Homeಮುಖಪುಟಯುಪಿ: ರೈಲು ನಿಲ್ದಾಣದಿಂದ ಕದ್ದ ಮಗು ಬಿಜೆಪಿ ನಾಯಕಿಯ ಮನೆಯಲ್ಲಿ ಪತ್ತೆ

ಯುಪಿ: ರೈಲು ನಿಲ್ದಾಣದಿಂದ ಕದ್ದ ಮಗು ಬಿಜೆಪಿ ನಾಯಕಿಯ ಮನೆಯಲ್ಲಿ ಪತ್ತೆ

- Advertisement -
- Advertisement -

ಕಳೆದ ವಾರ ಉತ್ತರ ಪ್ರದೇಶದ ಮಥುರಾ ರೈಲ್ವೇ ನಿಲ್ದಾಣದಲ್ಲಿ ನಿದ್ದೆ ಮಾಡುತ್ತಿದ್ದ ತಂದೆ-ತಾಯಿಯ ಪಕ್ಕದಿಂದ ಕಳವು ಮಾಡಲಾದ ಏಳು ತಿಂಗಳ ಮಗು ಅಲ್ಲಿಂದ 100 ಕಿ.ಮೀ ದೂರದ ಫಿರೋಜಾಬಾದ್‌ನ ಬಿಜೆಪಿ ಕಾರ್ಪೊರೇಟರ್‌ನ ಮನೆಯಿಂದ ಪತ್ತೆಯಾಗಿದೆ. ಮಕ್ಕಳನ್ನು ಕದ್ದು ಮಾರಾಟ ಮಾಡುವ ದಂಧೆಯನ್ನು ಭೇದಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಿಜೆಪಿಯ ಕಾರ್ಪೋರೇಟರ್‌‌ ವಿನಿತಾ ಅಗರ್ವಾಲ್ ಮತ್ತು ಅವರ ಪತಿ ತಮಗೆ ಗಂಡು ಬೇಕೆಂದು ಮಕ್ಕಳ ಕಳ್ಳತನ ಮಾಡುವ ದೊಡ್ಡ ಗ್ಯಾಂಗ್‌‌ನ ಸದಸ್ಯರಾದ ಇಬ್ಬರು ವೈದ್ಯರಿಂದ 1.8 ಲಕ್ಷ ರೂ.ಗೆ ಮಗುವನ್ನು ಖರೀದಿಸಿದ್ದರು. ದಂಪತಿಗೆ ಈಗಾಗಲೇ ಮಗಳಿದ್ದಾಳೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ಲಾಟ್‌ಫಾರ್ಮ್‌ನಿಂದ ಮಗುವನ್ನು ಎತ್ತಿಕೊಂಡು ಹೋಗುವ ದೃಶ್ಯಗಳು ಭದ್ರತಾ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಇದೀಗ ಪೊಲೀಸರು ಮಗುವನ್ನು ಎತ್ತಿಕೊಂಡು ಹೋದ ವ್ಯಕ್ತಿ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ.

ಮಥುರಾದ ರೈಲ್ವೇ ಪೊಲೀಸರು ಮಗುವನ್ನು ಅವರ ತಾಯಿಗೆ ಹಸ್ತಾಂತರಿಸಿದ್ದಾರೆ. ಬಂಧಿತ ವೈದ್ಯರಿಂದ ದುಡ್ಡನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಈ ಬಗ್ಗೆ ಹೇಳಿಕೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಮುಷ್ತಾಕ್, ಹಣಕ್ಕಾಗಿ ಕಳ್ಳಸಾಗಣೆಯಲ್ಲಿ ತೊಡಗಿರುವ ಗ್ಯಾಂಗ್ ಮಗುವನ್ನು ಅಪಹರಣ ನಡೆಸಿದೆ ಎಂದು ಹೇಳಿದ್ದಾರೆ.

“ದೀಪ್ ಕುಮಾರ್ ಎಂಬ ವ್ಯಕ್ತಿ ಮಗುವನ್ನು ಕದ್ದೊಯ್ದಿದ್ದಾನೆ ಎಂದು ನಾವು ಕಂಡುಕೊಂಡಿದ್ದೇವೆ. ಅವನು ನೆರೆಯ ಹತ್ರಾಸ್ ಜಿಲ್ಲೆಯಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಇಬ್ಬರು ವೈದ್ಯರನ್ನು ಒಳಗೊಂಡಿರುವ ಗ್ಯಾಂಗ್‌‌‌ವೊಂದರ ಭಾಗವಾಗಿದ್ದಾರೆ. ಇತರ ಕೆಲವು ಆರೋಗ್ಯ ಕಾರ್ಯಕರ್ತರು ಕೂಡಾ ಇದರಲ್ಲಿ ಭಾಗಿಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಮಗು ಯಾರ ಮನೆಯಲ್ಲಿದೆ ಎಂದು ನಾವು ವಿಚಾರಣೆ ನಡೆಸಿದಾಗ ಮಗು ಪತ್ತೆಯಾಗಿದೆ. ಆರೋಪಿಗಳಿಗೆ ಒಬ್ಬಳೇ ಮಗಳಿದ್ದು, ಗಂಡು ಮಗುವೊಂದನ್ನು ಬಯಸಿದ್ದರು. ಅದಕ್ಕಾಗಿ ಅವರು ಮಕ್ಕಳ ಕಳ್ಳತನ ಮಾಡುವ ಗ್ಯಾಂಗ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು” ಎಂದು ಮುಷ್ತಾಕ್ ಪತ್ರಕರ್ತರಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ ದುಷ್ಕರ್ಮಿಗಳು

ಘಟೆನೆಯ ಬಗ್ಗೆ ಬಂಧಿತ ಕಾರ್ಪೊರೇಟರ್ ಹಾಗೂ ಬಿಜೆಪಿಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಆಗಸ್ಟ್ 23 ರ ರಾತ್ರಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು  ವ್ಯಕ್ತಿಯೊಬ್ಬ ಎತ್ತಿಕೊಂಡು ಹೋಗಿದ್ದನು. ಈ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...