Homeಮುಖಪುಟಕಾಸ್‌ಗಂಜ್ ಲಾಕಪ್‌ ಡೆತ್: ನ್ಯಾಯಕ್ಕಾಗಿ ಮೃತ ಯುವಕ ಅಲ್ತಾಫ್‌ ಕುಟುಂಬದ ಹೋರಾಟ

ಕಾಸ್‌ಗಂಜ್ ಲಾಕಪ್‌ ಡೆತ್: ನ್ಯಾಯಕ್ಕಾಗಿ ಮೃತ ಯುವಕ ಅಲ್ತಾಫ್‌ ಕುಟುಂಬದ ಹೋರಾಟ

- Advertisement -
- Advertisement -

ಕಳೆದ ನವೆಂಬರ್ 9 ರಂದು ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ 22 ವರ್ಷದ ಅಲ್ತಾಫ್ ಅವರ ಕುಟುಂಬ ನ್ಯಾಯಕ್ಕಾಗಿ ಹೋರಾಡುತ್ತಿದ್ದು, ವಯಸ್ಸಿಗೆ ಬಂದ ಮಗನ ಕೊಲೆ ಅರಗಿಸಿಕೊಳ್ಳಲಾಗದು, ಅದರಲ್ಲೂ ನ್ಯಾಯಕ್ಕಾಗಿ ಅಲೆಯುವುದು ಇನ್ನು ಕಷ್ಟ ಎಂದಿದೆ.

ಮೂರು ಕೋಣೆಗಳಿರುವ ಮನೆಯಲ್ಲಿ, 22 ವರ್ಷದ ಮೃತ ಅಲ್ತಾಫ್ ಮಲಗುತ್ತಿದ್ದ ಸ್ಥಳ ತೋರಿಸಿ ಕುಟುಂಬದವರು ಕಣ್ಣೀರು ಹಾಕಿದ್ದಾರೆ. ನೆರೆಹೊರೆಯಲ್ಲಿರುವ ಮಕ್ಕಳು ಅಲ್ತಾಫ್‌ನೊಂದಿಗೆ ಸಮಯ ಕಳೆಯಲು ಇಷ್ಟಪಡುತ್ತಿದ್ದರು, ಆಗಾಗ್ಗೆ ಕೊಠಡಿಯ ತುಂಬಾ ಕಿಕ್ಕಿರಿದು ಆಟಗಳನ್ನು ಆಡುತ್ತಿದ್ದರು ಎಂದಿದ್ದಾರೆ ಮೃತನ ತಾಯಿ ಚಾಂದ್ ಮಿಯಾ.

ಯುವಕ ಅಲ್ತಾಫ್‌ನ ವಿರುದ್ಧ ಅಪ್ರಾಪ್ತ ಹಿಂದೂ ಬಾಲಕಿಯನ್ನು ಅಪಹರಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ತಾಫ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. 22 ವರ್ಷದ ಯುವಕ ಮಂಗಳವಾರ (ನ. 9) ರಂದು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಯುವಕ ಶೌಚಾಲಯದ ಎರಡು ಅಡಿ ಎತ್ತರದ ಪೈಲಿನ ನಲ್ಲಿಗೆ ತನ್ನ ಜಾಕೆಟ್‌ನ ಹುಡ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ ಎಂದು ಕೊತ್ವಾಲಿ ಪೊಲೀಸರು ಹೇಳಿದ್ದರು. ಆದರೆ, ಪೊಲೀಸರು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಕರ್ತವ್ಯ ನಿರತ ಸಿಬ್ಬಂದಿಯೇ ಆತನನ್ನು ಕೊಂದಿದ್ದಾರೆ ಎಂದು ಮೃತನ ಕುಟುಂಬ ಆರೋಪಿಸಿತ್ತು.

ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತರ ಕುಟುಂಬ ಆರೋಪಿಸಿ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಅಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ ಪರಣೋತ್ತರ ಪರೀಕ್ಷಾ ವರದಿಯ ಮೇಲೆ ತಮಗೆ ವಿಶ್ವಾಸವಿಲ್ಲ ಎಂದು ಹೇಳಿದ್ದರು. ಮೂರು ದಿನಗಳ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅಲ್ತಾಫ್ ಶವವನ್ನು ಹೊರತೆಗೆಯಬೇಕು ಮತ್ತು ಎರಡನೇ ಮರಣೋತ್ತರ ಪರೀಕ್ಷೆಗಾಗಿ ನವದೆಹಲಿಯ ಏಮ್ಸ್‌ಗೆ ಕಳುಹಿಸಬೇಕು ಎಂದು ಪೊಲೀಸರಿಗೆ ನಿರ್ದೇಶನ ನೀಡಿದೆ. ಅರ್ಜಿ ಸಲ್ಲಿಸಿ ನಾಲ್ಕು ವಾರಗಳ ನಂತರ ಈ ವಿಷಯವನ್ನು ಪಟ್ಟಿ ಮಾಡಿದ ನ್ಯಾಯಾಲಯವು ಅರ್ಜಿದಾರರು ದಾಖಲೆಯಲ್ಲಿ ತಂದಿರುವ ಛಾಯಾಚಿತ್ರಗಳ ಆಧಾರದ ಮೇಲೆ ಈ ಆದೇಶವನ್ನು ನೀಡಿದೆ.

ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: 2ನೇ ಮರಣೋತ್ತರ ಪರೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

ನ್ಯಾಯಾಲಯದ ಆದೇಶವು ಕುಟುಂಕ್ಕೆ ನ್ಯಾಯ ದೊರೆಯುವ ಭರವಸೆಯನ್ನು ಹೆಚ್ಚಿಸಿದೆ ಎಂದಿರುವ ಮೃತನ ತಾಯಿ ಚಾಂದ್ ಮಿಯಾ, “ಯಾರೇ ಆದರೂ ಅವರ ಚಿಕ್ಕ ವಯಸ್ಸಿನ ಮಗನನ್ನು ಕರೆದುಕೊಳ್ಳುವುದು ಸುಲಭವಲ್ಲ. ಅಲ್ತಾಫ್‌ ನನ್ನ ಮೂವರು ಮಕ್ಕಳಲ್ಲಿ ಮೊದಲ ಮಗ, ಆತನನ್ನು ಕಳೆದುಕೊಂಡಾಗ ನನ್ನ ರಕ್ತದೊತ್ತಡ ಹೆಚ್ಚಾಗಿತ್ತು. ನಾನು ಆಸ್ಪತ್ರೆಗೆ ಸೇರಬೇಕಾಯಿತು. ಮಗನ ಸಾವನನ್ನು ಅರಗಿಸಿಕೊಳ್ಳುವುದು ಬಹಳ ಕಷ್ಟ. ಇನ್ನು, ನ್ಯಾಯಕ್ಕಾಗಿ ಹೋರಾಟ ಮಾಡುವುದು ಮತ್ತಷ್ಟು ಕಷ್ಟಕರವಾಗಿದೆ. ಆದರೆ, ನ್ಯಾಯಾಲಯವು ಬಡವರಾದ ನಮ್ಮ ಅಳಲನ್ನು ಕೇಳಿದೆ. ನಮಗೆ ಭರವಸೆ ಮೂಡಿದೆ” ಎಂದಿದ್ದಾರೆ.

’ಅಲ್ತಾಫ್ ದೈನಂದಿನ ಕೂಲಿ ಕೆಲಸ ಮಾಡುವ ಮೂಲಕ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದರು. ಅವರು ಸುಮಾರು 60 ಕೆಜಿ ತೂಕವಿದ್ದರು ಮತ್ತು ಎತ್ತರವಾಗಿದ್ದರು. ಅವರು ಆ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಮೊದಲ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸೇರಿಸದ ಹಲವು ವಿಷಯಗಳಿವೆ. ಎರಡನೆ ಮರಣೋತ್ತರ ಪರೀಕ್ಷೆಯಲ್ಲಿ ಬೇರೇನಾದರೂ ಮಾಹಿತಿ ಬಹಿರಂಗವಾದರೆ, ಅವರ ಸಾವಿನ ಬಗ್ಗೆ ಸತ್ಯವನ್ನು ಮುಚ್ಚಿಡಲಾಗಿದೆ ಎಂಬುದು ಸಾಬೀತಾಗುತ್ತದೆ” ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಶವವನ್ನು ಹೊರತೆಗೆದು ಏಮ್ಸ್‌ಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯಾಲಯದ ಪ್ರಕಾರ 10 ದಿನಗಳೊಳಗೆ ಮೃತದೇಹವನ್ನು ಏಮ್ಸ್‌ಗೆ ಹಸ್ತಾಂತರಿಸಬೇಕು.

”ನ್ಯಾಯಾಲಯದ ಆದೇಶದಂತೆ ಭೂಶೋಧನೆ ನಡೆಸಲಾಗುವುದು. ಮೃತದೇಹವನ್ನು ಅಗೆದು ಏಮ್ಸ್‌ಗೆ ಕಳುಹಿಸಲಾಗುವುದು. ಘಟನೆಯ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ. ಎರಡನೇ ಮರಣೋತ್ತರ ಪರೀಕ್ಷೆಯಲ್ಲಿ ಯಾವುದೇ ಹೊಸ ಮಾಹಿತಿಯನ್ನು ಬಹಿರಂಗಪಡಿಸಿದರೆ, ಅದನ್ನು ತನಿಖೆಯಲ್ಲಿ ಸೇರಿಸಲಾಗುವುದು” ಎಂದು ಕಾಸ್ಗಂಜ್ ಎಸ್‌ಪಿ ಬೋತ್ರೆ ರೋಹನ್ ಪ್ರಮೋದ್ ಹೇಳಿದ್ದಾರೆ.

ಪ್ರಸ್ತುತ ನ್ಯಾಯಾಂಗ ವಿಚಾರಣೆ ನಡೆಯುತ್ತಿದ್ದು, 36 ಸಾಕ್ಷಿಗಳ ಪೈಕಿ 7 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಲ್ತಾಫ್‌ ಸಾವಿಗೆ ಸಂಬಂಧಿಸಿದಂತೆ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.


ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...