ್ತಾಫ್‌ ಸಾವಿಗೆ ಸಂಬಂಧಿಸಿದಂತೆ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.


ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...